ನಗರ ಸಿಇಎನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ವಂಚನೆ ಪ್ರಕರಣದಲ್ಲಿ ಕೇರಳದ ಕಣ್ಣೂರಿನ ಪತಾಯಕುನ್ನು ಉಮ್ಮರ್ ವಲಿಯ ಪರಂಬತ್ (41) ಮತ್ತು ರಿಯಾಝ್ ಎಂ.ವಿ. (45) ಎಂಬ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಷೇರು ಮಾರುಕಟ್ಟೆಯಲ್ಲಿ ಹೆಚ್ಚಿನ ಲಾಭಾಂಶ ನೀಡುವುದಾಗಿ ವಾಟ್ಸಾಪ್ ಮೂಲಕ ಸಂದೇಶ ಕಳುಹಿಸಿ, ಹಂತ ಹಂತವಾಗಿ 77,96,322.08 ರೂ. ವಂಚನೆ ಮಾಡಲಾಗಿದೆ. ಹಣ ತೊಡಗಿಸಿದ ವ್ಯಕ್ತಿಗೆ ಲಾಭಾಂಶ ನೀಡದೆ ಮೋಸಮಾಡಿದ ಆರೋಪಿಗಳು, ಈ ಬಗ್ಗೆ ಸಂತ್ರಸ್ತರಿಂದ ಸೆನ್ ಠಾಣೆಯಲ್ಲಿ ದೂರು ದಾಖಲಾಗಿತ್ತು.
ಪ್ರಕರಣ ದಾಖಲಿಸಿ ತನಿಖೆ ನಡೆಸಿದ ಪೊಲೀಸರು, ವಂಚನೆಗೆ ಸಂಬಂಧಿಸಿದ ಬ್ಯಾಂಕ್ ಖಾತೆಗಳನ್ನು ಪರಿಶೀಲಿಸಿದರು. ಪರಿಶೀಲನೆಯ ವೇಳೆ ಪಶ್ಚಿಮ ಬಂಗಾಳ ಮೂಲದ ಖಾತೆಗೆ 26,27,114.4 ರೂ. ವರ್ಗಾವಣೆಯಾದುದು ಮತ್ತು ಅದರಿಂದ ಉಮ್ಮರ್ ವಲಿಯ ಪರಂಬತ್ ಖಾತೆಗೆ 6 ಲಕ್ಷ ರೂ. ಪಾವತಿಯಾದುದು ಪತ್ತೆಯಾಯಿತು.
ಪೊಲೀಸರು ತನಿಖೆ ಮುಂದುವರಿಸಿಕೊಂಡು, ರಿಯಾಝ್ ಎಂ.ವಿ. ಹಣವನ್ನು ವರ್ಗಾವಣೆ ಮಾಡಿರುವುದಾಗಿ ದೃಢಪಡಿಸಿದರು. ತಕ್ಷಣವೇ ಪ್ರಕರಣದಲ್ಲಿ ಭಾಗಿಯಾದ ಇಬ್ಬರು ವ್ಯಕ್ತಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
ಈ ಕಾರ್ಯಾಚರಣೆಯಲ್ಲಿ ಎಸಿಪಿ ರವೀಶ್ ನಾಯಕ, ಸೆನ್ ಠಾಣಾ ನಿರೀಕ್ಷಕ ಸತೀಶ್ ಎಂ.ಪಿ., ಮತ್ತು ಎಸ್ಸೆ ಗುರಪ್ಪಕಾಂತಿ ನೇತೃತ್ವದ ತಂಡ ಭಾಗವಹಿಸಿದೆ.
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…