Crime

ಲೈಂಗಿಕ ಕಿರುಕುಳ ನೀಡಿದ್ದ ಆರೋಪಿಗೆ 4 ವರ್ಷ ಜೈಲು, 20 ಸಾವಿರ ದಂಡ..!

ಕೋಲಾರ: 22/01/2024 ರಂದು ಮಧ್ಯಾಹ್ನ ಸುಮಾರು 01:45 ಗಂಟೆಯ ಸಮಯದಲ್ಲಿ ಹದಿನಾರು ಹರೆಯದ ಬಾಲಕಿ ತನ್ನ ಪರೀಕ್ಷೆ ಮುಗಿಸಿಕೊಂಡು ಚಿನ್ಮಯ ಶಾಲೆಯ ಮುಂಭಾಗದ ರೈಲ್ವೆ ಟ್ರ್ಯಾಕ್‌ನ್ನು ದಾಟಲು ಹೋಗುತ್ತಿದ್ದಾಗ ಮಳಬಾಗಿಲು ನಗರ, ಮುಜಾವರ್ ಮೊಹಲ್ಲಾ ವಾಸಿಯಾದ ಶೇಕ್ ಸಿರಾಜ್ ಪಾಷಾ ಅಲಿಯಾಸ್ ಶೇರು ಎಂಬುವ ಆರೋಪಿಯು ಸಂತ್ರಸ್ಥೆಯನ್ನು ಲೈಂಗೀಕ ದೌರ್ಜನ್ಯವೆಸಗುವ ಉದ್ದೇಶದಿಂದ 2-3 ಬಾರಿ ಹಿಂಬಾಲಿಸಿಕೊಂಡು ಹೋಗಿದ್ದ ಘಟನೆ ನಡೆದಿದೆ , ಆರೋಪಿಯು ತನ್ನನ್ನು ಹಿಡಿಯಲು ಬಂದಾಗ ನೊಂದ ಬಾಲಕಿ ಆರೋಪಿಯಿಂದ ತಪ್ಪಿಸಿಕೊಳ್ಳಲು ಯತ್ನಿಸಿದ ಸಮಯದಲ್ಲಿ ರೈಲ್ವೆ ಟ್ರ್ಯಾಕ್ ಕಲ್ಲುಗಳು ಕಾಲಿಗೆ ತಗುಲಿ ರೈಲ್ವೆ ಜಲ್ಲಿ ಕಲ್ಲುಗಳ ಮೇಲೆ ಬಿದ್ದು, ಕೆಳಗೆ ಉರುಳಿಕೊಂಡು ಹೋಗಿ ಬಿದ್ದಿರುವ ಘಟನೆ ನಡೆದಿತ್ತು. ಆ ಸಮಯದಲ್ಲಿ ಜಲ್ಲಿ ಕಲ್ಲುಗಳ ಮೇಲೆ ಜಾರಿ ಬಿದ್ದಿದ್ದರಿಂದ ನೊಂದ ಸಂತ್ರಸ್ತಿಯ ಬಲಗೈ ಮೂಳೆ ಮುರಿದಿತ್ತು, ನೊಂದ ಬಾಲಕಿಯ ಕೈ ಮುರಿಯಲು ಕಾರಣರನಾದ ಆರೋಪಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಸಂತ್ರಸ್ತೆ ಕಳೆದ ವರ್ಷ 23/01/2024 ರಂದು ರಾಣೆಯಲ್ಲಿ ದೂರು ನೀಡಿದ್ದುರು, ಪೋಲೀಸರು ಸಂತ್ರಸ್ತೆಯ ದೂರಿನನ್ವಯ ಠಾಣಾ ಮೊ.ಸಂ: 09/2024 ಕಲಂ: 325 ಐ.ಪಿ.ಸಿ ಮತ್ತು ಕಲಂ:12 ಪೋಕ್ಸೋ ಕಾಯ್ದೆ-2012 ಆರೋಪಿಯ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡು ಆರೋಪಿಯನ್ನು ಹೊಂದಿಸುವಲ್ಲಿಯಾಗಿದ್ದರು.

