Categories: CrimeLatest

8 ವರ್ಷದ ಪ್ರೀತಿ, 35 ಲಕ್ಷ ಹಣ, ಮೂರು ಗರ್ಭಪಾತ – PSI ಗೆ ಕೈ ಕೊಟ್ಟ ಮಹಿಳಾ ಪೇದೆ..!

ಯಾದಗಿರಿ ಜಿಲ್ಲೆಯ ಶಹಾಪುರ ಪೊಲೀಸ್ ಠಾಣೆಯಲ್ಲಿ ಸೇವೆ ಸಲ್ಲಿಸುತ್ತಿರುವ ಇಂಟಲಿಜೆನ್ಸ್ ಪಿಎಸ್‌ಐ ವಿರೇಶ್ ಆಲೂರು ಅವರು ಮಹಿಳಾ ಪೇದೆ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿರುವ ಘಟನೆ ಇದೀಗ ಭಾರೀ ಚರ್ಚೆಗೆ ಗ್ರಾಸವಾಗಿದೆ. ಕಳೆದ ಎಂಟು ವರ್ಷಗಳಿಂದ ಪರಸ್ಪರ ಪ್ರೀತಿಯಲ್ಲಿ ಇದ್ದೆವು, ಆದರೆ ಈಗ ಮದುವೆಯ ಹಂತದಲ್ಲಿ ಜಾತಿಯ ಕಾರಣ ಹೇಳಿ ನನ್ನನ್ನು ದೂರ ಮಾಡಲಾಗುತ್ತಿದೆ ಎಂದು ಅವರು ಆರೋಪಿಸಿದ್ದಾರೆ.

ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಗುಬ್ಬೆವಾಡ ಗ್ರಾಮದ ಮೂಲದ ವಿರೇಶ್ ಆಲೂರು ಹಾಗೂ ಅಲ್ಲೇ ಸಮೀಪದ ಬಳಗಾನೂರಿನ ಮಹಿಳಾ ಪೇದೆ ನಡುವೆ ಸುಮಾರು ಎಂಟು ವರ್ಷಗಳ ಹಿಂದೆ ಪರಿಚಯವಾಗಿತ್ತು. ಸಿಂದಗಿಯ ಶ್ರೀ ಮಾತಾ ಕೋಚಿಂಗ್ ಸೆಂಟರ್‌ನಲ್ಲಿ ನಡೆದ ಸನ್ಮಾನ ಕಾರ್ಯಕ್ರಮದ ವೇಳೆ ಇಬ್ಬರ ಪರಿಚಯ ಪ್ರಾರಂಭವಾಗಿ, ನಂತರ ಅದು ಸ್ನೇಹದಿಂದ ಪ್ರೀತಿಗೆ ತಿರುಗಿದೆ ಎಂದು ಹೇಳಲಾಗಿದೆ.

ಇಬ್ಬರ ನಡುವೆ ದೀರ್ಘಕಾಲದ ಆತ್ಮೀಯ ಸಂಬಂಧ ಬೆಳೆದಿದ್ದು, ರಾಯಚೂರಿನ ಬಾಲಮರೆಮ್ಮ ದೇವಸ್ಥಾನದಲ್ಲಿ ಹಾರ ಬದಲಿಸಿಕೊಂಡು ಗಂಡ-ಹೆಂಡತಿಯಂತೆ ಬದುಕಿದ್ದೇವೆ ಎಂದು ವಿರೇಶ್ ಆರೋಪಿಸಿದ್ದಾರೆ. ಈ ಅವಧಿಯಲ್ಲಿ ಮೂರು ಬಾರಿ ಗರ್ಭಪಾತ ನಡೆದಿದೆ ಎಂಬುದನ್ನೂ ಅವರು ತಿಳಿಸಿದ್ದಾರೆ.

ಇದಷ್ಟೇ ಅಲ್ಲದೆ, ಮಹಿಳಾ ಪೇದೆ ವಿವಿಧ ಕಾರಣಗಳನ್ನು ನೀಡಿ ಹಂತ ಹಂತವಾಗಿ ಸುಮಾರು 35 ಲಕ್ಷ ರೂಪಾಯಿ ಹಣವನ್ನು ಪಡೆದಿದ್ದಾರೆ. ಆದರೆ ಇದೀಗ ಹಣವನ್ನು ಹಿಂದಿರುಗಿಸದೇ, ಮದುವೆಗೆ ನಿರಾಕರಿಸಿ ವಂಚನೆ ಮಾಡುತ್ತಿದ್ದಾರೆ ಎಂದು ವಿರೇಶ್ ದೂರಿದ್ದಾರೆ.

ಇಷ್ಟು ವರ್ಷಗಳ ಸಂಬಂಧದ ನಂತರ, ಮದುವೆಯ ವಿಚಾರ ಬಂದಾಗ ‘ಜಾತಿ’ಯ ವಿಷಯವನ್ನು ಮುಂದಿಟ್ಟುಕೊಂಡು ದೂರವಾಗುತ್ತಿರುವುದಾಗಿ ಆರೋಪಿಸಿರುವ ಅವರು, “ಇಷ್ಟು ದಿನ ಇಲ್ಲದ ಜಾತಿ ಈಗ ಏಕೆ?” ಎಂದು ಪ್ರಶ್ನಿಸಿದ್ದಾರೆ. ತಮ್ಮ ವಿಶ್ವಾಸವನ್ನು ದುರುಪಯೋಗಪಡಿಸಿಕೊಂಡು ಜೀವನವನ್ನೇ ಹಾಳು ಮಾಡಿದ್ದಾರೆ ಎಂದು ಅವರು ಅಳಲು ತೋಡಿಕೊಂಡಿದ್ದಾರೆ.

ಇದರ ನಡುವೆ, ಮಹಿಳಾ ಪೇದೆಯ ಮದುವೆ ಮೇ 7ರಂದು ರಾಯಚೂರಿನಲ್ಲಿ ಮತ್ತೊಬ್ಬ ಯುವಕನೊಂದಿಗೆ ನಿಶ್ಚಯವಾಗಿರುವುದು ಪ್ರಕರಣಕ್ಕೆ ಮತ್ತಷ್ಟು ತಿರುವು ನೀಡಿದೆ. ಮದುವೆಯನ್ನು ತಡೆಯುವಂತೆ ಮತ್ತು ತನಗೆ ನ್ಯಾಯ ದೊರಕುವಂತೆ ವಿರೇಶ್ ಆಗ್ರಹಿಸಿದ್ದಾರೆ.

ಪೊಲೀಸ್ ಇಲಾಖೆಯ ಇಬ್ಬರು ಸಿಬ್ಬಂದಿಗಳ ನಡುವಿನ ಈ ವಿವಾದ ಈಗ ಪೊಲೀಸ್ ವಲಯದಲ್ಲಿ ಭಾರೀ ಸಂಚಲನಕ್ಕೆ ಕಾರಣವಾಗಿದೆ. ಪ್ರಕರಣ ಯಾವ ದಿಕ್ಕಿಗೆ ತಿರುಗಲಿದೆ ಎಂಬುದು ಕಾದು ನೋಡಬೇಕಾಗಿದೆ.

ಭ್ರಷ್ಟರ ಬೇಟೆ

Recent Posts

‍ರೀಲ್ಸ್ ಮಾಡುವ ಹುಚ್ಚು, ಕರೆದಾಗ ಬಂದು ಜೊತೆಗೆ ಮಲಗುತ್ತಿರಲಿಲ್ಲ ಎಂದು ಪತ್ನಿಯನ್ನು ಕೊಂದ ಪತಿ

ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…

2 days ago

ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27ರ ಯುವತಿ ಸಾವು; ಉಡುಪಿಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ, ತನಿಖೆ ಚುರುಕು

ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…

2 days ago

‘ಅಂದು ನನ್ನೊಂದಿಗೆ ಮಲಗಲು ಕೇಳಿದ್ದು ನೀವೇ ತಾನೇ?’ ನಿರ್ಮಾಪಕನಿಗೆ ನಟಿ ಚಾಂದಿನಿ ಚೌಧರಿ ಶಾಕ್!

ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…

2 days ago

ಮದುವೆಯಾಗಿ 4 ದಿನಕ್ಕೆ ಮಾಜಿ ಪ್ರೇಮಿಯೊಂದಿಗೆ ಹೋಟೆಲ್ ನಲ್ಲಿ ಪತ್ನಿ; ಪತಿಯ ಕೈಗೆ ವಿಡಿಯೋ…!

ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…

2 days ago

ಪತ್ನಿಯನ್ನು ಕೊಂದು ಶವ ವಿಲೇವಾರಿಗೆ ಸ್ನೇಹಿತನ ನೆರವು ಕೇಳಿದ ಪತಿ; ಜಾಣತನದಿಂದ ಪೊಲೀಸರಿಗೆ ಒಪ್ಪಿಸಿದ ಗೆಳೆಯ!

ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…

2 days ago

ಹಂಪಿಯಲ್ಲಿ ಅಕ್ರಮ ಹೋಂಸ್ಟೇ, ವಾಣಿಜ್ಯ ಚಟುವಟಿಕೆ ಆರೋಪ: 54 ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಸ್ವಯಂಪ್ರೇರಿತ ದೂರು

ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…

2 days ago