ಬೆಂಗಳೂರು ಉತ್ತರ ತಾಲೂಕಿನ ವಿಶೇಷ ತಹಶೀಲ್ದಾರ್ ವರ್ಷಾ ಒಡೆಯರ್ ಹಾಗೂ ಮಧ್ಯವರ್ತಿ ರಮೇಶ್ ಎಂಬವರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. ಜಮೀನಿನ ಖಾತೆ ಬದಲಾವಣೆಗೆ 5 ಲಕ್ಷ ಲಂಚ ಪಡೆಯುತ್ತಿದ್ದಾಗ ವರ್ಷಾರನ್ನು ಬಂಧಿಸಲಾಗಿದೆ. ದಾಸನಪುರ ಹೋಬಳಿ ವ್ಯಾಪ್ತಿಯ ಕೆಂಗನಹಳ್ಳಿ ಗ್ರಾಮದಲ್ಲಿ ಲಲಿತ್ಕುಮಾರ್ ಎಂಬವರಿಂದ ವ್ಯಕ್ತಿಯೊಬ್ಬರು 2 ಎಕರೆ ಜಮೀನು ಖರೀದಿಸಿದ್ದರು.
ಲಲಿತ್ ಅವರ ಹೆಸರೇ ಪಹಣಿಯಲ್ಲಿ ನಮೂದಾಗಿರಲಿಲ್ಲ. ಅವರ ಪರವಾಗಿ ಕಾಂತರಾಜು ಉಪ ವಿಭಾಗಾಧಿಕಾರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಪಹಣಿಯಲ್ಲಿ ಲಲಿತ್ ಹೆಸರು ನಮೂದಿಸುವಂತೆ ಉಪ ವಿಭಾಗಾಧಿಕಾರಿ ನ್ಯಾಯಾಲಯ ಅ.22ರಂದು ಆದೇಶ ಹೊರಡಿಸಿತ್ತು.
ಉಪ ವಿಭಾಗಾಧಿಕಾರಿ ಆದೇಶದಂತೆ ಪಹಣಿ ತಿದ್ದುಪಡಿಗೆ ಕಾಂತರಾಜು ಅರ್ಜಿ ಸಲ್ಲಿಸಿದ್ದರು. ಪ್ರತಿ ಎಕರೆಗೆ 5 ಲಕ್ಷದಂತೆ 10 ಲಕ್ಷ ಲಂಚ ನೀಡುವಂತೆ ವಿಶೇಷ ತಹಶೀಲ್ದಾರ್ ಮಧ್ಯವರ್ತಿ ರಮೇಶ್ ಮೂಲಕ ಅರ್ಜಿದಾರರಿಗೆ ಬೇಡಿಕೆ ಇಟ್ಟಿದ್ದರು. ಈ ಬಗ್ಗೆ ಅರ್ಜಿದಾರರು ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು.
ಸೇಂಟ್ ಮಾರ್ಥಾಸ್ ಆಸ್ಪತ್ರೆ ವಾಹನ ನಿಲುಗಡೆ ತಾಣದ ಬಳಿ ಬಂದು ಹಣ ತಲುಪಿಸುವಂತೆ ಮಧ್ಯವರ್ತಿ ಕಾಂತರಾಜುಗೆ ಸೂಚಿಸಿದ್ದರು. ಕಾಂತರಾಜು 5 ಲಕ್ಷ ನೀಡಿದರು. ತಕ್ಷಣ ದಾಳಿ ಮಾಡಿದ ಲೋಕಾಯುಕ್ತ ಪೊಲೀಸರು, ರಮೇಶ್ ಅವರನ್ನು ಬಂಧಿಸಿದರು.
ನನ್ನದೇನೂ ತಪ್ಪಿಲ್ಲ. ತಹಶೀಲ್ದಾರ್ ವರ್ಷಾ ಅವರ ಸೂಚನೆಯಂತೆ ಹಣ ಪಡೆದಿದ್ದೇನೆ ಎಂದು ರಮೇಶ್ ತಿಳಿಸಿದ್ದು, ವಿಶೇಷ ತಹಶೀಲ್ದಾರ್ ಕಚೇರಿಗೆ ಬಂದ ರಮೇಶ್, ಮೇಡಂ ವ್ಯವಹಾರ ಮುಗಿದಿದೆ ಎಂದು ಹೇಳಿದಾಗ ಹಣ ಕೊಡು ಎಂದು ವರ್ಷಾ 5 ಲಕ್ಷ ಪಡೆದುಕೊಂಡರು ಎಂದು ಹೇಳಲಾಗಿದೆ.
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…