Latest

ನನ್ನ ತಾಯಿಯನ್ನ ಜೈಲಿಗೆ ಹಾಕಿ; ಪೊಲೀಸರಿಗೆ 3 ವರ್ಷದ ಪುಟಾಣಿ ದೂರು!

ಮೂರು ವರ್ಷದ ಮಗು ತನ್ನ ತಾಯಿಯನ್ನ ಜೈಲಿಗೆ ಹಾಕಿ ಅಂತಾ ಪೊಲೀಸ್ ಠಾಣೆಗೆ ತೆರಳಿದ ಕಂಪ್ಲೆಂಟ್ ಕೊಟ್ಟಿದ್ದಾನೆ. ಪುಟಾಣಿ ಕಂಪ್ಲೆಂಟ್ ಕೊಟ್ಟಿದ್ಯಾಕೆ ಅನ್ನೋದೇ ಈಗ ಭಾರಿ ಕುತೂಹಲಕ್ಕೆ ಕಾರಣವಾಗಿದೆ.

ಅಂದಹಾಗೆ ಈ ಘಟನೆ ನಡೆದಿರೋದು ಮಧ್ಯಪ್ರದೇಶದ ಬುರ್ಹಾನ್ ಪುರ ಜಿಲ್ಲೆಯ ಡೆಡ್ತಲೈ ಅನ್ನೋ ಪ್ರದೇಶದಲ್ಲಿ ಮೂರು ವರ್ಷದ ಮಗು ತನ್ನ ತಂದೆಯನ್ನ ಠಾಣೆಗೆ ಕರೆದುಕೊಂಡು ಬಂದು ತಾಯಿಯ ವಿರುದ್ಧ ಕಂಪ್ಲೆಂಟ್ ಕೊಟ್ಟಿದ್ದಾನೆ. ಪೊಲೀಸರು ಈ ಪುಟಾಣಿಯ ತೊದಲು ನುಡಿಗಳನ್ನ ಕೇಳಿ ದೂರನ್ನೂ ಬರೆದುಕೊಂಡಿದ್ದಾರೆ. ಆದ್ರೆ ಮಗು ಕಂಪ್ಲೆಂಟ್ ಕೊಟ್ಟಿರೋದು ತಾಯಿ ತನ್ನ ಚಾಕಲೇಟ್ ಗಳನ್ನ ಕದ್ದು ಮುಚ್ಚಿಡುತ್ತಾರೆ ಎಂದು..

ಚಿಕ್ಕ ಮಕ್ಕಳು ಏನೇ ಮಾಡಿದರೂ ಖುಷಿಯಾಗುತ್ತದೆ. ಅವರ ಮುಗ್ಧ ವರ್ತನೆಗಳು ನಮ್ಮ ಮುಖದಲ್ಲಿ ನಗು ತರಿಸುತ್ತವೆ. ಇತ್ತೀಚೆಗಷ್ಟೇ ಮಧ್ಯಪ್ರದೇಶದ ಬುರ್ಹಾನ್‌ಪುರ ಜಿಲ್ಲೆಯ ಡೆಡ್ತಲೈ ಗ್ರಾಮದಲ್ಲಿ ಇಂತಹದ್ದೇ ಘಟನೆ ನಡೆದಿದೆ. ತನ್ನ ತಾಯಿ ತನಗೆ ಚಾಕೊಲೇಟ್ ತಿನ್ನಲು ಬಿಡುತ್ತಿಲ್ಲ, ಚಾಕಲೆಟ್ ಗಳನ್ನ ಮುಚ್ಚಿಡ್ತಾಳೆಂದು ಬಾಲಕನೊಬ್ಬ ಪೊಲೀಸರಿಗೆ ದೂರು ನೀಡಿದ್ದಾನೆ. ಅಲ್ದೆ ತನ್ನ ತಾಯಿಯನ್ನ ಬಂಧಿಸಿ ಜೈಲಿಗೆ ಹಾಕಿ ಎಂದಿದ್ದಾನೆ.

ಪುಟಾಣಿಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್ ಆಗಿದೆ. ಜೊತೆಗೆ ಮುಗುವಿನ ಮುಗ್ದತೆಯ ಜೊತೆ ಪೊಲೀಸರು ಮಗುವಿನ ಜೊತೆ ನಡೆದುಕೊಂಡ ರೀತಿಗೆ ಸಾಕಷ್ಟು ಪ್ರಶಂಸೆ ವ್ಯಕ್ತವಾಗಿದೆ.

