ದೇವಾಲಯದ ಹುಂಡಿಯ ಖಾತೆಯಲ್ಲಿದ್ದ 60 ಲಕ್ಷ ರೂ. ಹಣವನ್ನು ವೈಯಕ್ತಿಕ ಖಾತೆಗೆ ವರ್ಗಾಯಿಸಿಕೊಂಡ ಪ್ರಕರಣ ಬೆಳಕಿಗೆ ಬಿದ್ದಿದ್ದು, ಸಂಬಂಧಪಟ್ಟ ಅಧಿಕಾರಿಯನ್ನು ಸರ್ಕಾರ ಅಮಾನತು ಮಾಡಿದೆ.
ಸಾಸಲು ಹೋಬಳಿಯ ರೆವೆನ್ಯೂ ಇನ್ಸ್ಪೆಕ್ಟರ್ ಹೇಮಂತ್ ಕುಮಾರ್ ಎಂಬವರು ಈ ವಂಚನೆಗೆ ತೊಡಗಿರುವುದು ತನಿಖೆಯ ವೇಳೆ ಬಹಿರಂಗವಾಗಿದೆ. ಮುಜರಾಯಿ ಇಲಾಖೆಯಲ್ಲಿ ಕೇಸ್ ವರ್ಕರ್ ಆಗಿ ಸೇವೆ ಸಲ್ಲಿಸುತ್ತಿದ್ದಾಗಲೇ, ದೇವಸ್ಥಾನದ ಹುಂಡಿಯ ಹಣವನ್ನು ತನ್ನ ಪತ್ನಿಯ ಖಾತೆಗೆ ವರ್ಗಾಯಿಸಿರುವುದಾಗಿ ಮಾಹಿತಿ ಲಭ್ಯವಾಗಿದೆ.
ಹೆಚ್ಚುವರಿ ತನಿಖೆಯಲ್ಲಿ ಶಾಕಿಂಗ್ ಮಾಹಿತಿ
2023 ರಿಂದ ಇತ್ತೀಚೆಗೆ ಅಧಿಕಾರಿಯು ಇಬ್ಬರು ತಹಶೀಲ್ದಾರ್ ಮತ್ತು ಓರ್ವ ಕೇಸ್ ವರ್ಕರ್ ಸಹಿಯನ್ನೂ ನಕಲಿ ಮಾಡಿದ್ದು, ನಕಲಿ ಸೀಲ್ ಬಳಸಿ, ಕೋಟ್ಯಂತರ ಹಣವನ್ನು ಹಲವು ಖಾತೆಗಳಿಗೆ ವರ್ಗಾಯಿಸಿದ್ದಾನೆ ಎಂಬುದು ಪತ್ತೆಯಾಗಿಸಿದೆ. ರೆವೆನ್ಯೂ ಇನ್ಸ್ಪೆಕ್ಟರ್ ಆಗಿ ವರ್ಗಾವಣೆಯಾದರೂ ಮುಜರಾಯಿ ಇಲಾಖೆಯ ಚೆಕ್ಬುಕ್ ವಾಪಸ್ ನೀಡದೆ, ಅದನ್ನು ದುರುಪಯೋಗಪಡಿಸಿಕೊಂಡು ಹಣ ಡ್ರಾ ಮಾಡಿರುವ ಆರೋಪವೂ ಕೇಳಿ ಬಂದಿದೆ.
ಪೊಲೀಸ್ ದೂರು, ಬಂಧನ
ಈ ಸಂಬಂಧ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆಗೆ ದೂರು ದಾಖಲಾಗಿತ್ತು. ತನಿಖೆ ನಡೆಸಿದಾಗ ತಹಶೀಲ್ದಾರ್ ಇಲಾಖೆಯ ಖಾತೆಯಲ್ಲಿ ಹಣದ ಲೆಕ್ಕ ತಾಳೆಯಾಗದಿದ್ದು, ವಂಚನೆ ದೃಢಪಟ್ಟಿದೆ. ಇದರಿಂದಾಗಿ ಪೊಲೀಸರು ಹೇಮಂತ್ ಕುಮಾರ್ ಅವರನ್ನು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಅಕ್ರಮ ಹಣದಿಂದಲೇ ಮನೆ ನಿರ್ಮಾಣ
ತನ್ನ ವಂಚಿತ ಹಣವನ್ನು ಬಳಸಿಕೊಂಡು ಬೃಹತ್ ಮನೆ ನಿರ್ಮಿಸಿರುವುದಾಗಿ ತನಿಖೆಯ ವೇಳೆ ಹೇಮಂತ್ ಕುಮಾರ್ ಸ್ವೀಕರಿಸಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ. ಸರ್ಕಾರ ಈ ಪ್ರಕರಣದ ಬಗ್ಗೆ ಗಂಭೀರವಾಗಿ ಗಮನಹರಿಸಿದ್ದು, ಕಂದಾಯ ಇಲಾಖೆ ಈತನನ್ನು ಸೇವೆಯಿಂದ ಅಮಾನತುಗೊಳಿಸಿದೆ.
