ಕೋಲಾರ: 22/01/2024 ರಂದು ಮಧ್ಯಾಹ್ನ ಸುಮಾರು 01:45 ಗಂಟೆಯ ಸಮಯದಲ್ಲಿ ಹದಿನಾರು ಹರೆಯದ ಬಾಲಕಿ ತನ್ನ ಪರೀಕ್ಷೆ ಮುಗಿಸಿಕೊಂಡು ಚಿನ್ಮಯ ಶಾಲೆಯ ಮುಂಭಾಗದ ರೈಲ್ವೆ ಟ್ರ್ಯಾಕ್ನ್ನು ದಾಟಲು ಹೋಗುತ್ತಿದ್ದಾಗ ಮಳಬಾಗಿಲು ನಗರ, ಮುಜಾವರ್ ಮೊಹಲ್ಲಾ ವಾಸಿಯಾದ ಶೇಕ್ ಸಿರಾಜ್ ಪಾಷಾ ಅಲಿಯಾಸ್ ಶೇರು ಎಂಬುವ ಆರೋಪಿಯು ಸಂತ್ರಸ್ಥೆಯನ್ನು ಲೈಂಗೀಕ ದೌರ್ಜನ್ಯವೆಸಗುವ ಉದ್ದೇಶದಿಂದ 2-3 ಬಾರಿ ಹಿಂಬಾಲಿಸಿಕೊಂಡು ಹೋಗಿದ್ದ ಘಟನೆ ನಡೆದಿದೆ , ಆರೋಪಿಯು ತನ್ನನ್ನು ಹಿಡಿಯಲು ಬಂದಾಗ ನೊಂದ ಬಾಲಕಿ ಆರೋಪಿಯಿಂದ ತಪ್ಪಿಸಿಕೊಳ್ಳಲು ಯತ್ನಿಸಿದ ಸಮಯದಲ್ಲಿ ರೈಲ್ವೆ ಟ್ರ್ಯಾಕ್ ಕಲ್ಲುಗಳು ಕಾಲಿಗೆ ತಗುಲಿ ರೈಲ್ವೆ ಜಲ್ಲಿ ಕಲ್ಲುಗಳ ಮೇಲೆ ಬಿದ್ದು, ಕೆಳಗೆ ಉರುಳಿಕೊಂಡು ಹೋಗಿ ಬಿದ್ದಿರುವ ಘಟನೆ ನಡೆದಿತ್ತು. ಆ ಸಮಯದಲ್ಲಿ ಜಲ್ಲಿ ಕಲ್ಲುಗಳ ಮೇಲೆ ಜಾರಿ ಬಿದ್ದಿದ್ದರಿಂದ ನೊಂದ ಸಂತ್ರಸ್ತಿಯ ಬಲಗೈ ಮೂಳೆ ಮುರಿದಿತ್ತು, ನೊಂದ ಬಾಲಕಿಯ ಕೈ ಮುರಿಯಲು ಕಾರಣರನಾದ ಆರೋಪಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಸಂತ್ರಸ್ತೆ ಕಳೆದ ವರ್ಷ 23/01/2024 ರಂದು ರಾಣೆಯಲ್ಲಿ ದೂರು ನೀಡಿದ್ದುರು, ಪೋಲೀಸರು ಸಂತ್ರಸ್ತೆಯ ದೂರಿನನ್ವಯ ಠಾಣಾ ಮೊ.ಸಂ: 09/2024 ಕಲಂ: 325 ಐ.ಪಿ.ಸಿ ಮತ್ತು ಕಲಂ:12 ಪೋಕ್ಸೋ ಕಾಯ್ದೆ-2012 ಆರೋಪಿಯ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡು ಆರೋಪಿಯನ್ನು ಹೊಂದಿಸುವಲ್ಲಿಯಾಗಿದ್ದರು.
ಪೊಲೀಸರು ಪ್ರಕರಣ ದಾಖಲಾದ ತಕ್ಷಣ ತನಿಖೆಯನ್ನು ಕೈಗೊಂಡು ಆರೋಪಿಯ ವಿರುದ್ಧ ಕೋಲಾರದ ಮಹಿಳಾ ಪೊಲೀಸ್ ಠಾಣೆಯ ಆರಕ್ಷಕ ನಿರೀಕ್ಷಕರಾದ ಬಿ. ಶಂಕರಚಾರ್ ರವರು ಕೇವಲ 50 ದಿನಗಳಲ್ಲಿ ತನಿಖೆ ಪೂರ್ಣಗೊಳಿಸಿ ನ್ಯಾಯಾಲಯಕ್ಕೆ ಅಂತಿಮ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.
