ಕರ್ನಾಟಕ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಮಹತ್ವದ ಮಾಹಿತಿ ಬಹಿರಂಗವಾಗಿದೆ. ವಿಧಾನಸಭೆಯಲ್ಲಿ ಸಂಡೂರು ಕ್ಷೇತ್ರದ ಶಾಸಕ ಅನ್ನಪೂರ್ಣ ಈ. ಅವರ ಪ್ರಶ್ನೆಗೆ ಸರ್ಕಾರ ನೀಡಿದ ಉತ್ತರದ ಪ್ರಕಾರ, ರಾಜ್ಯದ 45 ಇಲಾಖೆಗಳಲ್ಲಿನ ಒಟ್ಟು 2,84,881 ಹುದ್ದೆಗಳು ಖಾಲಿ ಇರುವುದಾಗಿ ತಿಳಿದುಬಂದಿದೆ.
ಇದರಲ್ಲಿನ 96,844 ಹುದ್ದೆಗಳು ಗುತ್ತಿಗೆ ಅಥವಾ ಹೊರಗುತ್ತಿಗೆಯ ಮೂಲಕ ಭರ್ತಿಯಾಗಿದ್ದು, ನಿವ್ವಳವಾಗಿ 1,88,037 ಹುದ್ದೆಗಳು ಇನ್ನೂ ಖಾಲಿಯೇ ಉಳಿದಿವೆ.
ಖಾಲಿ ಹುದ್ದೆಗಳ ಪ್ರಮಾಣ ಹೆಚ್ಚು ಇರುವ ಇಲಾಖೆಗಳಲ್ಲಿಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಮೊದಲ ಸ್ಥಾನದಲ್ಲಿದ್ದು, ಇಲ್ಲಿ 79,694 ಹುದ್ದೆಗಳು ಖಾಲಿ ಇದ್ದು, ಅವುಗಳಲ್ಲಿ 79,486 ನಿವ್ವಳ ಖಾಲಿ ಹುದ್ದೆಗಳಾಗಿವೆ. ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಯಲ್ಲಿ 37,572 ಹುದ್ದೆಗಳು ಖಾಲಿ ಇದ್ದು, 10,324 ನಿವ್ವಳ ಖಾಲಿ ಹುದ್ದೆಗಳಿವೆ. ಒಳಾಡಳಿತ (ಪೊಲೀಸ್) ಇಲಾಖೆಯಲ್ಲಿ 28,188 ಹುದ್ದೆಗಳ ಪೈಕಿ 26,618 ಹುದ್ದೆಗಳು ಇನ್ನೂ ಭರ್ತಿಯಾಗಬೇಕಿದೆ.
ಇದರ ಜೊತೆಗೆ ಉನ್ನತ ಶಿಕ್ಷಣ ಇಲಾಖೆಯಲ್ಲಿ 13,599 ಹುದ್ದೆಗಳು (10,875 ನಿವ್ವಳ ಖಾಲಿ), ಕಂದಾಯ ಇಲಾಖೆಯಲ್ಲಿ 10,867 ಹುದ್ದೆಗಳು (ಕೆಲವು ಹುದ್ದೆಗಳು ಗುತ್ತಿಗೆ ಮೂಲಕ ಭರ್ತಿಯಾಗಿರುವ ಕಾರಣ ನಿವ್ವಳ ಸಂಖ್ಯೆಯಲ್ಲಿ ವ್ಯತ್ಯಾಸ ಕಂಡುಬಂದಿದೆ) ಮತ್ತು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆಯಲ್ಲಿ 10,504 ಹುದ್ದೆಗಳು ಖಾಲಿ ಇದ್ದು, 7,760 ನಿವ್ವಳ ಹುದ್ದೆಗಳು ಉಳಿದಿವೆ.
