Latest

36 ವರ್ಷದ ಆಂಟಿ ಮತ್ತು 27 ವರ್ಷದ ವೈದ್ಯ: ಲೈಂಗಿಕ ದೌರ್ಜನ್ಯ, ಒಬ್ಬರಮೇಲೊಬ್ಬರ ಆರೋಪ!

ರಾಮನಗರ: 36 ವರ್ಷದ ಮಹಿಳೆ ಮತ್ತು 27 ವರ್ಷದ ವೈದ್ಯನ ನಡುವೆ ಲೈಂಗಿಕ ದೌರ್ಜನ್ಯ ಆರೋಪ, ಪ್ರಕರಣ ಗಂಭೀರ ತಿರುವು. ರಾಮನಗರದಲ್ಲಿ 36 ವರ್ಷದ ಮಹಿಳೆ ಮತ್ತು 27 ವರ್ಷದ ಯುವ ವೈದ್ಯನ ನಡುವೆ ನಡೆದ ಘಟನೆಯು ವಿವಾದಕ್ಕೆ ಕಾರಣವಾಗಿದೆ. ಮಹಿಳೆ ಯುವ ವೈದ್ಯನ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಮಾಡಿದ್ದರೆ, ವೈದ್ಯನು ತನ್ನ ವಿರುದ್ಧ ಆಕೆಯೇ ಅಸಭ್ಯವಾಗಿ ವರ್ತಿಸಿದ್ದಾಳೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

ಘಟನೆಯ ಹಿನ್ನೆಲೆ:
ಮಹಿಳೆ, ಇವೆಂಟ್ ಮ್ಯಾನೇಜ್ಮೆಂಟ್‌ನಲ್ಲಿ ಕೆಲಸ ಮಾಡುತ್ತಿದ್ದು, ರಾತ್ರಿ 9 ಗಂಟೆ ವೇಳೆಗೆ ಸಂಬಂಧಿಕರ ಮನೆಗೆ ಹೋಗಲು ಬಸ್ ನಿರೀಕ್ಷಿಸುತ್ತಿದ್ದರು. ಬಸ್ ಸಿಗದ ಕಾರಣ, 27 ವರ್ಷದ ವೈದ್ಯನನ್ನು ತಡೆದು ಡ್ರಾಪ್ ಕೋರಿದ್ದಾರೆ. ಮಹಿಳೆ ನನಗೆ ಕುಂಬಳಗೋಡು ಬಿಡಿ ಎಂದು ಹೇಳಿದ್ದಾಳೆ. ಈ ವೇಳೆ ಕೆಂಗೇರಿ ಕಡೆ ಹೋಗ್ತಾ ಇದೀರಾ, ಹಾಗಾದ್ರೆ ಕೆಂಗೇರಿಯೇ ಬಿಟ್ಟುಬಿಡಿ ಎಂದು ಮಹಿಳೆ ಹೇಳಿದ್ದಾಳಂತೆ.‌

ಮಧ್ಯದ ಸಮಯದಲ್ಲಿ, ವೈದ್ಯನು ಪಥ ಬದಲಿಸಿ ಕತ್ತಲಿರುವ ಖಾಲಿ ಲೇಔಟ್‌ಗೆ ತೆರಳಿ, ಅಸಭ್ಯವಾಗಿ ವರ್ತಿಸಿದ್ದಾನೆಂದು ಮಹಿಳೆ ಆರೋಪ ಮಾಡಿದ್ದಾರೆ. ವೈದ್ಯನು ಡ್ರೆಸ್ ತೆಗೆಯಲು ಹೇಳಿದ್ದು, ತನ್ನ ಪ್ಯಾಂಟ್ ಬಿಚ್ಚಿ ಆಕೆಯೊಂದಿಗೆ ಅನಾಚಾರಕ್ಕೆ ಮುಂದಾಗಿದ್ದಾನೆ. ಈ ಸಂದರ್ಭ ಮಹಿಳೆ ಜೋರಾಗಿ ಕೂಗಿ, ಸ್ಥಳದಿಂದ ಓಡಿಹೋಗಿ ಮತ್ತೊಬ್ಬ ಬೈಕ್ ಸವಾರನ ನೆರವಿನಿಂದ ಕುಂಬಳಗೋಡಿಗೆ ತಲುಪಿದ್ದಾರೆ.

ವೈದ್ಯನ ಪ್ರತಿಸ್ಪಂದನೆ:
ಆರೋಪವನ್ನು ನಿರಾಕರಿಸಿದ ವೈದ್ಯನು, ಮಹಿಳೆಯೇ ನನ್ನ ಮೇಲೆ ಅಸಭ್ಯವಾಗಿ ವರ್ತಿಸಿದ್ದಾಳೆ ಎಂದು ಹೇಳಿದ್ದು, “ನಾನು ಆಕೆಗೆ ಕೇವಲ ಸಹಾಯ ಮಾಡಲು ಮುಂದಾಗಿದ್ದೆ. ನನ್ನೊಡನೆ ಇರುವ ವೇಳೆ ಆಕೆಯೇ ನನ್ನ ಮರ್ಮಾಂಗಕ್ಕೆ ಕೈ ಹಾಕಿದ್ದಾರೆ. ನಾನು ಆ ತರಹ ಮಾಡುವ ವ್ಯಕ್ತಿಯಲ್ಲ,” ಎಂದಿದ್ದಾರೆ.

