ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನಲ್ಲಿ ಭಾರೀ ಭೂ ಹಗರಣೊಂದು ಬೆಳಕಿಗೆ ಬಂದಿದೆ. ನಕಲಿ ದಾಖಲೆಗಳನ್ನು ಸೃಷ್ಟಿಸಿ ಸುಮಾರು 9 ಎಕರೆ ಸರ್ಕಾರಿ ಜಮೀನನ್ನು ಖಾಸಗಿ ವ್ಯಕ್ತಿಗಳ ಹೆಸರಿಗೆ ಅಕ್ರಮವಾಗಿ ಮಂಜೂರು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಮೃತಪಟ್ಟ ನಿವೃತ್ತ ತಹಶೀಲ್ದಾರ್ ಸೇರಿದಂತೆ ನಾಲ್ವರು ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಾಗಿದೆ.
ಗೋಣಿಬೀಡು ಹೋಬಳಿಯ ದೇವವೃಂದ ಗ್ರಾಮದಲ್ಲಿನ ಸರ್ವೆ ನಂಬರ್ 313ರ ಹೆಚ್.4 ಮತ್ತು ಹೆಚ್.5 ವ್ಯಾಪ್ತಿಯ ಸರ್ಕಾರಿ ಜಮೀನು 2018-19ರಲ್ಲಿ ಅಕ್ರಮವಾಗಿ ಮಂಜೂರಾತಿ ಮಾಡಲಾಗಿದೆ ಎಂಬುದು ತನಿಖೆಯಲ್ಲಿ ಬಹಿರಂಗವಾಗಿದೆ. ಕೋಟ್ಯಂತರ ರೂಪಾಯಿ ಮೌಲ್ಯದ ಈ ಜಮೀನನ್ನು ನಿಯಮಗಳನ್ನು ಉಲ್ಲಂಘಿಸಿ ಖಾಸಗಿ ವ್ಯಕ್ತಿಗಳ ಪಾಲಾಗುವಂತೆ ಮಾಡಲಾಗಿದೆ.
ಈ ಪ್ರಕರಣದ ವಿಶೇಷ ಅಂಶವೆಂದರೆ, ಜಮೀನು ಪಡೆಯಲು ಸಂಬಂಧಿಸಿದವರು ಯಾವುದೇ ಅಧಿಕೃತ ಅರ್ಜಿಯನ್ನೇ ಸಲ್ಲಿಸಿರಲಿಲ್ಲ. ಆದರೂ ಅಧಿಕಾರಿಗಳು ದಾಖಲೆಗಳನ್ನು ತಿರುಚಿ, ಬೇರೆ ಕಡತಗಳಲ್ಲಿದ್ದ ಸಾಗುವಳಿ ಚೀಟಿಗಳನ್ನು ಬಳಸಿಕೊಂಡು ನಕಲಿ ದಾಖಲೆ ಸೃಷ್ಟಿಸಿದ್ದಾರೆ. ನಂತರ ನೇರವಾಗಿ ಖಾತೆ ಮಾಡಿಸುವ ಮೂಲಕ ಸರ್ಕಾರದ ಆಸ್ತಿಯನ್ನು ಖಾಸಗೀಕರಣಗೊಳಿಸಲು ಸಹಕರಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಪ್ರಾಥಮಿಕ ತನಿಖೆಯಲ್ಲಿ ಅಂದಿನ ತಹಶೀಲ್ದಾರ್ ಸೇರಿದಂತೆ ನಾಲ್ವರು ಅಧಿಕಾರಿಗಳ ಪಾತ್ರ ದೃಢಪಟ್ಟಿದೆ. ಇವರಲ್ಲಿ ಒಬ್ಬರು ಈಗಾಗಲೇ ಮೃತಪಟ್ಟಿದ್ದು, ಉಳಿದವರು ನಿವೃತ್ತರಾಗಿದ್ದಾರೆ. ಪ್ರಸ್ತುತ ಮೂಡಿಗೆರೆ ತಹಶೀಲ್ದಾರ್ ಅಶ್ವಿನಿ ನೀಡಿದ ದೂರಿನ ಮೇರೆಗೆ, ಕರ್ನಾಟಕ ಭೂ ಕಂದಾಯ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.
ಈ ಅಕ್ರಮದಿಂದ ನಿಕೇಶ್ ಪೆರೇರಾ ಮತ್ತು ಅನಿಶ್ ಪೆರೇರಾ ಎಂಬುವರು ಲಾಭ ಪಡೆದಿದ್ದಾರೆ ಎನ್ನಲಾಗಿದೆ. ಅರ್ಹತೆ ಇಲ್ಲದೇ ಹಾಗೂ ಯಾವುದೇ ಅರ್ಜಿ ಸಲ್ಲಿಸದೇ, ಅಧಿಕಾರಿಗಳ ಸಹಕಾರದಿಂದ ಸರ್ಕಾರಿ ಜಮೀನನ್ನು ತಮ್ಮ ಹೆಸರಿಗೆ ಮಾಡಿಸಿಕೊಂಡಿರುವುದು ದೊಡ್ಡ ಮಟ್ಟದ ವಿವಾದಕ್ಕೆ ಕಾರಣವಾಗಿದೆ.
ಸರ್ಕಾರಿ ಜಮೀನುಗಳನ್ನು ಕಾಪಾಡಬೇಕಾದ ಅಧಿಕಾರಿಗಳೇ ಅಕ್ರಮದಲ್ಲಿ ಭಾಗಿಯಾಗಿರುವುದು ಸಾರ್ವಜನಿಕರಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂಬ ಒತ್ತಾಯ ಹೆಚ್ಚುತ್ತಿದೆ.
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…