ಧಾರವಾಡ: ಧಾರವಾಡ ಜಿಲ್ಲೆ ಕಲಘಟಗಿ ತಾಲ್ಲೂಕಿನ ಗಂಭ್ಯಾಪುರ ಗ್ರಾಮದ ಮಕ್ಕಳೊಬ್ಬರು ಆಟವಾಡುತ್ತಿದ್ದಾಗ ವಿಷಯುಕ್ತ ಹಣ್ಣು ಸೇವಿಸಿದ ಪರಿಣಾಮ ಅಸ್ವಸ್ಥಗೊಂಡು, ಅವರನ್ನು ಧಾರವಾಡ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿದ ಘಟನೆ ನಿನ್ನೆ ಸಾಯಂಕಾಲ ನಡೆದಿದೆ.
ಗ್ರಾಮದ ಏಳು ಬಾಲಕರು ಹಾಗೂ ಮೂವರು ಬಾಲಕಿಯರು ಮುಂಜಾನೆ ಆಟವಾಡುತ್ತಿದ್ದ ವೇಳೆ ಔಡಲಕಾಯಿ (ವಿಷಯುಕ್ತ ಹಣ್ಣು) ತಿಂದಿದ್ದಾರೆ. ತಕ್ಷಣವೇ ಅವರಿಗೆ ಆರೋಗ್ಯ ಸಮಸ್ಯೆಗಳು ಉಂಟಾಗಿದವು, ವಾಂತಿ ಹಾಗೂ ಅನ್ಯ ಲಕ್ಷಣಗಳು ಕಾಣಿಸಿಕೊಂಡವು. ಈ ಬಗ್ಗೆ ಮಕ್ಕಳಿಂದ ಮಾಹಿತಿಯನ್ನು ಪಡೆದು, ತಮ್ಮ ಪಾಲಕರು ತಕ್ಷಣವೇ ಏಳು ಮಕ್ಕಳನ್ನು ಪ್ರಥಮ ಚಿಕಿತ್ಸೆಗಾಗಿ ಧಾರವಾಡ ಜಿಲ್ಲಾ ಆಸ್ಪತ್ರೆಗೆ ಕಳುಹಿಸಿದ್ದಾರೆ.
ಈ ವಿಷಯ ತಿಳಿದು, ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್ ಲಾಡ್ ಅವರು ಆಸ್ಪತ್ರೆಗೆ ಭೇಟಿ ನೀಡಿ ಮಕ್ಕಳ ಆರೋಗ್ಯ ಕುರಿತು ವಿಚಾರಣೆ ನಡೆಸಿದರು. ವೈದ್ಯರು ನೀಡಿದ ಮಾಹಿತಿ ಪ್ರಕಾರ, ಎಲ್ಲಾ 7 ಮಕ್ಕಳೂ ಪ್ರಾಣಾಪಾಯದಿಂದ ಪಾರಾಗಿದ್ದು, ಅವರಿಗೆ ಚಿಕಿತ್ಸೆಯೊಂದಿಗೆ ಯಾವುದೇ ಗಂಭೀರ ಹಾನಿಯು ಸಂಭವಿಸಿಲ್ಲ ಎಂದು ತಿಳಿಸಿದ್ದಾರೆ. ವರದಿ: ಶಿವರಾಜ್ ಪಿ.ಆರ್.
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…