Latest

ನನ್ನ ತಾಯಿಯನ್ನ ಜೈಲಿಗೆ ಹಾಕಿ; ಪೊಲೀಸರಿಗೆ 3 ವರ್ಷದ ಪುಟಾಣಿ ದೂರು!

ಮೂರು ವರ್ಷದ ಮಗು ತನ್ನ ತಾಯಿಯನ್ನ ಜೈಲಿಗೆ ಹಾಕಿ ಅಂತಾ ಪೊಲೀಸ್ ಠಾಣೆಗೆ ತೆರಳಿದ ಕಂಪ್ಲೆಂಟ್ ಕೊಟ್ಟಿದ್ದಾನೆ. ಪುಟಾಣಿ ಕಂಪ್ಲೆಂಟ್ ಕೊಟ್ಟಿದ್ಯಾಕೆ ಅನ್ನೋದೇ ಈಗ ಭಾರಿ ಕುತೂಹಲಕ್ಕೆ ಕಾರಣವಾಗಿದೆ.

ಅಂದಹಾಗೆ ಈ ಘಟನೆ ನಡೆದಿರೋದು ಮಧ್ಯಪ್ರದೇಶದ ಬುರ್ಹಾನ್ ಪುರ ಜಿಲ್ಲೆಯ ಡೆಡ್ತಲೈ ಅನ್ನೋ ಪ್ರದೇಶದಲ್ಲಿ ಮೂರು ವರ್ಷದ ಮಗು ತನ್ನ ತಂದೆಯನ್ನ ಠಾಣೆಗೆ ಕರೆದುಕೊಂಡು ಬಂದು ತಾಯಿಯ ವಿರುದ್ಧ ಕಂಪ್ಲೆಂಟ್ ಕೊಟ್ಟಿದ್ದಾನೆ. ಪೊಲೀಸರು ಈ ಪುಟಾಣಿಯ ತೊದಲು ನುಡಿಗಳನ್ನ ಕೇಳಿ ದೂರನ್ನೂ ಬರೆದುಕೊಂಡಿದ್ದಾರೆ. ಆದ್ರೆ ಮಗು ಕಂಪ್ಲೆಂಟ್ ಕೊಟ್ಟಿರೋದು ತಾಯಿ ತನ್ನ ಚಾಕಲೇಟ್ ಗಳನ್ನ ಕದ್ದು ಮುಚ್ಚಿಡುತ್ತಾರೆ ಎಂದು..

ಚಿಕ್ಕ ಮಕ್ಕಳು ಏನೇ ಮಾಡಿದರೂ ಖುಷಿಯಾಗುತ್ತದೆ. ಅವರ ಮುಗ್ಧ ವರ್ತನೆಗಳು ನಮ್ಮ ಮುಖದಲ್ಲಿ ನಗು ತರಿಸುತ್ತವೆ. ಇತ್ತೀಚೆಗಷ್ಟೇ ಮಧ್ಯಪ್ರದೇಶದ ಬುರ್ಹಾನ್‌ಪುರ ಜಿಲ್ಲೆಯ ಡೆಡ್ತಲೈ ಗ್ರಾಮದಲ್ಲಿ ಇಂತಹದ್ದೇ ಘಟನೆ ನಡೆದಿದೆ. ತನ್ನ ತಾಯಿ ತನಗೆ ಚಾಕೊಲೇಟ್ ತಿನ್ನಲು ಬಿಡುತ್ತಿಲ್ಲ, ಚಾಕಲೆಟ್ ಗಳನ್ನ ಮುಚ್ಚಿಡ್ತಾಳೆಂದು ಬಾಲಕನೊಬ್ಬ ಪೊಲೀಸರಿಗೆ ದೂರು ನೀಡಿದ್ದಾನೆ. ಅಲ್ದೆ ತನ್ನ ತಾಯಿಯನ್ನ ಬಂಧಿಸಿ ಜೈಲಿಗೆ ಹಾಕಿ ಎಂದಿದ್ದಾನೆ.

ಪುಟಾಣಿಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್ ಆಗಿದೆ. ಜೊತೆಗೆ ಮುಗುವಿನ ಮುಗ್ದತೆಯ ಜೊತೆ ಪೊಲೀಸರು ಮಗುವಿನ ಜೊತೆ ನಡೆದುಕೊಂಡ ರೀತಿಗೆ ಸಾಕಷ್ಟು ಪ್ರಶಂಸೆ ವ್ಯಕ್ತವಾಗಿದೆ.

ಬುರ್ಹಾನ್ ಪುರ ನಿವಾಸಿಯೊಬ್ಬರು ತನ್ನ ಮೂರು ವರ್ಷದ ಮಗು ಮನೆಯಲ್ಲಿ ಚಾಕಲೇಟ್ ಕೇಳಿದ್ದಕ್ಕೆ ತಾಯಿ ಕೊಡಲ್ಲ ಎಂದಿದ್ದಾರೆ. ಅಲ್ದೆ, ಪುಟಾಣಿಗೆ ಗದರಿದ್ದಾರೆ ಇದರಿಂದ ಸಿಟ್ಟಾದ ಮಗು, ತಂದೆಯ ಬಳಿ ಬಂದು ತನ್ನನ್ನ ಪೊಲೀಸ್ ಸ್ಟೇಷನ್ ಗೆ ಕರೆದೊಯ್ಯುವಂತೆ ಹೇಳಿದೆ.
ತಂದೆಯೂ ಮಗುವನ್ನ ಪೊಲೀಸ್ ಠಾಣೆಗೆ ಕರೆದು ಕೊಂಡು ಬಂದಿದ್ದಾರೆ. ಅಲ್ಲಿನ ಸಿಬ್ಬಂದಿಗೆ ತಂದೆ ವಿಷಯವನ್ನ ತಿಳಿಸಿದಾಗ, ಠಾಣೆ ಮಹಿಳಾ ಸಬ್ ಇನ್ಸ್ ಪೆಕ್ಟರ್ ಪ್ರಿಯಾಂಕಾ ಮಗು ಹೇಳಿದ್ದನ್ನ ದೂರನ್ನ ಬರೆದುಕೊಂಡಿದ್ದಾರೆ. ಈ ವೇಳೆ ಮಗು ತನ್ನ ತಾಯಿ ತನಗೆ ಚಾಕಲೇಟ್ ತಿನ್ನೋಕೆ ಬಿಡಲ್ಲ, ಎಲ್ಲವನ್ನೂ ಮುಚ್ಚಿಡುತ್ತಾಳೆ ಎಂದು ಹೇಳಿದೆ ಇದಕ್ಕೆ ನಗುತ್ತಲೇ ದೂರು ಬರೆದುಕೊಂಡ ಎಸ್ ಐ ಮಗುವನ್ನ ಮುದ್ದು ಮಾಡಿ ಕಳುಹಿಸಿದ್ದಾರೆ.

