Latest

5 ಲಕ್ಷ ರೂ. ಲಂಚ ಪಡೆದ ವಿಶೇಷ ತಹಶೀಲ್ದಾರ್‌ ವರ್ಷಾ ಒಡೆಯರ್‌ ಅರೆಸ್ಟ್‌

ಬೆಂಗಳೂರು ಉತ್ತರ ತಾಲೂಕಿನ ವಿಶೇಷ ತಹಶೀಲ್ದಾರ್‌ ವರ್ಷಾ ಒಡೆಯರ್‌ ಹಾಗೂ ಮಧ್ಯವರ್ತಿ ರಮೇಶ್‌ ಎಂಬವರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. ಜಮೀನಿನ ಖಾತೆ ಬದಲಾವಣೆಗೆ 5 ಲಕ್ಷ ಲಂಚ ಪಡೆಯುತ್ತಿದ್ದಾಗ ವರ್ಷಾರನ್ನು ಬಂಧಿಸಲಾಗಿದೆ. ದಾಸನಪುರ ಹೋಬಳಿ ವ್ಯಾಪ್ತಿಯ ಕೆಂಗನಹಳ್ಳಿ ಗ್ರಾಮದಲ್ಲಿ ಲಲಿತ್​ಕುಮಾರ್‌ ಎಂಬವರಿಂದ ವ್ಯಕ್ತಿಯೊಬ್ಬರು 2 ಎಕರೆ ಜಮೀನು ಖರೀದಿಸಿದ್ದರು.
ಲಲಿತ್‌ ಅವರ ಹೆಸರೇ ಪಹಣಿಯಲ್ಲಿ ನಮೂದಾಗಿರಲಿಲ್ಲ. ಅವರ ಪರವಾಗಿ ಕಾಂತರಾಜು ಉಪ ವಿಭಾಗಾಧಿಕಾರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಪಹಣಿಯಲ್ಲಿ ಲಲಿತ್‌ ಹೆಸರು ನಮೂದಿಸುವಂತೆ ಉಪ ವಿಭಾಗಾಧಿಕಾರಿ ನ್ಯಾಯಾಲಯ ಅ.22ರಂದು ಆದೇಶ ಹೊರಡಿಸಿತ್ತು.
ಉಪ ವಿಭಾಗಾಧಿಕಾರಿ ಆದೇಶದಂತೆ ಪಹಣಿ ತಿದ್ದುಪಡಿಗೆ ಕಾಂತರಾಜು ಅರ್ಜಿ ಸಲ್ಲಿಸಿದ್ದರು. ಪ್ರತಿ ಎಕರೆಗೆ 5 ಲಕ್ಷದಂತೆ 10 ಲಕ್ಷ ಲಂಚ ನೀಡುವಂತೆ ವಿಶೇಷ ತಹಶೀಲ್ದಾರ್‌ ಮಧ್ಯವರ್ತಿ ರಮೇಶ್‌ ಮೂಲಕ ಅರ್ಜಿದಾರರಿಗೆ ಬೇಡಿಕೆ ಇಟ್ಟಿದ್ದರು. ಈ ಬಗ್ಗೆ ಅರ್ಜಿದಾರರು ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು.
ಸೇಂಟ್‌ ಮಾರ್ಥಾಸ್‌ ಆಸ್ಪತ್ರೆ ವಾಹನ ನಿಲುಗಡೆ ತಾಣದ ಬಳಿ ಬಂದು ಹಣ ತಲುಪಿಸುವಂತೆ ಮಧ್ಯವರ್ತಿ ಕಾಂತರಾಜುಗೆ ಸೂಚಿಸಿದ್ದರು. ಕಾಂತರಾಜು 5 ಲಕ್ಷ ನೀಡಿದರು. ತಕ್ಷಣ ದಾಳಿ ಮಾಡಿದ ಲೋಕಾಯುಕ್ತ ಪೊಲೀಸರು, ರಮೇಶ್‌ ಅವರನ್ನು ಬಂಧಿಸಿದರು.
ನನ್ನದೇನೂ ತಪ್ಪಿಲ್ಲ. ತಹಶೀಲ್ದಾರ್‌ ವರ್ಷಾ ಅವರ ಸೂಚನೆಯಂತೆ ಹಣ ಪಡೆದಿದ್ದೇನೆ ಎಂದು ರಮೇಶ್‌ ತಿಳಿಸಿದ್ದು, ವಿಶೇಷ ತಹಶೀಲ್ದಾರ್‌ ಕಚೇರಿಗೆ ಬಂದ ರಮೇಶ್‌, ಮೇಡಂ ವ್ಯವಹಾರ ಮುಗಿದಿದೆ ಎಂದು ಹೇಳಿದಾಗ ಹಣ ಕೊಡು ಎಂದು ವರ್ಷಾ 5 ಲಕ್ಷ ಪಡೆದುಕೊಂಡರು ಎಂದು ಹೇಳಲಾಗಿದೆ.

