Latest

75 ಲಕ್ಷ ವೆಚ್ಚದ ರಸ್ತೆ ಕಾಮಗಾರಿ ಕಳಪೆ.

ಕುಂದಗೋಳ; ತಾಲೂಕಿನ ಯರೇನಾರಾಯಣಪೂರ ಗ್ರಾಮದದಿಂದ ರಾಜ್ಯ ಹೆದ್ದಾರಿಗೆ ಸಂಪರ್ಕ ಕಲ್ಪಿಸುವ ರಸ್ತೆ ಕಾಮಗಾರಿ ಮುಗಿದು ಕೆಲವು ತಿಂಗಳ ಕಳೆಯುವಷ್ಟರಲ್ಲಿ ಡಾಂಬರು ಕಿತ್ತು ಹೋಗಿದ್ದು, ಸಾರ್ವಜನಿಕ ಆಕ್ರೋಶಕ್ಕೆ ಕಾರಣವಾಗಿದೆ.

ಸುಮಾರು 75 ಲಕ್ಷ ರೂಪಾಯಿ ಅನುದಾನದಲ್ಲಿ ಲೋಕೋಪಯೋಗಿ ಇಲಾಖೆಯಿಂದ ರಸ್ತೆ ಡಾಂಬರೀಕರಣ ಮಾಡಲಾಗಿದೆ. ಗುತ್ತಿಗೆದಾರನ ಕಳಪೆ ಕಾಮಗಾರಿಯಿಂದ ಕೆಲವು ತಿಂಗಳು ಕಳೆಯುವಷ್ಟರಲ್ಲಿ ಕೆಲವಡೆ ರಸ್ತೆ ಕಿತ್ತೂ ಹೋಗಿದೆ. ಹಾಗಾದರೆ ಕಮಿಶನ್ ದಂದೇನಾ? ಅಥವಾ ಹಣ ಕೊಳ್ಳೆ ಹೊಡೆಯಲೂ ದಾರೀನಾ? ಎಂಬ ಪ್ರಶ್ನೆ ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.

ನೇಮ್ ಆಫ್ ವರ್ಕ್ ನಲ್ಲಿ ಯರೇನಾರಾಯಣಪೂರ ಗ್ರಾಮದಿಂದ ರಾಜ್ಯ ಹೆದ್ದಾರಿ-137 ಕೂಡು ರಸ್ತೆಗೆ ಅಲ್ಲಿವರಿಗೊ ಡಾಂಬರೀಕರಣ ಮಾಡಬೇಕು ಆದರೆ ಹನುಮಂತಗೌಡ್ರ ಟೋಪನಗೌಡ್ರ ಎಂಬಾತರ ಮನೆಯವರಿಗೆ ಮಾತ್ರ ಡಾಂಬರೀಕರಣ ಮಾಡಲಾಗಿದೆ. ಅಂದಹಾಗೆ ಹಣ ಕೊಳ್ಳಿಹೊಡೆಯಲು ಪ್ರಯತ್ನಕ್ಕೆ ಮುಂದಾದ್ರಾ ಅನ್ನುವುದು ಸಂಶಯಕ್ಕೆ ಎಡೆಮಾಡಿಕೊಟ್ಟಿದೆ. ಇದಲ್ಲದೆ ಕಳಪೆ ಮಟ್ಟದ ರಸ್ತೆ ಅಭಿವೃದ್ಧಿ ಪಡಿಸಿ ಕೆಲವು ದಿನಗಳ ಬಳಿಕ ಮತ್ತೆ ಪ್ಯಾಚ್ ವರ್ಕ ಸಹ ಮಾಡಿದ್ದಾರೆ. ಆದರೂ ರಸ್ತೆ ಅಭಿವೃದ್ಧಿ ಹೇಳಿ ಕೊಳ್ಳುವ ಅಂತ ಕೆಲಸ ಮಾಡಿಲ್ಲ ಎಂದು ಇಲ್ಲಿನ ಗ್ರಾಮಸ್ಥರು ದೂರಿದರು.

