Categories: CrimeLatest

8 ವರ್ಷದ ಪ್ರೀತಿ, 35 ಲಕ್ಷ ಹಣ, ಮೂರು ಗರ್ಭಪಾತ – PSI ಗೆ ಕೈ ಕೊಟ್ಟ ಮಹಿಳಾ ಪೇದೆ..!

ಯಾದಗಿರಿ ಜಿಲ್ಲೆಯ ಶಹಾಪುರ ಪೊಲೀಸ್ ಠಾಣೆಯಲ್ಲಿ ಸೇವೆ ಸಲ್ಲಿಸುತ್ತಿರುವ ಇಂಟಲಿಜೆನ್ಸ್ ಪಿಎಸ್‌ಐ ವಿರೇಶ್ ಆಲೂರು ಅವರು ಮಹಿಳಾ ಪೇದೆ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿರುವ ಘಟನೆ ಇದೀಗ ಭಾರೀ ಚರ್ಚೆಗೆ ಗ್ರಾಸವಾಗಿದೆ. ಕಳೆದ ಎಂಟು ವರ್ಷಗಳಿಂದ ಪರಸ್ಪರ ಪ್ರೀತಿಯಲ್ಲಿ ಇದ್ದೆವು, ಆದರೆ ಈಗ ಮದುವೆಯ ಹಂತದಲ್ಲಿ ಜಾತಿಯ ಕಾರಣ ಹೇಳಿ ನನ್ನನ್ನು ದೂರ ಮಾಡಲಾಗುತ್ತಿದೆ ಎಂದು ಅವರು ಆರೋಪಿಸಿದ್ದಾರೆ.

ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಗುಬ್ಬೆವಾಡ ಗ್ರಾಮದ ಮೂಲದ ವಿರೇಶ್ ಆಲೂರು ಹಾಗೂ ಅಲ್ಲೇ ಸಮೀಪದ ಬಳಗಾನೂರಿನ ಮಹಿಳಾ ಪೇದೆ ನಡುವೆ ಸುಮಾರು ಎಂಟು ವರ್ಷಗಳ ಹಿಂದೆ ಪರಿಚಯವಾಗಿತ್ತು. ಸಿಂದಗಿಯ ಶ್ರೀ ಮಾತಾ ಕೋಚಿಂಗ್ ಸೆಂಟರ್‌ನಲ್ಲಿ ನಡೆದ ಸನ್ಮಾನ ಕಾರ್ಯಕ್ರಮದ ವೇಳೆ ಇಬ್ಬರ ಪರಿಚಯ ಪ್ರಾರಂಭವಾಗಿ, ನಂತರ ಅದು ಸ್ನೇಹದಿಂದ ಪ್ರೀತಿಗೆ ತಿರುಗಿದೆ ಎಂದು ಹೇಳಲಾಗಿದೆ.

ಇಬ್ಬರ ನಡುವೆ ದೀರ್ಘಕಾಲದ ಆತ್ಮೀಯ ಸಂಬಂಧ ಬೆಳೆದಿದ್ದು, ರಾಯಚೂರಿನ ಬಾಲಮರೆಮ್ಮ ದೇವಸ್ಥಾನದಲ್ಲಿ ಹಾರ ಬದಲಿಸಿಕೊಂಡು ಗಂಡ-ಹೆಂಡತಿಯಂತೆ ಬದುಕಿದ್ದೇವೆ ಎಂದು ವಿರೇಶ್ ಆರೋಪಿಸಿದ್ದಾರೆ. ಈ ಅವಧಿಯಲ್ಲಿ ಮೂರು ಬಾರಿ ಗರ್ಭಪಾತ ನಡೆದಿದೆ ಎಂಬುದನ್ನೂ ಅವರು ತಿಳಿಸಿದ್ದಾರೆ.

ಇದಷ್ಟೇ ಅಲ್ಲದೆ, ಮಹಿಳಾ ಪೇದೆ ವಿವಿಧ ಕಾರಣಗಳನ್ನು ನೀಡಿ ಹಂತ ಹಂತವಾಗಿ ಸುಮಾರು 35 ಲಕ್ಷ ರೂಪಾಯಿ ಹಣವನ್ನು ಪಡೆದಿದ್ದಾರೆ. ಆದರೆ ಇದೀಗ ಹಣವನ್ನು ಹಿಂದಿರುಗಿಸದೇ, ಮದುವೆಗೆ ನಿರಾಕರಿಸಿ ವಂಚನೆ ಮಾಡುತ್ತಿದ್ದಾರೆ ಎಂದು ವಿರೇಶ್ ದೂರಿದ್ದಾರೆ.

ಇಷ್ಟು ವರ್ಷಗಳ ಸಂಬಂಧದ ನಂತರ, ಮದುವೆಯ ವಿಚಾರ ಬಂದಾಗ ‘ಜಾತಿ’ಯ ವಿಷಯವನ್ನು ಮುಂದಿಟ್ಟುಕೊಂಡು ದೂರವಾಗುತ್ತಿರುವುದಾಗಿ ಆರೋಪಿಸಿರುವ ಅವರು, “ಇಷ್ಟು ದಿನ ಇಲ್ಲದ ಜಾತಿ ಈಗ ಏಕೆ?” ಎಂದು ಪ್ರಶ್ನಿಸಿದ್ದಾರೆ. ತಮ್ಮ ವಿಶ್ವಾಸವನ್ನು ದುರುಪಯೋಗಪಡಿಸಿಕೊಂಡು ಜೀವನವನ್ನೇ ಹಾಳು ಮಾಡಿದ್ದಾರೆ ಎಂದು ಅವರು ಅಳಲು ತೋಡಿಕೊಂಡಿದ್ದಾರೆ.