ಭ್ರಷ್ಟರ ಬೇಟೆ

Recent Posts

ಮೈಸೂರು ರಾಜೀವ್ ನಗರದಲ್ಲಿ ಕುಟುಂಬ ಕಲಹ ತೀವ್ರಗೆಡೆದು ಯುವಕನಿಗೆ ಚಾಕು ಇರಿತ: ಆರೋಪಿ ಅಫ್ರೀದಿ ಬಂಧನ

ಮೈಸೂರು: ಕೌಟುಂಬಿಕ ಕಲಹದ ರೂಪಾಂತರವಾಗಿ ಜಗಳ ತೀವ್ರತೆ ಪಡೆದು ಕೊಲೆಯಾದ ಹೃದಯವಿದ್ರಾವಕ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ…

21 hours ago

ಖಾಲಿ ಮನೆ ಟಾರ್ಗೆಟ್: ಪೆಪ್ಸಿ ರಘು ಗ್ಯಾಂಗದಿಂದ 24 ಲಕ್ಷ ಕಳ್ಳತನ, ಮೂವರು ಅರೆಸ್ಟ್

ಬೆಂಗಳೂರು: ಮದುವೆಗಾಗಿ ಮನೆ ಖಾಲಿ ಇದ್ದನ್ನು ತಪ್ಪಾಗಿ ಬಳಸಿಕೊಂಡು ಬೃಹತ್ ಕಳ್ಳತನ ನಡೆಸಿದ ಮೂವರು ಆರೋಪಿಗಳನ್ನು ಸಿ.ಕೆ. ಅಚ್ಚುಕಟ್ಟು ಠಾಣೆ…

21 hours ago

ಲಂಚ ಸ್ವೀಕರಿಸುತ್ತಿದ್ದ ಪಂ.ರಾಜ್ ಇಂಜಿನಿಯರಿಂಗ್ ಅಧಿಕಾರಿ ಬಂಧನ: ಲೋಕಾಯುಕ್ತದ ದಾಳಿ ಸೊರಬದಲ್ಲಿ

ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನಲ್ಲಿ ಭ್ರಷ್ಟಾಚಾರದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಸೆಕ್ಷನ್ ಅಧಿಕಾರಿ…

21 hours ago

ಚನ್ನಪೇಟೆಯಲ್ಲಿ ಹಾವು ಕಚ್ಚಿದ ವ್ಯಕ್ತಿ ಸಾವು: ಮೂತ್ರ ವಿಸರ್ಜನೆ ವೇಳೆ ದುರ್ಘಟನೆ

ಹುಬ್ಬಳ್ಳಿ: ಮೂತ್ರ ವಿಸರ್ಜನೆಗೆಂದು ಹೊರಟಿದ್ದ ವ್ಯಕ್ತಿಯೊಬ್ಬನಿಗೆ ಹಾವು ಕಚ್ಚಿದ ಪರಿಣಾಮ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ದುರ್ಘಟನೆ ಹುಬ್ಬಳ್ಳಿಯ ಚನ್ನಪೇಟೆ…

21 hours ago

ಹಾನಗಲ್ ಸಿಪಿಐ ಅಮಾನತುa: ಪ್ರಭಾವಿಯ ಲೋಕೇಷನ್ ಬಯಲು ಮಾಡಿದ್ದ ಆರೋಪ

ಹಾವೇರಿ: ಹಾನಗಲ್ ಸರ್ಕಲ್ ಇನ್‌ಸ್ಪೆಕ್ಟರ್ (ಸಿಪಿಐ) ಆಂಜನೇಯ ಎನ್‌.ಎಚ್. ಅವರನ್ನು ಸೇವೆಯಿಂದ ಅಮಾನತುಗೊಳಿಸುವ ಕ್ರಮ ಜರುಗಿದ್ದು, ಇದಕ್ಕೆ ಕಾರಣವಾಗಿರುವುದು ಸಮುದಾಯದ…

21 hours ago

ಮದ್ಯಪಾನ ಮಾಡಿ ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ಚಾಲಕರ ವಿರುದ್ಧ ಕ್ರಮ: ಬೆಂಗಳೂರು ಸಂಚಾರ ಪೊಲೀಸರ ದಾಳಿ

ಬೆಂಗಳೂರು ನಗರದಲ್ಲಿ ಮಕ್ಕಳ ಸುರಕ್ಷತೆಗಾಗಿ ಸಂಚಾರ ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದಾರೆ. ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ವೇಳೆಯಲ್ಲಿ ಮದ್ಯಪಾನ ಮಾಡಿಕೊಂಡು…

2 days ago