ಸರಕಾರಗಳು ಗ್ರಾಮೀಣ ಜನರಿಗೆ ಸುಗಮ ಸಂಚಾರಕ್ಕೆ ಗ್ರಾಮೀಣ ಪಥಗಳನ್ನು ನಿರ್ಮಾಣ ಮಾಡಲು ಲಕ್ಷ ಲಕ್ಷ ಹಣ ಬಿಡುಗಡೆಗೊಳಿಸುತ್ತೆ. ಆದರೆ ಲೂಟಿ ಹೊಡೆಯುವ ಖದೀಮರು ಮಾತ್ರ ಹಣ ಕಬಳಿಸಲು ಮುಂದಾಗುತ್ತಾರೆ. ”ಹಣವನ್ನು ಕಂಡರೆ ಹೆಣವು ಬಾಯಿ ಬಿಡುತ್ತದೆ” ಗಾದೆಗೆ ಸಮಾನವಾಗಿ ನಡೆದುಕೊಳ್ಳುತ್ತಾರೆ ಅಂದರೆ ಇವರುಗಳು ಎಂತ ನಾಲಾಯಕ್ ಇರಬೇಕು ಅಂತ ನೋಡಿ.

ಒಟ್ಟಾರೆ ಅಭಿವೃದ್ಧಿ ಹೊಂದಿದ ರಸ್ತೆ ಡಾಂಬರು ಕಿತ್ತು ತೆಗ್ಗು ಬಿಳ್ಳಲು ಪ್ರಾರಂಭಿಸಿದ್ದು ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದೆ. ಇದಲ್ಲದೆ ನೆಮ್ ಆಪ್ ವರ್ಕ್ ನಲ್ಲಿ ರಾಜ್ಯ ಹೆದ್ದಾರಿವರಿಗೊ ರಸ್ತೆ ಅಭಿವೃದ್ಧಿ ಪಡಿಸಿಬೇಕು ಆದರೆ ಇವರುಗಳು ಈ ಕಾರ್ಯಕ್ಕೆ ಮುಂದಾಗಿಲ್ಲ ಹಾಗಾಗಿ ಅಧಿಕಾರಿಗಳು ಸ್ಥಳೀಯ ಶಾಸಕರು ಸ್ಥಳಕ್ಕೆ ಬೇಟೆ ನೀಡಿ ಪರಿಶೀಲಿಸಿ ಗುತ್ತಿಗೆದಾರ ವಿರುದ್ಧ ಶಿಸ್ತು ಕ್ರಮಕ್ಕೆ ಮುಂದಾಗಬೇಕು ಎಂದು ಸ್ಥಳೀಯ ಗ್ರಾಮಸ್ಥರು ಆಗ್ರಹವಾಗಿದೆ.

ವರದಿ; ಶಾನು ಯಲಿಗಾರ

ಭ್ರಷ್ಟರ ಬೇಟೆ

Recent Posts

ಬಿಡದಿ ಟೌನ್‌ಶಿಪ್‌ ವಿರೋಧ ನಾಟಕ: ಅಲ್ಲಿ ಅನಿತಾ ಕುಮಾರಸ್ವಾಮಿ 100 ಎಕರೆ ಜಮೀನಿದೆ, ಕುಮಾರಸ್ವಾಮಿ ವಿರುದ್ಧ ಎಂ.ಬಿ. ಪಾಟೀಲ್ ವಾಗ್ದಾಳಿ

ಬೆಂಗಳೂರು: ಬಿಡದಿ ಟೌನ್‌ಶಿಪ್ ಯೋಜನೆಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ವ್ಯಕ್ತಪಡಿಸುತ್ತಿರುವ ವಿರೋಧ ರಾಜಕೀಯ ಪ್ರೇರಿತವಾಗಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…

