ಒಡಿಶಾದಲ್ಲಿ ಬೆಳಕಿಗೆ ಬಂದಿರುವ ಪ್ರಕರಣ ಒಂದು ಬೆಚ್ಚಿ ಬೀಳಿಸುವಂತಿದೆ. ಹಣ ಗಳಿಕೆಗಾಗಿ ತನ್ನ ಪತಿಯೊಂದಿಗೆ ಸೇರಿ ಹನಿ ಟ್ರಾಪ್ ದಂಧೆಗಿಳಿದ ಮಹಿಳೆಯೊಬ್ಬಳು ಇದರಿಂದಲೇ ಬರೋಬ್ಬರಿ ಬರಿ 30 ಕೋಟಿ ರೂಪಾಯಿ ಸಂಪಾದಿಸಿದ್ದಾಳೆ. ಅಷ್ಟೇ ಅಲ್ಲ, ಕೋಟಿಗಟ್ಟಲೆ ಬೆಲೆ ಬಾಳುವ ಐಷಾರಾಮಿ ಕಾರುಗಳು, ಕುದುರೆ, ವಿದೇಶಿ ತಳಿಯ ನಾಯಿಗಳು ಈಕೆಯ ಸಂಪಾದನೆ ಪಟ್ಟಿಯಲ್ಲಿವೆ.
ಅರ್ಚನಾ ನಾಗ್ ಎಂಬ 26 ವರ್ಷದ ಮಹಿಳೆ ಇದೀಗ ಪೊಲೀಸರಿಂದ ಬಂಧನಕ್ಕೊಳಗಾಗಿದ್ದು, ವಿಚಾರಣೆ ವೇಳೆ ಆಕೆ ಬಾಯಿ ಬಿಡುತ್ತಿರುವ ಸಂಗತಿಗಳು ಸ್ವತಃ ಪೊಲೀಸರನ್ನೇ ದಂಗಾಗುವಂತೆ ಮಾಡಿದೆ. ಚಿತ್ರ ನಿರ್ಮಾಪಕರು, ಬಿಲ್ಡರ್ ಗಳು, ರಾಜಕಾರಣಿಗಳು, ಉದ್ಯಮಿಗಳು ಅಷ್ಟೇ ಯಾಕೆ ಹಲವು ಪೊಲೀಸ್ ಅಧಿಕಾರಿಗಳೇ ಈಕೆಯ ಬಲೆಗೆ ಬಿದ್ದು ಹಣ ಕಳೆದುಕೊಂಡಿದ್ದಾರೆ. ಆದರೆ ಮರ್ಯಾದೆಗೆ ಅಂಜಿ ಯಾರೂ ಕೂಡ ಈವರೆಗೆ ದೂರು ನೀಡದ ಕಾರಣ ದಂಪತಿಯ ವಂಚನಾ ಕಾರ್ಯ ನಿರಂತರವಾಗಿ ಮುಂದುವರೆದಿತ್ತು. ಕಡೆಗೂ ನಿರ್ಮಾಪಕರೊಬ್ಬರು ಸುಲಿಗೆ ದೂರು ನೀಡಿದ ಬಳಿಕ ದಂಪತಿಯ ವಂಚನೆ ಬೆಳಕಿಗೆ ಬಂದಿದೆ.
