Latest

36 ವರ್ಷದ ಆಂಟಿ ಮತ್ತು 27 ವರ್ಷದ ವೈದ್ಯ: ಲೈಂಗಿಕ ದೌರ್ಜನ್ಯ, ಒಬ್ಬರಮೇಲೊಬ್ಬರ ಆರೋಪ!

ರಾಮನಗರ: 36 ವರ್ಷದ ಮಹಿಳೆ ಮತ್ತು 27 ವರ್ಷದ ವೈದ್ಯನ ನಡುವೆ ಲೈಂಗಿಕ ದೌರ್ಜನ್ಯ ಆರೋಪ, ಪ್ರಕರಣ ಗಂಭೀರ ತಿರುವು. ರಾಮನಗರದಲ್ಲಿ 36 ವರ್ಷದ ಮಹಿಳೆ ಮತ್ತು 27 ವರ್ಷದ ಯುವ ವೈದ್ಯನ ನಡುವೆ ನಡೆದ ಘಟನೆಯು ವಿವಾದಕ್ಕೆ ಕಾರಣವಾಗಿದೆ. ಮಹಿಳೆ ಯುವ ವೈದ್ಯನ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಮಾಡಿದ್ದರೆ, ವೈದ್ಯನು ತನ್ನ ವಿರುದ್ಧ ಆಕೆಯೇ ಅಸಭ್ಯವಾಗಿ ವರ್ತಿಸಿದ್ದಾಳೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

ಘಟನೆಯ ಹಿನ್ನೆಲೆ:
ಮಹಿಳೆ, ಇವೆಂಟ್ ಮ್ಯಾನೇಜ್ಮೆಂಟ್‌ನಲ್ಲಿ ಕೆಲಸ ಮಾಡುತ್ತಿದ್ದು, ರಾತ್ರಿ 9 ಗಂಟೆ ವೇಳೆಗೆ ಸಂಬಂಧಿಕರ ಮನೆಗೆ ಹೋಗಲು ಬಸ್ ನಿರೀಕ್ಷಿಸುತ್ತಿದ್ದರು. ಬಸ್ ಸಿಗದ ಕಾರಣ, 27 ವರ್ಷದ ವೈದ್ಯನನ್ನು ತಡೆದು ಡ್ರಾಪ್ ಕೋರಿದ್ದಾರೆ. ಮಹಿಳೆ ನನಗೆ ಕುಂಬಳಗೋಡು ಬಿಡಿ ಎಂದು ಹೇಳಿದ್ದಾಳೆ. ಈ ವೇಳೆ ಕೆಂಗೇರಿ ಕಡೆ ಹೋಗ್ತಾ ಇದೀರಾ, ಹಾಗಾದ್ರೆ ಕೆಂಗೇರಿಯೇ ಬಿಟ್ಟುಬಿಡಿ ಎಂದು ಮಹಿಳೆ ಹೇಳಿದ್ದಾಳಂತೆ.‌

ಮಧ್ಯದ ಸಮಯದಲ್ಲಿ, ವೈದ್ಯನು ಪಥ ಬದಲಿಸಿ ಕತ್ತಲಿರುವ ಖಾಲಿ ಲೇಔಟ್‌ಗೆ ತೆರಳಿ, ಅಸಭ್ಯವಾಗಿ ವರ್ತಿಸಿದ್ದಾನೆಂದು ಮಹಿಳೆ ಆರೋಪ ಮಾಡಿದ್ದಾರೆ. ವೈದ್ಯನು ಡ್ರೆಸ್ ತೆಗೆಯಲು ಹೇಳಿದ್ದು, ತನ್ನ ಪ್ಯಾಂಟ್ ಬಿಚ್ಚಿ ಆಕೆಯೊಂದಿಗೆ ಅನಾಚಾರಕ್ಕೆ ಮುಂದಾಗಿದ್ದಾನೆ. ಈ ಸಂದರ್ಭ ಮಹಿಳೆ ಜೋರಾಗಿ ಕೂಗಿ, ಸ್ಥಳದಿಂದ ಓಡಿಹೋಗಿ ಮತ್ತೊಬ್ಬ ಬೈಕ್ ಸವಾರನ ನೆರವಿನಿಂದ ಕುಂಬಳಗೋಡಿಗೆ ತಲುಪಿದ್ದಾರೆ.

