Latest

5 ಲಕ್ಷ ರೂ. ಲಂಚ ಪಡೆದ ವಿಶೇಷ ತಹಶೀಲ್ದಾರ್‌ ವರ್ಷಾ ಒಡೆಯರ್‌ ಅರೆಸ್ಟ್‌

ಬೆಂಗಳೂರು ಉತ್ತರ ತಾಲೂಕಿನ ವಿಶೇಷ ತಹಶೀಲ್ದಾರ್‌ ವರ್ಷಾ ಒಡೆಯರ್‌ ಹಾಗೂ ಮಧ್ಯವರ್ತಿ ರಮೇಶ್‌ ಎಂಬವರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. ಜಮೀನಿನ ಖಾತೆ ಬದಲಾವಣೆಗೆ 5 ಲಕ್ಷ ಲಂಚ ಪಡೆಯುತ್ತಿದ್ದಾಗ ವರ್ಷಾರನ್ನು ಬಂಧಿಸಲಾಗಿದೆ. ದಾಸನಪುರ ಹೋಬಳಿ ವ್ಯಾಪ್ತಿಯ ಕೆಂಗನಹಳ್ಳಿ ಗ್ರಾಮದಲ್ಲಿ ಲಲಿತ್​ಕುಮಾರ್‌ ಎಂಬವರಿಂದ ವ್ಯಕ್ತಿಯೊಬ್ಬರು 2 ಎಕರೆ ಜಮೀನು ಖರೀದಿಸಿದ್ದರು.
ಲಲಿತ್‌ ಅವರ ಹೆಸರೇ ಪಹಣಿಯಲ್ಲಿ ನಮೂದಾಗಿರಲಿಲ್ಲ. ಅವರ ಪರವಾಗಿ ಕಾಂತರಾಜು ಉಪ ವಿಭಾಗಾಧಿಕಾರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಪಹಣಿಯಲ್ಲಿ ಲಲಿತ್‌ ಹೆಸರು ನಮೂದಿಸುವಂತೆ ಉಪ ವಿಭಾಗಾಧಿಕಾರಿ ನ್ಯಾಯಾಲಯ ಅ.22ರಂದು ಆದೇಶ ಹೊರಡಿಸಿತ್ತು.
ಉಪ ವಿಭಾಗಾಧಿಕಾರಿ ಆದೇಶದಂತೆ ಪಹಣಿ ತಿದ್ದುಪಡಿಗೆ ಕಾಂತರಾಜು ಅರ್ಜಿ ಸಲ್ಲಿಸಿದ್ದರು. ಪ್ರತಿ ಎಕರೆಗೆ 5 ಲಕ್ಷದಂತೆ 10 ಲಕ್ಷ ಲಂಚ ನೀಡುವಂತೆ ವಿಶೇಷ ತಹಶೀಲ್ದಾರ್‌ ಮಧ್ಯವರ್ತಿ ರಮೇಶ್‌ ಮೂಲಕ ಅರ್ಜಿದಾರರಿಗೆ ಬೇಡಿಕೆ ಇಟ್ಟಿದ್ದರು. ಈ ಬಗ್ಗೆ ಅರ್ಜಿದಾರರು ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು.
ಸೇಂಟ್‌ ಮಾರ್ಥಾಸ್‌ ಆಸ್ಪತ್ರೆ ವಾಹನ ನಿಲುಗಡೆ ತಾಣದ ಬಳಿ ಬಂದು ಹಣ ತಲುಪಿಸುವಂತೆ ಮಧ್ಯವರ್ತಿ ಕಾಂತರಾಜುಗೆ ಸೂಚಿಸಿದ್ದರು. ಕಾಂತರಾಜು 5 ಲಕ್ಷ ನೀಡಿದರು. ತಕ್ಷಣ ದಾಳಿ ಮಾಡಿದ ಲೋಕಾಯುಕ್ತ ಪೊಲೀಸರು, ರಮೇಶ್‌ ಅವರನ್ನು ಬಂಧಿಸಿದರು.
ನನ್ನದೇನೂ ತಪ್ಪಿಲ್ಲ. ತಹಶೀಲ್ದಾರ್‌ ವರ್ಷಾ ಅವರ ಸೂಚನೆಯಂತೆ ಹಣ ಪಡೆದಿದ್ದೇನೆ ಎಂದು ರಮೇಶ್‌ ತಿಳಿಸಿದ್ದು, ವಿಶೇಷ ತಹಶೀಲ್ದಾರ್‌ ಕಚೇರಿಗೆ ಬಂದ ರಮೇಶ್‌, ಮೇಡಂ ವ್ಯವಹಾರ ಮುಗಿದಿದೆ ಎಂದು ಹೇಳಿದಾಗ ಹಣ ಕೊಡು ಎಂದು ವರ್ಷಾ 5 ಲಕ್ಷ ಪಡೆದುಕೊಂಡರು ಎಂದು ಹೇಳಲಾಗಿದೆ.

