ಮೂರು ವರ್ಷದ ಮಗು ತನ್ನ ತಾಯಿಯನ್ನ ಜೈಲಿಗೆ ಹಾಕಿ ಅಂತಾ ಪೊಲೀಸ್ ಠಾಣೆಗೆ ತೆರಳಿದ ಕಂಪ್ಲೆಂಟ್ ಕೊಟ್ಟಿದ್ದಾನೆ. ಪುಟಾಣಿ ಕಂಪ್ಲೆಂಟ್ ಕೊಟ್ಟಿದ್ಯಾಕೆ ಅನ್ನೋದೇ ಈಗ ಭಾರಿ ಕುತೂಹಲಕ್ಕೆ ಕಾರಣವಾಗಿದೆ.
ಅಂದಹಾಗೆ ಈ ಘಟನೆ ನಡೆದಿರೋದು ಮಧ್ಯಪ್ರದೇಶದ ಬುರ್ಹಾನ್ ಪುರ ಜಿಲ್ಲೆಯ ಡೆಡ್ತಲೈ ಅನ್ನೋ ಪ್ರದೇಶದಲ್ಲಿ ಮೂರು ವರ್ಷದ ಮಗು ತನ್ನ ತಂದೆಯನ್ನ ಠಾಣೆಗೆ ಕರೆದುಕೊಂಡು ಬಂದು ತಾಯಿಯ ವಿರುದ್ಧ ಕಂಪ್ಲೆಂಟ್ ಕೊಟ್ಟಿದ್ದಾನೆ. ಪೊಲೀಸರು ಈ ಪುಟಾಣಿಯ ತೊದಲು ನುಡಿಗಳನ್ನ ಕೇಳಿ ದೂರನ್ನೂ ಬರೆದುಕೊಂಡಿದ್ದಾರೆ. ಆದ್ರೆ ಮಗು ಕಂಪ್ಲೆಂಟ್ ಕೊಟ್ಟಿರೋದು ತಾಯಿ ತನ್ನ ಚಾಕಲೇಟ್ ಗಳನ್ನ ಕದ್ದು ಮುಚ್ಚಿಡುತ್ತಾರೆ ಎಂದು..
ಚಿಕ್ಕ ಮಕ್ಕಳು ಏನೇ ಮಾಡಿದರೂ ಖುಷಿಯಾಗುತ್ತದೆ. ಅವರ ಮುಗ್ಧ ವರ್ತನೆಗಳು ನಮ್ಮ ಮುಖದಲ್ಲಿ ನಗು ತರಿಸುತ್ತವೆ. ಇತ್ತೀಚೆಗಷ್ಟೇ ಮಧ್ಯಪ್ರದೇಶದ ಬುರ್ಹಾನ್ಪುರ ಜಿಲ್ಲೆಯ ಡೆಡ್ತಲೈ ಗ್ರಾಮದಲ್ಲಿ ಇಂತಹದ್ದೇ ಘಟನೆ ನಡೆದಿದೆ. ತನ್ನ ತಾಯಿ ತನಗೆ ಚಾಕೊಲೇಟ್ ತಿನ್ನಲು ಬಿಡುತ್ತಿಲ್ಲ, ಚಾಕಲೆಟ್ ಗಳನ್ನ ಮುಚ್ಚಿಡ್ತಾಳೆಂದು ಬಾಲಕನೊಬ್ಬ ಪೊಲೀಸರಿಗೆ ದೂರು ನೀಡಿದ್ದಾನೆ. ಅಲ್ದೆ ತನ್ನ ತಾಯಿಯನ್ನ ಬಂಧಿಸಿ ಜೈಲಿಗೆ ಹಾಕಿ ಎಂದಿದ್ದಾನೆ.
ಪುಟಾಣಿಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್ ಆಗಿದೆ. ಜೊತೆಗೆ ಮುಗುವಿನ ಮುಗ್ದತೆಯ ಜೊತೆ ಪೊಲೀಸರು ಮಗುವಿನ ಜೊತೆ ನಡೆದುಕೊಂಡ ರೀತಿಗೆ ಸಾಕಷ್ಟು ಪ್ರಶಂಸೆ ವ್ಯಕ್ತವಾಗಿದೆ.
