Latest

ಮೊದಲ ಸಚಿವ ಸಂಪುಟದಲ್ಲಿ 5 ಭರವಸೆ ಈಡೇರಿಸ್ತೇವೆ -ರಾಹುಲ್ ಗಾಂಧಿ

ಕರ್ನಾಟಕ ವಿಧಾನಸಭಾ ಚುನಾವಣಾ ಫಲಿತಾಂಶದಲ್ಲಿ ಕಾಂಗ್ರೆಸ್ನ ದೊಡ್ಡ ಗೆಲುವಿನ ಬಗ್ಗೆ ಪಕ್ಷದ ನಾಯಕ ರಾಹುಲ್ ಗಾಂಧಿ ಹೇಳಿಕೆ ನೀಡಿದ್ದಾರೆ. ಕರ್ನಾಟಕದ ಜನತೆಗೆ, ಕಾರ್ಯಕರ್ತರಿಗೆ, ನಾಯಕರಿಗೆ ಹಾಗೂ ಕರ್ನಾಟಕದಲ್ಲಿ ದುಡಿದ ಎಲ್ಲ ನಾಯಕರನ್ನ ಅಭಿನಂದಿಸುತ್ತೇನೆ ಎಂದು ಹೇಳಿದರು. ಗೆಲುವಿನ ಕುರಿತು ಮಾತು ಮುಂದುವರೆಸಿದ ರಾಹುಲ್, ‘ಬಡವರ ಶಕ್ತಿ ಇತ್ತು, ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಬಡವರ ಜೊತೆಗಿದೆ. ಈ ದೇಶ ಪ್ರೀತಿಯನ್ನ ಇಷ್ಟಪಡುತ್ತದೆ ಎಂದು ಕರ್ನಾಟಕ ಹೇಳಿದೆ. ಕರ್ನಾಟಕದಲ್ಲಿ ದ್ವೇಷದ ಮಾರುಕಟ್ಟೆ ಮುಚ್ಚಿದೆ, ಪ್ರೀತಿಯ ಅಂಗಡಿಗಳು ತೆರೆದಿವೆ. ಮೊದಲ ಸಚಿವ ಸಂಪುಟದಲ್ಲಿ ಮೊದಲ ದಿನವೇ 5 ಭರವಸೆಗಳನ್ನ ಈಡೇರಿಸುತ್ತೇವೆ’ ಎಂದರು. ಅಂದ್ಹಾಗೆ, ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಕರ್ನಾಟಕದ ಜನತೆಗೆ 5 ಭರವಸೆಗಳನ್ನ ನೀಡಿದ್ದು, ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಎಲ್ಲ ಮಹಿಳೆಯರಿಗೆ ಉಚಿತ ಪ್ರಯಾಣ ಸೌಲಭ್ಯ ಕಲ್ಪಿಸಲಾಗುವುದು ಎಂದು ಕಾಂಗ್ರೆಸ್ ಹೇಳಿತ್ತು. ಇನ್ನು ಹೊಸ ಶಿಕ್ಷಣ ನೀತಿಯನ್ನು ರದ್ದುಪಡಿಸಿ ರಾಜ್ಯ ಶಿಕ್ಷಣ ನೀತಿ ಜಾರಿಗೆ ತರಲಾಗುವುದು.
63 ಗಡಿ ತಾಲೂಕುಗಳಲ್ಲಿ ಕನ್ನಡ ಭಾಷೆ ಮತ್ತು ಸಂಸ್ಕೃತಿಯನ್ನ ಅಭಿವೃದ್ಧಿ ಪಡಿಸಲಾಗುವುದು ಮತ್ತು ಎಲ್ಲಾ ಸಮುದಾಯಗಳ ಆಶಯ ಮತ್ತು ಆಕಾಂಕ್ಷೆಗಳಿಗೆ ಅನುಗುಣವಾಗಿ ಮೀಸಲಾತಿಯ ಮಿತಿಯನ್ನ 50% ರಿಂದ 75% ಕ್ಕೆ ಹೆಚ್ಚಿಸಲಾಗುವುದು ಎಂದು ಪಕ್ಷವು ಹೇಳಿತ್ತು.
ಮಹಿಳೆಯರು ಮತ್ತು ನಿರುದ್ಯೋಗಿಗಳಿಗೆ ಭತ್ಯೆ.! ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಕುಟುಂಬದ ಪ್ರತಿಯೊಬ್ಬ ಮಹಿಳೆಗೆ ಪ್ರತಿ ತಿಂಗಳು 2,000 ರೂಪಾಯಿ ಭತ್ಯೆ ನೀಡುವುದಾಗಿ ಭರವಸೆ ನೀಡಿತ್ತು. ಇದಲ್ಲದೇ ನಿರುದ್ಯೋಗಿ ಪದವೀಧರರಿಗೆ ಮಾಸಿಕ 3 ಸಾವಿರ ರೂ., ನಿರುದ್ಯೋಗಿ ಡಿಪ್ಲೋಮಾದಾರರಿಗೆ ಮಾಸಿಕ 1500 ರೂ.ಗಳನ್ನು ಎರಡು ವರ್ಷಗಳವರೆಗೆ ನೀಡಲಾಗುವುದು.
ರಾತ್ರಿ ಕರ್ತವ್ಯ ನಿರ್ವಹಿಸುವ ಪೊಲೀಸರಿಗೆ ಭತ್ಯೆ.! ಇದಲ್ಲದೇ ರಾತ್ರಿ ಕರ್ತವ್ಯ ನಿರ್ವಹಿಸುವ ಪೊಲೀಸ್ ಅಧಿಕಾರಿಗಳಿಗೆ ಪ್ರತಿ ತಿಂಗಳು 5000 ರೂ.ಗಳ ವಿಶೇಷ ಭತ್ಯೆ ನೀಡುವುದಾಗಿಯೂ ಘೋಷಿಸಲಾಗಿತ್ತು. ಇದೇ ವೇಳೆ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಬಿಜೆಪಿ ಜಾರಿಗೆ ತಂದಿರುವ ಜನವಿರೋಧಿ ಕಾನೂನು ಹಾಗೂ ಎಲ್ಲ ಅನ್ಯಾಯದ ಕಾನೂನುಗಳನ್ನ ರದ್ದುಗೊಳಿಸುವುದಾಗಿಯೂ ಘೋಷಿಸಿದರು.

