Latest

75 ಲಕ್ಷ ವೆಚ್ಚದ ರಸ್ತೆ ಕಾಮಗಾರಿ ಕಳಪೆ.

ಕುಂದಗೋಳ; ತಾಲೂಕಿನ ಯರೇನಾರಾಯಣಪೂರ ಗ್ರಾಮದದಿಂದ ರಾಜ್ಯ ಹೆದ್ದಾರಿಗೆ ಸಂಪರ್ಕ ಕಲ್ಪಿಸುವ ರಸ್ತೆ ಕಾಮಗಾರಿ ಮುಗಿದು ಕೆಲವು ತಿಂಗಳ ಕಳೆಯುವಷ್ಟರಲ್ಲಿ ಡಾಂಬರು ಕಿತ್ತು ಹೋಗಿದ್ದು, ಸಾರ್ವಜನಿಕ ಆಕ್ರೋಶಕ್ಕೆ ಕಾರಣವಾಗಿದೆ.

ಸುಮಾರು 75 ಲಕ್ಷ ರೂಪಾಯಿ ಅನುದಾನದಲ್ಲಿ ಲೋಕೋಪಯೋಗಿ ಇಲಾಖೆಯಿಂದ ರಸ್ತೆ ಡಾಂಬರೀಕರಣ ಮಾಡಲಾಗಿದೆ. ಗುತ್ತಿಗೆದಾರನ ಕಳಪೆ ಕಾಮಗಾರಿಯಿಂದ ಕೆಲವು ತಿಂಗಳು ಕಳೆಯುವಷ್ಟರಲ್ಲಿ ಕೆಲವಡೆ ರಸ್ತೆ ಕಿತ್ತೂ ಹೋಗಿದೆ. ಹಾಗಾದರೆ ಕಮಿಶನ್ ದಂದೇನಾ? ಅಥವಾ ಹಣ ಕೊಳ್ಳೆ ಹೊಡೆಯಲೂ ದಾರೀನಾ? ಎಂಬ ಪ್ರಶ್ನೆ ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.

ನೇಮ್ ಆಫ್ ವರ್ಕ್ ನಲ್ಲಿ ಯರೇನಾರಾಯಣಪೂರ ಗ್ರಾಮದಿಂದ ರಾಜ್ಯ ಹೆದ್ದಾರಿ-137 ಕೂಡು ರಸ್ತೆಗೆ ಅಲ್ಲಿವರಿಗೊ ಡಾಂಬರೀಕರಣ ಮಾಡಬೇಕು ಆದರೆ ಹನುಮಂತಗೌಡ್ರ ಟೋಪನಗೌಡ್ರ ಎಂಬಾತರ ಮನೆಯವರಿಗೆ ಮಾತ್ರ ಡಾಂಬರೀಕರಣ ಮಾಡಲಾಗಿದೆ. ಅಂದಹಾಗೆ ಹಣ ಕೊಳ್ಳಿಹೊಡೆಯಲು ಪ್ರಯತ್ನಕ್ಕೆ ಮುಂದಾದ್ರಾ ಅನ್ನುವುದು ಸಂಶಯಕ್ಕೆ ಎಡೆಮಾಡಿಕೊಟ್ಟಿದೆ. ಇದಲ್ಲದೆ ಕಳಪೆ ಮಟ್ಟದ ರಸ್ತೆ ಅಭಿವೃದ್ಧಿ ಪಡಿಸಿ ಕೆಲವು ದಿನಗಳ ಬಳಿಕ ಮತ್ತೆ ಪ್ಯಾಚ್ ವರ್ಕ ಸಹ ಮಾಡಿದ್ದಾರೆ. ಆದರೂ ರಸ್ತೆ ಅಭಿವೃದ್ಧಿ ಹೇಳಿ ಕೊಳ್ಳುವ ಅಂತ ಕೆಲಸ ಮಾಡಿಲ್ಲ ಎಂದು ಇಲ್ಲಿನ ಗ್ರಾಮಸ್ಥರು ದೂರಿದರು.

ಸರಕಾರಗಳು ಗ್ರಾಮೀಣ ಜನರಿಗೆ ಸುಗಮ ಸಂಚಾರಕ್ಕೆ ಗ್ರಾಮೀಣ ಪಥಗಳನ್ನು ನಿರ್ಮಾಣ ಮಾಡಲು ಲಕ್ಷ ಲಕ್ಷ ಹಣ ಬಿಡುಗಡೆಗೊಳಿಸುತ್ತೆ. ಆದರೆ ಲೂಟಿ ಹೊಡೆಯುವ ಖದೀಮರು ಮಾತ್ರ ಹಣ ಕಬಳಿಸಲು ಮುಂದಾಗುತ್ತಾರೆ. ”ಹಣವನ್ನು ಕಂಡರೆ ಹೆಣವು ಬಾಯಿ ಬಿಡುತ್ತದೆ” ಗಾದೆಗೆ ಸಮಾನವಾಗಿ ನಡೆದುಕೊಳ್ಳುತ್ತಾರೆ ಅಂದರೆ ಇವರುಗಳು ಎಂತ ನಾಲಾಯಕ್ ಇರಬೇಕು ಅಂತ ನೋಡಿ.

ಒಟ್ಟಾರೆ ಅಭಿವೃದ್ಧಿ ಹೊಂದಿದ ರಸ್ತೆ ಡಾಂಬರು ಕಿತ್ತು ತೆಗ್ಗು ಬಿಳ್ಳಲು ಪ್ರಾರಂಭಿಸಿದ್ದು ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದೆ. ಇದಲ್ಲದೆ ನೆಮ್ ಆಪ್ ವರ್ಕ್ ನಲ್ಲಿ ರಾಜ್ಯ ಹೆದ್ದಾರಿವರಿಗೊ ರಸ್ತೆ ಅಭಿವೃದ್ಧಿ ಪಡಿಸಿಬೇಕು ಆದರೆ ಇವರುಗಳು ಈ ಕಾರ್ಯಕ್ಕೆ ಮುಂದಾಗಿಲ್ಲ ಹಾಗಾಗಿ ಅಧಿಕಾರಿಗಳು ಸ್ಥಳೀಯ ಶಾಸಕರು ಸ್ಥಳಕ್ಕೆ ಬೇಟೆ ನೀಡಿ ಪರಿಶೀಲಿಸಿ ಗುತ್ತಿಗೆದಾರ ವಿರುದ್ಧ ಶಿಸ್ತು ಕ್ರಮಕ್ಕೆ ಮುಂದಾಗಬೇಕು ಎಂದು ಸ್ಥಳೀಯ ಗ್ರಾಮಸ್ಥರು ಆಗ್ರಹವಾಗಿದೆ.

ವರದಿ; ಶಾನು ಯಲಿಗಾರ

ಭ್ರಷ್ಟರ ಬೇಟೆ

Recent Posts

ಟೊರೊಂಟೊದಲ್ಲಿ ಭಾರತೀಯ ಮೂಲದ ಯುವತಿ ಹತ್ಯೆ: 7 ತಿಂಗಳ ಬಳಿಕ ಆಪ್ತ ವ್ಯಕ್ತಿ ಅರೆಸ್ಟ್‌!

ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…

5 hours ago

ಇನ್‌ಸ್ಟಾಗ್ರಾಂ ಪ್ರೇಮಿಗಾಗಿ 6 ತಿಂಗಳ ಕಂದಮ್ಮನನ್ನೇ ಕೊಲ್ಲಿಸಿದ ತಾಯಿ! ಮೀರಾಟ್‌ನಲ್ಲಿ ಬೆಚ್ಚಿಬೀಳಿಸಿದ ಘಟನೆ

ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…

5 hours ago

ಹುಬ್ಬಳ್ಳಿ–ಅಂಕೋಲಾ ರೈಲ್ವೆ ಯೋಜನೆಗೆ ಭೂಸ್ವಾಧೀನ ಅಧಿಕೃತ ಚಾಲನೆ

163 ಕಿ.ಮೀ. ಉದ್ದದ ಯೋಜನೆ; ಉತ್ತರ ಕನ್ನಡದ 40 ಗ್ರಾಮಗಳು ಭೂಸ್ವಾಧೀನ ವ್ಯಾಪ್ತಿಗೆ ಉತ್ತರ ಕನ್ನಡ: ಹಲವು ವರ್ಷಗಳಿಂದ ನನೆಗುದಿಗೆ…

5 hours ago

ಪಾಂಡೆಗಾಂವ–ಕಂಗೋಳಿ ರಸ್ತೆ ಕೆಸರಿನ ಹೊಂಡ: ಜನರ ಆಕ್ರೋಶ, ಕಾಮಗಾರಿ ವಿಳಂಬವಾದರೆ ರಸ್ತೆ ತಡೆ ಎಚ್ಚರಿಕೆ

ಮಳೆ ಬಂದರೆ ಕೆಸರುಗದ್ದೆ; ವಿದ್ಯಾರ್ಥಿಗಳು, ವೃದ್ಧರು, ರೋಗಿಗಳ ಸಂಚಾರಕ್ಕೆ ಸಂಕಷ್ಟ — ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ ಕಾಗವಾಡ: ಬೆಳಗಾವಿ…

5 hours ago

ಜಾತ್ರೆಯಲ್ಲಿ ಮಹಿಳೆಯ ಮಂಗಳಸೂತ್ರ ಕಳವು: ಮೂವರು ಆರೋಪಿಗಳ ಬಂಧನ

₹4.50 ಲಕ್ಷ ಮೌಲ್ಯದ ಚಿನ್ನ, ಕೃತ್ಯಕ್ಕೆ ಬಳಸಿದ್ದ ಬೈಕ್ ವಶ ಹಳಿಯಾಳ: ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಮಹಿಳೆಯೊಬ್ಬರ ಕೊರಳಲ್ಲಿದ್ದ ಚಿನ್ನದ…

20 hours ago

ಬೈಕ್‌ನಲ್ಲಿ ಕರೆದೊಯ್ದು ಹಣ ಕಸಿದು ಜೀವ ಬೆದರಿಕೆ: 24 ಗಂಟೆಯಲ್ಲೇ ಆರೋಪಿ ಬಂಧನ

ಸಿಸಿಟಿವಿ ಹಾಗೂ ತಾಂತ್ರಿಕ ಮಾಹಿತಿ ಆಧರಿಸಿ ಆರೋಪಿಯ ಪತ್ತೆ; ಬೈಕ್, ಹಣ ವಶ ಹೊನ್ನಾವರ: ಬ್ಯಾಂಕ್‌ನಿಂದ ಹಣ ಪಡೆದು ಹೊರಬಂದ…

20 hours ago