ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ನಗರದಲ್ಲಿ ಸಂಭವಿಸಿದ ಒಂದು ಮರ್ಮವಿದ್ರಾವಕ ಘಟನೆ, ಮನುಷ್ಯತ್ವದ ಅರಿವು ಮೂಡಿಸಬೇಕಾದ ಅಗತ್ಯವನ್ನು ಮತ್ತೆ ಒಂದು ಬಾರಿ ನೆನಪಿಸಿದೆ. ಮೇ 31, 2025ರಂದು ಶಿಡ್ಲಘಟ್ಟದ ರೈಲ್ವೆ ನಿಲ್ದಾಣದ ಹತ್ತಿರ, 30 ವರ್ಷದ ಮಾನಸಿಕ ಅಸ್ವಸ್ಥ ಮಹಿಳೆಯೊಬ್ಬರು ಶವವಾಗಿ ಪತ್ತೆಯಾಗಿದ್ದಾರೆ. ಮೃತಳನ್ನು ಜಂಗಮಕೋಟೆ ಗ್ರಾಮದ ರೇಣುಕಾ ಎಂದು ಗುರುತಿಸಲಾಗಿದೆ.
ಅದರಲ್ಲೂ ಆಕೆ 8 ತಿಂಗಳ ಗರ್ಭಿಣಿಯಾಗಿದ್ದನ್ನು ಕಂಡು, ಸ್ಥಳೀಯರಲ್ಲಿ ತೀವ್ರ ಆಕ್ರೋಶ ಮೂಡಿದೆ. ದಿಕ್ಕು ತೋಚದೇ ಬೀದಿಗಳಲ್ಲಿ ಅಲೆದಾಡುತ್ತಿದ್ದ ಈಕೆಯು, ದುಷ್ಕರ್ಮಿಗಳ ದೈಹಿಕ ದುರ್ಬಳಕೆಗೆ ಬಲಿಯಾಗಿದ್ದಾಳೆ ಎಂಬ ಶಂಕೆ ವ್ಯಕ್ತವಾಗಿದೆ. ಸಮಾಜದ ಅಂಚಿನಲ್ಲಿ ಬದುಕುತ್ತಿದ್ದ, ಯಾರಿಗೂ ಕಾಣಿಸದ ರೇಣುಕಾಳ ದಾರುಣ ಅಂತ್ಯವು ಈ ಜಾಗೃತಿಗೆ ಕರೆಗೆಳಿಸುತ್ತಿದೆ.
ಘಟನೆಯ ಮಾಹಿತಿ ಸಿಗುತ್ತಿದ್ದಂತೆ ಶಿಡ್ಲಘಟ್ಟದ ಪಿಎಸ್ಐ ವೇಣುಗೋಪಾಲ್ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದರು. ಕೇವಲ ಕರ್ತವ್ಯಕ್ಕೆ ಸೀಮಿತವಾಗದೇ, ಅವರು ಮರಣೋತ್ತರ ಸಂಸ್ಕಾರ ಕಾರ್ಯಕ್ಕಾಗಿ ವೈಯಕ್ತಿಕವಾಗಿ ಹಣ ಒದಗಿಸಿ ಮಾನವೀಯತೆ ಮೆರೆದಿದ್ದಾರೆ. ಅವರ ಈ ನಡೆ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದೆ.
ಕರ್ನಾಟಕ ಹೈಕೋರ್ಟ್ನಲ್ಲಿ ವೃತ್ತಿಜೀವನ ಆರಂಭಿಸಲು ಬಯಸುವವರಿಗೆ ಉತ್ತಮ ಅವಕಾಶ ಒದಗಿದೆ. ಸಹಾಯಕ ನ್ಯಾಯಾಲಯ ಕಾರ್ಯದರ್ಶಿ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಅಧಿಸೂಚನೆ…
ಬೆಂಗಳೂರುದಲ್ಲಿ ನಿರುದ್ಯೋಗಿ ಯುವಕರನ್ನೇ ಗುರಿಯಾಗಿಸಿಕೊಂಡು ಕೋರ್ಟ್ನಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಕೋಟ್ಯಾಂತರ ರೂಪಾಯಿ ವಂಚನೆ ಮಾಡಿದ ದಂಪತಿಯನ್ನು ಪೊಲೀಸರು ಬಂಧಿಸಿದ್ದಾರೆ.…
ಬೆಂಗಳೂರಲ್ಲಿ ಪತಿ ಕಳೆದುಕೊಂಡವರು ಅಥವಾ ಗಂಡನಿಂದ ದೂರವಾದ ಮಹಿಳೆಯರನ್ನೇ ಗುರಿಯಾಗಿಸಿಕೊಂಡು ಮೋಸ ಮಾಡುತ್ತಿದ್ದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಮದುವೆ…
ಅಕ್ರಮ ಸಂಬಂಧಗಳು ಅನೇಕ ಕುಟುಂಬಗಳನ್ನು ಹಾಳು ಮಾಡುತ್ತಿರುವ ಉದಾಹರಣೆಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಅದರಲ್ಲಿ ಮತ್ತೊಂದು ಭೀಕರ ಘಟನೆ ಉತ್ತರ…
ಗೌರಿಬಿದನೂರು: ತಾಲೂಕಿನ ಹನುಮಂತಪುರ ಗ್ರಾಮದ ನಿವಾಸಿ ಉಮಾದೇವಿ (35) ಅವರು ರಸ್ತೆ ಅಪಘಾತದಲ್ಲಿ ಮೃತಪಟ್ಟ ದುರ್ಘಟನೆ ಮಾರ್ಚ್ 20ರಂದು ಚಿಕ್ಕಕುರುಗೋಡು…
ಗೌರಿಬಿದನೂರು: ನಗರದಲ್ಲಿ ಗೃಹಬಳಕೆ ಅಡುಗೆ ಅನಿಲ ಸಿಲಿಂಡರ್ಗಳನ್ನು ವಾಣಿಜ್ಯ ಉದ್ದೇಶಗಳಿಗೆ ಬಳಸುತ್ತಿರುವ ಬಗ್ಗೆ ಮಾಹಿತಿ ಲಭ್ಯವಾದ ಹಿನ್ನೆಲೆ, ತಹಸೀಲ್ದಾರ್ ಅರವಿಂದ್…