ದೇವಾಲಯದ ಹುಂಡಿಯ ಖಾತೆಯಲ್ಲಿದ್ದ 60 ಲಕ್ಷ ರೂ. ಹಣವನ್ನು ವೈಯಕ್ತಿಕ ಖಾತೆಗೆ ವರ್ಗಾಯಿಸಿಕೊಂಡ ಪ್ರಕರಣ ಬೆಳಕಿಗೆ ಬಿದ್ದಿದ್ದು, ಸಂಬಂಧಪಟ್ಟ ಅಧಿಕಾರಿಯನ್ನು ಸರ್ಕಾರ ಅಮಾನತು ಮಾಡಿದೆ.
ಸಾಸಲು ಹೋಬಳಿಯ ರೆವೆನ್ಯೂ ಇನ್ಸ್ಪೆಕ್ಟರ್ ಹೇಮಂತ್ ಕುಮಾರ್ ಎಂಬವರು ಈ ವಂಚನೆಗೆ ತೊಡಗಿರುವುದು ತನಿಖೆಯ ವೇಳೆ ಬಹಿರಂಗವಾಗಿದೆ. ಮುಜರಾಯಿ ಇಲಾಖೆಯಲ್ಲಿ ಕೇಸ್ ವರ್ಕರ್ ಆಗಿ ಸೇವೆ ಸಲ್ಲಿಸುತ್ತಿದ್ದಾಗಲೇ, ದೇವಸ್ಥಾನದ ಹುಂಡಿಯ ಹಣವನ್ನು ತನ್ನ ಪತ್ನಿಯ ಖಾತೆಗೆ ವರ್ಗಾಯಿಸಿರುವುದಾಗಿ ಮಾಹಿತಿ ಲಭ್ಯವಾಗಿದೆ.
ಹೆಚ್ಚುವರಿ ತನಿಖೆಯಲ್ಲಿ ಶಾಕಿಂಗ್ ಮಾಹಿತಿ
2023 ರಿಂದ ಇತ್ತೀಚೆಗೆ ಅಧಿಕಾರಿಯು ಇಬ್ಬರು ತಹಶೀಲ್ದಾರ್ ಮತ್ತು ಓರ್ವ ಕೇಸ್ ವರ್ಕರ್ ಸಹಿಯನ್ನೂ ನಕಲಿ ಮಾಡಿದ್ದು, ನಕಲಿ ಸೀಲ್ ಬಳಸಿ, ಕೋಟ್ಯಂತರ ಹಣವನ್ನು ಹಲವು ಖಾತೆಗಳಿಗೆ ವರ್ಗಾಯಿಸಿದ್ದಾನೆ ಎಂಬುದು ಪತ್ತೆಯಾಗಿಸಿದೆ. ರೆವೆನ್ಯೂ ಇನ್ಸ್ಪೆಕ್ಟರ್ ಆಗಿ ವರ್ಗಾವಣೆಯಾದರೂ ಮುಜರಾಯಿ ಇಲಾಖೆಯ ಚೆಕ್ಬುಕ್ ವಾಪಸ್ ನೀಡದೆ, ಅದನ್ನು ದುರುಪಯೋಗಪಡಿಸಿಕೊಂಡು ಹಣ ಡ್ರಾ ಮಾಡಿರುವ ಆರೋಪವೂ ಕೇಳಿ ಬಂದಿದೆ.
ಪೊಲೀಸ್ ದೂರು, ಬಂಧನ
ಈ ಸಂಬಂಧ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆಗೆ ದೂರು ದಾಖಲಾಗಿತ್ತು. ತನಿಖೆ ನಡೆಸಿದಾಗ ತಹಶೀಲ್ದಾರ್ ಇಲಾಖೆಯ ಖಾತೆಯಲ್ಲಿ ಹಣದ ಲೆಕ್ಕ ತಾಳೆಯಾಗದಿದ್ದು, ವಂಚನೆ ದೃಢಪಟ್ಟಿದೆ. ಇದರಿಂದಾಗಿ ಪೊಲೀಸರು ಹೇಮಂತ್ ಕುಮಾರ್ ಅವರನ್ನು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಅಕ್ರಮ ಹಣದಿಂದಲೇ ಮನೆ ನಿರ್ಮಾಣ
ತನ್ನ ವಂಚಿತ ಹಣವನ್ನು ಬಳಸಿಕೊಂಡು ಬೃಹತ್ ಮನೆ ನಿರ್ಮಿಸಿರುವುದಾಗಿ ತನಿಖೆಯ ವೇಳೆ ಹೇಮಂತ್ ಕುಮಾರ್ ಸ್ವೀಕರಿಸಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ. ಸರ್ಕಾರ ಈ ಪ್ರಕರಣದ ಬಗ್ಗೆ ಗಂಭೀರವಾಗಿ ಗಮನಹರಿಸಿದ್ದು, ಕಂದಾಯ ಇಲಾಖೆ ಈತನನ್ನು ಸೇವೆಯಿಂದ ಅಮಾನತುಗೊಳಿಸಿದೆ.
ಇಂತಹ ಪ್ರಕರಣಗಳು ಸರ್ಕಾರದ ಸತತ ನಿಗಾ ಮತ್ತು ಕಟ್ಟುನಿಟ್ಟಿನ ಕ್ರಮ ಅಗತ್ಯವೆಂಬುದನ್ನು ತೋರಿಸುತ್ತವೆ. ತನಿಖೆ ಮುಂದುವರೆದಿದ್ದು, ಇನ್ನಷ್ಟು ಮಾಹಿತಿಗಳು ಹೊರಬೀಳುವ ಸಾಧ್ಯತೆ ಇದೆ.
ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…
ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…
ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…
ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…
ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…
ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…