ಭ್ರಷ್ಟರ ಬೇಟೆ

Recent Posts

ಅಗ್ನಿಶಾಮಕ ದಳದಲ್ಲಿ 1,828 ಹುದ್ದೆಗಳ ಭರ್ತಿ: ಯುವಕರಿಗೆ ಭರ್ಜರಿ ಸರ್ಕಾರಿ ಉದ್ಯೋಗ ಅವಕಾಶ

ರಾಜ್ಯದಲ್ಲಿ ಸರ್ಕಾರಿ ಉದ್ಯೋಗಕ್ಕಾಗಿ ಕಾಯುತ್ತಿರುವ ಯುವಕರಿಗೆ ಸುವರ್ಣಾವಕಾಶ ಒದಗಿಬಂದಿದೆ. Karnataka State Fire and Emergency Services (KSFES) ಇಲಾಖೆಯು…

28 minutes ago

ಮಾಜಿ ಪ್ರಧಾನಿ ದೇವೇಗೌಡರಿಗೆ 1.25 ಕೋಟಿ ಮೌಲ್ಯದ ಐಷಾರಾಮಿ ಕಾರು: ರಾಜ್ಯ ಸರ್ಕಾರದಿಂದ ಗ್ರೀನ್ ಸಿಗ್ನಲ್

ಮಾಜಿ ಪ್ರಧಾನಿ ಹಾಗೂ ರಾಜ್ಯಸಭಾ ಸದಸ್ಯ H. D. Deve Gowda ಅವರಿಗೆ ರಾಜ್ಯ ಸರ್ಕಾರ ಐಷಾರಾಮಿ ಕಾರು ಖರೀದಿಸಲು…

34 minutes ago

ಪತಿಯ ಅಕ್ರಮ ಸಂಬಂಧದ ರಹಸ್ಯ ಬಯಲು ಮಾಡಲು ಸಾಕ್ಷ್ಯ ಸಂಗ್ರಹಿಸಿದ್ದ ಪತ್ನಿ ನಿಗೂಢ ಸಾವು: ಕೊಲೆ ಶಂಕೆ!

ದಾವಣಗೆರೆ ನಗರದ ದೇವರಾಜ ಅರಸು ಬಡಾವಣೆಯ ರೈಲ್ವೆ ಕ್ವಾರ್ಟರ್ಸ್‌ನಲ್ಲಿ ವಿವಾಹಿತೆಯೊಬ್ಬರ ನಿಗೂಢ ಸಾವು ಹಲವು ಅನುಮಾನಗಳಿಗೆ ಕಾರಣವಾಗಿದೆ. ಮೃತರನ್ನು 26…

46 minutes ago

ನಾಳೆ 2ನೇ ಮದುವೆಯಾಗಬೇಕಿದ್ದ ಶಿರಸಿ ಆಯುರ್ವೇದ ವೈದ್ಯರ ಕ್ರೂರ ಹತ್ಯೆ..!

ಶಿರಸಿ: ನಗರದ ಕೆಎಚ್‌ಬಿ ಕಾಲೋನಿ ಪ್ರದೇಶದಲ್ಲಿ ಬೆಚ್ಚಿಬೀಳಿಸುವ ಹತ್ಯೆ ಪ್ರಕರಣ ಬೆಳಕಿಗೆ ಬಂದಿದೆ. ಖ್ಯಾತ ಆಯುರ್ವೇದ ವೈದ್ಯರಾದ ಡಾ. ರಮೇಶ್…

12 hours ago

ಭಟ್ಕಳದಲ್ಲಿ ಹೊಟ್ಟೆನೋವಿಗೆ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆ ಅನುಮಾನಾಸ್ಪದ ಸಾವು

ಭಟ್ಕಳ: ಮುರುಡೇಶ್ವರ ಸಮೀಪದ ಮುಡಶಿರಾಲಿ ಗ್ರಾಮದ 42 ವರ್ಷದ ಮಾಲತಿ ನಾಗರಾಜ ನಾಯ್ಕ ಅವರು ಹೊಟ್ಟೆನೋವಿನ ಹಿನ್ನೆಲೆಯಲ್ಲಿ ಚಿಕಿತ್ಸೆ ಪಡೆಯುವ…

15 hours ago

ಪ್ರೀತಿ ಹೆಸರಿನಲ್ಲಿ ಕಿರುಕುಳ: ಯುವತಿ-ಪೋಷಕರಿಂದ ಯುವಕನಿಗೆ ಸಾರ್ವಜನಿಕವಾಗಿ ಚಪ್ಪಲಿ ಸೇವೆ..!

ಹುಬ್ಬಳ್ಳಿ: ಪ್ರೀತಿ ಹೆಸರಿನಲ್ಲಿ ಯುವತಿಗೆ ನಿರಂತರ ಕಿರುಕುಳ ನೀಡುತ್ತಿದ್ದ ಯುವಕನಿಗೆ, ಯುವತಿ ಮತ್ತು ಆಕೆಯ ಪೋಷಕರು ಸಾರ್ವಜನಿಕರ ಮುಂದೆ ಚಪ್ಪಲಿಯಿಂದ…

16 hours ago