Categories: CrimeLatest

37ರ ಆಂಟಿ–22ರ ಯುವಕನೊಂದಿಗೆ ಪರಾರಿ: ಮಗನನ್ನು ಬಿಟ್ಟು ಓಡಿಹೋದ ತಾಯಿ, ಈಗ ಜೀವಭಯದಿಂದ ಪೊಲೀಸರ ಮೊರೆ..!

ಪ್ರೀತಿಗೆ ವಯಸ್ಸಿನ ಅಂತರ ಅಡ್ಡಿಯಾಗುವುದಿಲ್ಲ ಎಂಬ ಮಾತು ಮತ್ತೊಮ್ಮೆ ಸತ್ಯವಾಗಿರುವ ಘಟನೆ ಮೈಸೂರಿನಲ್ಲಿ ಬೆಳಕಿಗೆ ಬಂದಿದೆ. 37 ವರ್ಷದ ಮಹಿಳೆ, ತನ್ನಿಗಿಂತ 15 ವರ್ಷ ಕಿರಿಯ 22 ವರ್ಷದ ಯುವಕನ ಜೊತೆ ಪ್ರೀತಿಯಲ್ಲಿ ಬಿದ್ದು, ಮನೆ ಬಿಟ್ಟು ಪರಾರಿಯಾಗಿ ಮದುವೆಯಾಗಿರುವುದು ಗಮನ ಸೆಳೆದಿದೆ.

ಬೆಂಗಳೂರಿನ ಚಲ್ಲಘಟ್ಟ ನಿವಾಸಿ ಕವಿತಾ ಹಾಗೂ ಮೈಸೂರಿನ ರಮ್ಮನಹಳ್ಳಿ ಮೂಲದ ಭಾಸ್ಕರ್ ನಡುವೆ ಪರಿಚಯ ಪ್ರೀತಿಗೆ ತಿರುಗಿದದ್ದು ದೇವಸ್ಥಾನ ಭೇಟಿಗಳ ವೇಳೆ ಎಂದು ತಿಳಿದುಬಂದಿದೆ. ಆಟೋ ಚಾಲಕನಾಗಿದ್ದ ಭಾಸ್ಕರ್, ಕವಿತಾ ಹಾಗೂ ಆಕೆಯ ತಾಯಿ ಭಾಗ್ಯಮ್ಮಳನ್ನು ದೇವಸ್ಥಾನಗಳಿಗೆ ಕರೆದುಕೊಂಡು ಹೋಗುತ್ತಿದ್ದಾಗ ಇಬ್ಬರ ನಡುವೆ ಆತ್ಮೀಯತೆ ಬೆಳೆದಿತ್ತು.

ಇದಕ್ಕೂ ಮುನ್ನವೇ ಕವಿತಾ ವಿವಾಹಿತೆಯಾಗಿದ್ದು, ಎಂಟು ವರ್ಷಗಳ ಹಿಂದೆ ಗಂಡ ಮೃತಪಟ್ಟಿದ್ದಾನೆ. ಈ ದಂಪತಿಗೆ 14 ವರ್ಷದ ಮಗನಿದ್ದಾನೆ. ಗಂಡನ ಸಾವಿನ ನಂತರ ಹೌಸ್‌ಕೀಪಿಂಗ್ ಕೆಲಸ ಮಾಡುತ್ತಾ ತವರು ಮನೆಯಲ್ಲೇ ವಾಸಿಸುತ್ತಿದ್ದ ಕವಿತಾ, ಈಗ ಪ್ರೇಮಿಗಾಗಿ ಮಗನನ್ನೇ ಬಿಟ್ಟು ಮನೆ ತೊರೆದಿದ್ದಾಳೆ.

