Latest

21 ವರ್ಷದ ಯುವಕನಿಗೆ ವಿಸ್ತಾರಗೊಳಿಸಿ ಅಮಾನವೀಯ ಹಲ್ಲೆ..! 5 ಮಂದಿ ಅರೆಸ್ಟ್

ಛತ್ತೀಸ್‌ಗಢದ ಶಕ್ತಿ ಜಿಲ್ಲೆಯ ಮಲ್ಖರೋಡಾ ಪೊಲೀಸ್ ಠಾಣೆ ವ್ಯಾಪ್ತಿಯ ಬಡೆ ರಾವೇಲಿ ಗ್ರಾಮದಲ್ಲಿ ನಡೆದ ಅಮಾನವೀಯ ಘಟನೆ ಪುತ್ತಿದಂತೆ ಹೊರಬಿದ್ದಿದೆ. ಏಪ್ರಿಲ್ 8ರ ರಾತ್ರಿ, 21 ವರ್ಷದ ಯುವಕ ರಾಹುಲ್ ಅಂಚಲ್ ಅಪ್ರಾಪ್ತ ಬಾಲಕಿಯೊಬ್ಬಳನ್ನು ಭೇಟಿಯಾಗಲು ಬಂದ ಸಂದರ್ಭದಲ್ಲಿ, ಬಾಲಕಿಯ ಕುಟುಂಬಸ್ಥರು ಹಾಗೂ ಸ್ಥಳೀಯರು ಆತನನ್ನು ಹಿಡಿದು ನಿರ್ದಯವಾಗಿ ಹಲ್ಲೆ ಮಾಡಿದ್ದಾರೆ.

ದಾಬ್ರಾ ಪ್ರದೇಶದ ನಿವಾಸಿಯಾಗಿರುವ ರಾಹುಲ್ ಪರಿಶಿಷ್ಟ ಜಾತಿಯ ಸತ್ನಾಮಿ ಸಮುದಾಯಕ್ಕೆ ಸೇರಿದ್ದು, ಇತರ ಹಿಂದುಳಿದ ವರ್ಗದ ಬಾಲಕಿಯನ್ನು ಭೇಟಿ ಮಾಡಲು ಗ್ರಾಮಕ್ಕೆ ಬಂದಿದ್ದ ಎನ್ನಲಾಗಿದೆ. ಈ ವೇಳೆ ಬಾಲಕಿಯ ಸಂಬಂಧಿಕರು ಆತನನ್ನು ಹಿಡಿದುಕೊಂಡು, ಚಪ್ಪಲಿ, ಕೇಬಲ್ ಹಾಗೂ ಪೈಪ್‌ಗಳಿಂದ ಕ್ರೂರವಾಗಿ ಹೊಡೆದಿದ್ದಾರೆ.

ಮರುದಿನ ಬೆಳಿಗ್ಗೆ, ಮತ್ತಷ್ಟು ಘೋರ ಘಟನೆ ನಡೆದಿದ್ದು, ಯುವಕನನ್ನು ಗ್ರಾಮದ ಮಧ್ಯೆ ರಸ್ತೆ ಮೇಲೆ ವಿವ್ರಸ್ತ್ರಗೊಳಿಸಿ, ಮರವೊಂದರ ಅಡಿಯಲ್ಲಿ ಕುಳಿರಿಸಿ ಹಗ್ಗದಿಂದ ಸಹ ಹಲ್ಲೆ ನಡೆಸಲಾಗಿದೆ. ಈ ಘಟನೆ ಸಂಬಂಧಿಸಿದ ದೃಶ್ಯಗಳು ವೈರಲ್ ಆಗಿದ್ದು, ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿವೆ.