ಪೊಲೀಸರ ತನಿಖೆ:
ಈ ಘಟನೆಯು ಇದೀಗ ಪೊಲೀಸರಿಗೆ ತಲೆನೋವಾಗಿ ಪರಿಣಮಿಸಿದೆ. ಇಬ್ಬರಲ್ಲೂ ಪರಸ್ಪರ ವಿರುದ್ಧವಾದ ಆರೋಪಗಳನ್ನು ಮಾಡಿರುವ ಕಾರಣ, ಸತ್ಯಾಂಶವನ್ನು ಪತ್ತೆ ಹಚ್ಚಲು ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ.

ಈ ಪ್ರಕರಣವು ಸ್ಥಳೀಯರಲ್ಲಿ ಚರ್ಚೆಗೆ ಕಾರಣವಾಗಿದ್ದು, ಪುರುಷರ ಮತ್ತು ಮಹಿಳೆಯರ ಭದ್ರತೆಯ ಕುರಿತು ಮಹತ್ವದ ಪ್ರಶ್ನೆಗಳನ್ನು ಎಬ್ಬಿಸಿದೆ.

ಭ್ರಷ್ಟರ ಬೇಟೆ

Recent Posts

ಲೋಕಾಯುಕ್ತ ಅಧಿಕಾರಿ ಎಂದು ಎಂಜಿನಿಯರ್‌ಗೆ ಹಣ ಬೇಡಿಕೆ ಇಟ್ಟ ಆರೋಪಿ ಬಂಧನ

ಲೋಕಾಯುಕ್ತ ಕಚೇರಿಯ ಹಿರಿಯ ಅಧಿಕಾರಿ ಎಂದು ಸುಳ್ಳು ಪರಿಚಯ ನೀಡಿ, ಲೋಕೋಪಯೋಗಿ ಇಲಾಖೆಯ ಇಂಜಿನಿಯರ್‌ನಿಂದ ಹಣ ವಸೂಲಿ ಮಾಡಲು ಯತ್ನಿಸಿದ…

11 hours ago

ಉತಾರ ನೀಡಲು ₹1.5 ಲಕ್ಷ ಲಂಚ: ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಬಲೆಗೆ

ಜಮೀನಿನ ಖಾತಾ ಉತಾರ ನೀಡಲು ಲಂಚ ಸ್ವೀಕರಿಸಿದ ಆರೋಪದಲ್ಲಿ ಬಿಜನಗೇರಾ ಗ್ರಾಮ ಪಂಚಾಯಿತಿ ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಅಧಿಕಾರಿಗಳ…

16 hours ago

‘ಉಗ್ರ ಎಂದು ಗೊತ್ತಿದ್ದರೆ ಮನೆ ಕೊಡುತ್ತಿರಲಿಲ್ಲ’; ಶಂಕಿತ ಸುಹೇಲ್ ಬಂಧನದಿಂದ ಬೆಚ್ಚಿಬಿದ್ದ ಮನೆ ಮಾಲೀಕರು

ಅಯೋಧ್ಯೆಯ ರಾಮಮಂದಿರವನ್ನು ಗುರಿಯಾಗಿಸಿಕೊಂಡು ಸಂಚು ರೂಪಿಸಿದ್ದಾನೆ ಎಂಬ ಆರೋಪದ ಮೇಲೆ ಬಂಧಿತನಾಗಿರುವ ಶಂಕಿತ ಉಗ್ರ ಸುಹೇಲ್ ಪ್ರಕರಣಕ್ಕೆ ಹೊಸ ತಿರುವು…

16 hours ago

17 ವರ್ಷದ ಸೋದರಳಿಯನ ಬ್ಲಾಕ್ ಮೇಲ್ ಮಾಡಿ ಸೆಕ್ಸ್ ಮಾಡುತ್ತಿದ್ದ 40 ವರ್ಷದ ಅತ್ತೆ..! ಪೋಕ್ಸೋ ಪ್ರಕರಣ ದಾಖಲು.

ಉತ್ತರ ಪ್ರದೇಶದ ಅಲಿಗಢ್‌ನಲ್ಲಿ ಅಪ್ರಾಪ್ತ ಬಾಲಕನ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ತನ್ನದೇ 17…

16 hours ago

ನಟಿ ಕೃಷಿ ತಾಪಾಂಡ ನಿವಾಸದಲ್ಲಿ ಉದ್ಯಮಿ ವೈಶಾಕ್ ಮೃತದೇಹ ಪತ್ತೆ; ಸಾವಿನ ಸುತ್ತ ಹಲವು ಪ್ರಶ್ನೆಗಳು

ಬೆಂಗಳೂರಿನ ರಾಜರಾಜೇಶ್ವರಿ ನಗರದ ಐಷಾರಾಮಿ ಅಪಾರ್ಟ್‌ಮೆಂಟ್‌ನಲ್ಲಿ ಉದ್ಯಮಿ ವೈಶಾಕ್ (45) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಹಲವು ಅನುಮಾನಗಳಿಗೆ…

16 hours ago

ಇಡಿ ದಾಳಿ: ಸಚಿವ ಸತೀಶ್ ಜಾರಕಿಹೊಳಿ ಸಂಬಂಧಿ ಮನೆಯಿಂದ ಯಮುನಾ ವಶಕ್ಕೆ

ಮೈಸೂರು ನಗರದ ದಟ್ಟಗಳ್ಳಿ ಪ್ರದೇಶದಲ್ಲಿರುವ ಸಚಿವ ಸತೀಶ್ ಜಾರಕಿಹೊಳಿ ಅವರ ಸಂಬಂಧಿ ವೈ. ಮಂಜುನಾಥ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ…

21 hours ago