Latest

ನನ್ನ ತಾಯಿಯನ್ನ ಜೈಲಿಗೆ ಹಾಕಿ; ಪೊಲೀಸರಿಗೆ 3 ವರ್ಷದ ಪುಟಾಣಿ ದೂರು!

ಮೂರು ವರ್ಷದ ಮಗು ತನ್ನ ತಾಯಿಯನ್ನ ಜೈಲಿಗೆ ಹಾಕಿ ಅಂತಾ ಪೊಲೀಸ್ ಠಾಣೆಗೆ ತೆರಳಿದ ಕಂಪ್ಲೆಂಟ್ ಕೊಟ್ಟಿದ್ದಾನೆ. ಪುಟಾಣಿ ಕಂಪ್ಲೆಂಟ್ ಕೊಟ್ಟಿದ್ಯಾಕೆ ಅನ್ನೋದೇ ಈಗ ಭಾರಿ ಕುತೂಹಲಕ್ಕೆ ಕಾರಣವಾಗಿದೆ.

ಅಂದಹಾಗೆ ಈ ಘಟನೆ ನಡೆದಿರೋದು ಮಧ್ಯಪ್ರದೇಶದ ಬುರ್ಹಾನ್ ಪುರ ಜಿಲ್ಲೆಯ ಡೆಡ್ತಲೈ ಅನ್ನೋ ಪ್ರದೇಶದಲ್ಲಿ ಮೂರು ವರ್ಷದ ಮಗು ತನ್ನ ತಂದೆಯನ್ನ ಠಾಣೆಗೆ ಕರೆದುಕೊಂಡು ಬಂದು ತಾಯಿಯ ವಿರುದ್ಧ ಕಂಪ್ಲೆಂಟ್ ಕೊಟ್ಟಿದ್ದಾನೆ. ಪೊಲೀಸರು ಈ ಪುಟಾಣಿಯ ತೊದಲು ನುಡಿಗಳನ್ನ ಕೇಳಿ ದೂರನ್ನೂ ಬರೆದುಕೊಂಡಿದ್ದಾರೆ. ಆದ್ರೆ ಮಗು ಕಂಪ್ಲೆಂಟ್ ಕೊಟ್ಟಿರೋದು ತಾಯಿ ತನ್ನ ಚಾಕಲೇಟ್ ಗಳನ್ನ ಕದ್ದು ಮುಚ್ಚಿಡುತ್ತಾರೆ ಎಂದು..

ಚಿಕ್ಕ ಮಕ್ಕಳು ಏನೇ ಮಾಡಿದರೂ ಖುಷಿಯಾಗುತ್ತದೆ. ಅವರ ಮುಗ್ಧ ವರ್ತನೆಗಳು ನಮ್ಮ ಮುಖದಲ್ಲಿ ನಗು ತರಿಸುತ್ತವೆ. ಇತ್ತೀಚೆಗಷ್ಟೇ ಮಧ್ಯಪ್ರದೇಶದ ಬುರ್ಹಾನ್‌ಪುರ ಜಿಲ್ಲೆಯ ಡೆಡ್ತಲೈ ಗ್ರಾಮದಲ್ಲಿ ಇಂತಹದ್ದೇ ಘಟನೆ ನಡೆದಿದೆ. ತನ್ನ ತಾಯಿ ತನಗೆ ಚಾಕೊಲೇಟ್ ತಿನ್ನಲು ಬಿಡುತ್ತಿಲ್ಲ, ಚಾಕಲೆಟ್ ಗಳನ್ನ ಮುಚ್ಚಿಡ್ತಾಳೆಂದು ಬಾಲಕನೊಬ್ಬ ಪೊಲೀಸರಿಗೆ ದೂರು ನೀಡಿದ್ದಾನೆ. ಅಲ್ದೆ ತನ್ನ ತಾಯಿಯನ್ನ ಬಂಧಿಸಿ ಜೈಲಿಗೆ ಹಾಕಿ ಎಂದಿದ್ದಾನೆ.

ಪುಟಾಣಿಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್ ಆಗಿದೆ. ಜೊತೆಗೆ ಮುಗುವಿನ ಮುಗ್ದತೆಯ ಜೊತೆ ಪೊಲೀಸರು ಮಗುವಿನ ಜೊತೆ ನಡೆದುಕೊಂಡ ರೀತಿಗೆ ಸಾಕಷ್ಟು ಪ್ರಶಂಸೆ ವ್ಯಕ್ತವಾಗಿದೆ.

ಬುರ್ಹಾನ್ ಪುರ ನಿವಾಸಿಯೊಬ್ಬರು ತನ್ನ ಮೂರು ವರ್ಷದ ಮಗು ಮನೆಯಲ್ಲಿ ಚಾಕಲೇಟ್ ಕೇಳಿದ್ದಕ್ಕೆ ತಾಯಿ ಕೊಡಲ್ಲ ಎಂದಿದ್ದಾರೆ. ಅಲ್ದೆ, ಪುಟಾಣಿಗೆ ಗದರಿದ್ದಾರೆ ಇದರಿಂದ ಸಿಟ್ಟಾದ ಮಗು, ತಂದೆಯ ಬಳಿ ಬಂದು ತನ್ನನ್ನ ಪೊಲೀಸ್ ಸ್ಟೇಷನ್ ಗೆ ಕರೆದೊಯ್ಯುವಂತೆ ಹೇಳಿದೆ.
ತಂದೆಯೂ ಮಗುವನ್ನ ಪೊಲೀಸ್ ಠಾಣೆಗೆ ಕರೆದು ಕೊಂಡು ಬಂದಿದ್ದಾರೆ. ಅಲ್ಲಿನ ಸಿಬ್ಬಂದಿಗೆ ತಂದೆ ವಿಷಯವನ್ನ ತಿಳಿಸಿದಾಗ, ಠಾಣೆ ಮಹಿಳಾ ಸಬ್ ಇನ್ಸ್ ಪೆಕ್ಟರ್ ಪ್ರಿಯಾಂಕಾ ಮಗು ಹೇಳಿದ್ದನ್ನ ದೂರನ್ನ ಬರೆದುಕೊಂಡಿದ್ದಾರೆ. ಈ ವೇಳೆ ಮಗು ತನ್ನ ತಾಯಿ ತನಗೆ ಚಾಕಲೇಟ್ ತಿನ್ನೋಕೆ ಬಿಡಲ್ಲ, ಎಲ್ಲವನ್ನೂ ಮುಚ್ಚಿಡುತ್ತಾಳೆ ಎಂದು ಹೇಳಿದೆ ಇದಕ್ಕೆ ನಗುತ್ತಲೇ ದೂರು ಬರೆದುಕೊಂಡ ಎಸ್ ಐ ಮಗುವನ್ನ ಮುದ್ದು ಮಾಡಿ ಕಳುಹಿಸಿದ್ದಾರೆ.

ಭ್ರಷ್ಟರ ಬೇಟೆ

Recent Posts

ಮೀಟರ್ ಬಡ್ಡಿ ದಂದೆಕೋರನ ಮೇಲೆ ಡೆಡ್ಲಿ ಅಟ್ಯಾಕ್, ಮರ್ಡರ್ : ಆರೋಪಿಗಳ ಬಂಧನ

ಮುಂಡಗೋಡ: ಪಟ್ಟಣದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಎದುರಿನ ಅಂಬಿಕಾ ಸಾವಜಿ ಹೋಟೆಲ್‌ನಲ್ಲಿ ಊಟಕ್ಕೆ ಕುಳಿತಿದ್ದಾಗ ನಡೆದಿದ್ದ ರೌಡಿ ಶೀಟರ್ ಜಮೀರ್…

