ಒಡಿಶಾದಲ್ಲಿ ಬೆಳಕಿಗೆ ಬಂದಿರುವ ಪ್ರಕರಣ ಒಂದು ಬೆಚ್ಚಿ ಬೀಳಿಸುವಂತಿದೆ. ಹಣ ಗಳಿಕೆಗಾಗಿ ತನ್ನ ಪತಿಯೊಂದಿಗೆ ಸೇರಿ ಹನಿ ಟ್ರಾಪ್ ದಂಧೆಗಿಳಿದ ಮಹಿಳೆಯೊಬ್ಬಳು ಇದರಿಂದಲೇ ಬರೋಬ್ಬರಿ ಬರಿ 30 ಕೋಟಿ ರೂಪಾಯಿ ಸಂಪಾದಿಸಿದ್ದಾಳೆ. ಅಷ್ಟೇ ಅಲ್ಲ, ಕೋಟಿಗಟ್ಟಲೆ ಬೆಲೆ ಬಾಳುವ ಐಷಾರಾಮಿ ಕಾರುಗಳು, ಕುದುರೆ, ವಿದೇಶಿ ತಳಿಯ ನಾಯಿಗಳು ಈಕೆಯ ಸಂಪಾದನೆ ಪಟ್ಟಿಯಲ್ಲಿವೆ.
ಅರ್ಚನಾ ನಾಗ್ ಎಂಬ 26 ವರ್ಷದ ಮಹಿಳೆ ಇದೀಗ ಪೊಲೀಸರಿಂದ ಬಂಧನಕ್ಕೊಳಗಾಗಿದ್ದು, ವಿಚಾರಣೆ ವೇಳೆ ಆಕೆ ಬಾಯಿ ಬಿಡುತ್ತಿರುವ ಸಂಗತಿಗಳು ಸ್ವತಃ ಪೊಲೀಸರನ್ನೇ ದಂಗಾಗುವಂತೆ ಮಾಡಿದೆ. ಚಿತ್ರ ನಿರ್ಮಾಪಕರು, ಬಿಲ್ಡರ್ ಗಳು, ರಾಜಕಾರಣಿಗಳು, ಉದ್ಯಮಿಗಳು ಅಷ್ಟೇ ಯಾಕೆ ಹಲವು ಪೊಲೀಸ್ ಅಧಿಕಾರಿಗಳೇ ಈಕೆಯ ಬಲೆಗೆ ಬಿದ್ದು ಹಣ ಕಳೆದುಕೊಂಡಿದ್ದಾರೆ. ಆದರೆ ಮರ್ಯಾದೆಗೆ ಅಂಜಿ ಯಾರೂ ಕೂಡ ಈವರೆಗೆ ದೂರು ನೀಡದ ಕಾರಣ ದಂಪತಿಯ ವಂಚನಾ ಕಾರ್ಯ ನಿರಂತರವಾಗಿ ಮುಂದುವರೆದಿತ್ತು. ಕಡೆಗೂ ನಿರ್ಮಾಪಕರೊಬ್ಬರು ಸುಲಿಗೆ ದೂರು ನೀಡಿದ ಬಳಿಕ ದಂಪತಿಯ ವಂಚನೆ ಬೆಳಕಿಗೆ ಬಂದಿದೆ.
ಅರ್ಚನಾ ನಾಗ್ ಪತಿ ಜಗಬಂಧು ಚಾಂದ್ ಎಂಬಾತ ಸೆಕೆಂಡ್ ಹ್ಯಾಂಡ್ ಕಾರುಗಳ ಡೀಲರ್ ಆಗಿದ್ದು, ಹೀಗಾಗಿ ಗಣ್ಯ ವ್ಯಕ್ತಿಗಳನ್ನು ಪರಿಚಯಿಸಿಕೊಳ್ಳುತ್ತಿದ್ದ. ನಂತರ ಅವರುಗಳೊಂದಿಗೆ ಸಲುಗೆ ಬೆಳೆಸಿಕೊಳ್ಳುತ್ತಿದ್ದ ಅರ್ಚನಾ ಖಾಸಗಿ ಕ್ಷಣಗಳ ವಿಡಿಯೋ, ಫೋಟೋಗಳನ್ನು ಸೆರೆಹಿಡಿಯುತ್ತಿದ್ದು ಇಬ್ಬರೂ ಸೇರಿ ದೊಡ್ಡಮಟ್ಟದ ಹಣಕ್ಕೆ ಬೇಡಿಕೆ ಇಡುತ್ತಿದ್ದರು. ಈ ವಿಡಿಯೋ, ಫೋಟೋ ಬಯಲಾದರೆ ಸಮಾಜದಲ್ಲಿ ತಾವು ತಲೆಯೆತ್ತಿ ತಿರುಗಲು ಸಾಧ್ಯವಾಗುವುದಿಲ್ಲ ಎಂದು ಅಂಜುತ್ತಿದ್ದ ಗಣ್ಯ ವ್ಯಕ್ತಿಗಳು, ದಂಪತಿ ಕೇಳಿದಷ್ಟು ಹಣ ನೀಡಿ ಕೈ ತೊಳೆದುಕೊಳ್ಳುತ್ತಿದ್ದರು. ಇದೀಗ ಆರೋಪಿ ದಂಪತಿಗಳು ಕಂಬಿ ಹಿಂದೆ ಸೇರಿದ್ದಾರೆ.
ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…
ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…
ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…
ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…
ಗೌರಿಬಿದನೂರು: ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…
ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…