ಒಡಿಶಾದಲ್ಲಿ ಬೆಳಕಿಗೆ ಬಂದಿರುವ ಪ್ರಕರಣ ಒಂದು ಬೆಚ್ಚಿ ಬೀಳಿಸುವಂತಿದೆ. ಹಣ ಗಳಿಕೆಗಾಗಿ ತನ್ನ ಪತಿಯೊಂದಿಗೆ ಸೇರಿ ಹನಿ ಟ್ರಾಪ್ ದಂಧೆಗಿಳಿದ ಮಹಿಳೆಯೊಬ್ಬಳು ಇದರಿಂದಲೇ ಬರೋಬ್ಬರಿ ಬರಿ 30 ಕೋಟಿ ರೂಪಾಯಿ ಸಂಪಾದಿಸಿದ್ದಾಳೆ. ಅಷ್ಟೇ ಅಲ್ಲ, ಕೋಟಿಗಟ್ಟಲೆ ಬೆಲೆ ಬಾಳುವ ಐಷಾರಾಮಿ ಕಾರುಗಳು, ಕುದುರೆ, ವಿದೇಶಿ ತಳಿಯ ನಾಯಿಗಳು ಈಕೆಯ ಸಂಪಾದನೆ ಪಟ್ಟಿಯಲ್ಲಿವೆ.
ಅರ್ಚನಾ ನಾಗ್ ಎಂಬ 26 ವರ್ಷದ ಮಹಿಳೆ ಇದೀಗ ಪೊಲೀಸರಿಂದ ಬಂಧನಕ್ಕೊಳಗಾಗಿದ್ದು, ವಿಚಾರಣೆ ವೇಳೆ ಆಕೆ ಬಾಯಿ ಬಿಡುತ್ತಿರುವ ಸಂಗತಿಗಳು ಸ್ವತಃ ಪೊಲೀಸರನ್ನೇ ದಂಗಾಗುವಂತೆ ಮಾಡಿದೆ. ಚಿತ್ರ ನಿರ್ಮಾಪಕರು, ಬಿಲ್ಡರ್ ಗಳು, ರಾಜಕಾರಣಿಗಳು, ಉದ್ಯಮಿಗಳು ಅಷ್ಟೇ ಯಾಕೆ ಹಲವು ಪೊಲೀಸ್ ಅಧಿಕಾರಿಗಳೇ ಈಕೆಯ ಬಲೆಗೆ ಬಿದ್ದು ಹಣ ಕಳೆದುಕೊಂಡಿದ್ದಾರೆ. ಆದರೆ ಮರ್ಯಾದೆಗೆ ಅಂಜಿ ಯಾರೂ ಕೂಡ ಈವರೆಗೆ ದೂರು ನೀಡದ ಕಾರಣ ದಂಪತಿಯ ವಂಚನಾ ಕಾರ್ಯ ನಿರಂತರವಾಗಿ ಮುಂದುವರೆದಿತ್ತು. ಕಡೆಗೂ ನಿರ್ಮಾಪಕರೊಬ್ಬರು ಸುಲಿಗೆ ದೂರು ನೀಡಿದ ಬಳಿಕ ದಂಪತಿಯ ವಂಚನೆ ಬೆಳಕಿಗೆ ಬಂದಿದೆ.
