ನಗರ ಸಿಇಎನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ವಂಚನೆ ಪ್ರಕರಣದಲ್ಲಿ ಕೇರಳದ ಕಣ್ಣೂರಿನ ಪತಾಯಕುನ್ನು ಉಮ್ಮರ್ ವಲಿಯ ಪರಂಬತ್ (41) ಮತ್ತು ರಿಯಾಝ್ ಎಂ.ವಿ. (45) ಎಂಬ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಷೇರು ಮಾರುಕಟ್ಟೆಯಲ್ಲಿ ಹೆಚ್ಚಿನ ಲಾಭಾಂಶ ನೀಡುವುದಾಗಿ ವಾಟ್ಸಾಪ್ ಮೂಲಕ ಸಂದೇಶ ಕಳುಹಿಸಿ, ಹಂತ ಹಂತವಾಗಿ 77,96,322.08 ರೂ. ವಂಚನೆ ಮಾಡಲಾಗಿದೆ. ಹಣ ತೊಡಗಿಸಿದ ವ್ಯಕ್ತಿಗೆ ಲಾಭಾಂಶ ನೀಡದೆ ಮೋಸಮಾಡಿದ ಆರೋಪಿಗಳು, ಈ ಬಗ್ಗೆ ಸಂತ್ರಸ್ತರಿಂದ ಸೆನ್ ಠಾಣೆಯಲ್ಲಿ ದೂರು ದಾಖಲಾಗಿತ್ತು.
ಪ್ರಕರಣ ದಾಖಲಿಸಿ ತನಿಖೆ ನಡೆಸಿದ ಪೊಲೀಸರು, ವಂಚನೆಗೆ ಸಂಬಂಧಿಸಿದ ಬ್ಯಾಂಕ್ ಖಾತೆಗಳನ್ನು ಪರಿಶೀಲಿಸಿದರು. ಪರಿಶೀಲನೆಯ ವೇಳೆ ಪಶ್ಚಿಮ ಬಂಗಾಳ ಮೂಲದ ಖಾತೆಗೆ 26,27,114.4 ರೂ. ವರ್ಗಾವಣೆಯಾದುದು ಮತ್ತು ಅದರಿಂದ ಉಮ್ಮರ್ ವಲಿಯ ಪರಂಬತ್ ಖಾತೆಗೆ 6 ಲಕ್ಷ ರೂ. ಪಾವತಿಯಾದುದು ಪತ್ತೆಯಾಯಿತು.
ಪೊಲೀಸರು ತನಿಖೆ ಮುಂದುವರಿಸಿಕೊಂಡು, ರಿಯಾಝ್ ಎಂ.ವಿ. ಹಣವನ್ನು ವರ್ಗಾವಣೆ ಮಾಡಿರುವುದಾಗಿ ದೃಢಪಡಿಸಿದರು. ತಕ್ಷಣವೇ ಪ್ರಕರಣದಲ್ಲಿ ಭಾಗಿಯಾದ ಇಬ್ಬರು ವ್ಯಕ್ತಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
ಈ ಕಾರ್ಯಾಚರಣೆಯಲ್ಲಿ ಎಸಿಪಿ ರವೀಶ್ ನಾಯಕ, ಸೆನ್ ಠಾಣಾ ನಿರೀಕ್ಷಕ ಸತೀಶ್ ಎಂ.ಪಿ., ಮತ್ತು ಎಸ್ಸೆ ಗುರಪ್ಪಕಾಂತಿ ನೇತೃತ್ವದ ತಂಡ ಭಾಗವಹಿಸಿದೆ.
ಲೋಕಾಯುಕ್ತ ಕಚೇರಿಯ ಹಿರಿಯ ಅಧಿಕಾರಿ ಎಂದು ಸುಳ್ಳು ಪರಿಚಯ ನೀಡಿ, ಲೋಕೋಪಯೋಗಿ ಇಲಾಖೆಯ ಇಂಜಿನಿಯರ್ನಿಂದ ಹಣ ವಸೂಲಿ ಮಾಡಲು ಯತ್ನಿಸಿದ…
ಜಮೀನಿನ ಖಾತಾ ಉತಾರ ನೀಡಲು ಲಂಚ ಸ್ವೀಕರಿಸಿದ ಆರೋಪದಲ್ಲಿ ಬಿಜನಗೇರಾ ಗ್ರಾಮ ಪಂಚಾಯಿತಿ ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಅಧಿಕಾರಿಗಳ…
ಅಯೋಧ್ಯೆಯ ರಾಮಮಂದಿರವನ್ನು ಗುರಿಯಾಗಿಸಿಕೊಂಡು ಸಂಚು ರೂಪಿಸಿದ್ದಾನೆ ಎಂಬ ಆರೋಪದ ಮೇಲೆ ಬಂಧಿತನಾಗಿರುವ ಶಂಕಿತ ಉಗ್ರ ಸುಹೇಲ್ ಪ್ರಕರಣಕ್ಕೆ ಹೊಸ ತಿರುವು…
ಉತ್ತರ ಪ್ರದೇಶದ ಅಲಿಗಢ್ನಲ್ಲಿ ಅಪ್ರಾಪ್ತ ಬಾಲಕನ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ತನ್ನದೇ 17…
ಬೆಂಗಳೂರಿನ ರಾಜರಾಜೇಶ್ವರಿ ನಗರದ ಐಷಾರಾಮಿ ಅಪಾರ್ಟ್ಮೆಂಟ್ನಲ್ಲಿ ಉದ್ಯಮಿ ವೈಶಾಕ್ (45) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಹಲವು ಅನುಮಾನಗಳಿಗೆ…
ಮೈಸೂರು ನಗರದ ದಟ್ಟಗಳ್ಳಿ ಪ್ರದೇಶದಲ್ಲಿರುವ ಸಚಿವ ಸತೀಶ್ ಜಾರಕಿಹೊಳಿ ಅವರ ಸಂಬಂಧಿ ವೈ. ಮಂಜುನಾಥ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ…