Latest

75 ಲಕ್ಷ ವೆಚ್ಚದ ರಸ್ತೆ ಕಾಮಗಾರಿ ಕಳಪೆ.

ಕುಂದಗೋಳ; ತಾಲೂಕಿನ ಯರೇನಾರಾಯಣಪೂರ ಗ್ರಾಮದದಿಂದ ರಾಜ್ಯ ಹೆದ್ದಾರಿಗೆ ಸಂಪರ್ಕ ಕಲ್ಪಿಸುವ ರಸ್ತೆ ಕಾಮಗಾರಿ ಮುಗಿದು ಕೆಲವು ತಿಂಗಳ ಕಳೆಯುವಷ್ಟರಲ್ಲಿ ಡಾಂಬರು ಕಿತ್ತು ಹೋಗಿದ್ದು, ಸಾರ್ವಜನಿಕ ಆಕ್ರೋಶಕ್ಕೆ ಕಾರಣವಾಗಿದೆ.

ಸುಮಾರು 75 ಲಕ್ಷ ರೂಪಾಯಿ ಅನುದಾನದಲ್ಲಿ ಲೋಕೋಪಯೋಗಿ ಇಲಾಖೆಯಿಂದ ರಸ್ತೆ ಡಾಂಬರೀಕರಣ ಮಾಡಲಾಗಿದೆ. ಗುತ್ತಿಗೆದಾರನ ಕಳಪೆ ಕಾಮಗಾರಿಯಿಂದ ಕೆಲವು ತಿಂಗಳು ಕಳೆಯುವಷ್ಟರಲ್ಲಿ ಕೆಲವಡೆ ರಸ್ತೆ ಕಿತ್ತೂ ಹೋಗಿದೆ. ಹಾಗಾದರೆ ಕಮಿಶನ್ ದಂದೇನಾ? ಅಥವಾ ಹಣ ಕೊಳ್ಳೆ ಹೊಡೆಯಲೂ ದಾರೀನಾ? ಎಂಬ ಪ್ರಶ್ನೆ ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.

ನೇಮ್ ಆಫ್ ವರ್ಕ್ ನಲ್ಲಿ ಯರೇನಾರಾಯಣಪೂರ ಗ್ರಾಮದಿಂದ ರಾಜ್ಯ ಹೆದ್ದಾರಿ-137 ಕೂಡು ರಸ್ತೆಗೆ ಅಲ್ಲಿವರಿಗೊ ಡಾಂಬರೀಕರಣ ಮಾಡಬೇಕು ಆದರೆ ಹನುಮಂತಗೌಡ್ರ ಟೋಪನಗೌಡ್ರ ಎಂಬಾತರ ಮನೆಯವರಿಗೆ ಮಾತ್ರ ಡಾಂಬರೀಕರಣ ಮಾಡಲಾಗಿದೆ. ಅಂದಹಾಗೆ ಹಣ ಕೊಳ್ಳಿಹೊಡೆಯಲು ಪ್ರಯತ್ನಕ್ಕೆ ಮುಂದಾದ್ರಾ ಅನ್ನುವುದು ಸಂಶಯಕ್ಕೆ ಎಡೆಮಾಡಿಕೊಟ್ಟಿದೆ. ಇದಲ್ಲದೆ ಕಳಪೆ ಮಟ್ಟದ ರಸ್ತೆ ಅಭಿವೃದ್ಧಿ ಪಡಿಸಿ ಕೆಲವು ದಿನಗಳ ಬಳಿಕ ಮತ್ತೆ ಪ್ಯಾಚ್ ವರ್ಕ ಸಹ ಮಾಡಿದ್ದಾರೆ. ಆದರೂ ರಸ್ತೆ ಅಭಿವೃದ್ಧಿ ಹೇಳಿ ಕೊಳ್ಳುವ ಅಂತ ಕೆಲಸ ಮಾಡಿಲ್ಲ ಎಂದು ಇಲ್ಲಿನ ಗ್ರಾಮಸ್ಥರು ದೂರಿದರು.

