Latest

75 ಲಕ್ಷ ವೆಚ್ಚದ ರಸ್ತೆ ಕಾಮಗಾರಿ ಕಳಪೆ.

ಕುಂದಗೋಳ; ತಾಲೂಕಿನ ಯರೇನಾರಾಯಣಪೂರ ಗ್ರಾಮದದಿಂದ ರಾಜ್ಯ ಹೆದ್ದಾರಿಗೆ ಸಂಪರ್ಕ ಕಲ್ಪಿಸುವ ರಸ್ತೆ ಕಾಮಗಾರಿ ಮುಗಿದು ಕೆಲವು ತಿಂಗಳ ಕಳೆಯುವಷ್ಟರಲ್ಲಿ ಡಾಂಬರು ಕಿತ್ತು ಹೋಗಿದ್ದು, ಸಾರ್ವಜನಿಕ ಆಕ್ರೋಶಕ್ಕೆ ಕಾರಣವಾಗಿದೆ.

ಸುಮಾರು 75 ಲಕ್ಷ ರೂಪಾಯಿ ಅನುದಾನದಲ್ಲಿ ಲೋಕೋಪಯೋಗಿ ಇಲಾಖೆಯಿಂದ ರಸ್ತೆ ಡಾಂಬರೀಕರಣ ಮಾಡಲಾಗಿದೆ. ಗುತ್ತಿಗೆದಾರನ ಕಳಪೆ ಕಾಮಗಾರಿಯಿಂದ ಕೆಲವು ತಿಂಗಳು ಕಳೆಯುವಷ್ಟರಲ್ಲಿ ಕೆಲವಡೆ ರಸ್ತೆ ಕಿತ್ತೂ ಹೋಗಿದೆ. ಹಾಗಾದರೆ ಕಮಿಶನ್ ದಂದೇನಾ? ಅಥವಾ ಹಣ ಕೊಳ್ಳೆ ಹೊಡೆಯಲೂ ದಾರೀನಾ? ಎಂಬ ಪ್ರಶ್ನೆ ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.

ನೇಮ್ ಆಫ್ ವರ್ಕ್ ನಲ್ಲಿ ಯರೇನಾರಾಯಣಪೂರ ಗ್ರಾಮದಿಂದ ರಾಜ್ಯ ಹೆದ್ದಾರಿ-137 ಕೂಡು ರಸ್ತೆಗೆ ಅಲ್ಲಿವರಿಗೊ ಡಾಂಬರೀಕರಣ ಮಾಡಬೇಕು ಆದರೆ ಹನುಮಂತಗೌಡ್ರ ಟೋಪನಗೌಡ್ರ ಎಂಬಾತರ ಮನೆಯವರಿಗೆ ಮಾತ್ರ ಡಾಂಬರೀಕರಣ ಮಾಡಲಾಗಿದೆ. ಅಂದಹಾಗೆ ಹಣ ಕೊಳ್ಳಿಹೊಡೆಯಲು ಪ್ರಯತ್ನಕ್ಕೆ ಮುಂದಾದ್ರಾ ಅನ್ನುವುದು ಸಂಶಯಕ್ಕೆ ಎಡೆಮಾಡಿಕೊಟ್ಟಿದೆ. ಇದಲ್ಲದೆ ಕಳಪೆ ಮಟ್ಟದ ರಸ್ತೆ ಅಭಿವೃದ್ಧಿ ಪಡಿಸಿ ಕೆಲವು ದಿನಗಳ ಬಳಿಕ ಮತ್ತೆ ಪ್ಯಾಚ್ ವರ್ಕ ಸಹ ಮಾಡಿದ್ದಾರೆ. ಆದರೂ ರಸ್ತೆ ಅಭಿವೃದ್ಧಿ ಹೇಳಿ ಕೊಳ್ಳುವ ಅಂತ ಕೆಲಸ ಮಾಡಿಲ್ಲ ಎಂದು ಇಲ್ಲಿನ ಗ್ರಾಮಸ್ಥರು ದೂರಿದರು.

ಸರಕಾರಗಳು ಗ್ರಾಮೀಣ ಜನರಿಗೆ ಸುಗಮ ಸಂಚಾರಕ್ಕೆ ಗ್ರಾಮೀಣ ಪಥಗಳನ್ನು ನಿರ್ಮಾಣ ಮಾಡಲು ಲಕ್ಷ ಲಕ್ಷ ಹಣ ಬಿಡುಗಡೆಗೊಳಿಸುತ್ತೆ. ಆದರೆ ಲೂಟಿ ಹೊಡೆಯುವ ಖದೀಮರು ಮಾತ್ರ ಹಣ ಕಬಳಿಸಲು ಮುಂದಾಗುತ್ತಾರೆ. ”ಹಣವನ್ನು ಕಂಡರೆ ಹೆಣವು ಬಾಯಿ ಬಿಡುತ್ತದೆ” ಗಾದೆಗೆ ಸಮಾನವಾಗಿ ನಡೆದುಕೊಳ್ಳುತ್ತಾರೆ ಅಂದರೆ ಇವರುಗಳು ಎಂತ ನಾಲಾಯಕ್ ಇರಬೇಕು ಅಂತ ನೋಡಿ.