6 hours ago

ಕಂದಾಯ ಅಧಿಕಾರಿಯ ಪುತ್ರಿ upsc ಆಕಾಂಕ್ಷಿ ಮೇಲೆ ಅತ್ಯಾಚಾರ, ಬಳಿಕ ಹತ್ಯೆ

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮನಕಲಕುವ ಹಾಗೂ ಬೆಚ್ಚಿಬೀಳಿಸುವ ಘಟನೆ ನಡೆದಿದೆ. ಹಿರಿಯ ಕಂದಾಯ ಅಧಿಕಾರಿಯ 22 ವರ್ಷದ ಪುತ್ರಿಯನ್ನು…

16 hours ago

ನಿಶ್ಚಿತ ವಧುವಿನ ಭೇಟಿ: ಲೈಂಗಿಕ ಉತ್ತೇಜಕ ಮಾತ್ರೆಗಳ ಅತಿಸೇವನೆಗೆ ಯುವಕ ಬಲಿ..!

ಗುರುಗ್ರಾಮ: ನಿಶ್ಚಿತ ವಧುವನ್ನು ಭೇಟಿಯಾಗುವ ನಿರೀಕ್ಷೆಯಲ್ಲಿ ಇದ್ದ ಯುವಕನೊಬ್ಬ, ಲೈಂಗಿಕ ಉತ್ತೇಜಕ ಮಾತ್ರೆಗಳನ್ನು ಮಿತಿಮೀರಿ ಸೇವಿಸಿದ ಪರಿಣಾಮ ಹೃದಯಾಘಾತದಿಂದ ಮೃತಪಟ್ಟ…

16 hours ago

ಡಾ. ರಾಜ್‌ಕುಮಾರ್ ಸಮಾಧಿ ಭೂಮಿ ವಿವಾದ: ನಟ ಚೇತನ್ ಪೋಸ್ಟ್‌ಗೆ ಆಕ್ರೋಶ, ಪರ-ವಿರೋಧ ಚರ್ಚೆ ತೀವ್ರ

ಕನ್ನಡ ಚಿತ್ರರಂಗದ ದಿಗ್ಗಜ ಡಾ. ರಾಜ್‌ಕುಮಾರ್ ಅವರ ಸಮಾಧಿಗೆ ಮೀಸಲಾದ 2.5 ಎಕರೆ ಭೂಮಿ ವಿಚಾರವಾಗಿ ನಟ ಚೇತನ್ ಅಹಿಂಸಾ…

1 day ago

ಪ್ರೇಮ ವಿಚಾರಕ್ಕೆ ರಕ್ತರಂಜಿತ ತಿರುವು: ಶಿವಮೊಗ್ಗದಲ್ಲಿ ಅಪ್ರಾಪ್ತ ಬಾಲಕನ ಮೇಲೆ ಭೀಕರ ದಾಳಿ

ಪ್ರೀತಿಯ ವಿಚಾರವಾಗಿ ಉಂಟಾದ ಮನಸ್ತಾಪವು ಭೀಕರ ಹಲ್ಲೆಗೆ ತಿರುಗಿದ ಘಟನೆ ಶಿವಮೊಗ್ಗ ನಗರದಲ್ಲಿ ನಡೆದಿದೆ. ಯುವಕರ ಗುಂಪೊಂದು 17 ವರ್ಷದ…

1 day ago

ಹೆಚ್‌ಎಸ್‌ಆರ್ ಲೇಔಟ್‌ನಲ್ಲಿ ಪ್ರೇಮ ತ್ರಿಕೋನ ಡ್ರಾಮಾ: ನಡುರಸ್ತೆಯಲ್ಲಿ ಯುವಕರ ಗಲಾಟೆ ವೈರಲ್

ಬೆಂಗಳೂರು ನಗರದ ಪ್ರಮುಖ ವಸತಿ ಪ್ರದೇಶಗಳಲ್ಲಿ ಒಂದಾದ HSR Layout ಇತ್ತೀಚೆಗೆ ವಿಭಿನ್ನ ಕಾರಣಕ್ಕೆ ಸುದ್ದಿಯಲ್ಲಿದೆ. ಯುವತಿಯೊಬ್ಬಳ ವಿಚಾರವಾಗಿ ಹಳೆಯ…

1 day ago