Crime

ಲೈಂಗಿಕ ಕಿರುಕುಳ ನೀಡಿದ್ದ ಆರೋಪಿಗೆ 4 ವರ್ಷ ಜೈಲು, 20 ಸಾವಿರ ದಂಡ..!

ಕೋಲಾರ: 22/01/2024 ರಂದು ಮಧ್ಯಾಹ್ನ ಸುಮಾರು 01:45 ಗಂಟೆಯ ಸಮಯದಲ್ಲಿ ಹದಿನಾರು ಹರೆಯದ ಬಾಲಕಿ ತನ್ನ ಪರೀಕ್ಷೆ ಮುಗಿಸಿಕೊಂಡು ಚಿನ್ಮಯ ಶಾಲೆಯ ಮುಂಭಾಗದ ರೈಲ್ವೆ ಟ್ರ್ಯಾಕ್‌ನ್ನು ದಾಟಲು ಹೋಗುತ್ತಿದ್ದಾಗ ಮಳಬಾಗಿಲು ನಗರ, ಮುಜಾವರ್ ಮೊಹಲ್ಲಾ ವಾಸಿಯಾದ ಶೇಕ್ ಸಿರಾಜ್ ಪಾಷಾ ಅಲಿಯಾಸ್ ಶೇರು ಎಂಬುವ ಆರೋಪಿಯು ಸಂತ್ರಸ್ಥೆಯನ್ನು ಲೈಂಗೀಕ ದೌರ್ಜನ್ಯವೆಸಗುವ ಉದ್ದೇಶದಿಂದ 2-3 ಬಾರಿ ಹಿಂಬಾಲಿಸಿಕೊಂಡು ಹೋಗಿದ್ದ ಘಟನೆ ನಡೆದಿದೆ , ಆರೋಪಿಯು ತನ್ನನ್ನು ಹಿಡಿಯಲು ಬಂದಾಗ ನೊಂದ ಬಾಲಕಿ ಆರೋಪಿಯಿಂದ ತಪ್ಪಿಸಿಕೊಳ್ಳಲು ಯತ್ನಿಸಿದ ಸಮಯದಲ್ಲಿ ರೈಲ್ವೆ ಟ್ರ್ಯಾಕ್ ಕಲ್ಲುಗಳು ಕಾಲಿಗೆ ತಗುಲಿ ರೈಲ್ವೆ ಜಲ್ಲಿ ಕಲ್ಲುಗಳ ಮೇಲೆ ಬಿದ್ದು, ಕೆಳಗೆ ಉರುಳಿಕೊಂಡು ಹೋಗಿ ಬಿದ್ದಿರುವ ಘಟನೆ ನಡೆದಿತ್ತು. ಆ ಸಮಯದಲ್ಲಿ ಜಲ್ಲಿ ಕಲ್ಲುಗಳ ಮೇಲೆ ಜಾರಿ ಬಿದ್ದಿದ್ದರಿಂದ ನೊಂದ ಸಂತ್ರಸ್ತಿಯ ಬಲಗೈ ಮೂಳೆ ಮುರಿದಿತ್ತು, ನೊಂದ ಬಾಲಕಿಯ ಕೈ ಮುರಿಯಲು ಕಾರಣರನಾದ ಆರೋಪಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಸಂತ್ರಸ್ತೆ ಕಳೆದ ವರ್ಷ 23/01/2024 ರಂದು ರಾಣೆಯಲ್ಲಿ ದೂರು ನೀಡಿದ್ದುರು, ಪೋಲೀಸರು ಸಂತ್ರಸ್ತೆಯ ದೂರಿನನ್ವಯ ಠಾಣಾ ಮೊ.ಸಂ: 09/2024 ಕಲಂ: 325 ಐ.ಪಿ.ಸಿ ಮತ್ತು ಕಲಂ:12 ಪೋಕ್ಸೋ ಕಾಯ್ದೆ-2012 ಆರೋಪಿಯ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡು ಆರೋಪಿಯನ್ನು ಹೊಂದಿಸುವಲ್ಲಿಯಾಗಿದ್ದರು.

