ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನಲ್ಲಿ ಭಾರೀ ಭೂ ಹಗರಣೊಂದು ಬೆಳಕಿಗೆ ಬಂದಿದೆ. ನಕಲಿ ದಾಖಲೆಗಳನ್ನು ಸೃಷ್ಟಿಸಿ ಸುಮಾರು 9 ಎಕರೆ ಸರ್ಕಾರಿ ಜಮೀನನ್ನು ಖಾಸಗಿ ವ್ಯಕ್ತಿಗಳ ಹೆಸರಿಗೆ ಅಕ್ರಮವಾಗಿ ಮಂಜೂರು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಮೃತಪಟ್ಟ ನಿವೃತ್ತ ತಹಶೀಲ್ದಾರ್ ಸೇರಿದಂತೆ ನಾಲ್ವರು ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಾಗಿದೆ.
ಗೋಣಿಬೀಡು ಹೋಬಳಿಯ ದೇವವೃಂದ ಗ್ರಾಮದಲ್ಲಿನ ಸರ್ವೆ ನಂಬರ್ 313ರ ಹೆಚ್.4 ಮತ್ತು ಹೆಚ್.5 ವ್ಯಾಪ್ತಿಯ ಸರ್ಕಾರಿ ಜಮೀನು 2018-19ರಲ್ಲಿ ಅಕ್ರಮವಾಗಿ ಮಂಜೂರಾತಿ ಮಾಡಲಾಗಿದೆ ಎಂಬುದು ತನಿಖೆಯಲ್ಲಿ ಬಹಿರಂಗವಾಗಿದೆ. ಕೋಟ್ಯಂತರ ರೂಪಾಯಿ ಮೌಲ್ಯದ ಈ ಜಮೀನನ್ನು ನಿಯಮಗಳನ್ನು ಉಲ್ಲಂಘಿಸಿ ಖಾಸಗಿ ವ್ಯಕ್ತಿಗಳ ಪಾಲಾಗುವಂತೆ ಮಾಡಲಾಗಿದೆ.
ಈ ಪ್ರಕರಣದ ವಿಶೇಷ ಅಂಶವೆಂದರೆ, ಜಮೀನು ಪಡೆಯಲು ಸಂಬಂಧಿಸಿದವರು ಯಾವುದೇ ಅಧಿಕೃತ ಅರ್ಜಿಯನ್ನೇ ಸಲ್ಲಿಸಿರಲಿಲ್ಲ. ಆದರೂ ಅಧಿಕಾರಿಗಳು ದಾಖಲೆಗಳನ್ನು ತಿರುಚಿ, ಬೇರೆ ಕಡತಗಳಲ್ಲಿದ್ದ ಸಾಗುವಳಿ ಚೀಟಿಗಳನ್ನು ಬಳಸಿಕೊಂಡು ನಕಲಿ ದಾಖಲೆ ಸೃಷ್ಟಿಸಿದ್ದಾರೆ. ನಂತರ ನೇರವಾಗಿ ಖಾತೆ ಮಾಡಿಸುವ ಮೂಲಕ ಸರ್ಕಾರದ ಆಸ್ತಿಯನ್ನು ಖಾಸಗೀಕರಣಗೊಳಿಸಲು ಸಹಕರಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಪ್ರಾಥಮಿಕ ತನಿಖೆಯಲ್ಲಿ ಅಂದಿನ ತಹಶೀಲ್ದಾರ್ ಸೇರಿದಂತೆ ನಾಲ್ವರು ಅಧಿಕಾರಿಗಳ ಪಾತ್ರ ದೃಢಪಟ್ಟಿದೆ. ಇವರಲ್ಲಿ ಒಬ್ಬರು ಈಗಾಗಲೇ ಮೃತಪಟ್ಟಿದ್ದು, ಉಳಿದವರು ನಿವೃತ್ತರಾಗಿದ್ದಾರೆ. ಪ್ರಸ್ತುತ ಮೂಡಿಗೆರೆ ತಹಶೀಲ್ದಾರ್ ಅಶ್ವಿನಿ ನೀಡಿದ ದೂರಿನ ಮೇರೆಗೆ, ಕರ್ನಾಟಕ ಭೂ ಕಂದಾಯ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.
