ಕೊಟ್ಟೂರು:- ಲಾರಿ ಚಾಲಕನ ನಿರ್ಲಕ್ಷ್ಯತನದ ಹಾಗೂ ಅತೀ ವೇಗದಿಂದ 4 ವರ್ಷದ ವರ್ಷಿಣಿ ಎಂಬ ಪುಟ್ಟ ಬಾಲಕಿ ಲಾರಿ ಗಾಲಿಗೆ ಸಿಲುಕಿ ಸಾವನ್ನಪ್ಪಿದ ಘಟನೆ ನಡೆದಿದೆ.
ಕೊಟ್ಟೂರು ತಾಲೂಕಿನ ಕೆ ಅಯ್ಯನಹಳ್ಳಿ ಗ್ರಾಮದಲ್ಲಿ ವರ್ಷಿಣಿ ತಾಯಿ ಮೂಗಮ್ಮಳು ಸೋಮವಾರ ಮಧ್ಯಾಹ್ನ 1 ಘಂಟೆ ಸುಮಾರಿಗೆ ಕೊಟ್ಟೂರಿನ ಕಡೆಗೆ ಹೋಗಲು ಅಯ್ಯನಹಳ್ಳಿ ಬಸ್ ಸ್ಟಾಪ್ ಹತ್ತಿರ ನಿಂತುಕೊಂಡ ಸಂದರ್ಭದಲ್ಲಿ ಕೊಟ್ಟೂರು ಪಟ್ಟಣ ಕಡೆಯಿಂದ ಹರಪನಹಳ್ಳಿ ಕಡೆಗೆ ಹೋಗುವ ಕೆ.ಎ36.ಬಿ 0695 ನಂಬರಿನ ಲಾರಿಯು ಒಣ ಮೆಣಸಿನಕಾಯಿ ಲೋಡ್ ತೆಗೆದುಕೊಂಡು ಹೋಗುವಾಗ ಚಾಲಕನ ನಿರ್ಲಕ್ಷ್ಯತನ ಹಾಗೂ ಅತೀ ವೇಗದಿಂದ ನಡೆಸಿಕೊಂಡು ಬಂದು ರಸ್ತೆಯ ಪಕ್ಕದಲ್ಲಿ ನಿಂತುಕೊಂಡಿದ್ದ ನನ್ನ ಮಗಳು 4 ವರ್ಷದ ಪುಟ್ಟ ಬಾಲಕಿ ವರ್ಷಿಣಿಗೆ ಲಾರಿ ಡಿಕ್ಕಿಪಡಿಸಿ ಲಾರಿಯ ಮುಂದಿನ ಎಡಬಾಗದ ಟೈರ್ ಆಕೆಯ ಮೇಲೆ ಹತ್ತಿಸಿದನು ಬಾಲಕಿಗೆ ಹೊಟ್ಟೆ ಮೇಲೆ ಗಾಲಿ ಹತ್ತಿರುವುದರಿಂದ ದೇಹದ ಮುಖ್ಯ ಅಂಗಗಳು ಮುರಿದು ಬಾಲಕಿ ಮೃತಪಟ್ಟಿದ್ದಾಳೆ ಚಾಲಕನು ಮುಂದೆ ಹೋಗಿ ಲಾರಿ ಬಿಟ್ಟು ಪರಾರಿಯಾದನು ಚಾಲಕನ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಕೊಟ್ಟೂರಿನ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ವರದಿ: ಮಣಿಕಂಠ. ಬಿ
ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ರಾಮನಗರದಲ್ಲಿ ಲಂಚ ಸ್ವೀಕರಿಸುತ್ತಿದ್ದ ಗ್ರಾಮ ಆಡಳಿತಾಧಿಕಾರಿಯನ್ನು ಲೋಕಾಯುಕ್ತ ಪೊಲೀಸರು ಬಲೆಗೆ ಬೀಳಿಸಿದ್ದಾರೆ. ಸರ್ಕಾರಿ…
ತುಮಕೂರು ಜಿಲ್ಲೆ, ಕೊರಟಗೆರೆ ತಾಲೂಕಿನ ವಡ್ಡಗೆರೆ ಗ್ರಾಮದಲ್ಲಿರುವ ಪ್ರಸಿದ್ಧ ಶ್ರೀ ವಡ್ಡಗೆರೆ ವೀರನಾಗಮ್ಮ ದೇವಸ್ಥಾನದಲ್ಲಿ ಕಳೆದ ರಾತ್ರಿ ಕಳ್ಳತನ…
ಬಾಗಲಕೋಟೆ: ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದ ಚೀಫ್ ಇಂಜಿನಿಯರ್ ವಸಂತ ವಾಲಪ್ಪ ನಾಯಕ ಅವರ ಬೆಂಗಳೂರು ಸೇರಿದಂತೆ ಬಾಗಲಕೋಟೆಯಲ್ಲಿರುವ ಮನೆಯ…
ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…
ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…
ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…