Latest

36 ವರ್ಷದ ಆಂಟಿ ಮತ್ತು 27 ವರ್ಷದ ವೈದ್ಯ: ಲೈಂಗಿಕ ದೌರ್ಜನ್ಯ, ಒಬ್ಬರಮೇಲೊಬ್ಬರ ಆರೋಪ!

ರಾಮನಗರ: 36 ವರ್ಷದ ಮಹಿಳೆ ಮತ್ತು 27 ವರ್ಷದ ವೈದ್ಯನ ನಡುವೆ ಲೈಂಗಿಕ ದೌರ್ಜನ್ಯ ಆರೋಪ, ಪ್ರಕರಣ ಗಂಭೀರ ತಿರುವು. ರಾಮನಗರದಲ್ಲಿ 36 ವರ್ಷದ ಮಹಿಳೆ ಮತ್ತು 27 ವರ್ಷದ ಯುವ ವೈದ್ಯನ ನಡುವೆ ನಡೆದ ಘಟನೆಯು ವಿವಾದಕ್ಕೆ ಕಾರಣವಾಗಿದೆ. ಮಹಿಳೆ ಯುವ ವೈದ್ಯನ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಮಾಡಿದ್ದರೆ, ವೈದ್ಯನು ತನ್ನ ವಿರುದ್ಧ ಆಕೆಯೇ ಅಸಭ್ಯವಾಗಿ ವರ್ತಿಸಿದ್ದಾಳೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

ಘಟನೆಯ ಹಿನ್ನೆಲೆ:
ಮಹಿಳೆ, ಇವೆಂಟ್ ಮ್ಯಾನೇಜ್ಮೆಂಟ್‌ನಲ್ಲಿ ಕೆಲಸ ಮಾಡುತ್ತಿದ್ದು, ರಾತ್ರಿ 9 ಗಂಟೆ ವೇಳೆಗೆ ಸಂಬಂಧಿಕರ ಮನೆಗೆ ಹೋಗಲು ಬಸ್ ನಿರೀಕ್ಷಿಸುತ್ತಿದ್ದರು. ಬಸ್ ಸಿಗದ ಕಾರಣ, 27 ವರ್ಷದ ವೈದ್ಯನನ್ನು ತಡೆದು ಡ್ರಾಪ್ ಕೋರಿದ್ದಾರೆ. ಮಹಿಳೆ ನನಗೆ ಕುಂಬಳಗೋಡು ಬಿಡಿ ಎಂದು ಹೇಳಿದ್ದಾಳೆ. ಈ ವೇಳೆ ಕೆಂಗೇರಿ ಕಡೆ ಹೋಗ್ತಾ ಇದೀರಾ, ಹಾಗಾದ್ರೆ ಕೆಂಗೇರಿಯೇ ಬಿಟ್ಟುಬಿಡಿ ಎಂದು ಮಹಿಳೆ ಹೇಳಿದ್ದಾಳಂತೆ.‌

ಮಧ್ಯದ ಸಮಯದಲ್ಲಿ, ವೈದ್ಯನು ಪಥ ಬದಲಿಸಿ ಕತ್ತಲಿರುವ ಖಾಲಿ ಲೇಔಟ್‌ಗೆ ತೆರಳಿ, ಅಸಭ್ಯವಾಗಿ ವರ್ತಿಸಿದ್ದಾನೆಂದು ಮಹಿಳೆ ಆರೋಪ ಮಾಡಿದ್ದಾರೆ. ವೈದ್ಯನು ಡ್ರೆಸ್ ತೆಗೆಯಲು ಹೇಳಿದ್ದು, ತನ್ನ ಪ್ಯಾಂಟ್ ಬಿಚ್ಚಿ ಆಕೆಯೊಂದಿಗೆ ಅನಾಚಾರಕ್ಕೆ ಮುಂದಾಗಿದ್ದಾನೆ. ಈ ಸಂದರ್ಭ ಮಹಿಳೆ ಜೋರಾಗಿ ಕೂಗಿ, ಸ್ಥಳದಿಂದ ಓಡಿಹೋಗಿ ಮತ್ತೊಬ್ಬ ಬೈಕ್ ಸವಾರನ ನೆರವಿನಿಂದ ಕುಂಬಳಗೋಡಿಗೆ ತಲುಪಿದ್ದಾರೆ.