ಒಟ್ಟಾರೆ ಅಭಿವೃದ್ಧಿ ಹೊಂದಿದ ರಸ್ತೆ ಡಾಂಬರು ಕಿತ್ತು ತೆಗ್ಗು ಬಿಳ್ಳಲು ಪ್ರಾರಂಭಿಸಿದ್ದು ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದೆ. ಇದಲ್ಲದೆ ನೆಮ್ ಆಪ್ ವರ್ಕ್ ನಲ್ಲಿ ರಾಜ್ಯ ಹೆದ್ದಾರಿವರಿಗೊ ರಸ್ತೆ ಅಭಿವೃದ್ಧಿ ಪಡಿಸಿಬೇಕು ಆದರೆ ಇವರುಗಳು ಈ ಕಾರ್ಯಕ್ಕೆ ಮುಂದಾಗಿಲ್ಲ ಹಾಗಾಗಿ ಅಧಿಕಾರಿಗಳು ಸ್ಥಳೀಯ ಶಾಸಕರು ಸ್ಥಳಕ್ಕೆ ಬೇಟೆ ನೀಡಿ ಪರಿಶೀಲಿಸಿ ಗುತ್ತಿಗೆದಾರ ವಿರುದ್ಧ ಶಿಸ್ತು ಕ್ರಮಕ್ಕೆ ಮುಂದಾಗಬೇಕು ಎಂದು ಸ್ಥಳೀಯ ಗ್ರಾಮಸ್ಥರು ಆಗ್ರಹವಾಗಿದೆ.

ವರದಿ; ಶಾನು ಯಲಿಗಾರ

ಭ್ರಷ್ಟರ ಬೇಟೆ

Recent Posts

ಚಲಿಸುವ ರೈಲು ಕೆಳಗೆ ಸಿಲುಕಿದ ತಂದೆ-ಮಗು: ಅದಮ್ಯ ಧೈರ್ಯದಿಂದ ಪಾರಾದ ಜೀವಗಳು!

ಬಾಂಗ್ಲಾದೇಶದ ಕಿಶೋರ್‌ಗಂಜ್ ಜಿಲ್ಲೆಯ ಭೈರಬ್ ರೈಲು ನಿಲ್ದಾಣದಲ್ಲಿ ನಡೆದ ಹೃದಯ ಕಲುಕುವ ಘಟನೆ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ…

10 hours ago

ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಗೃಹಿಣಿ ಆತ್ಮಹತ್ಯೆ: ಅಥಣಿಯಲ್ಲಿ ಹೃದಯವಿದ್ರಾವಕ ಘಟನೆ

ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ಶಂಕರಮಠ ಗಲ್ಲಿಯಲ್ಲಿ 15 ವರ್ಷಗಳ ದಾಂಪತ್ಯ ಜೀವನ ನಡೆಸಿದ್ದ ಮಹಿಳೆಯೊಬ್ಬಳು ಗಂಡನ ವರದಕ್ಷಿಣೆ ಕಿರುಕುಳಕ್ಕೆ…

10 hours ago

ಬಿಜೆಪಿ ಯುವ ಮೋರ್ಚಾ ನಾಯಕ ವೆಂಕಟೇಶ್ ಕೊಲೆ ಪ್ರಕರಣ: ಆರು ಅಪರಾಧಿಗಳಿಗೆ ಗಲ್ಲು ಶಿಕ್ಷೆ

ಬಿಜೆಪಿ ಯುವ ಮೋರ್ಚಾದ ನಗರ ಘಟಕದ ಅಧ್ಯಕ್ಷ ವೆಂಕಟೇಶ ಕುರುಬರ್ ಅಲಿಯಾಸ್ ಜೆಎನ್‌ಎನ್ ವೆಂಕಿ ಹತ್ಯೆ ಪ್ರಕರಣದಲ್ಲಿ ಭಾಗಿಯಾಗಿದ್ದ ಆರು…

10 hours ago

66ರ ವೃದ್ಧನಿಗೆ 35ರ ಯುವತಿಯೊಂದಿಗೆ ಮದುವೆ! ವಯಸ್ಸು ಕೇವಲ ಸಂಖ್ಯೆ ಮಾತ್ರವೇ?

66 ವರ್ಷದ ಸೋಮ್ ದೇವ್ ಮತ್ತು 35 ವರ್ಷದ ಯುವತಿಯ ವಿವಾಹ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ.…

10 hours ago

ವಿಮೆ-ಆಸ್ತಿ ಲಾಭಕ್ಕಾಗಿ ಗಂಡನ ಕೊಲೆ: ಹರಿಯಾಣದಲ್ಲಿ ಪ್ರಿಯಕರ ನೊಂದಿಗೆ ಪತ್ನಿ ರಚಿಸಿದ್ದ ಸಂಚು ಬಯಲು.!

ಹರಿಯಾಣದ ಚರ್ಕಿ ದಾದ್ರಿ ಜಿಲ್ಲೆಯಲ್ಲಿ ನಡೆದ ಭೀಕರ ಘಟನೆಯೊಂದು ಮಾನವ ಸಂಬಂಧಗಳನ್ನೇ ಪ್ರಶ್ನಿಸುವಂತೆ ಮಾಡಿದೆ. ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿ,…

10 hours ago

ಬೆಂಗಳೂರು ಡ್ರಗ್ಸ್ ಜಾಲದ ಮೇಲೆ ಭಾರೀ ದಾಳಿ: ₹36 ಕೋಟಿ ಮೌಲ್ಯದ ಮಾದಕ ವಸ್ತು ಜಪ್ತಿ, 16 ಮಂದಿ ಬಂಧನ

ರಾಜಧಾನಿ ಬೆಂಗಳೂರಿನಲ್ಲಿ ಡ್ರಗ್ಸ್ ಮಾಫಿಯಾ ವಿರುದ್ಧ ಪೊಲೀಸರು ಭರ್ಜರಿ ಕಾರ್ಯಾಚರಣೆ ಮುಂದುವರೆಸಿದ್ದು, ನಾಲ್ವರು ವಿದೇಶಿಯರು ಸೇರಿದಂತೆ ಒಟ್ಟು 16 ಮಂದಿಯನ್ನು…

15 hours ago