Latest

ಪೀಣ್ಯದಲ್ಲಿ 500 ಕೆಜಿ ಅಕ್ರಮ ದನದ ಮಾಂಸ ವಶಕ್ಕೆ.

ಬೆಂಗಳೂರು ನಗರದಲ್ಲಿ ದನದ ಕರುಗಳ ಮಾಂಸವನ್ನು ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಭಾರೀ ಪ್ರಮಾಣದ ಮಾಂಸ ಸಾಗಾಟ ಪ್ರಕರಣವೊಂದು ಬೆಳಕಿಗೆ ಬಂದಿದೆ. ಈ ಪ್ರಕರಣದಲ್ಲಿ ರಾಷ್ಟ್ರ ರಕ್ಷಣಾ ಪಡೆಯ ನಾಯಕ ಪುನೀತ್ ಕೆರೆಹಳ್ಳಿ ಮತ್ತು ಅವರ ಬೆಂಬಲಿಗರು ಪ್ರಮುಖ ಪಾತ್ರವಹಿಸಿದ್ದಾರೆ.

ಶನಿವಾರ ಬೆಳಗಿನ ಜಾವ, ದಾಸರಹಳ್ಳಿ ಸಮೀಪ ಕುದೂರಿನಿಂದ ಶಿವಾಜಿನಗರದ ಮಾಂಸದ ಮಾರುಕಟ್ಟೆಯತ್ತ ಸಾಗುತ್ತಿದ್ದ ಬುಲೆರೋ ವಾಹನವೊಂದನ್ನು ಪುನೀತ್ ಕೆರೆಹಳ್ಳಿ ನೇತೃತ್ವದ ತಂಡ ತಡೆದು ನಿಲ್ಲಿಸಿತು. ವಾಹನ ಪರಿಶೀಲನೆಯ ವೇಳೆ ಸುಮಾರು 500 ಕೆ.ಜಿ.ಗಿಂತ ಹೆಚ್ಚು ದನದ ಮಾಂಸ ಪತ್ತೆಯಾಗಿದೆ. ಸ್ಥಳಕ್ಕೆ ತಕ್ಷಣವೇ ಪೀಣ್ಯ ಪೊಲೀಸರು ಭೇಟಿ ನೀಡಿ ವಾಹನ ಮತ್ತು ಮಾಂಸವನ್ನು ವಶಕ್ಕೆ ಪಡೆದಿದ್ದಾರೆ.

ಪ್ರಾಥಮಿಕ ತನಿಖೆಯಲ್ಲಿ, ಈ ಅಕ್ರಮ ಮಾಂಸ ಸಾಗಾಟವು ಪ್ರತಿ ವಾರ ಮೂರು ಬಾರಿ ನಡೆಯುತ್ತಿದ್ದುದಾಗಿ ವಾಹನದ ಚಾಲಕ ಒಪ್ಪಿಕೊಂಡಿದ್ದಾನೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಂಸದ ಮಾದರಿಗಳನ್ನು ಲ್ಯಾಬ್‌ಗೆ ಕಳುಹಿಸಲಾಗಿದ್ದು, ಇದು ಧನದ ಕರುಗಳ ಮಾಂಸವೋ ಎಂಬುದು ಪರೀಕ್ಷೆ ಬಳಿಕ ಗೊತ್ತಾಗಲಿದೆ.

ಈ ಘಟನೆಯ ನಂತರ ಕರ್ನಾಟಕ ಗೋವು ವಧೆ ನಿಷೇಧ ಕಾಯ್ದೆ, 2020ರ ಅಡಿಯಲ್ಲಿ ಪೊಲೀಸ್ ತನಿಖೆ ಆರಂಭವಾಗಿದ್ದು, ವಾಹನ ಚಾಲಕನ ವಿರುದ್ಧ ಕಾನೂನು ಕ್ರಮ ಜರುಗಿಸುವ ತಯಾರಿ ನಡೆದಿದೆ.