ಇಂತಹ ಪ್ರಕರಣಗಳು ಸರ್ಕಾರದ ಸತತ ನಿಗಾ ಮತ್ತು ಕಟ್ಟುನಿಟ್ಟಿನ ಕ್ರಮ ಅಗತ್ಯವೆಂಬುದನ್ನು ತೋರಿಸುತ್ತವೆ. ತನಿಖೆ ಮುಂದುವರೆದಿದ್ದು, ಇನ್ನಷ್ಟು ಮಾಹಿತಿಗಳು ಹೊರಬೀಳುವ ಸಾಧ್ಯತೆ ಇದೆ.
ಪುನರ್ಜನ್ಮ ಎಂಬುದು ಇಂದಿಗೂ ವಿಜ್ಞಾನಕ್ಕೆ ಸವಾಲಾಗಿರುವ ಒಂದು ಗೂಢ ವಿಷಯ. ಕೆಲವೊಮ್ಮೆ ಸಣ್ಣ ಮಕ್ಕಳು ತಮ್ಮ ಹಿಂದಿನ ಜನ್ಮದ ಬಗ್ಗೆ…
ಬೆಂಗಳೂರು ಗ್ರಾಮಾಂತರದ ಹೊಸಕೋಟೆ ತಾಲೂಕಿನ ದಬ್ಬಗುಂಟನಹಳ್ಳಿಯಲ್ಲಿ ಅನೈತಿಕ ಸಂಬಂಧದ ಹಿನ್ನೆಲೆ ನಡೆದ ಭೀಕರ ಕೊಲೆ ಪ್ರಕರಣ ಬೆಳಕಿಗೆ ಬಂದಿದೆ. ಪ್ರಿಯತಮೆಯ…
ಸ್ವಿಮ್ಮಿಂಗ್ ಪೂಲ್ನಲ್ಲಿ ಮಹಿಳೆ ತನ್ನ ಬಾಯ್ಫ್ರೆಂಡ್ ಜೊತೆಗೆ ಸಮಯ ಕಳೆಯುತ್ತಿದ್ದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ವೇಳೆ…
ಬಳ್ಳಾರಿಯ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (ಕೆಐಎಡಿಬಿ) ಕಚೇರಿಯಲ್ಲಿ ನಡೆದಿದೆ ಎನ್ನಲಾದ 16 ಕೋಟಿಗೂ ಅಧಿಕ ವಂಚನೆ ಪ್ರಕರಣದಲ್ಲಿ ಪ್ರಮುಖ…
ನಾಸಿಕ್ನ ಟಿಸಿಎಸ್ ಸಂಬಂಧಿತ ಮತಾಂತರ ಮತ್ತು ಕಿರುಕುಳ ಪ್ರಕರಣದ ತನಿಖೆಯಲ್ಲಿ ಹೊಸದಾಗಿ ಸ್ಫೋಟಕ ಮಾಹಿತಿಗಳು ಬಹಿರಂಗವಾಗುತ್ತಿವೆ. ಬಿಪಿಒ ಘಟಕದಲ್ಲಿ ಎಚ್ಆರ್…
ವಿಜಯನಗರ:- ಗೃಹಲಕ್ಷ್ಮಿ ಯೋಜನೆ ಹಣವನ್ನು ಕೂಡಿಟ್ಟು ಮಹಿಳೆಯೊಬ್ಬರು ಸಣ್ಣದಾಗಿ ಐಸ್ ಕ್ರೀಮ್ ಅಂಗಡಿ ತೆರೆದು ಬದುಕು ಕಟ್ಟಿಕೊಂಡಿದ್ದಾರೆ.ಕೊಟ್ಟೂರು ತಾಲ್ಲೂಕಿನ ಹರಾಳು…