ಭ್ರಷ್ಟರ ಬೇಟೆ

Recent Posts

ವಿವಾಹ ಭರವಸೆ ನೀಡಿ ಖಾಸಗಿ ವಿಡಿಯೋದಿಂದ ಬ್ಲ್ಯಾಕ್‌ಮೇಲ್‌: ಯುವಕನ ಬಂಧನ

ಬೆಂಗಳೂರು: ವಿವಾಹವಾಗುವ ಭರವಸೆ ನೀಡಿ ಖಾಸಗಿ ಸಂಬಂಧ ಬೆಳೆಸಿದ ಬಳಿಕ, ಆ ಸಂಬಂಧದ ವಿಡಿಯೋ ಬಳಸಿ ಹಣಕ್ಕಾಗಿ ಬ್ಲ್ಯಾಕ್‌ಮೇಲ್‌ ಮಾಡುತ್ತಿದ್ದ…

22 hours ago

10 ಲಕ್ಷ ಲಂಚದ ಹಣದೊಂದಿಗೆ ಬಿಬಿಎಂಪಿ ಇಂಜಿನಿಯರ್ ಲೋಕಾಯುಕ್ತ ಬಲೆಗೆ”

ಬೆಂಗಳೂರು: ನಗರದಲ್ಲಿ ಮತ್ತೊಂದು ಲಂಚದ ಬಿರುಕು ಬಿಟ್ಟಿದ್ದು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಕಾರ್ಯಪಾಲಕ ಅಭಿಯಂತರನು 10 ಲಕ್ಷ…

22 hours ago

ಗೋವಾ ಪ್ರವಾಸ ದುರಂತ: ಮದುವೆ ಗೊಂದಲದಿಂದ ಪ್ರೇಮಿಯ ಕೈಯಲ್ಲಿ ಪ್ರೇಯಸಿ ಹತ್ಯೆ

ಗೋವಾ: ಮದುವೆಯಾಗುವ ಉದ್ದೇಶದಿಂದ ಬೆಂಗಳೂರಿನಿಂದ ಗೋವಾಕ್ಕೆ ಪ್ರಯಾಣಿಸಿದ್ದ ಜೋಡಿಯ ಕನಸು ಕೊಲೆಯ ಹಿನ್ನಲೆಯಲ್ಲಿ ದುರಂತವಾಗಿ ಕೊನೆಗೊಂಡ ಘಟನೆ ದಕ್ಷಿಣ ಗೋವಾದ…

23 hours ago

ಮೈಸೂರು ರಾಜೀವ್ ನಗರದಲ್ಲಿ ಕುಟುಂಬ ಕಲಹ ತೀವ್ರಗೆಡೆದು ಯುವಕನಿಗೆ ಚಾಕು ಇರಿತ: ಆರೋಪಿ ಅಫ್ರೀದಿ ಬಂಧನ

ಮೈಸೂರು: ಕೌಟುಂಬಿಕ ಕಲಹದ ರೂಪಾಂತರವಾಗಿ ಜಗಳ ತೀವ್ರತೆ ಪಡೆದು ಕೊಲೆಯಾದ ಹೃದಯವಿದ್ರಾವಕ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ…

2 days ago

ಖಾಲಿ ಮನೆ ಟಾರ್ಗೆಟ್: ಪೆಪ್ಸಿ ರಘು ಗ್ಯಾಂಗದಿಂದ 24 ಲಕ್ಷ ಕಳ್ಳತನ, ಮೂವರು ಅರೆಸ್ಟ್

ಬೆಂಗಳೂರು: ಮದುವೆಗಾಗಿ ಮನೆ ಖಾಲಿ ಇದ್ದನ್ನು ತಪ್ಪಾಗಿ ಬಳಸಿಕೊಂಡು ಬೃಹತ್ ಕಳ್ಳತನ ನಡೆಸಿದ ಮೂವರು ಆರೋಪಿಗಳನ್ನು ಸಿ.ಕೆ. ಅಚ್ಚುಕಟ್ಟು ಠಾಣೆ…

2 days ago

ಲಂಚ ಸ್ವೀಕರಿಸುತ್ತಿದ್ದ ಪಂ.ರಾಜ್ ಇಂಜಿನಿಯರಿಂಗ್ ಅಧಿಕಾರಿ ಬಂಧನ: ಲೋಕಾಯುಕ್ತದ ದಾಳಿ ಸೊರಬದಲ್ಲಿ

ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನಲ್ಲಿ ಭ್ರಷ್ಟಾಚಾರದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಸೆಕ್ಷನ್ ಅಧಿಕಾರಿ…

2 days ago