ಇದರಿಂದ ಶಿವಾಜಿನಗರ ಮಾರುಕಟ್ಟೆಯಲ್ಲಿ ಮಾಂಸದ ವಹಿವಾಟು ತಾತ್ಕಾಲಿಕವಾಗಿ ಅಸ್ತವ್ಯಸ್ತಗೊಂಡಿದ್ದು, ವ್ಯಾಪಾರಿಗಳ ನಡುವೆ ಆತಂಕವೂ ಮನೆಮಾಡಿದೆ. ನಿಯಮ ಉಲ್ಲಂಘನೆಗೆ ಸಂಬಂಧಿಸಿದ ಈ ಪ್ರಕರಣವು ನಗರದಲ್ಲಿ ಅಕ್ರಮ ಮಾಂಸ ಸಾಗಾಟದ ಜಾಲವೊಂದಿದೆ ಎಂಬ ಶಂಕೆಗೂ ಹಬ್ಬಿಸಿದೆ.

ಪೊಲೀಸರು ಮುಂದಿನ ದಿನಗಳಲ್ಲಿ ಹೆಚ್ಚಿನ ಆರೋಪಿಗಳನ್ನು ಬಂಧಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

nazeer ahamad

Recent Posts

ಮುಖ್ಯಮಂತ್ರಿಗಳ ಸೂಚನೆ ಕಟ್ಟುನಿಟ್ಟಾಗಿ ಪಾಲಿಸಿ: ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ

ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…

10 hours ago

ಬಸ್‌ನಲ್ಲಿ ಅಸಭ್ಯವಾಗಿ ಯುತಿಯ ಮೈ ಮುಟ್ಟಿ ಕಿರುಕುಳ; ಧೈರ್ಯವಾಗಿ ವಿಡಿಯೋ ಮಾಡಿದ ಯುವತಿ, ಆರೋಪಿಯನ್ನು ಕೆಳಗಿಳಿಸಿದ ಕಂಡಕ್ಟರ್!

ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…

10 hours ago

₹65 ಸಾವಿರ ಸಂಬಳದ ಮುಖ್ಯೋಪಾಧ್ಯಾಯರಿಗೆ ಶಾಲೆಗೆ ಬರಲು ಸಮಯವಿಲ್ಲ; ₹4,500ಕ್ಕೆ ಯುವತಿಯನ್ನು ನೇಮಿಸಿ ಪಾಠ ಮಾಡಿಸಿದ ‘ಸರ್ಕಾರಿ ಶಾಲೆ’ ವಂಚನೆ!

ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…

10 hours ago

ಇನ್‌ಸ್ಟಾಗ್ರಾಮ್ ಕ್ಯೂಟ್ ಕಪಲ್ ಕಥೆಗೆ ಬಿಗ್ ಟ್ವಿಸ್ಟ್: ಕೋಟ್ಯಾಧಿಪತಿ ಪತ್ನಿ ಕಂಡಕ್ಟರ್ ಜೊತೆ ಪರಾರಿ ಆರೋಪ!

ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…

10 hours ago

ಟೊರೊಂಟೊದಲ್ಲಿ ಭಾರತೀಯ ಮೂಲದ ಯುವತಿ ಹತ್ಯೆ: 7 ತಿಂಗಳ ಬಳಿಕ ಆಪ್ತ ವ್ಯಕ್ತಿ ಅರೆಸ್ಟ್‌!

ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…

1 day ago

ಇನ್‌ಸ್ಟಾಗ್ರಾಂ ಪ್ರೇಮಿಗಾಗಿ 6 ತಿಂಗಳ ಕಂದಮ್ಮನನ್ನೇ ಕೊಲ್ಲಿಸಿದ ತಾಯಿ! ಮೀರಾಟ್‌ನಲ್ಲಿ ಬೆಚ್ಚಿಬೀಳಿಸಿದ ಘಟನೆ

ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…

1 day ago