ರಾಜ್ಯದಲ್ಲಿ ಸುರಿಯುತ್ತಿರುವ ಭಾರೀ ಮಳೆಗೆ 38 ಮಂದಿ ಸಾವನ್ನಪ್ಪಿದ್ದು, ಕುಟುಂಬಗಳಿಗೆ ತಲಾ 5 ಲಕ್ಷ ರೂಪಾಯಿ ಪರಿಹಾರ ನೀಡಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಕ್ಕೆ ತಡವಾಗಿ ಮುಂಗಾರು ಕಾಲಿಟ್ಟರು ಕೆಲವೆಡೆ ಉತ್ತಮ ಮಳೆಯಾಗುತ್ತಿದೆ.
ಪ್ರವಾಹ ಉಂಟಾಗಿ ಹಾನಿ ಕೂಡ ಆಗಿದೆ. ಮಳೆಯಿಂದ 38 ಜನರು ಪ್ರಾಣ ಕಳೆದುಕೊಂಡಿದ್ದಾರೆ. 35 ಜನ ಗಾಯಗೊಂಡಿದ್ದಾರೆ. 57 ಮನೆಗಳು ಸಂಪೂರ್ಣ ನಾಶವಾಗಿದ್ದರೆ, 208 ಮನೆಗಳಿಗೆ ತೀವ್ರವಾಗಿ ಹಾನಿಯಾಗಿದೆ. ಜೊತೆಗೆ 2,682 ಮನೆಗಳು ಭಾಗಶಃ ಹಾನಿಗೀಡಾಗಿವೆ ಎಂದು ತಿಳಿಸಿದರು.
ಪ್ರವಾಹ ಸಂಬಂಧಿತ ಘಟನೆಗಳಲ್ಲಿ 105 ಜಾನುವಾರುಗಳು ಕೊಚ್ಚಿ ಹೋಗಿವೆ. 185 ಹೆಕ್ಟೇರ್ ಪ್ರದೇಶದ ಕೃಷಿ ಬೆಳೆ ಹಾನಿಯಾಗಿದೆ. 356 ಹೆಕ್ಟೇರ್ ಪ್ರದೇಶದ ತೋಟಗಾರಿಕಾ ಬೆಳೆ ಹಾಳಾಗಿದೆ. ಒಟ್ಟು 541 ಹೆಕ್ಟೇರ್ ಪ್ರದೇಶದಲ್ಲಿ ಬೆಳೆಗೆ ನೀರು ನುಗ್ಗಿ ಬೆಳೆ ನಾಶವಾಗಿ ರೈತರು ಭಾರಿ ನಷ್ಟ ಅನುಭವಿಸುವಂತಾಗಿದೆ ಎಂದು ಹೇಳಿದರು.
11,995 ವಿದ್ಯುತ್ ಕಂಬಗಳು ಬಿದ್ದಿವೆ. 894 ವಿದ್ಯುತ್ ಪರಿವರ್ತಕಗಳಿಗೆ ಹಾನಿಯಾಗಿವೆ. ಇನ್ನೂರ ಹದಿನೈದು ಕಿಲೋಮೀಟರ್ನಷ್ಟು ವಿದ್ಯುತ್ ಸರಬರಾಜು ಕಡಿತವಾಗಿದೆ. 189 ಸೇತುವೆಗಳು 859 ಶಾಲಾ ಕೊಠಡಿಗಳು, 8 ಪ್ರಾಥಮಿಕ ಕೇಂದ್ರಗಳು, 269 ಅಂಗನವಾಡಿ ಕೇಂದ್ರಗಳು ಹಾನಿಗೀಡಾಗಿವೆ. ನೆರೆ ಸಂತ್ರಸ್ತರಿಗಾಗಿ 2 ಪರಿಹಾರ ಕೇಂದ್ರಗಳನ್ನು ಸ್ಥಾಪಿಸಿದ್ದೇವೆ ಎಂದು ಮಾಹಿತಿ ನೀಡಿದರು
ಅಮೃತಸರ: ಉನ್ನತ ಶಿಕ್ಷಣಕ್ಕಾಗಿ ದೂರದ ನಗರಕ್ಕೆ ಮಕ್ಕಳನ್ನು ಕಳುಹಿಸುವ ಪೋಷಕರು ಅವರ ಮೇಲೆ ಅಪಾರ ನಂಬಿಕೆ ಇಟ್ಟುಕೊಂಡಿರುತ್ತಾರೆ. ಆದರೆ ಕೆಲವೊಮ್ಮೆ…
ಹೆತ್ತ ಮಕ್ಕಳ ಸುಖ-ಸಂತೋಷಕ್ಕಾಗಿ ತಮ್ಮ ಇಡೀ ಜೀವನವನ್ನೇ ತ್ಯಾಗ ಮಾಡುವ ತಂದೆ-ತಾಯಿಯರಿಗೆ ವೃದ್ಧಾಪ್ಯದಲ್ಲಿ ಸಿಗುವ ಪ್ರತಿಫಲ ಕೆಲವೊಮ್ಮೆ ಎಷ್ಟು ನೋವಿನದ್ದಾಗಿರುತ್ತದೆ…
ಮಂಡ್ಯದಲ್ಲಿ ರಸ್ತೆ ಅಪಘಾತವೆಂದು ಆರಂಭದಲ್ಲಿ ದಾಖಲಾಗಿದ್ದ ಯುವತಿಯ ಸಾವಿನ ಪ್ರಕರಣ ಇದೀಗ ಮಹತ್ವದ ತಿರುವು ಪಡೆದುಕೊಂಡಿದೆ. ಆರಂಭದಲ್ಲಿ ಸಾಮಾನ್ಯ ಅಪಘಾತ…
ಕನ್ನೌಜ್ (ಉತ್ತರ ಪ್ರದೇಶ): ಶಿಕ್ಷಣ ಕ್ಷೇತ್ರದ ಗೌರವಕ್ಕೆ ಧಕ್ಕೆ ತರುವಂತಹ ಘಟನೆಯೊಂದು ಉತ್ತರ ಪ್ರದೇಶದ ಕನ್ನೌಜ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.…
ಬೆಂಗಳೂರು: ನಗರದ ಅಪಾರ್ಟ್ಮೆಂಟ್ನಲ್ಲಿ ಒಂಟಿಯಾಗಿ ವಾಸಿಸುತ್ತಿದ್ದ ಯುವತಿಗೆ ಪಾರ್ಸಲ್ ಡೆಲಿವರಿ ವೇಳೆ ಆತಂಕಕಾರಿ ಅನುಭವ ಎದುರಾಗಿರುವ ಘಟನೆ ಬೆಳಕಿಗೆ ಬಂದಿದೆ.…
ಬೆಂಗಳೂರು: ಮನೆದಲ್ಲೇ ಕುಳಿತು ಬೂದುಬತ್ತಿ, ಮೆಣದಬತ್ತಿ ಹಾಗೂ ಪೇಪರ್ ಪ್ಲೇಟ್ ಪ್ಯಾಕಿಂಗ್ ಕೆಲಸ ನೀಡಿ ಹೆಚ್ಚಿನ ಆದಾಯ ಗಳಿಸಬಹುದು ಎಂದು…