ಹುದ್ದೆಗಳ ವರ್ಗೀಕರಣವನ್ನು ಗಮನಿಸಿದರೆ, ‘ಸಿ’ ವೃಂದದ ಹುದ್ದೆಗಳೇ ಅತ್ಯಧಿಕವಾಗಿದ್ದು, 1,72,190 ಹುದ್ದೆಗಳು ಖಾಲಿಯಾಗಿದೆ. ‘ಡಿ’ ವೃಂದದಲ್ಲಿ 79,340, ‘ಬಿ’ ವೃಂದದಲ್ಲಿ 17,180 ಹಾಗೂ ‘ಎ’ ವೃಂದದಲ್ಲಿ 16,171 ಹುದ್ದೆಗಳು ಖಾಲಿ ಇರುವುದಾಗಿ ಮಾಹಿತಿ ನೀಡಲಾಗಿದೆ.
ಈ ಅಂಕಿ-ಅಂಶಗಳು ರಾಜ್ಯದಲ್ಲಿ ಉದ್ಯೋಗಾವಕಾಶಗಳ ದೊಡ್ಡ ಪ್ರಮಾಣವನ್ನು ತೋರಿಸುತ್ತಿದ್ದು, ಈ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಳ್ಳುವ ಅಗತ್ಯತೆ ಮತ್ತಷ್ಟು ಸ್ಪಷ್ಟವಾಗಿದೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ದಿಬ್ಬೂರಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮನಕಲುಕುವ ಘಟನೆ ಬೆಳಕಿಗೆ ಬಂದಿದ್ದು, ಮೊರಾರ್ಜಿ ವಸತಿ ಶಾಲೆಯಲ್ಲಿ…
ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಆವರ್ತಿ ಗ್ರಾಮದಲ್ಲಿ ನಿವೃತ್ತ ಶಿಕ್ಷಕರ ಮನೆಯಲ್ಲಿ ನಡೆದಿದ್ದ ಕಳ್ಳತನ ಪ್ರಕರಣವನ್ನು ಬೈಲುಕೊಪ್ಪ ಪೊಲೀಸರು ಭೇದಿಸಿದ್ದು,…
ತುಮಕೂರು ಜಿಲ್ಲೆಯ ಹುಳಿಯಾರು ಪೊಲೀಸ್ ಠಾಣೆಯ ಪಿಎಸ್ಐ ಸೇರಿದಂತೆ ಮೂವರು ಪೊಲೀಸ್ ಸಿಬ್ಬಂದಿಯನ್ನು ಕರ್ತವ್ಯ ಲೋಪದ ಆರೋಪದಡಿ ಅಮಾನತುಗೊಳಿಸಲಾಗಿದೆ. ವಂಚನೆ…
ಬೆಂಗಳೂರು ನಗರದಲ್ಲಿ ರಸ್ತೆ ಬದಿಯ ಅಪಾಯಕಾರಿ ಮರಗಳ ನಿರ್ವಹಣೆಯ ಕೊರತೆಯಿಂದ ಮತ್ತೊಂದು ಗಂಭೀರ ಅವಘಡ ಸಂಭವಿಸಿದೆ. ರಾಜಾಜಿನಗರದ ರಾಮಮಂದಿರ ರಸ್ತೆಯಲ್ಲಿ…
ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಪುಟ್ಟ ಮಗುವಿಗೆ ಮಹಿಳೆಯೊಬ್ಬರು ಕಾಲಿನಿಂದ ಒದ್ದಿರುವ ವಿಡಿಯೋ ವೈರಲ್ ಆಗಿ ಭಾರೀ ಆಕ್ರೋಶಕ್ಕೆ ಕಾರಣವಾಗಿತ್ತು. ವಿಡಿಯೋವನ್ನು…
ರಾಜಸ್ಥಾನದ ಡುಂಗರಪುರ ಜಿಲ್ಲೆಯ ಬಿಚ್ಚಿವಾಡ ಪೊಲೀಸ್ ಠಾಣೆಯಲ್ಲಿ ನಡೆದ ಘಟನೆಯೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ವೃದ್ಧ ದೂರುದಾರನ…