ವೈದ್ಯನ ಪ್ರತಿಸ್ಪಂದನೆ:
ಆರೋಪವನ್ನು ನಿರಾಕರಿಸಿದ ವೈದ್ಯನು, ಮಹಿಳೆಯೇ ನನ್ನ ಮೇಲೆ ಅಸಭ್ಯವಾಗಿ ವರ್ತಿಸಿದ್ದಾಳೆ ಎಂದು ಹೇಳಿದ್ದು, “ನಾನು ಆಕೆಗೆ ಕೇವಲ ಸಹಾಯ ಮಾಡಲು ಮುಂದಾಗಿದ್ದೆ. ನನ್ನೊಡನೆ ಇರುವ ವೇಳೆ ಆಕೆಯೇ ನನ್ನ ಮರ್ಮಾಂಗಕ್ಕೆ ಕೈ ಹಾಕಿದ್ದಾರೆ. ನಾನು ಆ ತರಹ ಮಾಡುವ ವ್ಯಕ್ತಿಯಲ್ಲ,” ಎಂದಿದ್ದಾರೆ.

ಪೊಲೀಸರ ತನಿಖೆ:
ಈ ಘಟನೆಯು ಇದೀಗ ಪೊಲೀಸರಿಗೆ ತಲೆನೋವಾಗಿ ಪರಿಣಮಿಸಿದೆ. ಇಬ್ಬರಲ್ಲೂ ಪರಸ್ಪರ ವಿರುದ್ಧವಾದ ಆರೋಪಗಳನ್ನು ಮಾಡಿರುವ ಕಾರಣ, ಸತ್ಯಾಂಶವನ್ನು ಪತ್ತೆ ಹಚ್ಚಲು ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ.

ಈ ಪ್ರಕರಣವು ಸ್ಥಳೀಯರಲ್ಲಿ ಚರ್ಚೆಗೆ ಕಾರಣವಾಗಿದ್ದು, ಪುರುಷರ ಮತ್ತು ಮಹಿಳೆಯರ ಭದ್ರತೆಯ ಕುರಿತು ಮಹತ್ವದ ಪ್ರಶ್ನೆಗಳನ್ನು ಎಬ್ಬಿಸಿದೆ.

ಭ್ರಷ್ಟರ ಬೇಟೆ

Recent Posts

ಖಾರದ ಪುಡಿ ಎರಚಿ ಒಡವೆ ಕದ್ದಿದ್ದ ಖದೀಮ ಪೊಲೀಸರ ಬಲೆಗೆ..!

ದಿನಾಂಕ 18.10.2025 ರಂದು ಸೌಮ್ಯ ಎಂಬವರು ಮೈಸೂರಿನ ಆಲನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ಲಲಿತಾದ್ರಿಪುರದ ಕಡೆಯಿಂದ ಗಿರಿ ದರ್ಶನಿ…

1 month ago

ನಿವೇಶನದ ಅಳತೆ ಸರ್ವೆಯರ್ ಸಹಾಯಕ ಲೋಕಾಯುಕ್ತ ಬಲೆಗೆ; 65 ಸಾವಿರ ಮೌಲ್ಯದ ನಿವೇಶನ ಅಳತೆಗೆ ₹ 23 ಸಾವಿರ ಲಂಚ..!