3 hours ago

ಆದಾಯ ಮೀರಿ ಆಸ್ತಿ ಗಳಿಕೆ ಆರೋಪ: ಆರ್‌ಡಿಪಿಆರ್ ಎಇಇ ತಿಪ್ಪೇಸ್ವಾಮಿ ಮನೆ ಮೇಲೆ ಲೋಕಾಯುಕ್ತ ದಾಳಿ

ಬಳ್ಳಾರಿ: ಆದಾಯಕ್ಕಿಂತ ಅಧಿಕ ಪ್ರಮಾಣದಲ್ಲಿ ಆಸ್ತಿ ಸಂಪಾದಿಸಿರುವ ಆರೋಪದ ಹಿನ್ನೆಲೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ (ಆರ್‌ಡಿಪಿಆರ್) ಇಲಾಖೆಯ ಸಹಾಯಕ…

3 hours ago

ಸಚಿವ ಸತೀಶ್ ಜಾರಕಿಹೊಳಿ ಅಳಿಯ ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತ ವೈ. ಮಂಜುನಾಥ್ ಮನೆ ಸೇರಿ 6 ಕಡೆ ಇಡಿ ದಾಳಿ

ಬೆಳಗಾವಿ: ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತ ವೈ. ಮಂಜುನಾಥ್ ಅವರ ನಿವಾಸ ಸೇರಿದಂತೆ ರಾಜ್ಯದ ವಿವಿಧ ಆರು ಸ್ಥಳಗಳಲ್ಲಿ ಜಾರಿ…

3 hours ago

ಮದುವೆಗೆ ಕೆಲವೇ ದಿನ ಬಾಕಿ… ಭಾವಿ ಪತ್ನಿಯಿಂದಲೇ 400 ಅಡಿ ಕಣಿವೆಗೆ ತಳ್ಳಿ ಹತ್ಯೆ!

ಪುಣೆಯಲ್ಲಿ ನಡೆದ ಭೀಕರ ಘಟನೆ ಒಂದು ದೇಶವನ್ನೇ ಬೆಚ್ಚಿಬೀಳಿಸಿದೆ. ಮದುವೆಗೆ ಸಕಲ ಸಿದ್ಧತೆಗಳು ನಡೆಯುತ್ತಿದ್ದ ಸಂದರ್ಭದಲ್ಲಿ, ತನ್ನನ್ನು ಮದುವೆಯಾಗಬೇಕಿದ್ದ ಯುವಕನನ್ನೇ…

3 hours ago

ಲಿವ್-ಇನ್ ಸಂಬಂಧಕ್ಕೆ ವಿರೋಧಿಸಿದ್ದ ತಂದೆ-ತಾಯಿ, ತಂಗಿಯನ್ನೇ ಕೊಂದ ಯುವತಿ! ಬೆಂಗಳೂರಿನಲ್ಲಿ ಬೆಚ್ಚಿಬೀಳಿಸಿದ ತ್ರಿವಳಿ ಹತ್ಯೆ

ಬೆಂಗಳೂರು ನಗರವನ್ನು ಬೆಚ್ಚಿಬೀಳಿಸುವಂತ ದಾರುಣ ಘಟನೆ ಪೂರ್ವ ಭಾಗದ ಕೆ.ಆರ್.ಪುರಂ ಪೊಲೀಸ್ ಠಾಣಾ ವ್ಯಾಪ್ತಿಯ ಸೀಗೇಹಳ್ಳಿಯಲ್ಲಿ ಬೆಳಕಿಗೆ ಬಂದಿದೆ. ಲಿವ್-ಇನ್…

3 hours ago

ಸಿನಿಮಾ ಸ್ಟೈಲ್ ಲಾರಿ ದರೋಡೆ: 24 ಗಂಟೆಯಲ್ಲಿ ಆರೋಪಿಗಳ ಬಂಧನ

ಆನೇಕಲ್‌ನಲ್ಲಿ ಸಿನಿಮಾವನ್ನು ನೆನಪಿಸುವ ರೀತಿಯಲ್ಲಿ ನಡೆದ ಲಾರಿ ದರೋಡೆ ಪ್ರಕರಣವನ್ನು ಸೂರ್ಯನಗರ ಪೊಲೀಸರು ಕೇವಲ 24 ಗಂಟೆಗಳೊಳಗೆ ಭೇದಿಸಿ ಮೂವರು…

3 hours ago