Latest

25 ಲಕ್ಷ ರೂಪಾಯಿಯಾ ಯಾತ್ರಿ ನಿವಾಸದ ಕಟ್ಟಡದ ಭೂಮಿ ಪೂಜೆ..!

ಕುಂದಗೋಳ:ಕರ್ನಾಟಕ ರಾಜ್ಯದ ಪ್ರವಾಸೋದ್ಯಮ ಇಲಾಖೆಯ 25 ಲಕ್ಷ ರೂಪಾಯಿಗಳ ಲೋಕೋಪಯೋಗಿ ಇಲಾಖೆ ಅನುದಾನದಡಿಯಲ್ಲಿ “ಯಾತ್ರಿ ನಿವಾಸ” ಶಂಕು ಸ್ಥಾಪನೆಗೆ ಶಿರಹಟ್ಟಿಯ ಶ್ರೀ ಮ. ನಿ. ಪ್ರ ಜಗದ್ಗುರು ಪಕ್ಕಿರೇಶ್ವರ ಸಂಸ್ಥಾನ ಮಠದ ಪಕೀರ ದಿಂಗಾಲೇಶ್ವರ ಮಹಾಸ್ವಾಮಿಗಳು ಚಾಲನೆ ನೀಡಿದರು.

ನಂತರ ಮಾತನಾಡಿದ ಅವರು ರಾಜ್ಯ ಸರ್ಕಾರವು ಇಂತಹ ಧಾರ್ಮಿಕ ಕಾರ್ಯಗಳಿಗೆ ಮುಂದಾಗಿರುವುದು ಮಠ ಮಾನ್ಯಗಳು ಉಳಿಯಲು ಸಾದ್ಯ. ಶಿರಹಟ್ಟಿಯ ಜಗದ್ಗುರು ಪಕ್ಕಿರೇಶ್ವರ ಸಂಸ್ಥಾನ ಮಠದ ಶ್ರೀ ಮ. ನಿ. ಪ್ರ ಪಕೀರ ದಿಂಗಾಲೇಶ್ವರ ಮಹಾಸ್ವಾಮಿಗಳು ಹೇಳಿದರು.

ಅವರು ಕುಂದಗೋಳ ತಾಲೂಕಿನ ಮಳ್ಳಹಳ್ಳಿ ಗ್ರಾಮದ ಶ್ರೀ ಚನ್ನವಿರೇಶ್ವರ ವಿರಕ್ತಮಠದಲ್ಲಿ ಕರ್ನಾಟಕ ರಾಜ್ಯದ ಪ್ರವಾಸೋದ್ಯಮ ಇಲಾಖೆ ವತಿಯಿಂದ ಮಂಜೂರಾದ 25 ಲಕ್ಷ ರೂಪಾಯಿ ವೆಚ್ಚದ ಯಾತ್ರಿ ನಿವಾಸ ಕಟ್ಟಡದ ಶಂಕು ಸ್ಥಾಪನೆಯನ್ನು ನೆರೆವೆರಿಸಿ ಮಾತನಾಡಿದ ಅವರು ಸರಕಾರ ಮಹತ್ವದ ಯೋಜನೆ ಕಾರ್ಯರೂಪಕ್ಕೆ ತಂದಿದ್ದು ಸಂತೋಷದ ವಿಷಯ ಈ ಮಠದ ಪಾರಂಪಾರಿಕ ಹಿನ್ನೆಲೆ ಇದೆ. ಅಭಿವೃದ್ಧಿಗೆ ಮುನ್ನಡೆ ಪಡೆದುಕೊಂಡಿದೆ ಎಂದರು.

ಮಳ್ಳೂಳ್ಳಿ ಶ್ರೀ ಚನ್ನವಿರೇಶ್ವರ ವಿರಕ್ತಮಠದ ಶ್ರೀ ಮ. ನಿ. ಪ್ರ ಶಿವಯೋಗಿಶ್ವರ ಮಹಾಸ್ವಾಮಿಗಳು ಮಾತನಾಡಿ ಮುಳಹಳ್ಳಿ ಹಾಗೂ ಸುತ್ತು ಮುತ್ತಲಿನ ಗ್ರಾಮಗಳ ಜನೆತೆಯ ಸರ್ವ ಸಹಕಾರದಿಂದ ಈ ಮಠದಲ್ಲಿ ಅನೇಕ ಧಾರ್ಮಿಕ ಕಾರ್ಯಕ್ರಮಗಳು ನಡೆಯತ್ತಾ ಬಂದಿದೆ. ಇವತ್ತು ನಮ್ಮ ಮಠ ಅಭಿವೃದ್ಧಿ ಕಾರ್ಯ ನಡೆಯೋದು ಸಂತಸ ತಂದಿದೆ ಎಂದರು.