ಅರ್ಚನಾ ನಾಗ್ ಪತಿ ಜಗಬಂಧು ಚಾಂದ್ ಎಂಬಾತ ಸೆಕೆಂಡ್ ಹ್ಯಾಂಡ್ ಕಾರುಗಳ ಡೀಲರ್ ಆಗಿದ್ದು, ಹೀಗಾಗಿ ಗಣ್ಯ ವ್ಯಕ್ತಿಗಳನ್ನು ಪರಿಚಯಿಸಿಕೊಳ್ಳುತ್ತಿದ್ದ. ನಂತರ ಅವರುಗಳೊಂದಿಗೆ ಸಲುಗೆ ಬೆಳೆಸಿಕೊಳ್ಳುತ್ತಿದ್ದ ಅರ್ಚನಾ ಖಾಸಗಿ ಕ್ಷಣಗಳ ವಿಡಿಯೋ, ಫೋಟೋಗಳನ್ನು ಸೆರೆಹಿಡಿಯುತ್ತಿದ್ದು ಇಬ್ಬರೂ ಸೇರಿ ದೊಡ್ಡಮಟ್ಟದ ಹಣಕ್ಕೆ ಬೇಡಿಕೆ ಇಡುತ್ತಿದ್ದರು. ಈ ವಿಡಿಯೋ, ಫೋಟೋ ಬಯಲಾದರೆ ಸಮಾಜದಲ್ಲಿ ತಾವು ತಲೆಯೆತ್ತಿ ತಿರುಗಲು ಸಾಧ್ಯವಾಗುವುದಿಲ್ಲ ಎಂದು ಅಂಜುತ್ತಿದ್ದ ಗಣ್ಯ ವ್ಯಕ್ತಿಗಳು, ದಂಪತಿ ಕೇಳಿದಷ್ಟು ಹಣ ನೀಡಿ ಕೈ ತೊಳೆದುಕೊಳ್ಳುತ್ತಿದ್ದರು. ಇದೀಗ ಆರೋಪಿ ದಂಪತಿಗಳು ಕಂಬಿ ಹಿಂದೆ ಸೇರಿದ್ದಾರೆ.
ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ಪಟ್ಟಣದಲ್ಲಿ ಭ್ರೂಣಲಿಂಗ ಪತ್ತೆ ಮತ್ತು ಅಕ್ರಮ ಸ್ಕ್ಯಾನಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ವೈದ್ಯರನ್ನು ಬಂಧಿಸಿರುವ ಘಟನೆ…
ಭೂಸ್ವಾಧೀನ ಸಂಬಂಧಿತ ಬಾಕಿ ಕಂದಾಯ ಪ್ರಕರಣವನ್ನು ಪರಿಹರಿಸಲು ಲಂಚ ಪಡೆಯುತ್ತಿದ್ದ ವೇಳೆ ಕೆಎಎಸ್ ಅಧಿಕಾರಿಯೊಬ್ಬರು ಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದ ಘಟನೆ…
ಇತ್ತೀಚಿನ ದಿನಗಳಲ್ಲಿ ದಾಂಪತ್ಯ ಜೀವನ ಸಣ್ಣಪುಟ್ಟ ವಿಚಾರಗಳಿಗೂ ಕುಸಿಯುತ್ತಿರುವ ಘಟನೆಗಳು ಹೆಚ್ಚಾಗುತ್ತಿವೆ. ಹೊಂದಾಣಿಕೆಯ ಕೊರತೆ, ಅಕ್ರಮ ಸಂಬಂಧಗಳು ಸೇರಿದಂತೆ ಹಲವು…
ಮಾಜಿ ಪ್ರಧಾನಿ Rajiv Gandhi ಹತ್ಯೆ ಪ್ರಕರಣದಲ್ಲಿ ಶಿಕ್ಷೆ ಅನುಭವಿಸಿದ್ದ ಎ.ಜಿ. ಪೆರಾರಿವಾಲನ್ ಇದೀಗ ವಕೀಲರಾಗಿರುವುದು ಗಮನಸೆಳೆಯುವ ಬೆಳವಣಿಗೆಯಾಗಿದೆ. 2022ರಲ್ಲಿ…
ಶಿವಮೊಗ್ಗ ಜಿಲ್ಲೆಯ ಸೊರಬ ಪಟ್ಟಣದ ಕಾನುಕೇರಿ ಬಡಾವಣೆಯಲ್ಲಿ ದುರಂತ ಘಟನೆ ಸಂಭವಿಸಿದೆ. ಪತಿಯ ಅನೈತಿಕ ಸಂಬಂಧ ಹಾಗೂ ನಿರಂತರ ದೈಹಿಕ-ಮಾನಸಿಕ…
ಹೈದರಾಬಾದ್: ಬಣ್ಣದ ಲೋಕದಲ್ಲಿ ಮತ್ತೆ ವಂಚನೆ ಆರೋಪ ಕೇಳಿಬಂದಿದ್ದು, ತೆಲುಗು ಬಿಗ್ಬಾಸ್ ಮೂಲಕ ಜನಪ್ರಿಯತೆ ಪಡೆದ ನಟಿ ಆಶು ರೆಡ್ಡಿ…