Latest

75 ಲಕ್ಷ ವೆಚ್ಚದ ರಸ್ತೆ ಕಾಮಗಾರಿ ಕಳಪೆ.

ಕುಂದಗೋಳ; ತಾಲೂಕಿನ ಯರೇನಾರಾಯಣಪೂರ ಗ್ರಾಮದದಿಂದ ರಾಜ್ಯ ಹೆದ್ದಾರಿಗೆ ಸಂಪರ್ಕ ಕಲ್ಪಿಸುವ ರಸ್ತೆ ಕಾಮಗಾರಿ ಮುಗಿದು ಕೆಲವು ತಿಂಗಳ ಕಳೆಯುವಷ್ಟರಲ್ಲಿ ಡಾಂಬರು ಕಿತ್ತು ಹೋಗಿದ್ದು, ಸಾರ್ವಜನಿಕ ಆಕ್ರೋಶಕ್ಕೆ ಕಾರಣವಾಗಿದೆ.

ಸುಮಾರು 75 ಲಕ್ಷ ರೂಪಾಯಿ ಅನುದಾನದಲ್ಲಿ ಲೋಕೋಪಯೋಗಿ ಇಲಾಖೆಯಿಂದ ರಸ್ತೆ ಡಾಂಬರೀಕರಣ ಮಾಡಲಾಗಿದೆ. ಗುತ್ತಿಗೆದಾರನ ಕಳಪೆ ಕಾಮಗಾರಿಯಿಂದ ಕೆಲವು ತಿಂಗಳು ಕಳೆಯುವಷ್ಟರಲ್ಲಿ ಕೆಲವಡೆ ರಸ್ತೆ ಕಿತ್ತೂ ಹೋಗಿದೆ. ಹಾಗಾದರೆ ಕಮಿಶನ್ ದಂದೇನಾ? ಅಥವಾ ಹಣ ಕೊಳ್ಳೆ ಹೊಡೆಯಲೂ ದಾರೀನಾ? ಎಂಬ ಪ್ರಶ್ನೆ ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.

ನೇಮ್ ಆಫ್ ವರ್ಕ್ ನಲ್ಲಿ ಯರೇನಾರಾಯಣಪೂರ ಗ್ರಾಮದಿಂದ ರಾಜ್ಯ ಹೆದ್ದಾರಿ-137 ಕೂಡು ರಸ್ತೆಗೆ ಅಲ್ಲಿವರಿಗೊ ಡಾಂಬರೀಕರಣ ಮಾಡಬೇಕು ಆದರೆ ಹನುಮಂತಗೌಡ್ರ ಟೋಪನಗೌಡ್ರ ಎಂಬಾತರ ಮನೆಯವರಿಗೆ ಮಾತ್ರ ಡಾಂಬರೀಕರಣ ಮಾಡಲಾಗಿದೆ. ಅಂದಹಾಗೆ ಹಣ ಕೊಳ್ಳಿಹೊಡೆಯಲು ಪ್ರಯತ್ನಕ್ಕೆ ಮುಂದಾದ್ರಾ ಅನ್ನುವುದು ಸಂಶಯಕ್ಕೆ ಎಡೆಮಾಡಿಕೊಟ್ಟಿದೆ. ಇದಲ್ಲದೆ ಕಳಪೆ ಮಟ್ಟದ ರಸ್ತೆ ಅಭಿವೃದ್ಧಿ ಪಡಿಸಿ ಕೆಲವು ದಿನಗಳ ಬಳಿಕ ಮತ್ತೆ ಪ್ಯಾಚ್ ವರ್ಕ ಸಹ ಮಾಡಿದ್ದಾರೆ. ಆದರೂ ರಸ್ತೆ ಅಭಿವೃದ್ಧಿ ಹೇಳಿ ಕೊಳ್ಳುವ ಅಂತ ಕೆಲಸ ಮಾಡಿಲ್ಲ ಎಂದು ಇಲ್ಲಿನ ಗ್ರಾಮಸ್ಥರು ದೂರಿದರು.

ಸರಕಾರಗಳು ಗ್ರಾಮೀಣ ಜನರಿಗೆ ಸುಗಮ ಸಂಚಾರಕ್ಕೆ ಗ್ರಾಮೀಣ ಪಥಗಳನ್ನು ನಿರ್ಮಾಣ ಮಾಡಲು ಲಕ್ಷ ಲಕ್ಷ ಹಣ ಬಿಡುಗಡೆಗೊಳಿಸುತ್ತೆ. ಆದರೆ ಲೂಟಿ ಹೊಡೆಯುವ ಖದೀಮರು ಮಾತ್ರ ಹಣ ಕಬಳಿಸಲು ಮುಂದಾಗುತ್ತಾರೆ. ”ಹಣವನ್ನು ಕಂಡರೆ ಹೆಣವು ಬಾಯಿ ಬಿಡುತ್ತದೆ” ಗಾದೆಗೆ ಸಮಾನವಾಗಿ ನಡೆದುಕೊಳ್ಳುತ್ತಾರೆ ಅಂದರೆ ಇವರುಗಳು ಎಂತ ನಾಲಾಯಕ್ ಇರಬೇಕು ಅಂತ ನೋಡಿ.