ಪೊಲೀಸರು ಪ್ರಕರಣ ದಾಖಲಾದ ತಕ್ಷಣ ತನಿಖೆಯನ್ನು ಕೈಗೊಂಡು ಆರೋಪಿಯ ವಿರುದ್ಧ ಕೋಲಾರದ ಮಹಿಳಾ ಪೊಲೀಸ್ ಠಾಣೆಯ ಆರಕ್ಷಕ ನಿರೀಕ್ಷಕರಾದ ಬಿ. ಶಂಕರಚಾರ್ ರವರು ಕೇವಲ 50 ದಿನಗಳಲ್ಲಿ ತನಿಖೆ ಪೂರ್ಣಗೊಳಿಸಿ ನ್ಯಾಯಾಲಯಕ್ಕೆ ಅಂತಿಮ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.

ಸಂತ್ರಸ್ಥೆಯ ಪರ ಸರ್ಕಾರಿ ವಿಶೇಷ ಅಭಿಯೋಜಕರಾದ ಶ್ರೀಮತಿ ಡಿ. ಲಲಿತಕುಮಾರಿ ರವರು ವಾದ ಮಂಡಿಸಿದರು, ಘನ ಅಪರ ಜಿಲ್ಲಾ ಮತ್ತು ಸತ್ರ ಶೀಘ್ರುಗತಿ ಎಫ್.ಟಿ. ಎಸ್. ಸಿ-1 ಪೋಕ್ಸ್ ನ್ಯಾಯಾಲಯದ ನ್ಯಾಯಾಧೀಶರಾದ ಗೌರವಾನ್ವಿತ ಶ್ರೀ. ಕೆ. ಬಿ ಪ್ರಸಾದ್. ರವರು ವಿಚಾರಣೆ ನಡೆಸಿ, ಆರೋಪಿ ವಿರುದ್ಧ ಆರೋಪ ಸಾಭೀತಾಗಿದ್ದರಿಂದ ಇದೇ 27 ಜನವರಿ 2025 ರಂದು ಅಪರಾಧಿಗೆ 04 ವರ್ಷ ಕಠಿಣ ಕಾರಗೃಹ ಶಿಕ್ಷೆ ಮತ್ತು 20 ಸಾವಿರ ರೊ. ದಂಡ ವಿಧಿಸಲಾಗಿದೆ. ಹಾಗು ಸಂತ್ರಸ್ಥೆಗೆ ಸರ್ಕಾರದಿಂದ 02ಲಕ್ಷ ರೂ. ಪರಿಹಾರ ನೀಡುವಂತೆ ಐತಿಹಾಸಿಕ ತೀರ್ಪನ್ನು ನ್ಯಾಯಾಲಯ ನೀಡಿದೆ.

ಇಂತಹ ಐತಿಹಾಸಿಕ ತೀರ್ಪಿನಿಂದ ಪೊಲೀಸರ ಮತ್ತು ನ್ಯಾಯಾಲಯದ ಮೇಲೆ ಸಾರ್ವಜನಿಕರ ವಿಶ್ವಾಸ ಹೆಚ್ಚಿಸಿದ್ದು ಹಲವರು ಈ ತೀರ್ಪಿನ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

ಈ ತನಿಖೆಯಲ್ಲಿ ಪಾಲ್ಗೊಂಡಿದ್ದ ಅಧಿಕಾರಿ ಮತ್ತು ಸಿಬ್ಬಂದಿಯವರ ಕಾರ್ಯವನ್ನು ಕೋಲಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಶ್ಲಾಘಿಸಿದ್ದಾರೆ. ವರದಿ : ರೋಶನ್ ಜಮೀರ್

nazeer ahamad

Recent Posts

ಲೋಕಾಯುಕ್ತ ಅಧಿಕಾರಿ ಎಂದು ಎಂಜಿನಿಯರ್‌ಗೆ ಹಣ ಬೇಡಿಕೆ ಇಟ್ಟ ಆರೋಪಿ ಬಂಧನ

ಲೋಕಾಯುಕ್ತ ಕಚೇರಿಯ ಹಿರಿಯ ಅಧಿಕಾರಿ ಎಂದು ಸುಳ್ಳು ಪರಿಚಯ ನೀಡಿ, ಲೋಕೋಪಯೋಗಿ ಇಲಾಖೆಯ ಇಂಜಿನಿಯರ್‌ನಿಂದ ಹಣ ವಸೂಲಿ ಮಾಡಲು ಯತ್ನಿಸಿದ…

