ಬೆಳಗಾವಿ: ಅಪಾರ ಮೌಲ್ಯದ ಜಮೀನಿಗೆ ನಕಲಿ ದಾಖಲೆಗಳನ್ನು ಸೃಷ್ಟಿಸಿ, ತಾನೇ ಆಸ್ತಿಯ ನಿಜವಾದ ಮಾಲೀಕರಂತೆ ಬಿಂಬಿಸಿಕೊಂಡು ಅಕ್ರಮವಾಗಿ ಮಾರಾಟ ಮಾಡಿದ್ದ ಆರೋಪದ ಮೇಲೆ 80 ವರ್ಷದ ವೃದ್ಧೆಯನ್ನು ಬೆಳಗಾವಿಯ ಮಾರ್ಕೆಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಬಂಧಿತೆಯನ್ನು ವಡಗಾಂವ ಗಣೇಶ ಕಾಲೋನಿ ನಿವಾಸಿ ಮಂದಾಕಿನಿ ಪರಿಶವಾಡಕರ ಎಂದು ಗುರುತಿಸಲಾಗಿದೆ.
ಕಣಬರ್ಗಿ ರಸ್ತೆಯ ಮಹಾಂತೇಶ ನಗರದಲ್ಲಿರುವ ಪ್ಲಾಟ್ ಹಾಗೂ ಸಿಟಿಎಸ್ ಸಂಖ್ಯೆಯ ಜಾಗವು ರತ್ನಾ ಯಶವಂತ ಮಲ್ಲೂಕರ ಅವರಿಗೆ ಸೇರಿದ್ದಾಗಿತ್ತು. ಈ ಆಸ್ತಿಯನ್ನು ಕಬಳಿಸುವ ಉದ್ದೇಶದಿಂದ ಮಂದಾಕಿನಿ, ತಾನೇ ರತ್ನಾ ಮಲ್ಲೂಕರ ಎಂಬಂತೆ ಬಿಂಬಿಸಿಕೊಂಡು ನಕಲಿ ದಾಖಲೆಗಳನ್ನು ಸಿದ್ಧಪಡಿಸಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.
2023ರ ಸೆಪ್ಟೆಂಬರ್ 16ರಂದು ಬೆಳಗಾವಿ ಉತ್ತರ ಉಪನೋಂದಣಾಧಿಕಾರಿ ಕಚೇರಿಗೆ ತೆರಳಿದ್ದ ಆರೋಪಿ, ನಿಜವಾದ ಮಾಲೀಕರಂತೆ ನಟಿಸಿ ವೆಬ್ಕ್ಯಾಮ್ ಮುಂದೆ ಫೋಟೊ ತೆಗೆಸಿಕೊಂಡಿದ್ದಾಳೆ. ಬಳಿಕ ಹೆಬ್ಬೆರಳ ಗುರುತು ಹಾಗೂ ಸಹಿ ಹಾಕಿ, ಜಮೀನನ್ನು ಬೇರೊಬ್ಬರ ಹೆಸರಿಗೆ ಮಾರಾಟ ಮಾಡುವಂತೆ ನಕಲಿ ಸೇಲ್ಡೀಡ್ ಮಾಡಿಕೊಟ್ಟಿದ್ದಾಳೆ ಎನ್ನಲಾಗಿದೆ.
ತಮ್ಮ ಜಮೀನು ವಂಚನೆಯ ಮೂಲಕ ಮಾರಾಟವಾಗಿರುವ ವಿಚಾರ ತಿಳಿದುಬಂದ ಬಳಿಕ ನಿಜವಾದ ಮಾಲೀಕ ರತ್ನಾ ಅವರು 2025ರ ಫೆಬ್ರವರಿಯಲ್ಲಿ ಮಾರ್ಕೆಟ್ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದರು.
ದೂರು ಆಧರಿಸಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಕೈಗೊಂಡು ಮಂದಾಕಿನಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ವಂಚನೆಯ ಸಂಪೂರ್ಣ ಜಾಲ ಬೆಳಕಿಗೆ ಬಂದಿದೆ.
