ನಗರ ಸಿಇಎನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ವಂಚನೆ ಪ್ರಕರಣದಲ್ಲಿ ಕೇರಳದ ಕಣ್ಣೂರಿನ ಪತಾಯಕುನ್ನು ಉಮ್ಮರ್ ವಲಿಯ ಪರಂಬತ್ (41) ಮತ್ತು ರಿಯಾಝ್ ಎಂ.ವಿ. (45) ಎಂಬ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಷೇರು ಮಾರುಕಟ್ಟೆಯಲ್ಲಿ ಹೆಚ್ಚಿನ ಲಾಭಾಂಶ ನೀಡುವುದಾಗಿ ವಾಟ್ಸಾಪ್ ಮೂಲಕ ಸಂದೇಶ ಕಳುಹಿಸಿ, ಹಂತ ಹಂತವಾಗಿ 77,96,322.08 ರೂ. ವಂಚನೆ ಮಾಡಲಾಗಿದೆ. ಹಣ ತೊಡಗಿಸಿದ ವ್ಯಕ್ತಿಗೆ ಲಾಭಾಂಶ ನೀಡದೆ ಮೋಸಮಾಡಿದ ಆರೋಪಿಗಳು, ಈ ಬಗ್ಗೆ ಸಂತ್ರಸ್ತರಿಂದ ಸೆನ್ ಠಾಣೆಯಲ್ಲಿ ದೂರು ದಾಖಲಾಗಿತ್ತು.
ಪ್ರಕರಣ ದಾಖಲಿಸಿ ತನಿಖೆ ನಡೆಸಿದ ಪೊಲೀಸರು, ವಂಚನೆಗೆ ಸಂಬಂಧಿಸಿದ ಬ್ಯಾಂಕ್ ಖಾತೆಗಳನ್ನು ಪರಿಶೀಲಿಸಿದರು. ಪರಿಶೀಲನೆಯ ವೇಳೆ ಪಶ್ಚಿಮ ಬಂಗಾಳ ಮೂಲದ ಖಾತೆಗೆ 26,27,114.4 ರೂ. ವರ್ಗಾವಣೆಯಾದುದು ಮತ್ತು ಅದರಿಂದ ಉಮ್ಮರ್ ವಲಿಯ ಪರಂಬತ್ ಖಾತೆಗೆ 6 ಲಕ್ಷ ರೂ. ಪಾವತಿಯಾದುದು ಪತ್ತೆಯಾಯಿತು.
ಪೊಲೀಸರು ತನಿಖೆ ಮುಂದುವರಿಸಿಕೊಂಡು, ರಿಯಾಝ್ ಎಂ.ವಿ. ಹಣವನ್ನು ವರ್ಗಾವಣೆ ಮಾಡಿರುವುದಾಗಿ ದೃಢಪಡಿಸಿದರು. ತಕ್ಷಣವೇ ಪ್ರಕರಣದಲ್ಲಿ ಭಾಗಿಯಾದ ಇಬ್ಬರು ವ್ಯಕ್ತಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
ಈ ಕಾರ್ಯಾಚರಣೆಯಲ್ಲಿ ಎಸಿಪಿ ರವೀಶ್ ನಾಯಕ, ಸೆನ್ ಠಾಣಾ ನಿರೀಕ್ಷಕ ಸತೀಶ್ ಎಂ.ಪಿ., ಮತ್ತು ಎಸ್ಸೆ ಗುರಪ್ಪಕಾಂತಿ ನೇತೃತ್ವದ ತಂಡ ಭಾಗವಹಿಸಿದೆ.
ಮೈಸೂರು: ಕೌಟುಂಬಿಕ ಕಲಹದ ರೂಪಾಂತರವಾಗಿ ಜಗಳ ತೀವ್ರತೆ ಪಡೆದು ಕೊಲೆಯಾದ ಹೃದಯವಿದ್ರಾವಕ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ…
ಬೆಂಗಳೂರು: ಮದುವೆಗಾಗಿ ಮನೆ ಖಾಲಿ ಇದ್ದನ್ನು ತಪ್ಪಾಗಿ ಬಳಸಿಕೊಂಡು ಬೃಹತ್ ಕಳ್ಳತನ ನಡೆಸಿದ ಮೂವರು ಆರೋಪಿಗಳನ್ನು ಸಿ.ಕೆ. ಅಚ್ಚುಕಟ್ಟು ಠಾಣೆ…
ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನಲ್ಲಿ ಭ್ರಷ್ಟಾಚಾರದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಸೆಕ್ಷನ್ ಅಧಿಕಾರಿ…
ಹುಬ್ಬಳ್ಳಿ: ಮೂತ್ರ ವಿಸರ್ಜನೆಗೆಂದು ಹೊರಟಿದ್ದ ವ್ಯಕ್ತಿಯೊಬ್ಬನಿಗೆ ಹಾವು ಕಚ್ಚಿದ ಪರಿಣಾಮ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ದುರ್ಘಟನೆ ಹುಬ್ಬಳ್ಳಿಯ ಚನ್ನಪೇಟೆ…
ಹಾವೇರಿ: ಹಾನಗಲ್ ಸರ್ಕಲ್ ಇನ್ಸ್ಪೆಕ್ಟರ್ (ಸಿಪಿಐ) ಆಂಜನೇಯ ಎನ್.ಎಚ್. ಅವರನ್ನು ಸೇವೆಯಿಂದ ಅಮಾನತುಗೊಳಿಸುವ ಕ್ರಮ ಜರುಗಿದ್ದು, ಇದಕ್ಕೆ ಕಾರಣವಾಗಿರುವುದು ಸಮುದಾಯದ…
ಬೆಂಗಳೂರು ನಗರದಲ್ಲಿ ಮಕ್ಕಳ ಸುರಕ್ಷತೆಗಾಗಿ ಸಂಚಾರ ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದಾರೆ. ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ವೇಳೆಯಲ್ಲಿ ಮದ್ಯಪಾನ ಮಾಡಿಕೊಂಡು…