ಸರಕಾರಗಳು ಗ್ರಾಮೀಣ ಜನರಿಗೆ ಸುಗಮ ಸಂಚಾರಕ್ಕೆ ಗ್ರಾಮೀಣ ಪಥಗಳನ್ನು ನಿರ್ಮಾಣ ಮಾಡಲು ಲಕ್ಷ ಲಕ್ಷ ಹಣ ಬಿಡುಗಡೆಗೊಳಿಸುತ್ತೆ. ಆದರೆ ಲೂಟಿ ಹೊಡೆಯುವ ಖದೀಮರು ಮಾತ್ರ ಹಣ ಕಬಳಿಸಲು ಮುಂದಾಗುತ್ತಾರೆ. ”ಹಣವನ್ನು ಕಂಡರೆ ಹೆಣವು ಬಾಯಿ ಬಿಡುತ್ತದೆ” ಗಾದೆಗೆ ಸಮಾನವಾಗಿ ನಡೆದುಕೊಳ್ಳುತ್ತಾರೆ ಅಂದರೆ ಇವರುಗಳು ಎಂತ ನಾಲಾಯಕ್ ಇರಬೇಕು ಅಂತ ನೋಡಿ.

ಒಟ್ಟಾರೆ ಅಭಿವೃದ್ಧಿ ಹೊಂದಿದ ರಸ್ತೆ ಡಾಂಬರು ಕಿತ್ತು ತೆಗ್ಗು ಬಿಳ್ಳಲು ಪ್ರಾರಂಭಿಸಿದ್ದು ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದೆ. ಇದಲ್ಲದೆ ನೆಮ್ ಆಪ್ ವರ್ಕ್ ನಲ್ಲಿ ರಾಜ್ಯ ಹೆದ್ದಾರಿವರಿಗೊ ರಸ್ತೆ ಅಭಿವೃದ್ಧಿ ಪಡಿಸಿಬೇಕು ಆದರೆ ಇವರುಗಳು ಈ ಕಾರ್ಯಕ್ಕೆ ಮುಂದಾಗಿಲ್ಲ ಹಾಗಾಗಿ ಅಧಿಕಾರಿಗಳು ಸ್ಥಳೀಯ ಶಾಸಕರು ಸ್ಥಳಕ್ಕೆ ಬೇಟೆ ನೀಡಿ ಪರಿಶೀಲಿಸಿ ಗುತ್ತಿಗೆದಾರ ವಿರುದ್ಧ ಶಿಸ್ತು ಕ್ರಮಕ್ಕೆ ಮುಂದಾಗಬೇಕು ಎಂದು ಸ್ಥಳೀಯ ಗ್ರಾಮಸ್ಥರು ಆಗ್ರಹವಾಗಿದೆ.

ವರದಿ; ಶಾನು ಯಲಿಗಾರ

ಭ್ರಷ್ಟರ ಬೇಟೆ

Recent Posts

ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ

ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…

1 week ago

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ…!

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…

2 weeks ago

ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲ: ಬಡ ರೋಗಿಗಳ ಸುಲಿಗೆಗೆ ಮುಂದಾದ ಖಾಸಗಿ ಆಸ್ಪತ್ರೆಗಳು…!

ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…

3 weeks ago

ಅನ್ನಭಾಗ್ಯದ 4 ಕ್ವಿಂಟಾಲ್ ಅಕ್ಕಿ ಮತ್ತು 80 ಕ್ವಿಂಟಲ್ ರಾಗಿ ಅಕ್ರಮ ದಾಸ್ತಾನು

ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…

4 weeks ago

ಪ್ರೀತಿಸಿದವಳನ್ನೇ ಕೊಂದ ಪಾಪಿ ಪತಿರಾಯ

ಗೌರಿಬಿದನೂರು:  ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…

1 month ago

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ಕಳ್ಳರ ಕೈಚಳಕ ಕತ್ತಿನಲ್ಲಿದ್ದ 50 ಗ್ರಾಂ ಚಿನ್ನದ ಸರ ಕಸಿದು ಪರಾರಿ

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…

2 months ago