ಬೆಂಗಳೂರು ನಗರದಲ್ಲಿ ದನದ ಕರುಗಳ ಮಾಂಸವನ್ನು ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಭಾರೀ ಪ್ರಮಾಣದ ಮಾಂಸ ಸಾಗಾಟ ಪ್ರಕರಣವೊಂದು ಬೆಳಕಿಗೆ ಬಂದಿದೆ. ಈ ಪ್ರಕರಣದಲ್ಲಿ ರಾಷ್ಟ್ರ ರಕ್ಷಣಾ ಪಡೆಯ ನಾಯಕ ಪುನೀತ್ ಕೆರೆಹಳ್ಳಿ ಮತ್ತು ಅವರ ಬೆಂಬಲಿಗರು ಪ್ರಮುಖ ಪಾತ್ರವಹಿಸಿದ್ದಾರೆ.
ಶನಿವಾರ ಬೆಳಗಿನ ಜಾವ, ದಾಸರಹಳ್ಳಿ ಸಮೀಪ ಕುದೂರಿನಿಂದ ಶಿವಾಜಿನಗರದ ಮಾಂಸದ ಮಾರುಕಟ್ಟೆಯತ್ತ ಸಾಗುತ್ತಿದ್ದ ಬುಲೆರೋ ವಾಹನವೊಂದನ್ನು ಪುನೀತ್ ಕೆರೆಹಳ್ಳಿ ನೇತೃತ್ವದ ತಂಡ ತಡೆದು ನಿಲ್ಲಿಸಿತು. ವಾಹನ ಪರಿಶೀಲನೆಯ ವೇಳೆ ಸುಮಾರು 500 ಕೆ.ಜಿ.ಗಿಂತ ಹೆಚ್ಚು ದನದ ಮಾಂಸ ಪತ್ತೆಯಾಗಿದೆ. ಸ್ಥಳಕ್ಕೆ ತಕ್ಷಣವೇ ಪೀಣ್ಯ ಪೊಲೀಸರು ಭೇಟಿ ನೀಡಿ ವಾಹನ ಮತ್ತು ಮಾಂಸವನ್ನು ವಶಕ್ಕೆ ಪಡೆದಿದ್ದಾರೆ.
ಪ್ರಾಥಮಿಕ ತನಿಖೆಯಲ್ಲಿ, ಈ ಅಕ್ರಮ ಮಾಂಸ ಸಾಗಾಟವು ಪ್ರತಿ ವಾರ ಮೂರು ಬಾರಿ ನಡೆಯುತ್ತಿದ್ದುದಾಗಿ ವಾಹನದ ಚಾಲಕ ಒಪ್ಪಿಕೊಂಡಿದ್ದಾನೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಂಸದ ಮಾದರಿಗಳನ್ನು ಲ್ಯಾಬ್ಗೆ ಕಳುಹಿಸಲಾಗಿದ್ದು, ಇದು ಧನದ ಕರುಗಳ ಮಾಂಸವೋ ಎಂಬುದು ಪರೀಕ್ಷೆ ಬಳಿಕ ಗೊತ್ತಾಗಲಿದೆ.
ಈ ಘಟನೆಯ ನಂತರ ಕರ್ನಾಟಕ ಗೋವು ವಧೆ ನಿಷೇಧ ಕಾಯ್ದೆ, 2020ರ ಅಡಿಯಲ್ಲಿ ಪೊಲೀಸ್ ತನಿಖೆ ಆರಂಭವಾಗಿದ್ದು, ವಾಹನ ಚಾಲಕನ ವಿರುದ್ಧ ಕಾನೂನು ಕ್ರಮ ಜರುಗಿಸುವ ತಯಾರಿ ನಡೆದಿದೆ.
ಇದರಿಂದ ಶಿವಾಜಿನಗರ ಮಾರುಕಟ್ಟೆಯಲ್ಲಿ ಮಾಂಸದ ವಹಿವಾಟು ತಾತ್ಕಾಲಿಕವಾಗಿ ಅಸ್ತವ್ಯಸ್ತಗೊಂಡಿದ್ದು, ವ್ಯಾಪಾರಿಗಳ ನಡುವೆ ಆತಂಕವೂ ಮನೆಮಾಡಿದೆ. ನಿಯಮ ಉಲ್ಲಂಘನೆಗೆ ಸಂಬಂಧಿಸಿದ ಈ ಪ್ರಕರಣವು ನಗರದಲ್ಲಿ ಅಕ್ರಮ ಮಾಂಸ ಸಾಗಾಟದ ಜಾಲವೊಂದಿದೆ ಎಂಬ ಶಂಕೆಗೂ ಹಬ್ಬಿಸಿದೆ.
ಪೊಲೀಸರು ಮುಂದಿನ ದಿನಗಳಲ್ಲಿ ಹೆಚ್ಚಿನ ಆರೋಪಿಗಳನ್ನು ಬಂಧಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.
ಅಟ್ರಾಸಿಟಿ ಪ್ರಕರಣದ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವ ವಿಚಾರದಲ್ಲಿ ಲಂಚ ಸ್ವೀಕರಿಸಿದ ಆರೋಪದಡಿ ಗುರುಮಠಕಲ್ ಪೊಲೀಸ್ ಠಾಣೆಯ ಸಿಪಿಐ ವೀರಣ್ಣ…
ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…
ಬೆಳ್ತಂಗಡಿ ಪಟ್ಟಣದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿದ್ದ ಕ್ಯಾಂಟಿನ್ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ…
ಭಟ್ಕಳ: ಸುಮಾರು ಒಂದು ವರ್ಷದಿನಿಂದ ಖಾಲಿಯಾಗಿದ್ದ ಭಟ್ಕಳ ಉಪ ವಿಭಾಗಾಧಿಕಾರಿ (ಎಸಿ) ಹುದ್ದೆಗೆ ಕೊನೆಗೂ ಸರ್ಕಾರ ಅಧಿಕಾರಿಯನ್ನು ನೇಮಕ ಮಾಡಿದ್ದು,…
ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾಗಿದ್ದ ಡಿ. ಸುಧಾಕರ್ (65) ಅವರು ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ…
ಸೋಶಿಯಲ್ ಮೀಡಿಯಾದಲ್ಲಿ ಆರಂಭವಾದ ಪ್ರೇಮಕಥೆಯೊಂದು ದುರಂತ ಅಂತ್ಯ ಕಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇನ್ಸ್ಟಾಗ್ರಾಮ್ ಮೂಲಕ ಪರಿಚಯವಾದ ಮಹಿಳೆಯೊಂದಿಗೆ ಲಿವ್-ಇನ್…