Latest

ನನ್ನ ತಾಯಿಯನ್ನ ಜೈಲಿಗೆ ಹಾಕಿ; ಪೊಲೀಸರಿಗೆ 3 ವರ್ಷದ ಪುಟಾಣಿ ದೂರು!

ಮೂರು ವರ್ಷದ ಮಗು ತನ್ನ ತಾಯಿಯನ್ನ ಜೈಲಿಗೆ ಹಾಕಿ ಅಂತಾ ಪೊಲೀಸ್ ಠಾಣೆಗೆ ತೆರಳಿದ ಕಂಪ್ಲೆಂಟ್ ಕೊಟ್ಟಿದ್ದಾನೆ. ಪುಟಾಣಿ ಕಂಪ್ಲೆಂಟ್ ಕೊಟ್ಟಿದ್ಯಾಕೆ ಅನ್ನೋದೇ ಈಗ ಭಾರಿ ಕುತೂಹಲಕ್ಕೆ ಕಾರಣವಾಗಿದೆ.

ಅಂದಹಾಗೆ ಈ ಘಟನೆ ನಡೆದಿರೋದು ಮಧ್ಯಪ್ರದೇಶದ ಬುರ್ಹಾನ್ ಪುರ ಜಿಲ್ಲೆಯ ಡೆಡ್ತಲೈ ಅನ್ನೋ ಪ್ರದೇಶದಲ್ಲಿ ಮೂರು ವರ್ಷದ ಮಗು ತನ್ನ ತಂದೆಯನ್ನ ಠಾಣೆಗೆ ಕರೆದುಕೊಂಡು ಬಂದು ತಾಯಿಯ ವಿರುದ್ಧ ಕಂಪ್ಲೆಂಟ್ ಕೊಟ್ಟಿದ್ದಾನೆ. ಪೊಲೀಸರು ಈ ಪುಟಾಣಿಯ ತೊದಲು ನುಡಿಗಳನ್ನ ಕೇಳಿ ದೂರನ್ನೂ ಬರೆದುಕೊಂಡಿದ್ದಾರೆ. ಆದ್ರೆ ಮಗು ಕಂಪ್ಲೆಂಟ್ ಕೊಟ್ಟಿರೋದು ತಾಯಿ ತನ್ನ ಚಾಕಲೇಟ್ ಗಳನ್ನ ಕದ್ದು ಮುಚ್ಚಿಡುತ್ತಾರೆ ಎಂದು..

ಚಿಕ್ಕ ಮಕ್ಕಳು ಏನೇ ಮಾಡಿದರೂ ಖುಷಿಯಾಗುತ್ತದೆ. ಅವರ ಮುಗ್ಧ ವರ್ತನೆಗಳು ನಮ್ಮ ಮುಖದಲ್ಲಿ ನಗು ತರಿಸುತ್ತವೆ. ಇತ್ತೀಚೆಗಷ್ಟೇ ಮಧ್ಯಪ್ರದೇಶದ ಬುರ್ಹಾನ್‌ಪುರ ಜಿಲ್ಲೆಯ ಡೆಡ್ತಲೈ ಗ್ರಾಮದಲ್ಲಿ ಇಂತಹದ್ದೇ ಘಟನೆ ನಡೆದಿದೆ. ತನ್ನ ತಾಯಿ ತನಗೆ ಚಾಕೊಲೇಟ್ ತಿನ್ನಲು ಬಿಡುತ್ತಿಲ್ಲ, ಚಾಕಲೆಟ್ ಗಳನ್ನ ಮುಚ್ಚಿಡ್ತಾಳೆಂದು ಬಾಲಕನೊಬ್ಬ ಪೊಲೀಸರಿಗೆ ದೂರು ನೀಡಿದ್ದಾನೆ. ಅಲ್ದೆ ತನ್ನ ತಾಯಿಯನ್ನ ಬಂಧಿಸಿ ಜೈಲಿಗೆ ಹಾಕಿ ಎಂದಿದ್ದಾನೆ.

ಪುಟಾಣಿಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್ ಆಗಿದೆ. ಜೊತೆಗೆ ಮುಗುವಿನ ಮುಗ್ದತೆಯ ಜೊತೆ ಪೊಲೀಸರು ಮಗುವಿನ ಜೊತೆ ನಡೆದುಕೊಂಡ ರೀತಿಗೆ ಸಾಕಷ್ಟು ಪ್ರಶಂಸೆ ವ್ಯಕ್ತವಾಗಿದೆ.

ಬುರ್ಹಾನ್ ಪುರ ನಿವಾಸಿಯೊಬ್ಬರು ತನ್ನ ಮೂರು ವರ್ಷದ ಮಗು ಮನೆಯಲ್ಲಿ ಚಾಕಲೇಟ್ ಕೇಳಿದ್ದಕ್ಕೆ ತಾಯಿ ಕೊಡಲ್ಲ ಎಂದಿದ್ದಾರೆ. ಅಲ್ದೆ, ಪುಟಾಣಿಗೆ ಗದರಿದ್ದಾರೆ ಇದರಿಂದ ಸಿಟ್ಟಾದ ಮಗು, ತಂದೆಯ ಬಳಿ ಬಂದು ತನ್ನನ್ನ ಪೊಲೀಸ್ ಸ್ಟೇಷನ್ ಗೆ ಕರೆದೊಯ್ಯುವಂತೆ ಹೇಳಿದೆ.
ತಂದೆಯೂ ಮಗುವನ್ನ ಪೊಲೀಸ್ ಠಾಣೆಗೆ ಕರೆದು ಕೊಂಡು ಬಂದಿದ್ದಾರೆ. ಅಲ್ಲಿನ ಸಿಬ್ಬಂದಿಗೆ ತಂದೆ ವಿಷಯವನ್ನ ತಿಳಿಸಿದಾಗ, ಠಾಣೆ ಮಹಿಳಾ ಸಬ್ ಇನ್ಸ್ ಪೆಕ್ಟರ್ ಪ್ರಿಯಾಂಕಾ ಮಗು ಹೇಳಿದ್ದನ್ನ ದೂರನ್ನ ಬರೆದುಕೊಂಡಿದ್ದಾರೆ. ಈ ವೇಳೆ ಮಗು ತನ್ನ ತಾಯಿ ತನಗೆ ಚಾಕಲೇಟ್ ತಿನ್ನೋಕೆ ಬಿಡಲ್ಲ, ಎಲ್ಲವನ್ನೂ ಮುಚ್ಚಿಡುತ್ತಾಳೆ ಎಂದು ಹೇಳಿದೆ ಇದಕ್ಕೆ ನಗುತ್ತಲೇ ದೂರು ಬರೆದುಕೊಂಡ ಎಸ್ ಐ ಮಗುವನ್ನ ಮುದ್ದು ಮಾಡಿ ಕಳುಹಿಸಿದ್ದಾರೆ.

ಭ್ರಷ್ಟರ ಬೇಟೆ

Recent Posts

ಬಾಗಲಕೋಟೆ ನಗರದಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ

ಬಾಗಲಕೋಟೆ: ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದ ಚೀಫ್ ಇಂಜಿನಿಯರ್ ವಸಂತ ವಾಲಪ್ಪ ನಾಯಕ ಅವರ ಬೆಂಗಳೂರು ಸೇರಿದಂತೆ ಬಾಗಲಕೋಟೆಯಲ್ಲಿರುವ ಮನೆಯ…

16 hours ago

ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ

ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…

2 weeks ago

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ…!

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…

2 weeks ago

ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲ: ಬಡ ರೋಗಿಗಳ ಸುಲಿಗೆಗೆ ಮುಂದಾದ ಖಾಸಗಿ ಆಸ್ಪತ್ರೆಗಳು…!

ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…

3 weeks ago

ಅನ್ನಭಾಗ್ಯದ 4 ಕ್ವಿಂಟಾಲ್ ಅಕ್ಕಿ ಮತ್ತು 80 ಕ್ವಿಂಟಲ್ ರಾಗಿ ಅಕ್ರಮ ದಾಸ್ತಾನು

ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…

4 weeks ago

ಪ್ರೀತಿಸಿದವಳನ್ನೇ ಕೊಂದ ಪಾಪಿ ಪತಿರಾಯ

ಗೌರಿಬಿದನೂರು:  ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…

1 month ago