ಮುಖ್ಯ ಅತಿಥಿಗಳಾಗಿ ಕರ್ನಾಟಕ ರಾಜ್ಯ ಕೃಷಿ ಉತ್ಪನ್ನಗಳ ಸಂಸ್ಕರಣಿ ಮತ್ತು ರಪ್ತು ನಿಗಮದ ಅದ್ಯಕ್ಷರು , ಎಸ್ ಐ ಚಿಕ್ಕನಗೌಡ್ರ ಮಾತನಾಡಿ ಶ್ರೀ ಚನ್ನವಿರೇಶ್ವರ ವಿರಕ್ತಮಠಕ್ಕೆ ತಾಲೂಕಿನಾದ್ಯಂತ ಅನೇಕ ಭಕ್ತರಿದ್ದು ಪ್ರಸ್ತುತ ಎಲ್ಲರೂ ಸರ್ವ ಸಮ್ಮತದಿಂದ ಕೂಡಿ ಸೇರಿಕೊಂಡು ಅಭಿವೃದ್ಧಿ ಕಾರ್ಯ ಮುಂದುವರಿಸಿಬೇಕಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ನಂತರ ಮಾತನಾಡಿದ ಮಾಜಿ ಶಾಸಕ ಎಮ್ ಎಸ್ ಅಕ್ಕಿ ಈ ಮಠಕ್ಕೆ ಸಾವಿರಾರು ಭಕ್ತಾ ಸಮೂಹ ಇದ್ದು. ಶೀಘ್ರದಲ್ಲೇ ಅಭಿವೃದ್ಧಿ ಕಾಮಗಾರಿ ಗುಣಮಟ್ಟದ ಮತ್ತು ಪೂರ್ಣಗೂಳ್ಳಲ್ಲಿ ಎಂದು ಗುತ್ತಿಗೆದಾರನಗೆ ಕರೆ ನೀಡಿದರು.

ಕಾರ್ಯಕ್ರಮ ಪ್ರಾರಂಭವನ್ನು ಶಾಲಾ ವಿದ್ಯಾರ್ಥಿಗಳು ಪ್ರಾರ್ಥನೆ ಮಾಡುವುದರ ಜೊತೆಗೆ ಕಾರ್ಯಕ್ರಮ ಶೋಬೆ ತಂದರು. ಸ್ವಾಗತ ಭಾಷಣ ರಾಘವೇಂದ್ರ ಕುರಿ ನೆರೆವೆರಿಸಿದರು. ಶಾಂತಯ್ಯ ಮಲಕೈಯ್ಯನವರ ನಿರೂಪಣೆ ಮಾಡಿದರು.

ಕಾರ್ಯಕ್ರಮದಲ್ಲಿ ಬಿಜೆಪಿ ಯುವ ಮುಖಂಡ ಶಂಕರಗೌಡ ನಿರಂಜನಗೌಡ್ರ, ದಾನಪ್ಪ ಗಂಗಯ್ಯ
ಎ ಬಿ. ಉಪ್ಪಿನ, ಗ್ರಾಮ ಪಂಚಾಯಿತಿ ಅಧ್ಯಕ್ಷರು , ಉಪ್ಯಾದ್ಯಕ್ಷರು ಹಾಗೂ ಗ್ರಾಮ ಪಂಚಾಯಿತಿ ಸರ್ವ ಸದಸ್ಯರು, ಪಕ್ಕಿರಪ್ಪ ಮೂಲಿಮನಿ ಸಿದ್ದಪ್ಪ ಹುಣಸಣ್ಣನವರ, ಬಾಬಣ್ಣ ಬೆಟಗೇರಿ, ಗುರಲಿಂಗಪ್ಪ ಸೂರಟೂರ, ರುದ್ರಗೌಡ್ರ ಚನ್ನಪ್ಪಗೌಡ್ರ, ಸದಾಶಿವಯ್ಯ ಹೀರೆಮಠ, ಆಶೋಕಗೌಡ್ರ ಪಾಟೀಲ, ಪಕ್ಕಿರಪ್ಪ ದೇವನೂರ, ನಾಗಾರಾಜ ಅಳ್ಳಿಕಟ್ಟಿ, ಎಚ್ ಡಿ ಹೀರೆಗೌಡ್ರ, ಅಡಿವೆಪ್ಪ ಸುಣಗಾರ, ಹನಮಂತಗೌಡ್ರ ನಾಗನಗೌಡ್ರ ಜಗದೇವಯ್ಯ ಶಾಸ್ತ್ರೀಯಗಳು, ಶಾನವಾಡ ಅರವಿಂದಪ್ಪ ಮೇಲ್ಮಾಳಗಿ, ಶೇಕಯ್ಯ ಹೀರೆಮಠ, ಮಹದೇವಪ್ಪ ತಟ್ಟಿಮಸಿ, ಬಸುವರೆಡ್ಡಿ ಹಾಗೂ ಊರಿನ ಸಧ್ಭಕ್ತರು ಪಾಲ್ಗೊಂಡಿದರು.