ಭ್ರಷ್ಟರ ಬೇಟೆ

Recent Posts

ಟಿಪ್ಪರ್ ಡಿಕ್ಕಿ, ನಂತರ ಗುಂಡಿನ ದಾಳಿ: ವಿಜಯಪುರದಲ್ಲಿ ಸಿನಿಮಾ ಶೈಲಿಯ ಹತ್ಯೆ ಪ್ರಕರಣ

ವಿಜಯಪುರ ಜಿಲ್ಲೆಯಲ್ಲಿ ರಿಯಲ್ ಎಸ್ಟೇಟ್ ಏಜೆಂಟ್ ಹಾಗೂ ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ರಾಜು ಬಾಪು ಖರಿ (48) ಅವರನ್ನು…

7 hours ago

ವಿದೇಶಿ ಮಹಿಳೆ ಮೇಲೆ ದೌರ್ಜನ್ಯ ಆರೋಪ: ಕೊಡಗಿನಲ್ಲಿ ಹೋಂಸ್ಟೇ ಪರವಾನಗಿ ರದ್ದು

ಅಮೆರಿಕದ ಪ್ರಜೆಯ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾಡಳಿತ ತುರ್ತು ಕ್ರಮ ಕೈಗೊಂಡಿದ್ದು, ಕುಟ್ಟಾ ಗ್ರಾಮದಲ್ಲಿರುವ…

7 hours ago

WFH ಕೇಳಿದ ಮಹಿಳೆಗೆ HR ಶಾಕ್: ‘ಸಿಇಒ ಮನೋಭಾವ ಬೇಕು’ ಹೇಳಿ ಕರೆ ಕಟ್!

ಉದ್ಯೋಗಕ್ಕೆ ಅರ್ಜಿ ಸಲ್ಲಿಸುವಾಗ ಕೆಲಸದ ಸಮಯ, ದಿನಗಳು ಮತ್ತು ಸೌಲಭ್ಯಗಳ ಬಗ್ಗೆ ಪ್ರಶ್ನಿಸುವುದು ಸಾಮಾನ್ಯ. ಆದರೆ ಇಂತಹ ಸರಳ ಪ್ರಶ್ನೆಯೇ…

7 hours ago

ನಕಲಿ ದಾಖಲೆಗಳಿಂದ 9 ಎಕರೆ ಸರ್ಕಾರಿ ಜಮೀನು ಹಗರಣ: ನಿವೃತ್ತ ತಹಶೀಲ್ದಾರ್ ಸೇರಿ ನಾಲ್ವರ ವಿರುದ್ಧ ಪ್ರಕರಣ

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನಲ್ಲಿ ಭಾರೀ ಭೂ ಹಗರಣೊಂದು ಬೆಳಕಿಗೆ ಬಂದಿದೆ. ನಕಲಿ ದಾಖಲೆಗಳನ್ನು ಸೃಷ್ಟಿಸಿ ಸುಮಾರು 9 ಎಕರೆ…

7 hours ago

₹300 ಲಂಚಕ್ಕೆ ‘ಪರೀಕ್ಷೆ ಮಾರಾಟ’: ಪರೀಕ್ಷಾ ಕೇಂದ್ರದಲ್ಲಿ ಮೊಬೈಲ್ ಬಳಕೆ, ಶಿಕ್ಷಣ ವ್ಯವಸ್ಥೆಗೆ ಕಳಂಕ

ಮಹಾರಾಷ್ಟ್ರದ ಚಂದ್ರಾಪುರದಲ್ಲಿರುವ ಸರ್ವೋದಯ ಕಾಲೇಜಿನಲ್ಲಿ ನಡೆದ ಪರೀಕ್ಷಾ ಅಕ್ರಮವು ಶಿಕ್ಷಣ ವ್ಯವಸ್ಥೆಯ ನೈತಿಕತೆಯ ಮೇಲೆಯೇ ಪ್ರಶ್ನೆ ಎಬ್ಬಿಸಿದೆ. ಕವಿಕುಲಗುರು ಕಾಳಿದಾಸ…

7 hours ago

ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಮಗನ ಹತ್ಯೆ: 60 ವರ್ಷದ ತಾಯಿ ಬಂಧನ

ಮೈಸೂರು ನಗರದ ನಜರಬಾದ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಅಪರಿಚಿತ ವ್ಯಕ್ತಿಯ ಕೊಲೆ ಪ್ರಕರಣವನ್ನು ಪೊಲೀಸರು ಭೇದಿಸಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ…

22 hours ago