ಸಂತ್ರಸ್ಥೆಯ ಪರ ಸರ್ಕಾರಿ ವಿಶೇಷ ಅಭಿಯೋಜಕರಾದ ಶ್ರೀಮತಿ ಡಿ. ಲಲಿತಕುಮಾರಿ ರವರು ವಾದ ಮಂಡಿಸಿದರು, ಘನ ಅಪರ ಜಿಲ್ಲಾ ಮತ್ತು ಸತ್ರ ಶೀಘ್ರುಗತಿ ಎಫ್.ಟಿ. ಎಸ್. ಸಿ-1 ಪೋಕ್ಸ್ ನ್ಯಾಯಾಲಯದ ನ್ಯಾಯಾಧೀಶರಾದ ಗೌರವಾನ್ವಿತ ಶ್ರೀ. ಕೆ. ಬಿ ಪ್ರಸಾದ್. ರವರು ವಿಚಾರಣೆ ನಡೆಸಿ, ಆರೋಪಿ ವಿರುದ್ಧ ಆರೋಪ ಸಾಭೀತಾಗಿದ್ದರಿಂದ ಇದೇ 27 ಜನವರಿ 2025 ರಂದು ಅಪರಾಧಿಗೆ 04 ವರ್ಷ ಕಠಿಣ ಕಾರಗೃಹ ಶಿಕ್ಷೆ ಮತ್ತು 20 ಸಾವಿರ ರೊ. ದಂಡ ವಿಧಿಸಲಾಗಿದೆ. ಹಾಗು ಸಂತ್ರಸ್ಥೆಗೆ ಸರ್ಕಾರದಿಂದ 02ಲಕ್ಷ ರೂ. ಪರಿಹಾರ ನೀಡುವಂತೆ ಐತಿಹಾಸಿಕ ತೀರ್ಪನ್ನು ನ್ಯಾಯಾಲಯ ನೀಡಿದೆ.
ಇಂತಹ ಐತಿಹಾಸಿಕ ತೀರ್ಪಿನಿಂದ ಪೊಲೀಸರ ಮತ್ತು ನ್ಯಾಯಾಲಯದ ಮೇಲೆ ಸಾರ್ವಜನಿಕರ ವಿಶ್ವಾಸ ಹೆಚ್ಚಿಸಿದ್ದು ಹಲವರು ಈ ತೀರ್ಪಿನ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.
ಈ ತನಿಖೆಯಲ್ಲಿ ಪಾಲ್ಗೊಂಡಿದ್ದ ಅಧಿಕಾರಿ ಮತ್ತು ಸಿಬ್ಬಂದಿಯವರ ಕಾರ್ಯವನ್ನು ಕೋಲಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಶ್ಲಾಘಿಸಿದ್ದಾರೆ. ವರದಿ : ರೋಶನ್ ಜಮೀರ್
ನಿವೇಶನದ ಖಾತೆ ಮಾಡಿಕೊಡಲು ಲಂಚ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ ನೆಲಮಂಗಲ ತಾಲೂಕಿನ ಕಳಲುಘಟ್ಟ ಗ್ರಾಮ ಪಂಚಾಯಿತಿ ಪಿಡಿಓ ಲೋಕಾಯುಕ್ತ…
ಕೇರಳದ ಅಲೆಪ್ಪಿ ಜಿಲ್ಲೆಯ ಚೆರ್ತಲಾದಲ್ಲಿ ವಿಷು ಹಬ್ಬದ ಶುಭಾಶಯ ಪೋಸ್ಟರ್ ಒಂದು ದೊಡ್ಡ ವಿವಾದಕ್ಕೆ ಕಾರಣವಾಗಿದೆ. ಈ ಪೋಸ್ಟರ್ನಲ್ಲಿ ಶ್ರೀಕೃಷ್ಣನ…
ಇರಾನ್ ಮತ್ತು ಲೆಬನಾನ್ ನಡುವಿನ ಉದ್ವಿಗ್ನ ಪರಿಸ್ಥಿತಿ ಶಮನವಾಗುತ್ತಿರುವ ಹಿನ್ನೆಲೆ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಹಾರ್ಮುಝ್ ಜಲಸಂಧಿಯನ್ನು ಮತ್ತೆ ಎಲ್ಲಾ…
ಛತ್ತೀಸ್ಗಢದ ದುರ್ಗ್ ಜಿಲ್ಲೆಯಲ್ಲಿ ಅಪ್ರಾಪ್ತ ಬಾಲಕನನ್ನು ಗುರಿಯಾಗಿಸಿಕೊಂಡು ಹನಿಟ್ರ್ಯಾಪ್ ಮೂಲಕ ನಡೆದ ಅಪಹರಣ ಪ್ರಕರಣ ಭಾರೀ ಸಂಚಲನ ಮೂಡಿಸಿದೆ. 14…
ಇಂಟರ್ನೆಟ್ ಕ್ರಾಂತಿಯ ನಂತರ ಸ್ಮಾರ್ಟ್ಫೋನ್ ಪ್ರತಿಯೊಬ್ಬರ ಕೈಗೆ ತಲುಪಿದ ಪರಿಣಾಮ, ಸಾಮಾನ್ಯ ಜನರೂ ಈಗ ಕಂಟೆಂಟ್ ಕ್ರಿಯೇಟರ್ಗಳಾಗಿ ಪರಿಣಮಿಸಿದ್ದಾರೆ. ಈ…
ಯಾದಗಿರಿ: ಜಿಲ್ಲೆಯ ಸುರಪುರ ತಾಲೂಕಿನ ಶಾಂತಪುರ ಕ್ರಾಸ್ ಸಮೀಪ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕನಿಷ್ಠ ಆರು ಮಂದಿ ಸಜೀವ…