14 hours ago

ಉತಾರ ನೀಡಲು ₹1.5 ಲಕ್ಷ ಲಂಚ: ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಬಲೆಗೆ

ಜಮೀನಿನ ಖಾತಾ ಉತಾರ ನೀಡಲು ಲಂಚ ಸ್ವೀಕರಿಸಿದ ಆರೋಪದಲ್ಲಿ ಬಿಜನಗೇರಾ ಗ್ರಾಮ ಪಂಚಾಯಿತಿ ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಅಧಿಕಾರಿಗಳ…

19 hours ago

‘ಉಗ್ರ ಎಂದು ಗೊತ್ತಿದ್ದರೆ ಮನೆ ಕೊಡುತ್ತಿರಲಿಲ್ಲ’; ಶಂಕಿತ ಸುಹೇಲ್ ಬಂಧನದಿಂದ ಬೆಚ್ಚಿಬಿದ್ದ ಮನೆ ಮಾಲೀಕರು

ಅಯೋಧ್ಯೆಯ ರಾಮಮಂದಿರವನ್ನು ಗುರಿಯಾಗಿಸಿಕೊಂಡು ಸಂಚು ರೂಪಿಸಿದ್ದಾನೆ ಎಂಬ ಆರೋಪದ ಮೇಲೆ ಬಂಧಿತನಾಗಿರುವ ಶಂಕಿತ ಉಗ್ರ ಸುಹೇಲ್ ಪ್ರಕರಣಕ್ಕೆ ಹೊಸ ತಿರುವು…

19 hours ago

17 ವರ್ಷದ ಸೋದರಳಿಯನ ಬ್ಲಾಕ್ ಮೇಲ್ ಮಾಡಿ ಸೆಕ್ಸ್ ಮಾಡುತ್ತಿದ್ದ 40 ವರ್ಷದ ಅತ್ತೆ..! ಪೋಕ್ಸೋ ಪ್ರಕರಣ ದಾಖಲು.

ಉತ್ತರ ಪ್ರದೇಶದ ಅಲಿಗಢ್‌ನಲ್ಲಿ ಅಪ್ರಾಪ್ತ ಬಾಲಕನ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ತನ್ನದೇ 17…

19 hours ago

ನಟಿ ಕೃಷಿ ತಾಪಾಂಡ ನಿವಾಸದಲ್ಲಿ ಉದ್ಯಮಿ ವೈಶಾಕ್ ಮೃತದೇಹ ಪತ್ತೆ; ಸಾವಿನ ಸುತ್ತ ಹಲವು ಪ್ರಶ್ನೆಗಳು

ಬೆಂಗಳೂರಿನ ರಾಜರಾಜೇಶ್ವರಿ ನಗರದ ಐಷಾರಾಮಿ ಅಪಾರ್ಟ್‌ಮೆಂಟ್‌ನಲ್ಲಿ ಉದ್ಯಮಿ ವೈಶಾಕ್ (45) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಹಲವು ಅನುಮಾನಗಳಿಗೆ…

19 hours ago

ಇಡಿ ದಾಳಿ: ಸಚಿವ ಸತೀಶ್ ಜಾರಕಿಹೊಳಿ ಸಂಬಂಧಿ ಮನೆಯಿಂದ ಯಮುನಾ ವಶಕ್ಕೆ

ಮೈಸೂರು ನಗರದ ದಟ್ಟಗಳ್ಳಿ ಪ್ರದೇಶದಲ್ಲಿರುವ ಸಚಿವ ಸತೀಶ್ ಜಾರಕಿಹೊಳಿ ಅವರ ಸಂಬಂಧಿ ವೈ. ಮಂಜುನಾಥ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ…

24 hours ago