Latest

36 ವರ್ಷದ ಆಂಟಿ ಮತ್ತು 27 ವರ್ಷದ ವೈದ್ಯ: ಲೈಂಗಿಕ ದೌರ್ಜನ್ಯ, ಒಬ್ಬರಮೇಲೊಬ್ಬರ ಆರೋಪ!

ರಾಮನಗರ: 36 ವರ್ಷದ ಮಹಿಳೆ ಮತ್ತು 27 ವರ್ಷದ ವೈದ್ಯನ ನಡುವೆ ಲೈಂಗಿಕ ದೌರ್ಜನ್ಯ ಆರೋಪ, ಪ್ರಕರಣ ಗಂಭೀರ ತಿರುವು. ರಾಮನಗರದಲ್ಲಿ 36 ವರ್ಷದ ಮಹಿಳೆ ಮತ್ತು 27 ವರ್ಷದ ಯುವ ವೈದ್ಯನ ನಡುವೆ ನಡೆದ ಘಟನೆಯು ವಿವಾದಕ್ಕೆ ಕಾರಣವಾಗಿದೆ. ಮಹಿಳೆ ಯುವ ವೈದ್ಯನ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಮಾಡಿದ್ದರೆ, ವೈದ್ಯನು ತನ್ನ ವಿರುದ್ಧ ಆಕೆಯೇ ಅಸಭ್ಯವಾಗಿ ವರ್ತಿಸಿದ್ದಾಳೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

ಘಟನೆಯ ಹಿನ್ನೆಲೆ:
ಮಹಿಳೆ, ಇವೆಂಟ್ ಮ್ಯಾನೇಜ್ಮೆಂಟ್‌ನಲ್ಲಿ ಕೆಲಸ ಮಾಡುತ್ತಿದ್ದು, ರಾತ್ರಿ 9 ಗಂಟೆ ವೇಳೆಗೆ ಸಂಬಂಧಿಕರ ಮನೆಗೆ ಹೋಗಲು ಬಸ್ ನಿರೀಕ್ಷಿಸುತ್ತಿದ್ದರು. ಬಸ್ ಸಿಗದ ಕಾರಣ, 27 ವರ್ಷದ ವೈದ್ಯನನ್ನು ತಡೆದು ಡ್ರಾಪ್ ಕೋರಿದ್ದಾರೆ. ಮಹಿಳೆ ನನಗೆ ಕುಂಬಳಗೋಡು ಬಿಡಿ ಎಂದು ಹೇಳಿದ್ದಾಳೆ. ಈ ವೇಳೆ ಕೆಂಗೇರಿ ಕಡೆ ಹೋಗ್ತಾ ಇದೀರಾ, ಹಾಗಾದ್ರೆ ಕೆಂಗೇರಿಯೇ ಬಿಟ್ಟುಬಿಡಿ ಎಂದು ಮಹಿಳೆ ಹೇಳಿದ್ದಾಳಂತೆ.‌

ಮಧ್ಯದ ಸಮಯದಲ್ಲಿ, ವೈದ್ಯನು ಪಥ ಬದಲಿಸಿ ಕತ್ತಲಿರುವ ಖಾಲಿ ಲೇಔಟ್‌ಗೆ ತೆರಳಿ, ಅಸಭ್ಯವಾಗಿ ವರ್ತಿಸಿದ್ದಾನೆಂದು ಮಹಿಳೆ ಆರೋಪ ಮಾಡಿದ್ದಾರೆ. ವೈದ್ಯನು ಡ್ರೆಸ್ ತೆಗೆಯಲು ಹೇಳಿದ್ದು, ತನ್ನ ಪ್ಯಾಂಟ್ ಬಿಚ್ಚಿ ಆಕೆಯೊಂದಿಗೆ ಅನಾಚಾರಕ್ಕೆ ಮುಂದಾಗಿದ್ದಾನೆ. ಈ ಸಂದರ್ಭ ಮಹಿಳೆ ಜೋರಾಗಿ ಕೂಗಿ, ಸ್ಥಳದಿಂದ ಓಡಿಹೋಗಿ ಮತ್ತೊಬ್ಬ ಬೈಕ್ ಸವಾರನ ನೆರವಿನಿಂದ ಕುಂಬಳಗೋಡಿಗೆ ತಲುಪಿದ್ದಾರೆ.

ವೈದ್ಯನ ಪ್ರತಿಸ್ಪಂದನೆ:
ಆರೋಪವನ್ನು ನಿರಾಕರಿಸಿದ ವೈದ್ಯನು, ಮಹಿಳೆಯೇ ನನ್ನ ಮೇಲೆ ಅಸಭ್ಯವಾಗಿ ವರ್ತಿಸಿದ್ದಾಳೆ ಎಂದು ಹೇಳಿದ್ದು, “ನಾನು ಆಕೆಗೆ ಕೇವಲ ಸಹಾಯ ಮಾಡಲು ಮುಂದಾಗಿದ್ದೆ. ನನ್ನೊಡನೆ ಇರುವ ವೇಳೆ ಆಕೆಯೇ ನನ್ನ ಮರ್ಮಾಂಗಕ್ಕೆ ಕೈ ಹಾಕಿದ್ದಾರೆ. ನಾನು ಆ ತರಹ ಮಾಡುವ ವ್ಯಕ್ತಿಯಲ್ಲ,” ಎಂದಿದ್ದಾರೆ.