ಬುರ್ಹಾನ್ ಪುರ ನಿವಾಸಿಯೊಬ್ಬರು ತನ್ನ ಮೂರು ವರ್ಷದ ಮಗು ಮನೆಯಲ್ಲಿ ಚಾಕಲೇಟ್ ಕೇಳಿದ್ದಕ್ಕೆ ತಾಯಿ ಕೊಡಲ್ಲ ಎಂದಿದ್ದಾರೆ. ಅಲ್ದೆ, ಪುಟಾಣಿಗೆ ಗದರಿದ್ದಾರೆ ಇದರಿಂದ ಸಿಟ್ಟಾದ ಮಗು, ತಂದೆಯ ಬಳಿ ಬಂದು ತನ್ನನ್ನ ಪೊಲೀಸ್ ಸ್ಟೇಷನ್ ಗೆ ಕರೆದೊಯ್ಯುವಂತೆ ಹೇಳಿದೆ.
ತಂದೆಯೂ ಮಗುವನ್ನ ಪೊಲೀಸ್ ಠಾಣೆಗೆ ಕರೆದು ಕೊಂಡು ಬಂದಿದ್ದಾರೆ. ಅಲ್ಲಿನ ಸಿಬ್ಬಂದಿಗೆ ತಂದೆ ವಿಷಯವನ್ನ ತಿಳಿಸಿದಾಗ, ಠಾಣೆ ಮಹಿಳಾ ಸಬ್ ಇನ್ಸ್ ಪೆಕ್ಟರ್ ಪ್ರಿಯಾಂಕಾ ಮಗು ಹೇಳಿದ್ದನ್ನ ದೂರನ್ನ ಬರೆದುಕೊಂಡಿದ್ದಾರೆ. ಈ ವೇಳೆ ಮಗು ತನ್ನ ತಾಯಿ ತನಗೆ ಚಾಕಲೇಟ್ ತಿನ್ನೋಕೆ ಬಿಡಲ್ಲ, ಎಲ್ಲವನ್ನೂ ಮುಚ್ಚಿಡುತ್ತಾಳೆ ಎಂದು ಹೇಳಿದೆ ಇದಕ್ಕೆ ನಗುತ್ತಲೇ ದೂರು ಬರೆದುಕೊಂಡ ಎಸ್ ಐ ಮಗುವನ್ನ ಮುದ್ದು ಮಾಡಿ ಕಳುಹಿಸಿದ್ದಾರೆ.
ಜಮೀನಿನ ಖಾತಾ ಉತಾರ ನೀಡಲು ಲಂಚ ಸ್ವೀಕರಿಸಿದ ಆರೋಪದಲ್ಲಿ ಬಿಜನಗೇರಾ ಗ್ರಾಮ ಪಂಚಾಯಿತಿ ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಅಧಿಕಾರಿಗಳ…
ಅಯೋಧ್ಯೆಯ ರಾಮಮಂದಿರವನ್ನು ಗುರಿಯಾಗಿಸಿಕೊಂಡು ಸಂಚು ರೂಪಿಸಿದ್ದಾನೆ ಎಂಬ ಆರೋಪದ ಮೇಲೆ ಬಂಧಿತನಾಗಿರುವ ಶಂಕಿತ ಉಗ್ರ ಸುಹೇಲ್ ಪ್ರಕರಣಕ್ಕೆ ಹೊಸ ತಿರುವು…
ಉತ್ತರ ಪ್ರದೇಶದ ಅಲಿಗಢ್ನಲ್ಲಿ ಅಪ್ರಾಪ್ತ ಬಾಲಕನ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ತನ್ನದೇ 17…
ಬೆಂಗಳೂರಿನ ರಾಜರಾಜೇಶ್ವರಿ ನಗರದ ಐಷಾರಾಮಿ ಅಪಾರ್ಟ್ಮೆಂಟ್ನಲ್ಲಿ ಉದ್ಯಮಿ ವೈಶಾಕ್ (45) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಹಲವು ಅನುಮಾನಗಳಿಗೆ…
ಮೈಸೂರು ನಗರದ ದಟ್ಟಗಳ್ಳಿ ಪ್ರದೇಶದಲ್ಲಿರುವ ಸಚಿವ ಸತೀಶ್ ಜಾರಕಿಹೊಳಿ ಅವರ ಸಂಬಂಧಿ ವೈ. ಮಂಜುನಾಥ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ…
ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಬಾವಿಕೆರೆ ಗ್ರಾಮದಲ್ಲಿ ಎಐ (AI) ತಂತ್ರಜ್ಞಾನವನ್ನು ದುರ್ಬಳಕೆ ಮಾಡಿಕೊಂಡು ಗೃಹಿಣಿಯೊಬ್ಬರ ಫೋಟೋಗಳನ್ನು ಅಶ್ಲೀಲವಾಗಿ ಎಡಿಟ್…