Latest

36 ವರ್ಷದ ಆಂಟಿ ಮತ್ತು 27 ವರ್ಷದ ವೈದ್ಯ: ಲೈಂಗಿಕ ದೌರ್ಜನ್ಯ, ಒಬ್ಬರಮೇಲೊಬ್ಬರ ಆರೋಪ!

ರಾಮನಗರ: 36 ವರ್ಷದ ಮಹಿಳೆ ಮತ್ತು 27 ವರ್ಷದ ವೈದ್ಯನ ನಡುವೆ ಲೈಂಗಿಕ ದೌರ್ಜನ್ಯ ಆರೋಪ, ಪ್ರಕರಣ ಗಂಭೀರ ತಿರುವು. ರಾಮನಗರದಲ್ಲಿ 36 ವರ್ಷದ ಮಹಿಳೆ ಮತ್ತು 27 ವರ್ಷದ ಯುವ ವೈದ್ಯನ ನಡುವೆ ನಡೆದ ಘಟನೆಯು ವಿವಾದಕ್ಕೆ ಕಾರಣವಾಗಿದೆ. ಮಹಿಳೆ ಯುವ ವೈದ್ಯನ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಮಾಡಿದ್ದರೆ, ವೈದ್ಯನು ತನ್ನ ವಿರುದ್ಧ ಆಕೆಯೇ ಅಸಭ್ಯವಾಗಿ ವರ್ತಿಸಿದ್ದಾಳೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

ಘಟನೆಯ ಹಿನ್ನೆಲೆ:
ಮಹಿಳೆ, ಇವೆಂಟ್ ಮ್ಯಾನೇಜ್ಮೆಂಟ್‌ನಲ್ಲಿ ಕೆಲಸ ಮಾಡುತ್ತಿದ್ದು, ರಾತ್ರಿ 9 ಗಂಟೆ ವೇಳೆಗೆ ಸಂಬಂಧಿಕರ ಮನೆಗೆ ಹೋಗಲು ಬಸ್ ನಿರೀಕ್ಷಿಸುತ್ತಿದ್ದರು. ಬಸ್ ಸಿಗದ ಕಾರಣ, 27 ವರ್ಷದ ವೈದ್ಯನನ್ನು ತಡೆದು ಡ್ರಾಪ್ ಕೋರಿದ್ದಾರೆ. ಮಹಿಳೆ ನನಗೆ ಕುಂಬಳಗೋಡು ಬಿಡಿ ಎಂದು ಹೇಳಿದ್ದಾಳೆ. ಈ ವೇಳೆ ಕೆಂಗೇರಿ ಕಡೆ ಹೋಗ್ತಾ ಇದೀರಾ, ಹಾಗಾದ್ರೆ ಕೆಂಗೇರಿಯೇ ಬಿಟ್ಟುಬಿಡಿ ಎಂದು ಮಹಿಳೆ ಹೇಳಿದ್ದಾಳಂತೆ.‌

ಮಧ್ಯದ ಸಮಯದಲ್ಲಿ, ವೈದ್ಯನು ಪಥ ಬದಲಿಸಿ ಕತ್ತಲಿರುವ ಖಾಲಿ ಲೇಔಟ್‌ಗೆ ತೆರಳಿ, ಅಸಭ್ಯವಾಗಿ ವರ್ತಿಸಿದ್ದಾನೆಂದು ಮಹಿಳೆ ಆರೋಪ ಮಾಡಿದ್ದಾರೆ. ವೈದ್ಯನು ಡ್ರೆಸ್ ತೆಗೆಯಲು ಹೇಳಿದ್ದು, ತನ್ನ ಪ್ಯಾಂಟ್ ಬಿಚ್ಚಿ ಆಕೆಯೊಂದಿಗೆ ಅನಾಚಾರಕ್ಕೆ ಮುಂದಾಗಿದ್ದಾನೆ. ಈ ಸಂದರ್ಭ ಮಹಿಳೆ ಜೋರಾಗಿ ಕೂಗಿ, ಸ್ಥಳದಿಂದ ಓಡಿಹೋಗಿ ಮತ್ತೊಬ್ಬ ಬೈಕ್ ಸವಾರನ ನೆರವಿನಿಂದ ಕುಂಬಳಗೋಡಿಗೆ ತಲುಪಿದ್ದಾರೆ.

ವೈದ್ಯನ ಪ್ರತಿಸ್ಪಂದನೆ:
ಆರೋಪವನ್ನು ನಿರಾಕರಿಸಿದ ವೈದ್ಯನು, ಮಹಿಳೆಯೇ ನನ್ನ ಮೇಲೆ ಅಸಭ್ಯವಾಗಿ ವರ್ತಿಸಿದ್ದಾಳೆ ಎಂದು ಹೇಳಿದ್ದು, “ನಾನು ಆಕೆಗೆ ಕೇವಲ ಸಹಾಯ ಮಾಡಲು ಮುಂದಾಗಿದ್ದೆ. ನನ್ನೊಡನೆ ಇರುವ ವೇಳೆ ಆಕೆಯೇ ನನ್ನ ಮರ್ಮಾಂಗಕ್ಕೆ ಕೈ ಹಾಕಿದ್ದಾರೆ. ನಾನು ಆ ತರಹ ಮಾಡುವ ವ್ಯಕ್ತಿಯಲ್ಲ,” ಎಂದಿದ್ದಾರೆ.