ಪೊಲೀಸರ ತನಿಖೆ:
ಈ ಘಟನೆಯು ಇದೀಗ ಪೊಲೀಸರಿಗೆ ತಲೆನೋವಾಗಿ ಪರಿಣಮಿಸಿದೆ. ಇಬ್ಬರಲ್ಲೂ ಪರಸ್ಪರ ವಿರುದ್ಧವಾದ ಆರೋಪಗಳನ್ನು ಮಾಡಿರುವ ಕಾರಣ, ಸತ್ಯಾಂಶವನ್ನು ಪತ್ತೆ ಹಚ್ಚಲು ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ.

ಈ ಪ್ರಕರಣವು ಸ್ಥಳೀಯರಲ್ಲಿ ಚರ್ಚೆಗೆ ಕಾರಣವಾಗಿದ್ದು, ಪುರುಷರ ಮತ್ತು ಮಹಿಳೆಯರ ಭದ್ರತೆಯ ಕುರಿತು ಮಹತ್ವದ ಪ್ರಶ್ನೆಗಳನ್ನು ಎಬ್ಬಿಸಿದೆ.

ಭ್ರಷ್ಟರ ಬೇಟೆ

Recent Posts

ಅಟ್ರಾಸಿಟಿ ಪ್ರಕರಣದಲ್ಲಿ ಆರೋಪಿಗಳ ಬಂಧನಕ್ಕೆ ಲಂಚ ಬೇಡಿಕೆ: ಸಿಪಿಐ ಲೋಕಾಯುಕ್ತ ಬಲೆಗೆ

ಅಟ್ರಾಸಿಟಿ ಪ್ರಕರಣದ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವ ವಿಚಾರದಲ್ಲಿ ಲಂಚ ಸ್ವೀಕರಿಸಿದ ಆರೋಪದಡಿ ಗುರುಮಠಕಲ್ ಪೊಲೀಸ್ ಠಾಣೆಯ ಸಿಪಿಐ ವೀರಣ್ಣ…

1 hour ago

ಕರ್ಕಶ ಶಬ್ದದ ಬೈಕ್ ವಿಚಾರಕ್ಕೆ ಪೊಲೀಸರ ಮೇಲೆಯೇ ವಿದ್ಯಾರ್ಥಿಗಳ ಹಲ್ಲೆ

ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್‌ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…

8 hours ago

ಕ್ಯಾಂಟಿನ್‌ನಲ್ಲಿ ವೇಶ್ಯಾವಾಟಿಕೆ ದಂಧೆ: ಬೆಳ್ತಂಗಡಿಯಲ್ಲಿ ಪೊಲೀಸರ ದಾಳಿ, ಮೂವರು ಬಂಧನ

ಬೆಳ್ತಂಗಡಿ ಪಟ್ಟಣದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿದ್ದ ಕ್ಯಾಂಟಿನ್‌ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ…

8 hours ago

ಒಂದು ವರ್ಷದ ನಿರೀಕ್ಷೆಗೆ ತೆರೆ: ಭಟ್ಕಳಕ್ಕೆ ಖಾಯಂ ಎಸಿ, ಜೆ. ಮಹೇಶ್ ಅಧಿಕಾರ ಸ್ವೀಕಾರ

ಭಟ್ಕಳ: ಸುಮಾರು ಒಂದು ವರ್ಷದಿನಿಂದ ಖಾಲಿಯಾಗಿದ್ದ ಭಟ್ಕಳ ಉಪ ವಿಭಾಗಾಧಿಕಾರಿ (ಎಸಿ) ಹುದ್ದೆಗೆ ಕೊನೆಗೂ ಸರ್ಕಾರ ಅಧಿಕಾರಿಯನ್ನು ನೇಮಕ ಮಾಡಿದ್ದು,…

1 day ago

ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ. ಸುಧಾಕರ್ ನಿಧನ; ರಾಜಕೀಯ ವಲಯದಲ್ಲಿ ಶೋಕದ ಛಾಯೆ

ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾಗಿದ್ದ ಡಿ. ಸುಧಾಕರ್ (65) ಅವರು ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ…

1 day ago

ಆಂಟಿ ಹಿಂದೆ ಹೋದವನ ದುರಂತ ಅಂತ್ಯ: ಲಿವ್-ಇನ್ ಸಂಗಾತಿಯ ಕಿರುಕುಳಕ್ಕೆ ಯುವಕ ಆತ್ಮಹತ್ಯೆ!

ಸೋಶಿಯಲ್ ಮೀಡಿಯಾದಲ್ಲಿ ಆರಂಭವಾದ ಪ್ರೇಮಕಥೆಯೊಂದು ದುರಂತ ಅಂತ್ಯ ಕಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇನ್‌ಸ್ಟಾಗ್ರಾಮ್ ಮೂಲಕ ಪರಿಚಯವಾದ ಮಹಿಳೆಯೊಂದಿಗೆ ಲಿವ್-ಇನ್…

1 day ago