ರಾಜ್ಯದಲ್ಲಿ ಮರುಕಳಿಸಿರುವ ಪೈಶಾಚಿಕ ಘಟನೆ ಮತ್ತೊಮ್ಮೆ ಮಾನವೀಯತೆಯ ಮೌಲ್ಯಗಳನ್ನು ಪ್ರಶ್ನೆಗೆಡಿಸುತ್ತಿದೆ. 16 ವರ್ಷದ ಅಪ್ರಾಪ್ತ ಬಾಲಕಿಯೊಬ್ಬಳನ್ನು ನಿರಂತರವಾಗಿ ಅತ್ಯಾಚಾರಕ್ಕೊಳಪಡಿಸಿದ ಪ್ರಕರಣದಲ್ಲಿ 31 ವರ್ಷದ ಧನಂಜಯ್ ಎಂಬಾತನನ್ನು ಬೆಂಗಳೂರಿನ ಸೋಲದೇವನಹಳ್ಳಿ ಪೊಲೀಸರು ಬಂಧಿಸಿದ್ದಾರೆ.
ಮಂಗಳೂರಿನಲ್ಲಿ ಬಾಲಕಿಯ ತಾಯಿಯ ಸ್ನೇಹಿತೆಯ ಮನೆಯಲ್ಲಿ ಘಟನೆ ಆರುಂಭವಾಗಿದೆ. ಧನಂಜಯ್ ಬಾಲಕಿಯ ಖಾಸಗಿ ಫೋಟೋಗಳು ಹಾಗೂ ವೀಡಿಯೋಗಳನ್ನು ಬಳಸಿಕೊಂಡು ಆಕೆಯನ್ನು ಬ್ಲಾಕ್ಮೇಲ್ ಮಾಡಿದ್ದಾನೆ. ಬೆದರಿಕೆ ನೀಡಿದ ಆರೋಪಿಯು ಆಕೆಯನ್ನು ಬೆಂಗಳೂರಿಗೆ ಕರೆದುಕೊಂಡು ಬಂದಿದ್ದು, ನಂತರ ಸಕಲೇಶಪುರದ ತೋಟವೊಂದರಲ್ಲಿ ಬಚ್ಚಿಟ್ಟು, ಅನೇಕ ದಿನಗಳವರೆಗೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಪೊಲೀಸರಿಂದ ತಿಳಿದುಬಂದಿದೆ.
ಈ ಕ್ರೂರತೆಯಿಂದ ಬಳಲಿದ ಬಾಲಕಿ ಕೊನೆಗೆ ಪೋಷಕರಿಗೆ ಘಟನೆ ಬಗ್ಗೆಯಾಗಿ ಹೇಳಿದ ನಂತರ, ಅವರು ತಕ್ಷಣವೇ ಸೋಲದೇವನಹಳ್ಳಿ ಠಾಣೆಗೆ ದೂರು ಸಲ್ಲಿಸಿದರು. ವೈದ್ಯಕೀಯ ಪರೀಕ್ಷೆಯಲ್ಲಿಯೂ ಅತ್ಯಾಚಾರ ದೃಢಪಟ್ಟಿದೆ.
ಪೊಲೀಸರು ಆರೋಪಿಯನ್ನು ಬಂಧಿಸಿ, ಪೋಕ್ಸೋ ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಮುಂದುವರೆಸಿದ್ದಾರೆ. ಈ ಘಟನೆ ಮಗುಗಳ ಭದ್ರತೆ ಮತ್ತು ಸಮಾಜದ ಜವಾಬ್ದಾರಿಯ ಬಗ್ಗೆ ಮತ್ತೊಮ್ಮೆ ಗಂಭೀರ ಚಿಂತನೆಗೆ ಕಾರಣವಾಗಿದೆ.
ಅಟ್ರಾಸಿಟಿ ಪ್ರಕರಣದ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವ ವಿಚಾರದಲ್ಲಿ ಲಂಚ ಸ್ವೀಕರಿಸಿದ ಆರೋಪದಡಿ ಗುರುಮಠಕಲ್ ಪೊಲೀಸ್ ಠಾಣೆಯ ಸಿಪಿಐ ವೀರಣ್ಣ…
ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…
ಬೆಳ್ತಂಗಡಿ ಪಟ್ಟಣದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿದ್ದ ಕ್ಯಾಂಟಿನ್ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ…
ಭಟ್ಕಳ: ಸುಮಾರು ಒಂದು ವರ್ಷದಿನಿಂದ ಖಾಲಿಯಾಗಿದ್ದ ಭಟ್ಕಳ ಉಪ ವಿಭಾಗಾಧಿಕಾರಿ (ಎಸಿ) ಹುದ್ದೆಗೆ ಕೊನೆಗೂ ಸರ್ಕಾರ ಅಧಿಕಾರಿಯನ್ನು ನೇಮಕ ಮಾಡಿದ್ದು,…
ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾಗಿದ್ದ ಡಿ. ಸುಧಾಕರ್ (65) ಅವರು ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ…
ಸೋಶಿಯಲ್ ಮೀಡಿಯಾದಲ್ಲಿ ಆರಂಭವಾದ ಪ್ರೇಮಕಥೆಯೊಂದು ದುರಂತ ಅಂತ್ಯ ಕಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇನ್ಸ್ಟಾಗ್ರಾಮ್ ಮೂಲಕ ಪರಿಚಯವಾದ ಮಹಿಳೆಯೊಂದಿಗೆ ಲಿವ್-ಇನ್…