ಕುಟುಂಬದವರು ಕವಿತಾಳಿಗೆ ಮತ್ತೊಂದು ಮದುವೆ ಮಾಡಲು ಮುಂದಾಗುತ್ತಿದ್ದ ಹಿನ್ನೆಲೆ, ಆಕೆ ಭಾಸ್ಕರ್ ಜೊತೆ ಮೈಸೂರಿಗೆ ತೆರಳಿ, ಒಂಟಿಕೊಪ್ಪಲು ವೆಂಕಟೇಶ್ವರ ದೇವಸ್ಥಾನದಲ್ಲಿ ಗುಟ್ಟಾಗಿ ವಿವಾಹವಾಗಿದ್ದಾಳೆ ಎಂದು ತಿಳಿದುಬಂದಿದೆ.

ಇತ್ತ, ಕವಿತಾಳ ತಂದೆ ಮಲ್ಲಿಕಾರ್ಜುನ್ ಅವರು ಬೆಂಗಳೂರಿನ ಕುಂಬಳಗೋಡು ಠಾಣೆಯಲ್ಲಿ ಮಗಳ ಅಪಹರಣದ ಬಗ್ಗೆ ದೂರು ದಾಖಲಿಸಿದ್ದಾರೆ. ಮತ್ತೊಂದೆಡೆ, ಕವಿತಾ ಹಾಗೂ ಭಾಸ್ಕರ್ ತಮ್ಮ ಜೀವಕ್ಕೆ ಅಪಾಯವಿದೆ ಎಂದು ಆರೋಪಿಸಿದ್ದು, ವಿಶೇಷವಾಗಿ ಸಂಬಂಧಿಕರಿಂದ ಬೆದರಿಕೆ ಬರುತ್ತಿದೆ ಎಂದು ತಿಳಿಸಿದ್ದಾರೆ.

ಜೀವಭಯದಿಂದ ಬೆಂಗಳೂರು ಬಿಟ್ಟು ಮೈಸೂರಿಗೆ ಬಂದಿರುವ ಈ ಜೋಡಿ, ಈಗ ರಕ್ಷಣೆ ಕೋರಿ ಮೈಸೂರು ಎಸ್‌ಪಿ ಕಚೇರಿಗೆ ಭೇಟಿ ನೀಡಿ ಪೊಲೀಸರ ಮೊರೆ ಹೋಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

ಭ್ರಷ್ಟರ ಬೇಟೆ

Recent Posts

“ಮೋದಿ ಟೆರೆರಿಸ್ಟ್” ಹೇಳಿಕೆ ಸಿಡಿಲು: ಖರ್ಗೆ ಮಾತಿಗೆ ಬಿಜೆಪಿ ಕಿಡಿ, ರಾಜಕೀಯ ಕಾವೇರಿದ ತಮಿಳುನಾಡು ಚುನಾವಣೆ

ತಮಿಳುನಾಡು ವಿಧಾನಸಭೆ ಚುನಾವಣೆಯ ಹಿನ್ನಲೆಯಲ್ಲಿ ರಾಜಕೀಯ ಚರ್ಚೆಗಳು ಜೋರಾಗಿದ್ದರೂ, ಈ ಬಾರಿ ಆ ರಾಜ್ಯಕ್ಕಿಂತ ಹೆಚ್ಚು ಸದ್ದು ಮಾಡುತ್ತಿರುವುದು ಕರ್ನಾಟಕದ…

2 hours ago

‘ವೆಸ್ಟರ್ನ್ ಸ್ಟೈಲ್’ ಪ್ರಪೋಸ್ ಹೆಸರಿನಲ್ಲಿ ಪ್ರಿಯಕರನ ದಹನ! ಕಣ್ಣಿಗೆ ಬಟ್ಟೆ ಕಟ್ಟಿ, ಬೆಂಕಿ ಹಚ್ಚಿ ಮೊಬೈಲ್ ನಲ್ಲಿ ಚಿತ್ರೀಕರಣ.