ಒಟ್ಟಾರೆ ಅಭಿವೃದ್ಧಿ ಹೊಂದಿದ ರಸ್ತೆ ಡಾಂಬರು ಕಿತ್ತು ತೆಗ್ಗು ಬಿಳ್ಳಲು ಪ್ರಾರಂಭಿಸಿದ್ದು ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದೆ. ಇದಲ್ಲದೆ ನೆಮ್ ಆಪ್ ವರ್ಕ್ ನಲ್ಲಿ ರಾಜ್ಯ ಹೆದ್ದಾರಿವರಿಗೊ ರಸ್ತೆ ಅಭಿವೃದ್ಧಿ ಪಡಿಸಿಬೇಕು ಆದರೆ ಇವರುಗಳು ಈ ಕಾರ್ಯಕ್ಕೆ ಮುಂದಾಗಿಲ್ಲ ಹಾಗಾಗಿ ಅಧಿಕಾರಿಗಳು ಸ್ಥಳೀಯ ಶಾಸಕರು ಸ್ಥಳಕ್ಕೆ ಬೇಟೆ ನೀಡಿ ಪರಿಶೀಲಿಸಿ ಗುತ್ತಿಗೆದಾರ ವಿರುದ್ಧ ಶಿಸ್ತು ಕ್ರಮಕ್ಕೆ ಮುಂದಾಗಬೇಕು ಎಂದು ಸ್ಥಳೀಯ ಗ್ರಾಮಸ್ಥರು ಆಗ್ರಹವಾಗಿದೆ.

ವರದಿ; ಶಾನು ಯಲಿಗಾರ

ಭ್ರಷ್ಟರ ಬೇಟೆ

Recent Posts

ವಿವಾಹ ಭರವಸೆ ನೀಡಿ ಖಾಸಗಿ ವಿಡಿಯೋದಿಂದ ಬ್ಲ್ಯಾಕ್‌ಮೇಲ್‌: ಯುವಕನ ಬಂಧನ

ಬೆಂಗಳೂರು: ವಿವಾಹವಾಗುವ ಭರವಸೆ ನೀಡಿ ಖಾಸಗಿ ಸಂಬಂಧ ಬೆಳೆಸಿದ ಬಳಿಕ, ಆ ಸಂಬಂಧದ ವಿಡಿಯೋ ಬಳಸಿ ಹಣಕ್ಕಾಗಿ ಬ್ಲ್ಯಾಕ್‌ಮೇಲ್‌ ಮಾಡುತ್ತಿದ್ದ…

11 hours ago

10 ಲಕ್ಷ ಲಂಚದ ಹಣದೊಂದಿಗೆ ಬಿಬಿಎಂಪಿ ಇಂಜಿನಿಯರ್ ಲೋಕಾಯುಕ್ತ ಬಲೆಗೆ”

ಬೆಂಗಳೂರು: ನಗರದಲ್ಲಿ ಮತ್ತೊಂದು ಲಂಚದ ಬಿರುಕು ಬಿಟ್ಟಿದ್ದು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಕಾರ್ಯಪಾಲಕ ಅಭಿಯಂತರನು 10 ಲಕ್ಷ…

11 hours ago

ಗೋವಾ ಪ್ರವಾಸ ದುರಂತ: ಮದುವೆ ಗೊಂದಲದಿಂದ ಪ್ರೇಮಿಯ ಕೈಯಲ್ಲಿ ಪ್ರೇಯಸಿ ಹತ್ಯೆ

ಗೋವಾ: ಮದುವೆಯಾಗುವ ಉದ್ದೇಶದಿಂದ ಬೆಂಗಳೂರಿನಿಂದ ಗೋವಾಕ್ಕೆ ಪ್ರಯಾಣಿಸಿದ್ದ ಜೋಡಿಯ ಕನಸು ಕೊಲೆಯ ಹಿನ್ನಲೆಯಲ್ಲಿ ದುರಂತವಾಗಿ ಕೊನೆಗೊಂಡ ಘಟನೆ ದಕ್ಷಿಣ ಗೋವಾದ…

11 hours ago

ಮೈಸೂರು ರಾಜೀವ್ ನಗರದಲ್ಲಿ ಕುಟುಂಬ ಕಲಹ ತೀವ್ರಗೆಡೆದು ಯುವಕನಿಗೆ ಚಾಕು ಇರಿತ: ಆರೋಪಿ ಅಫ್ರೀದಿ ಬಂಧನ

ಮೈಸೂರು: ಕೌಟುಂಬಿಕ ಕಲಹದ ರೂಪಾಂತರವಾಗಿ ಜಗಳ ತೀವ್ರತೆ ಪಡೆದು ಕೊಲೆಯಾದ ಹೃದಯವಿದ್ರಾವಕ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ…

1 day ago

ಖಾಲಿ ಮನೆ ಟಾರ್ಗೆಟ್: ಪೆಪ್ಸಿ ರಘು ಗ್ಯಾಂಗದಿಂದ 24 ಲಕ್ಷ ಕಳ್ಳತನ, ಮೂವರು ಅರೆಸ್ಟ್

ಬೆಂಗಳೂರು: ಮದುವೆಗಾಗಿ ಮನೆ ಖಾಲಿ ಇದ್ದನ್ನು ತಪ್ಪಾಗಿ ಬಳಸಿಕೊಂಡು ಬೃಹತ್ ಕಳ್ಳತನ ನಡೆಸಿದ ಮೂವರು ಆರೋಪಿಗಳನ್ನು ಸಿ.ಕೆ. ಅಚ್ಚುಕಟ್ಟು ಠಾಣೆ…

1 day ago

ಲಂಚ ಸ್ವೀಕರಿಸುತ್ತಿದ್ದ ಪಂ.ರಾಜ್ ಇಂಜಿನಿಯರಿಂಗ್ ಅಧಿಕಾರಿ ಬಂಧನ: ಲೋಕಾಯುಕ್ತದ ದಾಳಿ ಸೊರಬದಲ್ಲಿ

ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನಲ್ಲಿ ಭ್ರಷ್ಟಾಚಾರದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಸೆಕ್ಷನ್ ಅಧಿಕಾರಿ…

1 day ago