Latest

ಪೀಣ್ಯದಲ್ಲಿ 500 ಕೆಜಿ ಅಕ್ರಮ ದನದ ಮಾಂಸ ವಶಕ್ಕೆ.

ಬೆಂಗಳೂರು ನಗರದಲ್ಲಿ ದನದ ಕರುಗಳ ಮಾಂಸವನ್ನು ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಭಾರೀ ಪ್ರಮಾಣದ ಮಾಂಸ ಸಾಗಾಟ ಪ್ರಕರಣವೊಂದು ಬೆಳಕಿಗೆ ಬಂದಿದೆ. ಈ ಪ್ರಕರಣದಲ್ಲಿ ರಾಷ್ಟ್ರ ರಕ್ಷಣಾ ಪಡೆಯ ನಾಯಕ ಪುನೀತ್ ಕೆರೆಹಳ್ಳಿ ಮತ್ತು ಅವರ ಬೆಂಬಲಿಗರು ಪ್ರಮುಖ ಪಾತ್ರವಹಿಸಿದ್ದಾರೆ.

ಶನಿವಾರ ಬೆಳಗಿನ ಜಾವ, ದಾಸರಹಳ್ಳಿ ಸಮೀಪ ಕುದೂರಿನಿಂದ ಶಿವಾಜಿನಗರದ ಮಾಂಸದ ಮಾರುಕಟ್ಟೆಯತ್ತ ಸಾಗುತ್ತಿದ್ದ ಬುಲೆರೋ ವಾಹನವೊಂದನ್ನು ಪುನೀತ್ ಕೆರೆಹಳ್ಳಿ ನೇತೃತ್ವದ ತಂಡ ತಡೆದು ನಿಲ್ಲಿಸಿತು. ವಾಹನ ಪರಿಶೀಲನೆಯ ವೇಳೆ ಸುಮಾರು 500 ಕೆ.ಜಿ.ಗಿಂತ ಹೆಚ್ಚು ದನದ ಮಾಂಸ ಪತ್ತೆಯಾಗಿದೆ. ಸ್ಥಳಕ್ಕೆ ತಕ್ಷಣವೇ ಪೀಣ್ಯ ಪೊಲೀಸರು ಭೇಟಿ ನೀಡಿ ವಾಹನ ಮತ್ತು ಮಾಂಸವನ್ನು ವಶಕ್ಕೆ ಪಡೆದಿದ್ದಾರೆ.

ಪ್ರಾಥಮಿಕ ತನಿಖೆಯಲ್ಲಿ, ಈ ಅಕ್ರಮ ಮಾಂಸ ಸಾಗಾಟವು ಪ್ರತಿ ವಾರ ಮೂರು ಬಾರಿ ನಡೆಯುತ್ತಿದ್ದುದಾಗಿ ವಾಹನದ ಚಾಲಕ ಒಪ್ಪಿಕೊಂಡಿದ್ದಾನೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಂಸದ ಮಾದರಿಗಳನ್ನು ಲ್ಯಾಬ್‌ಗೆ ಕಳುಹಿಸಲಾಗಿದ್ದು, ಇದು ಧನದ ಕರುಗಳ ಮಾಂಸವೋ ಎಂಬುದು ಪರೀಕ್ಷೆ ಬಳಿಕ ಗೊತ್ತಾಗಲಿದೆ.

ಈ ಘಟನೆಯ ನಂತರ ಕರ್ನಾಟಕ ಗೋವು ವಧೆ ನಿಷೇಧ ಕಾಯ್ದೆ, 2020ರ ಅಡಿಯಲ್ಲಿ ಪೊಲೀಸ್ ತನಿಖೆ ಆರಂಭವಾಗಿದ್ದು, ವಾಹನ ಚಾಲಕನ ವಿರುದ್ಧ ಕಾನೂನು ಕ್ರಮ ಜರುಗಿಸುವ ತಯಾರಿ ನಡೆದಿದೆ.

ಇದರಿಂದ ಶಿವಾಜಿನಗರ ಮಾರುಕಟ್ಟೆಯಲ್ಲಿ ಮಾಂಸದ ವಹಿವಾಟು ತಾತ್ಕಾಲಿಕವಾಗಿ ಅಸ್ತವ್ಯಸ್ತಗೊಂಡಿದ್ದು, ವ್ಯಾಪಾರಿಗಳ ನಡುವೆ ಆತಂಕವೂ ಮನೆಮಾಡಿದೆ. ನಿಯಮ ಉಲ್ಲಂಘನೆಗೆ ಸಂಬಂಧಿಸಿದ ಈ ಪ್ರಕರಣವು ನಗರದಲ್ಲಿ ಅಕ್ರಮ ಮಾಂಸ ಸಾಗಾಟದ ಜಾಲವೊಂದಿದೆ ಎಂಬ ಶಂಕೆಗೂ ಹಬ್ಬಿಸಿದೆ.