ರಾಜ್ಯದಲ್ಲಿ ಪ್ರೀತಿ-ಪ್ರೇಮಗಳ ಹೆಸರಿನಲ್ಲಿ ನಡೆಯುತ್ತಿರುವ ಅವಾಂತರಗಳು ದಿನೇದಿನೇ ಆತಂಕ ಹುಟ್ಟಿಸುತ್ತಿವೆ. ನಂಬಿಕೆ ಕುಸಿದಾಗ ಸಂಬಂಧಗಳು ಹೇಗೆ ಕ್ರೌರ್ಯಕ್ಕೆ ತಿರುಗುತ್ತವೆ ಎಂಬುದಕ್ಕೆ…

2 hours ago

ಎಸ್‌ಎಸ್‌ಎಲ್‌ಸಿ ಹಿಂದಿಗೆ ಅಂಕ ಕಡ್ಡಾಯ: ಹೈಕೋರ್ಟ್‌ನಿಂದ ಸರ್ಕಾರಕ್ಕೆ ಮತ್ತೊಮ್ಮೆ ಹಿನ್ನಡೆ

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಹಿಂದಿ ವಿಷಯಕ್ಕೆ ಗ್ರೇಡ್ ಬದಲು ಅಂಕ ನೀಡಬೇಕು ಎಂದು ಹೈಕೋರ್ಟ್ ಮತ್ತೊಮ್ಮೆ ಸ್ಪಷ್ಟ ಆದೇಶ ನೀಡಿದೆ.…

6 hours ago

DCREಯಲ್ಲೇ ದಲಿತ ಅಧಿಕಾರಿಗೆ ಕಿರುಕುಳ ಆರೋಪ: SP, DySP ವಿರುದ್ಧ ಇನ್ಸ್ಪೆಕ್ಟರ್ ದೂರು

ಪರಿಶಿಷ್ಟ ಜಾತಿ ಹಾಗೂ ಪಂಗಡಗಳ ಮೇಲಿನ ದೌರ್ಜನ್ಯ ಪ್ರಕರಣಗಳ ತನಿಖೆ ನಡೆಸುವ ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯ (DCRE)ದಲ್ಲಿಯೇ ದಲಿತ…

11 hours ago

ರೀಲ್ಸ್ ಹುಚ್ಚು ಜೀವ ಬಲಿ: ಸ್ಟಂಟ್ ವೇಳೆ ಬೈಕ್ ಟ್ರಕ್‌ಗೆ ಡಿಕ್ಕಿ, ಮೂವರು ಯುವಕರ ಸಾವು

ಸೋಶಿಯಲ್ ಮೀಡಿಯಾ ರೀಲ್ಸ್ ಮಾಡಲು ಅಪಾಯಕಾರಿ ಸ್ಟಂಟ್‌ಗೆ ಮುಂದಾದ ಮೂವರು ಯುವಕರು ಭೀಕರ ಅಪಘಾತದಲ್ಲಿ ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.…

11 hours ago

ಮಂಡ್ಯದಲ್ಲಿ ಲೋಕಾಯುಕ್ತ ದಾಳಿ: ಅಪ್ರಾಪ್ತ ಗರ್ಭಿಣಿಯರಿಗೆ ಸ್ಕ್ಯಾನಿಂಗ್‌ – ಖಾಸಗಿ ಸೆಂಟರ್‌ಗಳ ನಿಯಮ ಉಲ್ಲಂಘನೆ ಬಯಲು

ಮಂಡ್ಯ ಜಿಲ್ಲೆಯ ಕೆ.ಆರ್‌.ಪೇಟೆ ಭಾಗದಲ್ಲಿನ ಖಾಸಗಿ ಸ್ಕ್ಯಾನಿಂಗ್‌ ಸೆಂಟರ್‌ಗಳಲ್ಲಿ ಗಂಭೀರ ನಿಯಮ ಉಲ್ಲಂಘನೆಗಳು ನಡೆದಿರುವುದು ಲೋಕಾಯುಕ್ತ ಅಧಿಕಾರಿಗಳ ದಾಳಿಯಲ್ಲಿ ಬೆಳಕಿಗೆ…

11 hours ago