ಘಟನೆಯ ನಂತರ ಗಂಭೀರವಾಗಿ ಗಾಯಗೊಂಡ ಯುವಕನನ್ನು ತಕ್ಷಣವೇ ರಾಯಗಢ ಜಿಲ್ಲೆಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಸ್ತುತ ಆತನ ಚಿಕಿತ್ಸೆ ನಡೆಯುತ್ತಿದೆ. ಇನ್ನು ಘಟನೆ ಸಂಬಂಧವಾಗಿ ಪೊಲೀಸರು ತ್ವರಿತ ಕ್ರಮ ಕೈಗೊಂಡಿದ್ದು, ಐದುನಲ್ಲು ವ್ಯಕ್ತಿಗಳನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

ಈ ಘಟನೆ ಮೇಲ್ನೋಟಕ್ಕೆ ಆಪರಾಧ ಪ್ರಕರಣವಲ್ಲದೆ ಸಾಮಾಜಿಕ ವರ್ಣಮಟ್ಟದ ಅಸಮತೋಲನ ಮತ್ತು ಪ್ರಚಂಡ ಕ್ರೌರ್ಯದ ಸ್ಪಷ್ಟ ಚಿತ್ರಣ ನೀಡುತ್ತಿದೆ. ಪೊಲೀಸರು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ಹೆಚ್ಚಿನ ತನಿಖೆ ಮುಂದುವರಿಸಿದೆ.

nazeer ahamad

Recent Posts

ಮುಖ್ಯಮಂತ್ರಿಗಳ ಸೂಚನೆ ಕಟ್ಟುನಿಟ್ಟಾಗಿ ಪಾಲಿಸಿ: ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ

ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…

8 hours ago

ಬಸ್‌ನಲ್ಲಿ ಅಸಭ್ಯವಾಗಿ ಯುತಿಯ ಮೈ ಮುಟ್ಟಿ ಕಿರುಕುಳ; ಧೈರ್ಯವಾಗಿ ವಿಡಿಯೋ ಮಾಡಿದ ಯುವತಿ, ಆರೋಪಿಯನ್ನು ಕೆಳಗಿಳಿಸಿದ ಕಂಡಕ್ಟರ್!

ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…

8 hours ago

₹65 ಸಾವಿರ ಸಂಬಳದ ಮುಖ್ಯೋಪಾಧ್ಯಾಯರಿಗೆ ಶಾಲೆಗೆ ಬರಲು ಸಮಯವಿಲ್ಲ; ₹4,500ಕ್ಕೆ ಯುವತಿಯನ್ನು ನೇಮಿಸಿ ಪಾಠ ಮಾಡಿಸಿದ ‘ಸರ್ಕಾರಿ ಶಾಲೆ’ ವಂಚನೆ!

ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…

8 hours ago

ಇನ್‌ಸ್ಟಾಗ್ರಾಮ್ ಕ್ಯೂಟ್ ಕಪಲ್ ಕಥೆಗೆ ಬಿಗ್ ಟ್ವಿಸ್ಟ್: ಕೋಟ್ಯಾಧಿಪತಿ ಪತ್ನಿ ಕಂಡಕ್ಟರ್ ಜೊತೆ ಪರಾರಿ ಆರೋಪ!

ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…

8 hours ago

ಟೊರೊಂಟೊದಲ್ಲಿ ಭಾರತೀಯ ಮೂಲದ ಯುವತಿ ಹತ್ಯೆ: 7 ತಿಂಗಳ ಬಳಿಕ ಆಪ್ತ ವ್ಯಕ್ತಿ ಅರೆಸ್ಟ್‌!

ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…

1 day ago

ಇನ್‌ಸ್ಟಾಗ್ರಾಂ ಪ್ರೇಮಿಗಾಗಿ 6 ತಿಂಗಳ ಕಂದಮ್ಮನನ್ನೇ ಕೊಲ್ಲಿಸಿದ ತಾಯಿ! ಮೀರಾಟ್‌ನಲ್ಲಿ ಬೆಚ್ಚಿಬೀಳಿಸಿದ ಘಟನೆ

ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…

1 day ago