ರಾಜ್ಯದಲ್ಲಿ ಸುರಿಯುತ್ತಿರುವ ಭಾರೀ ಮಳೆಗೆ 38 ಮಂದಿ ಸಾವನ್ನಪ್ಪಿದ್ದು, ಕುಟುಂಬಗಳಿಗೆ ತಲಾ 5 ಲಕ್ಷ ರೂಪಾಯಿ ಪರಿಹಾರ ನೀಡಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಕ್ಕೆ ತಡವಾಗಿ ಮುಂಗಾರು ಕಾಲಿಟ್ಟರು ಕೆಲವೆಡೆ ಉತ್ತಮ ಮಳೆಯಾಗುತ್ತಿದೆ.
ಪ್ರವಾಹ ಉಂಟಾಗಿ ಹಾನಿ ಕೂಡ ಆಗಿದೆ. ಮಳೆಯಿಂದ 38 ಜನರು ಪ್ರಾಣ ಕಳೆದುಕೊಂಡಿದ್ದಾರೆ. 35 ಜನ ಗಾಯಗೊಂಡಿದ್ದಾರೆ. 57 ಮನೆಗಳು ಸಂಪೂರ್ಣ ನಾಶವಾಗಿದ್ದರೆ, 208 ಮನೆಗಳಿಗೆ ತೀವ್ರವಾಗಿ ಹಾನಿಯಾಗಿದೆ. ಜೊತೆಗೆ 2,682 ಮನೆಗಳು ಭಾಗಶಃ ಹಾನಿಗೀಡಾಗಿವೆ ಎಂದು ತಿಳಿಸಿದರು.
ಪ್ರವಾಹ ಸಂಬಂಧಿತ ಘಟನೆಗಳಲ್ಲಿ 105 ಜಾನುವಾರುಗಳು ಕೊಚ್ಚಿ ಹೋಗಿವೆ. 185 ಹೆಕ್ಟೇರ್ ಪ್ರದೇಶದ ಕೃಷಿ ಬೆಳೆ ಹಾನಿಯಾಗಿದೆ. 356 ಹೆಕ್ಟೇರ್ ಪ್ರದೇಶದ ತೋಟಗಾರಿಕಾ ಬೆಳೆ ಹಾಳಾಗಿದೆ. ಒಟ್ಟು 541 ಹೆಕ್ಟೇರ್ ಪ್ರದೇಶದಲ್ಲಿ ಬೆಳೆಗೆ ನೀರು ನುಗ್ಗಿ ಬೆಳೆ ನಾಶವಾಗಿ ರೈತರು ಭಾರಿ ನಷ್ಟ ಅನುಭವಿಸುವಂತಾಗಿದೆ ಎಂದು ಹೇಳಿದರು.
11,995 ವಿದ್ಯುತ್ ಕಂಬಗಳು ಬಿದ್ದಿವೆ. 894 ವಿದ್ಯುತ್ ಪರಿವರ್ತಕಗಳಿಗೆ ಹಾನಿಯಾಗಿವೆ. ಇನ್ನೂರ ಹದಿನೈದು ಕಿಲೋಮೀಟರ್ನಷ್ಟು ವಿದ್ಯುತ್ ಸರಬರಾಜು ಕಡಿತವಾಗಿದೆ. 189 ಸೇತುವೆಗಳು 859 ಶಾಲಾ ಕೊಠಡಿಗಳು, 8 ಪ್ರಾಥಮಿಕ ಕೇಂದ್ರಗಳು, 269 ಅಂಗನವಾಡಿ ಕೇಂದ್ರಗಳು ಹಾನಿಗೀಡಾಗಿವೆ. ನೆರೆ ಸಂತ್ರಸ್ತರಿಗಾಗಿ 2 ಪರಿಹಾರ ಕೇಂದ್ರಗಳನ್ನು ಸ್ಥಾಪಿಸಿದ್ದೇವೆ ಎಂದು ಮಾಹಿತಿ ನೀಡಿದರು
ಬಾಂಗ್ಲಾದೇಶದ ಕಿಶೋರ್ಗಂಜ್ ಜಿಲ್ಲೆಯ ಭೈರಬ್ ರೈಲು ನಿಲ್ದಾಣದಲ್ಲಿ ನಡೆದ ಹೃದಯ ಕಲುಕುವ ಘಟನೆ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ…
ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ಶಂಕರಮಠ ಗಲ್ಲಿಯಲ್ಲಿ 15 ವರ್ಷಗಳ ದಾಂಪತ್ಯ ಜೀವನ ನಡೆಸಿದ್ದ ಮಹಿಳೆಯೊಬ್ಬಳು ಗಂಡನ ವರದಕ್ಷಿಣೆ ಕಿರುಕುಳಕ್ಕೆ…
ಬಿಜೆಪಿ ಯುವ ಮೋರ್ಚಾದ ನಗರ ಘಟಕದ ಅಧ್ಯಕ್ಷ ವೆಂಕಟೇಶ ಕುರುಬರ್ ಅಲಿಯಾಸ್ ಜೆಎನ್ಎನ್ ವೆಂಕಿ ಹತ್ಯೆ ಪ್ರಕರಣದಲ್ಲಿ ಭಾಗಿಯಾಗಿದ್ದ ಆರು…
66 ವರ್ಷದ ಸೋಮ್ ದೇವ್ ಮತ್ತು 35 ವರ್ಷದ ಯುವತಿಯ ವಿವಾಹ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ.…
ಹರಿಯಾಣದ ಚರ್ಕಿ ದಾದ್ರಿ ಜಿಲ್ಲೆಯಲ್ಲಿ ನಡೆದ ಭೀಕರ ಘಟನೆಯೊಂದು ಮಾನವ ಸಂಬಂಧಗಳನ್ನೇ ಪ್ರಶ್ನಿಸುವಂತೆ ಮಾಡಿದೆ. ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿ,…
ರಾಜಧಾನಿ ಬೆಂಗಳೂರಿನಲ್ಲಿ ಡ್ರಗ್ಸ್ ಮಾಫಿಯಾ ವಿರುದ್ಧ ಪೊಲೀಸರು ಭರ್ಜರಿ ಕಾರ್ಯಾಚರಣೆ ಮುಂದುವರೆಸಿದ್ದು, ನಾಲ್ವರು ವಿದೇಶಿಯರು ಸೇರಿದಂತೆ ಒಟ್ಟು 16 ಮಂದಿಯನ್ನು…