ವೈದ್ಯನ ಪ್ರತಿಸ್ಪಂದನೆ:
ಆರೋಪವನ್ನು ನಿರಾಕರಿಸಿದ ವೈದ್ಯನು, ಮಹಿಳೆಯೇ ನನ್ನ ಮೇಲೆ ಅಸಭ್ಯವಾಗಿ ವರ್ತಿಸಿದ್ದಾಳೆ ಎಂದು ಹೇಳಿದ್ದು, “ನಾನು ಆಕೆಗೆ ಕೇವಲ ಸಹಾಯ ಮಾಡಲು ಮುಂದಾಗಿದ್ದೆ. ನನ್ನೊಡನೆ ಇರುವ ವೇಳೆ ಆಕೆಯೇ ನನ್ನ ಮರ್ಮಾಂಗಕ್ಕೆ ಕೈ ಹಾಕಿದ್ದಾರೆ. ನಾನು ಆ ತರಹ ಮಾಡುವ ವ್ಯಕ್ತಿಯಲ್ಲ,” ಎಂದಿದ್ದಾರೆ.

ಪೊಲೀಸರ ತನಿಖೆ:
ಈ ಘಟನೆಯು ಇದೀಗ ಪೊಲೀಸರಿಗೆ ತಲೆನೋವಾಗಿ ಪರಿಣಮಿಸಿದೆ. ಇಬ್ಬರಲ್ಲೂ ಪರಸ್ಪರ ವಿರುದ್ಧವಾದ ಆರೋಪಗಳನ್ನು ಮಾಡಿರುವ ಕಾರಣ, ಸತ್ಯಾಂಶವನ್ನು ಪತ್ತೆ ಹಚ್ಚಲು ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ.

ಈ ಪ್ರಕರಣವು ಸ್ಥಳೀಯರಲ್ಲಿ ಚರ್ಚೆಗೆ ಕಾರಣವಾಗಿದ್ದು, ಪುರುಷರ ಮತ್ತು ಮಹಿಳೆಯರ ಭದ್ರತೆಯ ಕುರಿತು ಮಹತ್ವದ ಪ್ರಶ್ನೆಗಳನ್ನು ಎಬ್ಬಿಸಿದೆ.

ಭ್ರಷ್ಟರ ಬೇಟೆ

Recent Posts

‍ರೀಲ್ಸ್ ಮಾಡುವ ಹುಚ್ಚು, ಕರೆದಾಗ ಬಂದು ಜೊತೆಗೆ ಮಲಗುತ್ತಿರಲಿಲ್ಲ ಎಂದು ಪತ್ನಿಯನ್ನು ಕೊಂದ ಪತಿ

ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…

2 days ago

ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27ರ ಯುವತಿ ಸಾವು; ಉಡುಪಿಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ, ತನಿಖೆ ಚುರುಕು

ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…

2 days ago

‘ಅಂದು ನನ್ನೊಂದಿಗೆ ಮಲಗಲು ಕೇಳಿದ್ದು ನೀವೇ ತಾನೇ?’ ನಿರ್ಮಾಪಕನಿಗೆ ನಟಿ ಚಾಂದಿನಿ ಚೌಧರಿ ಶಾಕ್!

ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…

2 days ago

ಮದುವೆಯಾಗಿ 4 ದಿನಕ್ಕೆ ಮಾಜಿ ಪ್ರೇಮಿಯೊಂದಿಗೆ ಹೋಟೆಲ್ ನಲ್ಲಿ ಪತ್ನಿ; ಪತಿಯ ಕೈಗೆ ವಿಡಿಯೋ…!

ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…

2 days ago

ಪತ್ನಿಯನ್ನು ಕೊಂದು ಶವ ವಿಲೇವಾರಿಗೆ ಸ್ನೇಹಿತನ ನೆರವು ಕೇಳಿದ ಪತಿ; ಜಾಣತನದಿಂದ ಪೊಲೀಸರಿಗೆ ಒಪ್ಪಿಸಿದ ಗೆಳೆಯ!

ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…

2 days ago

ಹಂಪಿಯಲ್ಲಿ ಅಕ್ರಮ ಹೋಂಸ್ಟೇ, ವಾಣಿಜ್ಯ ಚಟುವಟಿಕೆ ಆರೋಪ: 54 ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಸ್ವಯಂಪ್ರೇರಿತ ದೂರು

ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…

2 days ago