ಈ ಅಕ್ರಮದಿಂದ ನಿಕೇಶ್ ಪೆರೇರಾ ಮತ್ತು ಅನಿಶ್ ಪೆರೇರಾ ಎಂಬುವರು ಲಾಭ ಪಡೆದಿದ್ದಾರೆ ಎನ್ನಲಾಗಿದೆ. ಅರ್ಹತೆ ಇಲ್ಲದೇ ಹಾಗೂ ಯಾವುದೇ ಅರ್ಜಿ ಸಲ್ಲಿಸದೇ, ಅಧಿಕಾರಿಗಳ ಸಹಕಾರದಿಂದ ಸರ್ಕಾರಿ ಜಮೀನನ್ನು ತಮ್ಮ ಹೆಸರಿಗೆ ಮಾಡಿಸಿಕೊಂಡಿರುವುದು ದೊಡ್ಡ ಮಟ್ಟದ ವಿವಾದಕ್ಕೆ ಕಾರಣವಾಗಿದೆ.
ಸರ್ಕಾರಿ ಜಮೀನುಗಳನ್ನು ಕಾಪಾಡಬೇಕಾದ ಅಧಿಕಾರಿಗಳೇ ಅಕ್ರಮದಲ್ಲಿ ಭಾಗಿಯಾಗಿರುವುದು ಸಾರ್ವಜನಿಕರಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂಬ ಒತ್ತಾಯ ಹೆಚ್ಚುತ್ತಿದೆ.
ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಕುಡ್ಲೂರು ಗ್ರಾಮದಲ್ಲಿ ಮನಕಲಕುವ ಘಟನೆ ನಡೆದಿದ್ದು, ಸ್ನೇಹಿತೆಯೊಬ್ಬಳ ಪ್ರೇಮ ವಿವಾದದ ನಡುವೆ ಅಮಾಯಕ ಯುವಕನೊಬ್ಬ…
ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಗುಳೇದಹಟ್ಟಿ ತಾಂಡದಲ್ಲಿ ನವವಿವಾಹಿತೆಯೊಬ್ಬರ ಅನುಮಾನಾಸ್ಪದ ಸಾವು ಹಲವು ಅನುಮಾನಗಳಿಗೆ ಕಾರಣವಾಗಿದೆ. ಮದುವೆಯಾಗಿ ಕೇವಲ ನಾಲ್ಕು…
ಹಳಿಯಾಳ: ಪಟ್ಟಣದ ಮೌರ್ಯ ಹೋಟೆಲ್ ಸಮೀಪ ಸಾರ್ವಜನಿಕರಿಗೆ ತೊಂದರೆ ಉಂಟುಮಾಡಿ, ಕರ್ತವ್ಯ ನಿರ್ವಹಣೆಗೆ ಬಂದಿದ್ದ ಪೊಲೀಸರ ಎದುರೇ ರಂಪಾಟ ನಡೆಸಿ…
ಸಿದ್ದಾಪುರ: ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಕಾನಸೂರಿನ ಇಂದಿರಾಗಾಂಧಿ ವಸತಿ ಶಾಲೆಯಲ್ಲಿ ವಿದ್ಯಾರ್ಥಿ ಗೋಕುಲ ಗೌಡ ಸಾವನ್ನಪ್ಪಿದ ಪ್ರಕರಣಕ್ಕೆ…
ಹಳಿಯಾಳ: ತಾಲೂಕಿನ ಕಾಳಗಿನಕೊಪ್ಪ ಗ್ರಾಮದಲ್ಲಿ ಮನೆಯೊಂದರಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ನಾಡಬಾಂಬ್ಗಳು ಸೋಮವಾರ ಮುಂಜಾನೆ ಭಾರೀ ಸ್ಫೋಟಗೊಂಡ ಪರಿಣಾಮ ಹಲವು ಮನೆಗಳಿಗೆ…
ಯಲ್ಲಾಪುರ: ಮಹಾರಾಷ್ಟ್ರದ ಕೊಲ್ಲಾಪುರ, ಸೊಲ್ಲಾಪುರ, ಪುಣೆ ಹಾಗೂ ಮುಂಬೈ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಎಲ್ಲಾ ಅಗತ್ಯ ದಾಖಲೆಗಳನ್ನು ಹೊಂದಿದ್ದ ಅಡಿಕೆ…