ಈ ಕೃತ್ಯಕ್ಕೆ ಸಹಕರಿಸಿದ ಆರೋಪದ ಮೇಲೆ ಕಾಕತಿಯ ಸಿದ್ದೇಶ್ವರ ನಗರದ ನಿವಾಸಿ ರಾಹುಲ್ ಅನೀಲ ಮಗದುಮ್ ವಿರುದ್ಧವೂ ಪ್ರಕರಣ ದಾಖಲಿಸಲಾಗಿದೆ. ಈತ ಇತರೆ ಪ್ರಕರಣಗಳಲ್ಲಿಯೂ ತಲೆಮರೆಸಿಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಆರೋಪಿಯ ಪತ್ತೆಗಾಗಿ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ.
ನಕಲಿ ದಾಖಲೆ ಸೃಷ್ಟಿಸಿ, ನಿಜವಾದ ಮಾಲೀಕರಂತೆ ನಟಿಸಿ ನೋಂದಣಿ ಕಚೇರಿಯಲ್ಲೇ ಜಮೀನು ಮಾರಾಟ ಮಾಡಿರುವ ಈ ಪ್ರಕರಣ ಇದೀಗ ಬೆಳಗಾವಿಯಲ್ಲಿ ಕುತೂಹಲಕ್ಕೆ ಕಾರಣವಾಗಿದೆ.
ಸೂರ್ಯಾಪೇಟೆ: ಅನೈತಿಕ ಸಂಬಂಧಕ್ಕೆ ಪತಿ ಅಡ್ಡಿಯಾಗಿದ್ದಾನೆ ಎಂಬ ಕಾರಣಕ್ಕೆ ಪತಿಯನ್ನೇ ಕೊಲೆ ಮಾಡಲು ಪತ್ನಿ ಹಾಗೂ ಆಕೆಯ ಕುಟುಂಬಸ್ಥರು ಸಂಚು…
ಸೋನ್ಭದ್ರ: ಗಂಡ ನೈಟ್ ಡ್ಯೂಟಿಗೆ ಹೋದ ಬಳಿಕ ಮಕ್ಕಳಿಗೆ ನಿದ್ರೆ ಮಾತ್ರೆ ನೀಡಿ, ಪ್ರಿಯಕರನನ್ನು ಮನೆಗೆ ಕರೆಸಿಕೊಳ್ಳುತ್ತಿದ್ದ ಪತ್ನಿ, ಕೊನೆಗೆ…
ಗೌರಿಬಿದನೂರು: ರೈಲ್ವೆ ಇಲಾಖೆಯ ಕಾಮಗಾರಿ ಕೆಲಸಕ್ಕೆ ತೆರಳುತ್ತಿದ್ದ ಕೂಲಿ ಕಾರ್ಮಿಕರಿದ್ದ ಬೊಲೆರೋ ವಾಹನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಪಲ್ಟಿಯಾದ…
ಹುಬ್ಬಳ್ಳಿ–ಧಾರವಾಡ: ಅವಳಿ ನಗರದಲ್ಲಿ ಮಾದಕ ವಸ್ತುಗಳ ಜಾಲವನ್ನು ಬೇರುಸಹಿತ ಕಿತ್ತುಹಾಕಲು ಹುಬ್ಬಳ್ಳಿ–ಧಾರವಾಡ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸುತ್ತಿದ್ದು, ಕಳೆದ ಮೂರು…
ಸಾಗರ: ಜಮೀನಿಗೆ ಅಕ್ರಮವಾಗಿ ವಿದ್ಯುತ್ ತಂತಿ ಅಳವಡಿಸಿ ಎರಡು ಗಂಡು ಜಿಂಕೆಗಳನ್ನು ವಿದ್ಯುತ್ ಸ್ಪರ್ಶದಿಂದ ಸಾಯಿಸಿ, ಅವುಗಳ ಮಾಂಸವನ್ನು ಜಮೀನಿನಲ್ಲೇ…
ಕುಮಟಾ: ನಗರದ ಪ್ರಸಿದ್ಧ ಕುಂಭೇಶ್ವರ ದೇವಸ್ಥಾನದ ಅರ್ಚಕ ವಿಶ್ವೇಶ್ವರ ಭಟ್ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರವಾರ ಜಿಲ್ಲಾ ಮತ್ತು…