ಪೊಲೀಸರು ಪ್ರಕರಣ ದಾಖಲಾದ ತಕ್ಷಣ ತನಿಖೆಯನ್ನು ಕೈಗೊಂಡು ಆರೋಪಿಯ ವಿರುದ್ಧ ಕೋಲಾರದ ಮಹಿಳಾ ಪೊಲೀಸ್ ಠಾಣೆಯ ಆರಕ್ಷಕ ನಿರೀಕ್ಷಕರಾದ ಬಿ. ಶಂಕರಚಾರ್ ರವರು ಕೇವಲ 50 ದಿನಗಳಲ್ಲಿ ತನಿಖೆ ಪೂರ್ಣಗೊಳಿಸಿ ನ್ಯಾಯಾಲಯಕ್ಕೆ ಅಂತಿಮ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.

ಸಂತ್ರಸ್ಥೆಯ ಪರ ಸರ್ಕಾರಿ ವಿಶೇಷ ಅಭಿಯೋಜಕರಾದ ಶ್ರೀಮತಿ ಡಿ. ಲಲಿತಕುಮಾರಿ ರವರು ವಾದ ಮಂಡಿಸಿದರು, ಘನ ಅಪರ ಜಿಲ್ಲಾ ಮತ್ತು ಸತ್ರ ಶೀಘ್ರುಗತಿ ಎಫ್.ಟಿ. ಎಸ್. ಸಿ-1 ಪೋಕ್ಸ್ ನ್ಯಾಯಾಲಯದ ನ್ಯಾಯಾಧೀಶರಾದ ಗೌರವಾನ್ವಿತ ಶ್ರೀ. ಕೆ. ಬಿ ಪ್ರಸಾದ್. ರವರು ವಿಚಾರಣೆ ನಡೆಸಿ, ಆರೋಪಿ ವಿರುದ್ಧ ಆರೋಪ ಸಾಭೀತಾಗಿದ್ದರಿಂದ ಇದೇ 27 ಜನವರಿ 2025 ರಂದು ಅಪರಾಧಿಗೆ 04 ವರ್ಷ ಕಠಿಣ ಕಾರಗೃಹ ಶಿಕ್ಷೆ ಮತ್ತು 20 ಸಾವಿರ ರೊ. ದಂಡ ವಿಧಿಸಲಾಗಿದೆ. ಹಾಗು ಸಂತ್ರಸ್ಥೆಗೆ ಸರ್ಕಾರದಿಂದ 02ಲಕ್ಷ ರೂ. ಪರಿಹಾರ ನೀಡುವಂತೆ ಐತಿಹಾಸಿಕ ತೀರ್ಪನ್ನು ನ್ಯಾಯಾಲಯ ನೀಡಿದೆ.

ಇಂತಹ ಐತಿಹಾಸಿಕ ತೀರ್ಪಿನಿಂದ ಪೊಲೀಸರ ಮತ್ತು ನ್ಯಾಯಾಲಯದ ಮೇಲೆ ಸಾರ್ವಜನಿಕರ ವಿಶ್ವಾಸ ಹೆಚ್ಚಿಸಿದ್ದು ಹಲವರು ಈ ತೀರ್ಪಿನ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

ಈ ತನಿಖೆಯಲ್ಲಿ ಪಾಲ್ಗೊಂಡಿದ್ದ ಅಧಿಕಾರಿ ಮತ್ತು ಸಿಬ್ಬಂದಿಯವರ ಕಾರ್ಯವನ್ನು ಕೋಲಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಶ್ಲಾಘಿಸಿದ್ದಾರೆ. ವರದಿ : ರೋಶನ್ ಜಮೀರ್

nazeer ahamad

Recent Posts

ಟೊರೊಂಟೊದಲ್ಲಿ ಭಾರತೀಯ ಮೂಲದ ಯುವತಿ ಹತ್ಯೆ: 7 ತಿಂಗಳ ಬಳಿಕ ಆಪ್ತ ವ್ಯಕ್ತಿ ಅರೆಸ್ಟ್‌!

ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…

2 hours ago

ಇನ್‌ಸ್ಟಾಗ್ರಾಂ ಪ್ರೇಮಿಗಾಗಿ 6 ತಿಂಗಳ ಕಂದಮ್ಮನನ್ನೇ ಕೊಲ್ಲಿಸಿದ ತಾಯಿ! ಮೀರಾಟ್‌ನಲ್ಲಿ ಬೆಚ್ಚಿಬೀಳಿಸಿದ ಘಟನೆ

ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…

2 hours ago

ಹುಬ್ಬಳ್ಳಿ–ಅಂಕೋಲಾ ರೈಲ್ವೆ ಯೋಜನೆಗೆ ಭೂಸ್ವಾಧೀನ ಅಧಿಕೃತ ಚಾಲನೆ

163 ಕಿ.ಮೀ. ಉದ್ದದ ಯೋಜನೆ; ಉತ್ತರ ಕನ್ನಡದ 40 ಗ್ರಾಮಗಳು ಭೂಸ್ವಾಧೀನ ವ್ಯಾಪ್ತಿಗೆ ಉತ್ತರ ಕನ್ನಡ: ಹಲವು ವರ್ಷಗಳಿಂದ ನನೆಗುದಿಗೆ…

2 hours ago

ಪಾಂಡೆಗಾಂವ–ಕಂಗೋಳಿ ರಸ್ತೆ ಕೆಸರಿನ ಹೊಂಡ: ಜನರ ಆಕ್ರೋಶ, ಕಾಮಗಾರಿ ವಿಳಂಬವಾದರೆ ರಸ್ತೆ ತಡೆ ಎಚ್ಚರಿಕೆ

ಮಳೆ ಬಂದರೆ ಕೆಸರುಗದ್ದೆ; ವಿದ್ಯಾರ್ಥಿಗಳು, ವೃದ್ಧರು, ರೋಗಿಗಳ ಸಂಚಾರಕ್ಕೆ ಸಂಕಷ್ಟ — ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ ಕಾಗವಾಡ: ಬೆಳಗಾವಿ…

2 hours ago

ಜಾತ್ರೆಯಲ್ಲಿ ಮಹಿಳೆಯ ಮಂಗಳಸೂತ್ರ ಕಳವು: ಮೂವರು ಆರೋಪಿಗಳ ಬಂಧನ

₹4.50 ಲಕ್ಷ ಮೌಲ್ಯದ ಚಿನ್ನ, ಕೃತ್ಯಕ್ಕೆ ಬಳಸಿದ್ದ ಬೈಕ್ ವಶ ಹಳಿಯಾಳ: ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಮಹಿಳೆಯೊಬ್ಬರ ಕೊರಳಲ್ಲಿದ್ದ ಚಿನ್ನದ…

17 hours ago

ಬೈಕ್‌ನಲ್ಲಿ ಕರೆದೊಯ್ದು ಹಣ ಕಸಿದು ಜೀವ ಬೆದರಿಕೆ: 24 ಗಂಟೆಯಲ್ಲೇ ಆರೋಪಿ ಬಂಧನ

ಸಿಸಿಟಿವಿ ಹಾಗೂ ತಾಂತ್ರಿಕ ಮಾಹಿತಿ ಆಧರಿಸಿ ಆರೋಪಿಯ ಪತ್ತೆ; ಬೈಕ್, ಹಣ ವಶ ಹೊನ್ನಾವರ: ಬ್ಯಾಂಕ್‌ನಿಂದ ಹಣ ಪಡೆದು ಹೊರಬಂದ…

17 hours ago