ಬೆಂಗಳೂರು ನಗರದಲ್ಲಿ ದನದ ಕರುಗಳ ಮಾಂಸವನ್ನು ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಭಾರೀ ಪ್ರಮಾಣದ ಮಾಂಸ ಸಾಗಾಟ ಪ್ರಕರಣವೊಂದು ಬೆಳಕಿಗೆ ಬಂದಿದೆ. ಈ ಪ್ರಕರಣದಲ್ಲಿ ರಾಷ್ಟ್ರ ರಕ್ಷಣಾ ಪಡೆಯ ನಾಯಕ ಪುನೀತ್ ಕೆರೆಹಳ್ಳಿ ಮತ್ತು ಅವರ ಬೆಂಬಲಿಗರು ಪ್ರಮುಖ ಪಾತ್ರವಹಿಸಿದ್ದಾರೆ.
ಶನಿವಾರ ಬೆಳಗಿನ ಜಾವ, ದಾಸರಹಳ್ಳಿ ಸಮೀಪ ಕುದೂರಿನಿಂದ ಶಿವಾಜಿನಗರದ ಮಾಂಸದ ಮಾರುಕಟ್ಟೆಯತ್ತ ಸಾಗುತ್ತಿದ್ದ ಬುಲೆರೋ ವಾಹನವೊಂದನ್ನು ಪುನೀತ್ ಕೆರೆಹಳ್ಳಿ ನೇತೃತ್ವದ ತಂಡ ತಡೆದು ನಿಲ್ಲಿಸಿತು. ವಾಹನ ಪರಿಶೀಲನೆಯ ವೇಳೆ ಸುಮಾರು 500 ಕೆ.ಜಿ.ಗಿಂತ ಹೆಚ್ಚು ದನದ ಮಾಂಸ ಪತ್ತೆಯಾಗಿದೆ. ಸ್ಥಳಕ್ಕೆ ತಕ್ಷಣವೇ ಪೀಣ್ಯ ಪೊಲೀಸರು ಭೇಟಿ ನೀಡಿ ವಾಹನ ಮತ್ತು ಮಾಂಸವನ್ನು ವಶಕ್ಕೆ ಪಡೆದಿದ್ದಾರೆ.
ಪ್ರಾಥಮಿಕ ತನಿಖೆಯಲ್ಲಿ, ಈ ಅಕ್ರಮ ಮಾಂಸ ಸಾಗಾಟವು ಪ್ರತಿ ವಾರ ಮೂರು ಬಾರಿ ನಡೆಯುತ್ತಿದ್ದುದಾಗಿ ವಾಹನದ ಚಾಲಕ ಒಪ್ಪಿಕೊಂಡಿದ್ದಾನೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಂಸದ ಮಾದರಿಗಳನ್ನು ಲ್ಯಾಬ್ಗೆ ಕಳುಹಿಸಲಾಗಿದ್ದು, ಇದು ಧನದ ಕರುಗಳ ಮಾಂಸವೋ ಎಂಬುದು ಪರೀಕ್ಷೆ ಬಳಿಕ ಗೊತ್ತಾಗಲಿದೆ.
ಈ ಘಟನೆಯ ನಂತರ ಕರ್ನಾಟಕ ಗೋವು ವಧೆ ನಿಷೇಧ ಕಾಯ್ದೆ, 2020ರ ಅಡಿಯಲ್ಲಿ ಪೊಲೀಸ್ ತನಿಖೆ ಆರಂಭವಾಗಿದ್ದು, ವಾಹನ ಚಾಲಕನ ವಿರುದ್ಧ ಕಾನೂನು ಕ್ರಮ ಜರುಗಿಸುವ ತಯಾರಿ ನಡೆದಿದೆ.
ಇದರಿಂದ ಶಿವಾಜಿನಗರ ಮಾರುಕಟ್ಟೆಯಲ್ಲಿ ಮಾಂಸದ ವಹಿವಾಟು ತಾತ್ಕಾಲಿಕವಾಗಿ ಅಸ್ತವ್ಯಸ್ತಗೊಂಡಿದ್ದು, ವ್ಯಾಪಾರಿಗಳ ನಡುವೆ ಆತಂಕವೂ ಮನೆಮಾಡಿದೆ. ನಿಯಮ ಉಲ್ಲಂಘನೆಗೆ ಸಂಬಂಧಿಸಿದ ಈ ಪ್ರಕರಣವು ನಗರದಲ್ಲಿ ಅಕ್ರಮ ಮಾಂಸ ಸಾಗಾಟದ ಜಾಲವೊಂದಿದೆ ಎಂಬ ಶಂಕೆಗೂ ಹಬ್ಬಿಸಿದೆ.
ಪೊಲೀಸರು ಮುಂದಿನ ದಿನಗಳಲ್ಲಿ ಹೆಚ್ಚಿನ ಆರೋಪಿಗಳನ್ನು ಬಂಧಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.
ಹುಬ್ಬಳ್ಳಿಯಲ್ಲಿ ರೀಲ್ಸ್ ಮಾಡುವ ಹುಚ್ಚಾಟದಿಂದ ಸಂಭವಿಸಿದ ಭೀಕರ ಅಪಘಾತದಲ್ಲಿ 15 ವರ್ಷದ ಬಾಲಕ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರನ್ನು…
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಗಂಭೀರ ಪ್ರಕರಣ ಬೆಳಕಿಗೆ ಬಂದಿದೆ. ಮೂಡಬಿದಿರೆ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಆಗಿದ್ದ ಸಂದೇಶ್…
Iran-Israel ಸಂಘರ್ಷದ ಪರೋಕ್ಷ ಪರಿಣಾಮವಾಗಿ ರಾಜ್ಯದಲ್ಲಿ ಬಿಸ್ಕೆಟ್ ಅಭಾವದ ಭೀತಿ ಎದುರಾಗಿದೆ. ವಿಶೇಷವಾಗಿ ಮಕ್ಕಳಿಗೆ ಹೆಚ್ಚು ಬಳಸುವ Parle-G ಬಿಸ್ಕೆಟ್ಗಳ…
ಧಾರವಾಡ ಜಿಲ್ಲೆಯ Navalgund ತಾಲೂಕಿನ ಒಂದು ಗ್ರಾಮದಲ್ಲಿ ಗಂಭೀರ ಘಟನೆ ಬೆಳಕಿಗೆ ಬಂದಿದೆ. ಶಾಲೆಯ ಮುಖ್ಯಶಿಕ್ಷಕನ ವಿರುದ್ಧ 10 ವರ್ಷದ…
ತುಮಕೂರು ಜಿಲ್ಲೆಯ Pavagada ಪಟ್ಟಣದಲ್ಲಿ ಹೃದಯ ಕಲುಕುವ ಘಟನೆ ನಡೆದಿದೆ. ಮೇಲಾಧಿಕಾರಿಗಳ ಕಿರುಕುಳದಿಂದ ಮನನೊಂದು ಅಧಿಕಾರಿಯೊಬ್ಬರು ಕಚೇರಿಯಲ್ಲೇ ಆತ್ಮಹತ್ಯೆ ಮಾಡಿಕೊಂಡಿರುವುದು…
ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಒಂದು ವಿಡಿಯೋ ಇದೀಗ ಭಾರೀ ಚರ್ಚೆಗೆ ಕಾರಣವಾಗಿದೆ. X ನಲ್ಲಿ ವೈರಲ್ ಆಗಿರುವ ಈ ವಿಡಿಯೋ…