Crime

ಅಪ್ರಾಪ್ತೆಯ ಮೇಲೆ ನಿರಂತರ ಅತ್ಯಾಚಾರ – 31 ವರ್ಷದ ವ್ಯಕ್ತಿ ಬಂಧನ

ರಾಜ್ಯದಲ್ಲಿ ಮರುಕಳಿಸಿರುವ ಪೈಶಾಚಿಕ ಘಟನೆ ಮತ್ತೊಮ್ಮೆ ಮಾನವೀಯತೆಯ ಮೌಲ್ಯಗಳನ್ನು ಪ್ರಶ್ನೆಗೆಡಿಸುತ್ತಿದೆ. 16 ವರ್ಷದ ಅಪ್ರಾಪ್ತ ಬಾಲಕಿಯೊಬ್ಬಳನ್ನು ನಿರಂತರವಾಗಿ ಅತ್ಯಾಚಾರಕ್ಕೊಳಪಡಿಸಿದ ಪ್ರಕರಣದಲ್ಲಿ 31 ವರ್ಷದ ಧನಂಜಯ್ ಎಂಬಾತನನ್ನು ಬೆಂಗಳೂರಿನ ಸೋಲದೇವನಹಳ್ಳಿ ಪೊಲೀಸರು ಬಂಧಿಸಿದ್ದಾರೆ.

ಮಂಗಳೂರಿನಲ್ಲಿ ಬಾಲಕಿಯ ತಾಯಿಯ ಸ್ನೇಹಿತೆಯ ಮನೆಯಲ್ಲಿ ಘಟನೆ ಆರುಂಭವಾಗಿದೆ. ಧನಂಜಯ್ ಬಾಲಕಿಯ ಖಾಸಗಿ ಫೋಟೋಗಳು ಹಾಗೂ ವೀಡಿಯೋಗಳನ್ನು ಬಳಸಿಕೊಂಡು ಆಕೆಯನ್ನು ಬ್ಲಾಕ್‌ಮೇಲ್ ಮಾಡಿದ್ದಾನೆ. ಬೆದರಿಕೆ ನೀಡಿದ ಆರೋಪಿಯು ಆಕೆಯನ್ನು ಬೆಂಗಳೂರಿಗೆ ಕರೆದುಕೊಂಡು ಬಂದಿದ್ದು, ನಂತರ ಸಕಲೇಶಪುರದ ತೋಟವೊಂದರಲ್ಲಿ ಬಚ್ಚಿಟ್ಟು, ಅನೇಕ ದಿನಗಳವರೆಗೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಪೊಲೀಸರಿಂದ ತಿಳಿದುಬಂದಿದೆ.

ಈ ಕ್ರೂರತೆಯಿಂದ ಬಳಲಿದ ಬಾಲಕಿ ಕೊನೆಗೆ ಪೋಷಕರಿಗೆ ಘಟನೆ ಬಗ್ಗೆಯಾಗಿ ಹೇಳಿದ ನಂತರ, ಅವರು ತಕ್ಷಣವೇ ಸೋಲದೇವನಹಳ್ಳಿ ಠಾಣೆಗೆ ದೂರು ಸಲ್ಲಿಸಿದರು. ವೈದ್ಯಕೀಯ ಪರೀಕ್ಷೆಯಲ್ಲಿಯೂ ಅತ್ಯಾಚಾರ ದೃಢಪಟ್ಟಿದೆ.

ಪೊಲೀಸರು ಆರೋಪಿಯನ್ನು ಬಂಧಿಸಿ, ಪೋಕ್ಸೋ ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಮುಂದುವರೆಸಿದ್ದಾರೆ. ಈ ಘಟನೆ ಮಗುಗಳ ಭದ್ರತೆ ಮತ್ತು ಸಮಾಜದ ಜವಾಬ್ದಾರಿಯ ಬಗ್ಗೆ ಮತ್ತೊಮ್ಮೆ ಗಂಭೀರ ಚಿಂತನೆಗೆ ಕಾರಣವಾಗಿದೆ.

nazeer ahamad

Recent Posts

‍ರೀಲ್ಸ್ ಮಾಡುವ ಹುಚ್ಚು, ಕರೆದಾಗ ಬಂದು ಜೊತೆಗೆ ಮಲಗುತ್ತಿರಲಿಲ್ಲ ಎಂದು ಪತ್ನಿಯನ್ನು ಕೊಂದ ಪತಿ

ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…

2 days ago

ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27ರ ಯುವತಿ ಸಾವು; ಉಡುಪಿಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ, ತನಿಖೆ ಚುರುಕು

ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…

2 days ago

‘ಅಂದು ನನ್ನೊಂದಿಗೆ ಮಲಗಲು ಕೇಳಿದ್ದು ನೀವೇ ತಾನೇ?’ ನಿರ್ಮಾಪಕನಿಗೆ ನಟಿ ಚಾಂದಿನಿ ಚೌಧರಿ ಶಾಕ್!

ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…

2 days ago

ಮದುವೆಯಾಗಿ 4 ದಿನಕ್ಕೆ ಮಾಜಿ ಪ್ರೇಮಿಯೊಂದಿಗೆ ಹೋಟೆಲ್ ನಲ್ಲಿ ಪತ್ನಿ; ಪತಿಯ ಕೈಗೆ ವಿಡಿಯೋ…!

ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…

2 days ago

ಪತ್ನಿಯನ್ನು ಕೊಂದು ಶವ ವಿಲೇವಾರಿಗೆ ಸ್ನೇಹಿತನ ನೆರವು ಕೇಳಿದ ಪತಿ; ಜಾಣತನದಿಂದ ಪೊಲೀಸರಿಗೆ ಒಪ್ಪಿಸಿದ ಗೆಳೆಯ!

ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…

2 days ago

ಹಂಪಿಯಲ್ಲಿ ಅಕ್ರಮ ಹೋಂಸ್ಟೇ, ವಾಣಿಜ್ಯ ಚಟುವಟಿಕೆ ಆರೋಪ: 54 ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಸ್ವಯಂಪ್ರೇರಿತ ದೂರು

ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…

2 days ago