ಬುರ್ಹಾನ್ ಪುರ ನಿವಾಸಿಯೊಬ್ಬರು ತನ್ನ ಮೂರು ವರ್ಷದ ಮಗು ಮನೆಯಲ್ಲಿ ಚಾಕಲೇಟ್ ಕೇಳಿದ್ದಕ್ಕೆ ತಾಯಿ ಕೊಡಲ್ಲ ಎಂದಿದ್ದಾರೆ. ಅಲ್ದೆ, ಪುಟಾಣಿಗೆ ಗದರಿದ್ದಾರೆ ಇದರಿಂದ ಸಿಟ್ಟಾದ ಮಗು, ತಂದೆಯ ಬಳಿ ಬಂದು ತನ್ನನ್ನ ಪೊಲೀಸ್ ಸ್ಟೇಷನ್ ಗೆ ಕರೆದೊಯ್ಯುವಂತೆ ಹೇಳಿದೆ.
ತಂದೆಯೂ ಮಗುವನ್ನ ಪೊಲೀಸ್ ಠಾಣೆಗೆ ಕರೆದು ಕೊಂಡು ಬಂದಿದ್ದಾರೆ. ಅಲ್ಲಿನ ಸಿಬ್ಬಂದಿಗೆ ತಂದೆ ವಿಷಯವನ್ನ ತಿಳಿಸಿದಾಗ, ಠಾಣೆ ಮಹಿಳಾ ಸಬ್ ಇನ್ಸ್ ಪೆಕ್ಟರ್ ಪ್ರಿಯಾಂಕಾ ಮಗು ಹೇಳಿದ್ದನ್ನ ದೂರನ್ನ ಬರೆದುಕೊಂಡಿದ್ದಾರೆ. ಈ ವೇಳೆ ಮಗು ತನ್ನ ತಾಯಿ ತನಗೆ ಚಾಕಲೇಟ್ ತಿನ್ನೋಕೆ ಬಿಡಲ್ಲ, ಎಲ್ಲವನ್ನೂ ಮುಚ್ಚಿಡುತ್ತಾಳೆ ಎಂದು ಹೇಳಿದೆ ಇದಕ್ಕೆ ನಗುತ್ತಲೇ ದೂರು ಬರೆದುಕೊಂಡ ಎಸ್ ಐ ಮಗುವನ್ನ ಮುದ್ದು ಮಾಡಿ ಕಳುಹಿಸಿದ್ದಾರೆ.

ಭ್ರಷ್ಟರ ಬೇಟೆ

Recent Posts

‍ರೀಲ್ಸ್ ಮಾಡುವ ಹುಚ್ಚು, ಕರೆದಾಗ ಬಂದು ಜೊತೆಗೆ ಮಲಗುತ್ತಿರಲಿಲ್ಲ ಎಂದು ಪತ್ನಿಯನ್ನು ಕೊಂದ ಪತಿ

ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…

2 days ago

ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27ರ ಯುವತಿ ಸಾವು; ಉಡುಪಿಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ, ತನಿಖೆ ಚುರುಕು

ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…

2 days ago

‘ಅಂದು ನನ್ನೊಂದಿಗೆ ಮಲಗಲು ಕೇಳಿದ್ದು ನೀವೇ ತಾನೇ?’ ನಿರ್ಮಾಪಕನಿಗೆ ನಟಿ ಚಾಂದಿನಿ ಚೌಧರಿ ಶಾಕ್!

ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…

2 days ago

ಮದುವೆಯಾಗಿ 4 ದಿನಕ್ಕೆ ಮಾಜಿ ಪ್ರೇಮಿಯೊಂದಿಗೆ ಹೋಟೆಲ್ ನಲ್ಲಿ ಪತ್ನಿ; ಪತಿಯ ಕೈಗೆ ವಿಡಿಯೋ…!

ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…

2 days ago

ಪತ್ನಿಯನ್ನು ಕೊಂದು ಶವ ವಿಲೇವಾರಿಗೆ ಸ್ನೇಹಿತನ ನೆರವು ಕೇಳಿದ ಪತಿ; ಜಾಣತನದಿಂದ ಪೊಲೀಸರಿಗೆ ಒಪ್ಪಿಸಿದ ಗೆಳೆಯ!

ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…

2 days ago

ಹಂಪಿಯಲ್ಲಿ ಅಕ್ರಮ ಹೋಂಸ್ಟೇ, ವಾಣಿಜ್ಯ ಚಟುವಟಿಕೆ ಆರೋಪ: 54 ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಸ್ವಯಂಪ್ರೇರಿತ ದೂರು

ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…

2 days ago