ಇದರ ನಡುವೆ, ಮಹಿಳಾ ಪೇದೆಯ ಮದುವೆ ಮೇ 7ರಂದು ರಾಯಚೂರಿನಲ್ಲಿ ಮತ್ತೊಬ್ಬ ಯುವಕನೊಂದಿಗೆ ನಿಶ್ಚಯವಾಗಿರುವುದು ಪ್ರಕರಣಕ್ಕೆ ಮತ್ತಷ್ಟು ತಿರುವು ನೀಡಿದೆ. ಮದುವೆಯನ್ನು ತಡೆಯುವಂತೆ ಮತ್ತು ತನಗೆ ನ್ಯಾಯ ದೊರಕುವಂತೆ ವಿರೇಶ್ ಆಗ್ರಹಿಸಿದ್ದಾರೆ.

ಪೊಲೀಸ್ ಇಲಾಖೆಯ ಇಬ್ಬರು ಸಿಬ್ಬಂದಿಗಳ ನಡುವಿನ ಈ ವಿವಾದ ಈಗ ಪೊಲೀಸ್ ವಲಯದಲ್ಲಿ ಭಾರೀ ಸಂಚಲನಕ್ಕೆ ಕಾರಣವಾಗಿದೆ. ಪ್ರಕರಣ ಯಾವ ದಿಕ್ಕಿಗೆ ತಿರುಗಲಿದೆ ಎಂಬುದು ಕಾದು ನೋಡಬೇಕಾಗಿದೆ.

ಭ್ರಷ್ಟರ ಬೇಟೆ

Recent Posts

ಕರ್ಕಶ ಶಬ್ದದ ಬೈಕ್ ವಿಚಾರಕ್ಕೆ ಪೊಲೀಸರ ಮೇಲೆಯೇ ವಿದ್ಯಾರ್ಥಿಗಳ ಹಲ್ಲೆ

ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್‌ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…

5 hours ago

ಕ್ಯಾಂಟಿನ್‌ನಲ್ಲಿ ವೇಶ್ಯಾವಾಟಿಕೆ ದಂಧೆ: ಬೆಳ್ತಂಗಡಿಯಲ್ಲಿ ಪೊಲೀಸರ ದಾಳಿ, ಮೂವರು ಬಂಧನ

ಬೆಳ್ತಂಗಡಿ ಪಟ್ಟಣದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿದ್ದ ಕ್ಯಾಂಟಿನ್‌ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ…

5 hours ago

ಒಂದು ವರ್ಷದ ನಿರೀಕ್ಷೆಗೆ ತೆರೆ: ಭಟ್ಕಳಕ್ಕೆ ಖಾಯಂ ಎಸಿ, ಜೆ. ಮಹೇಶ್ ಅಧಿಕಾರ ಸ್ವೀಕಾರ

ಭಟ್ಕಳ: ಸುಮಾರು ಒಂದು ವರ್ಷದಿನಿಂದ ಖಾಲಿಯಾಗಿದ್ದ ಭಟ್ಕಳ ಉಪ ವಿಭಾಗಾಧಿಕಾರಿ (ಎಸಿ) ಹುದ್ದೆಗೆ ಕೊನೆಗೂ ಸರ್ಕಾರ ಅಧಿಕಾರಿಯನ್ನು ನೇಮಕ ಮಾಡಿದ್ದು,…

1 day ago

ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ. ಸುಧಾಕರ್ ನಿಧನ; ರಾಜಕೀಯ ವಲಯದಲ್ಲಿ ಶೋಕದ ಛಾಯೆ

ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾಗಿದ್ದ ಡಿ. ಸುಧಾಕರ್ (65) ಅವರು ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ…

1 day ago

ಆಂಟಿ ಹಿಂದೆ ಹೋದವನ ದುರಂತ ಅಂತ್ಯ: ಲಿವ್-ಇನ್ ಸಂಗಾತಿಯ ಕಿರುಕುಳಕ್ಕೆ ಯುವಕ ಆತ್ಮಹತ್ಯೆ!

ಸೋಶಿಯಲ್ ಮೀಡಿಯಾದಲ್ಲಿ ಆರಂಭವಾದ ಪ್ರೇಮಕಥೆಯೊಂದು ದುರಂತ ಅಂತ್ಯ ಕಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇನ್‌ಸ್ಟಾಗ್ರಾಮ್ ಮೂಲಕ ಪರಿಚಯವಾದ ಮಹಿಳೆಯೊಂದಿಗೆ ಲಿವ್-ಇನ್…

1 day ago

ಶಸ್ತ್ರಚಿಕಿತ್ಸೆಗೆ ದಾಖಲಾಗಿದ್ದ ಮಹಿಳೆಯ ಚಿನ್ನಾಭರಣ ಕಳವು: ಖಾಸಗಿ ಆಸ್ಪತ್ರೆ ಸಿಬ್ಬಂದಿ ವಶಕ್ಕೆ

ಬೆಂಗಳೂರು: ಶಸ್ತ್ರಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯ ಚಿನ್ನಾಭರಣ ಕಳವು ಮಾಡಿದ್ದ ಆರೋಪದ ಮೇಲೆ ಆಸ್ಪತ್ರೆಯ ಮಹಿಳಾ ಸಿಬ್ಬಂದಿಯನ್ನು ಹೆಣ್ಣೂರು…

2 days ago