ಶಾನು ಯಲಿಗಾರ

ಭ್ರಷ್ಟರ ಬೇಟೆ

Recent Posts

ಮೈಸೂರು ರಾಜೀವ್ ನಗರದಲ್ಲಿ ಕುಟುಂಬ ಕಲಹ ತೀವ್ರಗೆಡೆದು ಯುವಕನಿಗೆ ಚಾಕು ಇರಿತ: ಆರೋಪಿ ಅಫ್ರೀದಿ ಬಂಧನ

ಮೈಸೂರು: ಕೌಟುಂಬಿಕ ಕಲಹದ ರೂಪಾಂತರವಾಗಿ ಜಗಳ ತೀವ್ರತೆ ಪಡೆದು ಕೊಲೆಯಾದ ಹೃದಯವಿದ್ರಾವಕ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ…

9 hours ago

ಖಾಲಿ ಮನೆ ಟಾರ್ಗೆಟ್: ಪೆಪ್ಸಿ ರಘು ಗ್ಯಾಂಗದಿಂದ 24 ಲಕ್ಷ ಕಳ್ಳತನ, ಮೂವರು ಅರೆಸ್ಟ್

ಬೆಂಗಳೂರು: ಮದುವೆಗಾಗಿ ಮನೆ ಖಾಲಿ ಇದ್ದನ್ನು ತಪ್ಪಾಗಿ ಬಳಸಿಕೊಂಡು ಬೃಹತ್ ಕಳ್ಳತನ ನಡೆಸಿದ ಮೂವರು ಆರೋಪಿಗಳನ್ನು ಸಿ.ಕೆ. ಅಚ್ಚುಕಟ್ಟು ಠಾಣೆ…

9 hours ago

ಲಂಚ ಸ್ವೀಕರಿಸುತ್ತಿದ್ದ ಪಂ.ರಾಜ್ ಇಂಜಿನಿಯರಿಂಗ್ ಅಧಿಕಾರಿ ಬಂಧನ: ಲೋಕಾಯುಕ್ತದ ದಾಳಿ ಸೊರಬದಲ್ಲಿ

ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನಲ್ಲಿ ಭ್ರಷ್ಟಾಚಾರದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಸೆಕ್ಷನ್ ಅಧಿಕಾರಿ…

9 hours ago

ಚನ್ನಪೇಟೆಯಲ್ಲಿ ಹಾವು ಕಚ್ಚಿದ ವ್ಯಕ್ತಿ ಸಾವು: ಮೂತ್ರ ವಿಸರ್ಜನೆ ವೇಳೆ ದುರ್ಘಟನೆ

ಹುಬ್ಬಳ್ಳಿ: ಮೂತ್ರ ವಿಸರ್ಜನೆಗೆಂದು ಹೊರಟಿದ್ದ ವ್ಯಕ್ತಿಯೊಬ್ಬನಿಗೆ ಹಾವು ಕಚ್ಚಿದ ಪರಿಣಾಮ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ದುರ್ಘಟನೆ ಹುಬ್ಬಳ್ಳಿಯ ಚನ್ನಪೇಟೆ…

9 hours ago

ಹಾನಗಲ್ ಸಿಪಿಐ ಅಮಾನತುa: ಪ್ರಭಾವಿಯ ಲೋಕೇಷನ್ ಬಯಲು ಮಾಡಿದ್ದ ಆರೋಪ

ಹಾವೇರಿ: ಹಾನಗಲ್ ಸರ್ಕಲ್ ಇನ್‌ಸ್ಪೆಕ್ಟರ್ (ಸಿಪಿಐ) ಆಂಜನೇಯ ಎನ್‌.ಎಚ್. ಅವರನ್ನು ಸೇವೆಯಿಂದ ಅಮಾನತುಗೊಳಿಸುವ ಕ್ರಮ ಜರುಗಿದ್ದು, ಇದಕ್ಕೆ ಕಾರಣವಾಗಿರುವುದು ಸಮುದಾಯದ…

10 hours ago

ಮದ್ಯಪಾನ ಮಾಡಿ ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ಚಾಲಕರ ವಿರುದ್ಧ ಕ್ರಮ: ಬೆಂಗಳೂರು ಸಂಚಾರ ಪೊಲೀಸರ ದಾಳಿ

ಬೆಂಗಳೂರು ನಗರದಲ್ಲಿ ಮಕ್ಕಳ ಸುರಕ್ಷತೆಗಾಗಿ ಸಂಚಾರ ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದಾರೆ. ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ವೇಳೆಯಲ್ಲಿ ಮದ್ಯಪಾನ ಮಾಡಿಕೊಂಡು…

1 day ago