ಪೊಲೀಸರು ಮುಂದಿನ ದಿನಗಳಲ್ಲಿ ಹೆಚ್ಚಿನ ಆರೋಪಿಗಳನ್ನು ಬಂಧಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

nazeer ahamad

Recent Posts

ಮೊರಾರ್ಜಿ ವಸತಿ ಶಾಲೆಯ ಬಾಲಕಿ ಗರ್ಭಿಣಿ! ವರ್ಷಪೂರ್ತಿ ಅತ್ಯಾಚಾರ: ಕಾಮುಕನ ವಿರುದ್ಧ ಪೋಕ್ಸೋ ಕೇಸ್

ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ದಿಬ್ಬೂರಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮನಕಲುಕುವ ಘಟನೆ ಬೆಳಕಿಗೆ ಬಂದಿದ್ದು, ಮೊರಾರ್ಜಿ ವಸತಿ ಶಾಲೆಯಲ್ಲಿ…

3 hours ago

ಮನೆ ಮಾಲೀಕರಿಗೇ ಶಾಕ್ ಕೊಟ್ಟ ಬಾಡಿಗೆದಾರರು! ಮನೆ ಖಾಲಿ ಇದ್ದ ವೇಳೆ 45 ಗ್ರಾಂ ಚಿನ್ನ ದೋಚಿದ ದಂಪತಿ ಅರೆಸ್ಟ್

ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಆವರ್ತಿ ಗ್ರಾಮದಲ್ಲಿ ನಿವೃತ್ತ ಶಿಕ್ಷಕರ ಮನೆಯಲ್ಲಿ ನಡೆದಿದ್ದ ಕಳ್ಳತನ ಪ್ರಕರಣವನ್ನು ಬೈಲುಕೊಪ್ಪ ಪೊಲೀಸರು ಭೇದಿಸಿದ್ದು,…

3 hours ago

ಅಸ್ಸಾಂಗೆ ಮಾಹಿತಿ ನೀಡದೆ ತೆರಳಿದ ಪ್ರಕರಣ: ಹುಳಿಯಾರು ಠಾಣೆಯ ಮೂವರು ಪೊಲೀಸ್ ಸಿಬ್ಬಂದಿ ಅಮಾನತು

ತುಮಕೂರು ಜಿಲ್ಲೆಯ ಹುಳಿಯಾರು ಪೊಲೀಸ್ ಠಾಣೆಯ ಪಿಎಸ್ಐ ಸೇರಿದಂತೆ ಮೂವರು ಪೊಲೀಸ್ ಸಿಬ್ಬಂದಿಯನ್ನು ಕರ್ತವ್ಯ ಲೋಪದ ಆರೋಪದಡಿ ಅಮಾನತುಗೊಳಿಸಲಾಗಿದೆ. ವಂಚನೆ…

13 hours ago

ರಾಜಾಜಿನಗರದಲ್ಲಿ ಭೀಕರ ಅವಘಡ: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರದ ಕೊಂಬೆ, ಸವಾರ ಕೋಮಾದಲ್ಲಿ

ಬೆಂಗಳೂರು ನಗರದಲ್ಲಿ ರಸ್ತೆ ಬದಿಯ ಅಪಾಯಕಾರಿ ಮರಗಳ ನಿರ್ವಹಣೆಯ ಕೊರತೆಯಿಂದ ಮತ್ತೊಂದು ಗಂಭೀರ ಅವಘಡ ಸಂಭವಿಸಿದೆ. ರಾಜಾಜಿನಗರದ ರಾಮಮಂದಿರ ರಸ್ತೆಯಲ್ಲಿ…

13 hours ago

ವೈರಲ್ ವಿಡಿಯೋ ಕುರಿತು ಸ್ಪಷ್ಟನೆ: ಮಗುವಿಗೆ ಹೊಡೆದ ಮಹಿಳೆ ಅಂಗನವಾಡಿ ಕಾರ್ಯಕರ್ತೆ ಅಲ್ಲ, ಮಗುವಿನ ತಾಯಿಯೇ ಎಂಬ ಮಾಹಿತಿ

ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಪುಟ್ಟ ಮಗುವಿಗೆ ಮಹಿಳೆಯೊಬ್ಬರು ಕಾಲಿನಿಂದ ಒದ್ದಿರುವ ವಿಡಿಯೋ ವೈರಲ್ ಆಗಿ ಭಾರೀ ಆಕ್ರೋಶಕ್ಕೆ ಕಾರಣವಾಗಿತ್ತು. ವಿಡಿಯೋವನ್ನು…

13 hours ago

ವೃದ್ಧ ದೂರುದಾರನ ಎದುರು ಮೇಜಿನ ಮೇಲೆ ಕಾಲು: ಮಹಿಳಾ ಕಾನ್‌ಸ್ಟೇಬಲ್ ಅಮಾನತು, ವೈರಲ್ ಫೋಟೋಗೆ ಇಲಾಖೆ ಕಂಗಾಲು

ರಾಜಸ್ಥಾನದ ಡುಂಗರಪುರ ಜಿಲ್ಲೆಯ ಬಿಚ್ಚಿವಾಡ ಪೊಲೀಸ್ ಠಾಣೆಯಲ್ಲಿ ನಡೆದ ಘಟನೆಯೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ವೃದ್ಧ ದೂರುದಾರನ…

13 hours ago