ಅರ್ಚನಾ ನಾಗ್ ಪತಿ ಜಗಬಂಧು ಚಾಂದ್ ಎಂಬಾತ ಸೆಕೆಂಡ್ ಹ್ಯಾಂಡ್ ಕಾರುಗಳ ಡೀಲರ್ ಆಗಿದ್ದು, ಹೀಗಾಗಿ ಗಣ್ಯ ವ್ಯಕ್ತಿಗಳನ್ನು ಪರಿಚಯಿಸಿಕೊಳ್ಳುತ್ತಿದ್ದ. ನಂತರ ಅವರುಗಳೊಂದಿಗೆ ಸಲುಗೆ ಬೆಳೆಸಿಕೊಳ್ಳುತ್ತಿದ್ದ ಅರ್ಚನಾ ಖಾಸಗಿ ಕ್ಷಣಗಳ ವಿಡಿಯೋ, ಫೋಟೋಗಳನ್ನು ಸೆರೆಹಿಡಿಯುತ್ತಿದ್ದು ಇಬ್ಬರೂ ಸೇರಿ ದೊಡ್ಡಮಟ್ಟದ ಹಣಕ್ಕೆ ಬೇಡಿಕೆ ಇಡುತ್ತಿದ್ದರು. ಈ ವಿಡಿಯೋ, ಫೋಟೋ ಬಯಲಾದರೆ ಸಮಾಜದಲ್ಲಿ ತಾವು ತಲೆಯೆತ್ತಿ ತಿರುಗಲು ಸಾಧ್ಯವಾಗುವುದಿಲ್ಲ ಎಂದು ಅಂಜುತ್ತಿದ್ದ ಗಣ್ಯ ವ್ಯಕ್ತಿಗಳು, ದಂಪತಿ ಕೇಳಿದಷ್ಟು ಹಣ ನೀಡಿ ಕೈ ತೊಳೆದುಕೊಳ್ಳುತ್ತಿದ್ದರು. ಇದೀಗ ಆರೋಪಿ ದಂಪತಿಗಳು ಕಂಬಿ ಹಿಂದೆ ಸೇರಿದ್ದಾರೆ.
ಮೈಸೂರು ನಗರದ ದಟ್ಟಗಳ್ಳಿ ಪ್ರದೇಶದಲ್ಲಿರುವ ಸಚಿವ ಸತೀಶ್ ಜಾರಕಿಹೊಳಿ ಅವರ ಸಂಬಂಧಿ ವೈ. ಮಂಜುನಾಥ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ…
ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಬಾವಿಕೆರೆ ಗ್ರಾಮದಲ್ಲಿ ಎಐ (AI) ತಂತ್ರಜ್ಞಾನವನ್ನು ದುರ್ಬಳಕೆ ಮಾಡಿಕೊಂಡು ಗೃಹಿಣಿಯೊಬ್ಬರ ಫೋಟೋಗಳನ್ನು ಅಶ್ಲೀಲವಾಗಿ ಎಡಿಟ್…
ಬೆಂಗಳೂರು ದಕ್ಷಿಣ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಬ್ಯಾಡರಹಳ್ಳಿ ಮೂಲದ ರವಿ ಕುಟುಂಬಕ್ಕೆ ಮುತ್ತತ್ತಿ ಪ್ರವಾಸವೇ ಅಂತಿಮ ಯಾತ್ರೆಯಾಯಿತು. ದೇವರ ದರ್ಶನಕ್ಕಾಗಿ…
ತುಮಕೂರು ಜಿಲ್ಲೆಯ ಶಿರಾ ಸಮೀಪ ನಡೆದ ಭೀಕರ ಕೊಲೆ ಪ್ರಕರಣವೊಂದು ಜನರನ್ನು ಬೆಚ್ಚಿಬೀಳಿಸಿದೆ. ಹಣದಾಸೆಗೆ ಮನುಷ್ಯ ಎಷ್ಟರ ಮಟ್ಟಿಗೆ ಕ್ರೂರನಾಗಬಹುದು…
ಸಿದ್ದಾಪುರ: ತಾಲೂಕಿನ ಕಾನಸೂರ ಗ್ರಾಮದ ಇಂದಿರಾಗಾಂಧಿ ವಸತಿ ಶಾಲೆಯ 10ನೇ ತರಗತಿ ವಿದ್ಯಾರ್ಥಿ ಗೋಕುಲ ಕೃಷ್ಣ ಗೌಡ ಸಾ. ವಿನ…
ಮುಂಡಗೋಡ: ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಮೀಟರ್ ಬಡ್ಡಿ ದಂಧೆ ಹಾಗೂ ಸಮಾಜಘಾತಕ ಚಟುವಟಿಕೆಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಉತ್ತರ ಕನ್ನಡ ಜಿಲ್ಲಾ…