ಗೌರಿಬಿದನೂರು: ನಿವೇಶನ ಅಳತೆ ಮಾಡಿಕೊಡಲು ₹ 20 ಸಾವಿರ ಲಂಚ ಪಡೆಯುತ್ತಿದ್ದ ಇಲ್ಲಿನ ಭೂಮಾಪನ ಇಲಾಖೆಯ ಸರ್ವೆಯರ್ ಹರೀಶ್ ರೆಡ್ಡಿ ಮತ್ತು ಅವರ…

1 month ago

ಅಲಿಗಢದಲ್ಲಿ ವರದಕ್ಷಿಣೆ ಕಿರುಕುಳ ದುರಂತ: ಅತ್ತೆ-ಮಾವ ಒತ್ತಾಯಕ್ಕೆ ತತ್ತರಿಸಿದ ಸೊಸೆ ಟೆರೇಸ್ ಯಿಂದ ಹಾರಾಟ.!

ಅಲಿಗಢ, ಸೆಪ್ಟೆಂಬರ್ 04: ಉತ್ತರ ಪ್ರದೇಶದ ಅಲಿಗಢ ಜಿಲ್ಲೆಯಲ್ಲಿ ವರದಕ್ಷಿಣೆ ಕಿರುಕುಳ ಮತ್ತೊಮ್ಮೆ ದಾರುಣ ಘಟನೆಯಲ್ಲಿ ಅಂತ್ಯಗೊಂಡಿದೆ. ದಮ್ಕೌಲಿ ಗ್ರಾಮದಲ್ಲಿ…

3 months ago

4 ಕೋಟಿ ವರದಕ್ಷಿಣೆಗಾಗಿ ಪತ್ನಿಯ ಖಾಸಗಿ ಫೋಟೋ ವೈರಲ್ ಮಾಡಿದ ಪತಿ!!

ಬೆಂಗಳೂರು: ಪತ್ನಿಗೆ 4 ಕೋಟಿ ವರದಕ್ಷಿಣೆ ಒತ್ತಾಯ – ಕೊಟ್ಟಿಲ್ಲವೆಂದು ಖಾಸಗಿ ಫೋಟೋ ವೈರಲ್ ಮಾಡಿದ ಪತಿ ವಿರುದ್ಧ ಎಫ್‌ಐಆರ್…

3 months ago

ವಿದ್ಯಾರ್ಥಿಗಳಿಂದ ಕಾಲು ಒತ್ತಿಸಿಕೊಂಡ ಮುಖ್ಯೋಪಾಧ್ಯಾಯಿನಿ.!!

ತಮಿಳುನಾಡಿನ ಧರ್ಮಪುರಿ ಜಿಲ್ಲೆ ಮತ್ತೊಮ್ಮೆ ವಿವಾದಕ್ಕೆ ತುತ್ತಾಗಿದೆ. ಹರೂರು ತಾಲೂಕಿನ ಮಾವೇರಿಪಟ್ಟಿ ಪ್ರಾಥಮಿಕ ಶಾಲೆಯಲ್ಲಿ ನಡೆದ ಘಟನೆಗೆ ಸಂಬಂಧಿಸಿದ ವಿಡಿಯೋ…

3 months ago

ಪ್ರೇಯಸಿ ಫೋನ್‌ ಎತ್ತಿಲ್ಲ: ಕೋಪದಲ್ಲಿ ಯುವಕ ಇಡೀ ಹಳ್ಳಿಯ ಕರೆಂಟ್ ಕಟ್!

ಪ್ರೇಯಸಿ ಫೋನ್‌ ಕರೆ ಸ್ವೀಕರಿಸದೇ, ಆಕೆ ಮೊಬೈಲ್‌ನಲ್ಲಿ ಬ್ಯುಸಿಯಾಗಿದ್ದಾಳೆ ಎಂಬ ಅಸಹನೆಯಿಂದ ಯುವಕನೊಬ್ಬ ಅಚ್ಚರಿಯ ಕೆಲಸ ಮಾಡಿದ ಘಟನೆ ವೈರಲ್…

3 months ago