ಪೊಲೀಸರ ತನಿಖೆ:
ಈ ಘಟನೆಯು ಇದೀಗ ಪೊಲೀಸರಿಗೆ ತಲೆನೋವಾಗಿ ಪರಿಣಮಿಸಿದೆ. ಇಬ್ಬರಲ್ಲೂ ಪರಸ್ಪರ ವಿರುದ್ಧವಾದ ಆರೋಪಗಳನ್ನು ಮಾಡಿರುವ ಕಾರಣ, ಸತ್ಯಾಂಶವನ್ನು ಪತ್ತೆ ಹಚ್ಚಲು ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ.

ಈ ಪ್ರಕರಣವು ಸ್ಥಳೀಯರಲ್ಲಿ ಚರ್ಚೆಗೆ ಕಾರಣವಾಗಿದ್ದು, ಪುರುಷರ ಮತ್ತು ಮಹಿಳೆಯರ ಭದ್ರತೆಯ ಕುರಿತು ಮಹತ್ವದ ಪ್ರಶ್ನೆಗಳನ್ನು ಎಬ್ಬಿಸಿದೆ.

ಭ್ರಷ್ಟರ ಬೇಟೆ

Recent Posts

ಮೂಡಬಿದಿರೆ ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಮತ್ತೊಂದು ಆರೋಪ: 2018 ರಿಂದ 2023 ರವರೆಗೆ ಮುಖ್ಯ ಶಿಕ್ಷಕಿಯ ಮೇಲೆ ಲೈಂಗಿಕ ದೌರ್ಜನ್ಯ.

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಗಂಭೀರ ಪ್ರಕರಣ ಬೆಳಕಿಗೆ ಬಂದಿದೆ. ಮೂಡಬಿದಿರೆ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಆಗಿದ್ದ ಸಂದೇಶ್…

9 hours ago

ರಾಜ್ಯದಲ್ಲಿ ಪಾರ್ಲೆ-ಜಿ ಉತ್ಪಾದನೆ ಸ್ಥಗಿತ, ಬಿಸ್ಕೆಟ್ ಅಭಾವದ ಆತಂಕ

Iran-Israel ಸಂಘರ್ಷದ ಪರೋಕ್ಷ ಪರಿಣಾಮವಾಗಿ ರಾಜ್ಯದಲ್ಲಿ ಬಿಸ್ಕೆಟ್ ಅಭಾವದ ಭೀತಿ ಎದುರಾಗಿದೆ. ವಿಶೇಷವಾಗಿ ಮಕ್ಕಳಿಗೆ ಹೆಚ್ಚು ಬಳಸುವ Parle-G ಬಿಸ್ಕೆಟ್‌ಗಳ…

11 hours ago

ನವಲಗುಂದದಲ್ಲಿ ವಿದ್ಯಾರ್ಥಿನಿಗೆ ಕಿರುಕುಳ ಆರೋಪ: ಮುಖ್ಯಶಿಕ್ಷಕ ಬಂಧನ

ಧಾರವಾಡ ಜಿಲ್ಲೆಯ Navalgund ತಾಲೂಕಿನ ಒಂದು ಗ್ರಾಮದಲ್ಲಿ ಗಂಭೀರ ಘಟನೆ ಬೆಳಕಿಗೆ ಬಂದಿದೆ. ಶಾಲೆಯ ಮುಖ್ಯಶಿಕ್ಷಕನ ವಿರುದ್ಧ 10 ವರ್ಷದ…

22 hours ago

ಮೇಲಾಧಿಕಾರಿ ಕಿರುಕುಳ ಆರೋಪ: ಪಾವಗಡದಲ್ಲಿ ಸಮಾಜ ಕಲ್ಯಾಣ ಅಧಿಕಾರಿ ಆತ್ಮಹತ್ಯೆ

ತುಮಕೂರು ಜಿಲ್ಲೆಯ Pavagada ಪಟ್ಟಣದಲ್ಲಿ ಹೃದಯ ಕಲುಕುವ ಘಟನೆ ನಡೆದಿದೆ. ಮೇಲಾಧಿಕಾರಿಗಳ ಕಿರುಕುಳದಿಂದ ಮನನೊಂದು ಅಧಿಕಾರಿಯೊಬ್ಬರು ಕಚೇರಿಯಲ್ಲೇ ಆತ್ಮಹತ್ಯೆ ಮಾಡಿಕೊಂಡಿರುವುದು…

22 hours ago

14ರ ಬಾಲಕನಿಂದ ಇಬ್ಬರು ಅಪ್ರಾಪ್ತ ಬಾಲಕಿಯರು ಗರ್ಭಿಣಿ? ವೈರಲ್ ವಿಡಿಯೋಗೆ ಆಕ್ರೋಶ

ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಒಂದು ವಿಡಿಯೋ ಇದೀಗ ಭಾರೀ ಚರ್ಚೆಗೆ ಕಾರಣವಾಗಿದೆ. X ನಲ್ಲಿ ವೈರಲ್ ಆಗಿರುವ ಈ ವಿಡಿಯೋ…

23 hours ago

ಕೊನೆಗೂ 21 ದಿನಗಳ ಬಳಿಕ ಅಣುಸ್ಥಾವರದ ಮೇಲೆ ಅಮೆರಿಕ ದಾಳಿ! ಇರಾನ್ ಅಣು ಕೇಂದ್ರ ವಿಕಿರಣ ಸೋರಿಕೆ ಭೀತಿ ಹೆಚ್ಚಳ?

ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ತಾರಕಕ್ಕೇರಿರುವ ಬೆನ್ನಲ್ಲೇ United States ಮತ್ತು Israel ಪಡೆಗಳು Iranನ ಅತ್ಯಂತ ಪ್ರಮುಖ ಪರಮಾಣು ಕೇಂದ್ರವಾದ Natanz…

23 hours ago